Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»62 ಅಂತರ ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದ “ನಾಡ ಪೆದ ಆಶಾ”
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

62 ಅಂತರ ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದ “ನಾಡ ಪೆದ ಆಶಾ”

ಮಾರ್ಚ್ 13, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.13 : ವಿಕೆ3 ಪಿಕ್ಚರ್ಸ್ ಬ್ಯಾನರ್ ನಲ್ಲಿ ಈರಮಂಡ ಹರಿಣಿ ವಿಜಯ್ ಮತ್ತು ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರ ನಿರ್ಮಾಣದಲ್ಲಿ ತಯಾರಾದ ಕೊಡವ ಕಾದಂಬರಿ ಆಧಾರಿತ, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಲನಚಿತ್ರ ಇಲ್ಲಿಯವರೆಗೆ ಬರೋಬ್ಬರಿ 62 ಅಂತರ ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಚಿತ್ರದ ಯಶಸ್ಸಿನ ಕುರಿತು ಹರ್ಷ ವ್ಯಕ್ತಪಡಿಸಿತು.
ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಮಾತನಾಡಿ ಕೊಡಗಿನ ಸಂಸ್ಕೃತಿ, ಆಚಾರ, ವಿಚಾರ, ಪರಿಸರದ ಮೇಲೆ ಬೆಳಕು ಚೆಲ್ಲಿರುವ ಮತ್ತು ಸ್ವಾವಲಂಬಿ ಮಹಿಳೆಯೊಬ್ಬಳು ಸಮಾಜಮುಖಿಯಾಗಿ ಸೇವೆ ಸಲ್ಲಿಸುವ ಕಥಾಹಂದರದ “ನಾಡ ಪೆದ ಆಶಾ” ಕೊಡವ ಭಾಷೆಯ ಚಲನಚಿತ್ರವಾದರೂ ಎಲ್ಲಾ ಜಾತಿ, ಮತ, ಬೇರೆ ಭಾಷೆಯವರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹ ನೀಡಿದ್ದಾರೆ ಎಂದರು.
ಸಿನಿಮಾ ವಿಮರ್ಶಕರ ಅನಿಸಿಕೆಗಳು ಈ ಚಿತ್ರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಮತ್ತು ಇದುವರೆಗೆ ಪಾಲ್ಗೊಂಡ ವಿವಿಧ ಅಂತರರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆಯಲು ಸಾಧ್ಯವಾಗಿದೆ. ಇನ್ನೂ ಹಲವು ಪ್ರಶಸ್ತಿಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ ಎಂದು ತಿಳಿಸಿದರು.
ನಾಡ ಪೆದ ಆಶಾ” ಕೊಡವ ಸಿನಿಮಾ 2021ನೇ ಸಾಲಿನ ಕೊಡವ ಸಾಹಿತ್ಯ ಅಕಾಡಮಿಯ ಪುಸ್ತಕ ಪ್ರಶಸ್ತಿ, 7ನೇ ದೆಹ್ರಡೂನ್, 2ನೇ ಚಂಡಿಗಡ್, 27ನೇ ಕೊಲ್ಕತ್ತಾ, ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ, ಕರ್ನಾಟಕದ 2ನೇ ಮೈಸೂರು ದಸರಾ ಚಲನಚಿತ್ರೋತ್ಸವ-2022, ದಲ್ಲೂ ಅಧಿಕೃತವಾಗಿ ಆಯ್ಕೆಗೊಂಡು ಪ್ರದರ್ಶನ ಕಂಡು ಪ್ರಶಸ್ತಿ ಪಡೆದಿತ್ತು. ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾ ಮಂದಿರ ದಲ್ಲಿ ನಡೆದ 2ನೇ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ -2022 ದಲ್ಲಿ “ಬೆಸ್ಟ್ ಡೈರೆಕ್ಟರ್ ಅವಾರ್ಡ”, ಬೆಂಗಳೂರಿನಲ್ಲಿ ನಡೆದ 3ನೇ ಅಂತರರಾಷ್ಟ್ರೀಯ ಪನೋರಮ ಚಿತ್ರೋತ್ಸವದಲ್ಲಿ “ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ”ಯನ್ನು ಗಳಿಸಿದೆ.
ತಮಿಳುನಾಡುವಿನ ತಿರುನೆಲ್‍ವಲ್ಲಿ ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಬೆಸ್ಟ್ ಸ್ಟೋರಿ, ಬೆಸ್ಟ್ ಫಿಲಂ ಮೇಕರ್, ಜೂರಿ ಅವಾರ್ಡ್ ಹಾಗೂ ಬೆಸ್ಟ್ ಬಿಜಿಎಂ ಎಂಬ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಯುಕೆ ಯ ವಲ್ರ್ಡ್ ಫಿಲಂ ಫೆಸ್ಟಿವಲ್ ನಲ್ಲಿ ಆಯ್ಕೆಗೊಂಡು ಬೆಸ್ಟ್ ಮ್ಯೂಸಿಕ್, ಬೆಸ್ಟ್ ಸ್ಟೋರಿ, ಬೆಸ್ಟ್ ಫೀಚರ್ ಫಿಲಂ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಲ್ಲದೇ ಅಸ್ಸಾಂನ ಐ ಸಿಗ್ನೇಯಾ ಇಂಟನ್ರ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಬರೋಬ್ಬರಿ ಐದು ವಿಭಾಗದಲ್ಲಿ ಬೆಸ್ಟ್ ಡೈರೆಕ್ಟರ್, ಬೆಸ್ಟ್ ಎಡಿಟರ್, ಬೆಸ್ಟ್ ಫೀಚರ್ ಫಿಲಂ, ಬೆಸ್ಟ್ ಸ್ಕ್ರೀನ್ ಪ್ಲೇ, ಬೆಸ್ಟ್ ಪ್ರೊಡಕ್ಷನ್ ಡಿಸೈನ್ ಎಂಬ ಪ್ರಶಸ್ತಿ, ಇಂಡಿಯನ್ ಸ್ಕ್ರೀನ್ ಪ್ರಾಜೆಕ್ಟ್ ನಡೆಸಿದ ರಾಷ್ಟ್ರೀಯ ಮಟ್ಟದ ಸಿನಿಮೋತ್ಸವದಲ್ಲಿ ಬೆಸ್ಟ್ ಫಿಲಂ, ಬೆಸ್ಟ್ ಡೈರೆಕ್ಟರ್ ಹಾಗೂ ಬೆಸ್ಟ್ ಸ್ಟೋರಿ ವಿಭಾಗ ದಲ್ಲಿ ಪ್ರಶಸ್ತಿಗಳು ಹಾಗೂ ಒನ್ ಲೀಫ್ ಇಂಟನ್ರ್ಯಾಷನಲ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ, ಬೆಸ್ಟ್ ಸೋಶಿಯಲ್ ಫಿಲಂ, ಬೆಸ್ಟ್ ಸಿನಿಮೋಟೋಗ್ರಾಪೆರ್ ಎಂಬ ಪ್ರಶಸ್ತಿ ಮತ್ತು ಕನಕ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಬೆಸ್ಟ್ ಡೈರೆಕ್ಟರ್ ಪ್ರಶಸ್ತಿ ಗೆದ್ದುಕೊಂಡಿದೆ.
7 ಸಿಸ್ಟರ್ ನಾರ್ತ್ ಈಸ್ಟ್ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಬೆಸ್ಟ್ ಫೀಚರ್ ಫಿಲಂ, ಬೆಸ್ಟ್ ಡೈರೆಕ್ಟರ್, ಬೆಸ್ಟ್ ಸೋಶಿಯಲ್ ಫಿಲಂ, ಬೆಸ್ಟ್ ಆರ್ಟ್ ಸಿನಿಮಾ ಪ್ರಶಸ್ತಿ, ಇಂಡಿಯನ್ ಕ್ರಿಯೇಟಿವ್ ಮೈಂಡ್ ಫಿಲಂ ಫೆಸ್ಟಿವಲ್ ನಲ್ಲಿ ವರ್ಷದ ಅತ್ಯುತ್ತಮ ಚಿತ್ರ, ಉತ್ತಮ ಕಥೆ, ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ, ಬೆಲ್ಜಿಯಂ ನ ಫ್ರೆಂಚ್ ಇಂಟರ್ ನ್ಯಾಷನಲ್ ಸಿನಿ ಅವಾಡ್ರ್ಸ್ ನಲ್ಲಿ ಬೆಸ್ಟ್ ಕಾನ್ಸೆಪ್ಟ್, ಬೆಸ್ಟ್ ಥಾಟ್ಫುಲ್ ಸಿನಿಮಾ, ಬೆಸ್ಟ್ ಸಿನಿಮಾಟೋಗ್ರಫಿ, ಬೆಸ್ಟ್ ಸ್ಟೋರಿ, ದಾಂಭಡ್ ಸಿನಿಮೋತ್ಸವದಲ್ಲಿ ಬೆಸ್ಟ್ ರ್ರಟಿವ್, ಬೆಸ್ಟ್ ಫೀಚರ್ ಹಾಗೂ ಬೆಸ್ಟ್ ಎಕ್ಸ್ ಪೆರಿಮೆಂಟಲ್ ಸಿನಿಮಾ ಪ್ರಶಸ್ತಿಗಳು ಸೇರಿದಂತೆ ಈವರೆಗೆ 62 ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದು ಬೀಗಿದೆ ಎಂದು ಹರಿಣಿ ವಿಜಯ್ ವಿವರಿಸಿದರು.
ಸಹ ನಿರ್ಮಾಪಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಮಾತನಾಡಿ ಚಿತ್ರಕ್ಕೆ ದೊರೆತ್ತಿರುವ ಪ್ರಶಸ್ತಿಗಳು ಮತ್ತಷ್ಟು ಸಿನಿಮಾಗಳ ನಿರ್ಮಾಣಕ್ಕೆ ಹೊಸ ಸ್ಫೂರ್ತಿಯನ್ನು ತುಂಬಿದೆ. ಕೊಡವ ಸಿನಿಮಾವನ್ನು ಪ್ರತಿಯೊಬ್ಬರು ಕೊಡಗಿನ ಸಿನಿಮಾವೆಂದು ಸ್ವೀಕರಿಸಬೇಕು, ಕೇವಲ ಕೊಡವರಿಗಾಗಿ ಎಂದು ಭಾವಿಸಬಾರದೆಂದು ಮನವಿ ಮಾಡಿದರು.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಿಗೆ “ನಾಡ ಪೆದ ಆಶಾ” ಪ್ರವೇಶ ಪಡೆಯುವಂತೆ ನೋಡಿಕೊಳ್ಳುವಲ್ಲಿ ನಿರ್ಮಾಪಕಿ ಹರಿಣಿ ವಿಜಯ್ ಅವರ ಶ್ರಮ ಹೆಚ್ಚು ಇದೆ. ನಿರ್ದೇಶಕರ ಪ್ರಯತ್ನದಿಂದ ಚಿತ್ರ ಉತ್ತಮ ರೀತಿಯಲ್ಲಿ ಮೂಡಿ ಬಂದಿದೆ ಎಂದರು.
::: “ಪೊಮ್ಮಾಲೆ ಕೊಡಗ್” ಪ್ರದರ್ಶನ :::
ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಾಪಕರಾಗಿರುವ ಕೊಡವ ಮಕ್ಕಡ ಕೂಟ ಅರ್ಪಿಸುವ ಸ್ವಸ್ತಿಕ್ ಎಂಟರ್‍ಟೈನ್‍ಮೆಂಟ್ ಬ್ಯಾನರಡಿಯಲ್ಲಿ ನಿರ್ಮಾಣವಾಗಿರುವ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರ “ವಿಧಿರ ಕಳಿಲ್” ಕಾದಂಬರಿ ಆಧಾರಿತ “ಪೊಮ್ಮಾಲೆ ಕೊಡಗ್” ಕೊಡವ ಚಲನಚಿತ್ರ ಮಾ.20 ರಿಂದ 27ರ ವರೆಗೆ ಪ್ರದರ್ಶನಗೊಳ್ಳಲಿದೆ. ಈಗಾಗಲೇ ಪ್ರೀಮಿಯರ್ ಶೋ ಆಗಿದೆ ಎಂದು ತಿಳಿಸಿದರು.
ಮಾ.20 ರಂದು ಬಾಳೆಲೆ ಕೊಡವ ಸಮಾಜ, ಮಾ.22 ಮತ್ತು 23 ರಂದು ಮೂರ್ನಾಡು ಕೊಡವ ಸಮಾಜ, ಮಾ.25, 26 ಹಾಗೂ 27 ರಂದು ನಾಪೋ ಕ್ಲು ಕೊಡವ ಸಮಾಜದಲ್ಲಿ ಪ್ರದರ್ಶನ ಕಾಣಲಿದೆ.
ಬೆಳಿಗ್ಗೆ 11 ಗಂಟೆ, ಸಂಜೆ 4 ಗಂಟೆ ಹಾಗೂ ಸಂಜೆ 6.30 ಗಂಟೆಗೆ ದಿನ ಮೂರು ಪ್ರದರ್ಶನಗೊಳ್ಳಲಿದೆ. ಕೊಡಗಿನ ಸಂಶೋಧನೆಗೆಂದು ಬಂದ ಯುವತಿಯೊಬ್ಬಳ ಸುತ್ತ ಹೆಣೆದ ಚಿತ್ರ ಇದಾಗಿದ್ದು, ಹಾಕತ್ತೂರಿನ ಅಮ್ಮಾಟಂಡ ಐನ್‍ಮನೆ ಸೇರಿದಂತೆ ಕೊಡಗಿನ ಸುಂದರತಾಣಗಳಲ್ಲಿ ಚಿತ್ರೀಕರಣಗೊಂಡಿದೆ ಎಂದು ಯಶೋಧ ಪ್ರಕಾಶ್ ತಿಳಿಸಿದರು.
ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಮಾತನಾಡಿ “ನಾಡ ಪೆದ ಆಶಾ” ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಕೊಡಗು ಜಿಲ್ಲೆ ಮತ್ತು ಹೊರ ಜಿಲ್ಲೆಯಲ್ಲಿ ಯಶಸ್ವಿ 150 ಪ್ರದರ್ಶನಗಳನ್ನು ಕಂಡಿದೆ ಎಂದರು.
ಸಿನಿಮಾ ರಂಗಕ್ಕೆ ಹೆಚ್ಚು ಸಂಖ್ಯೆಯಲ್ಲಿ ಮಹಿಳಾ ನಿರ್ಮಾಪಕರು ಬರುತ್ತಿರುವುದು ಸಂತಸದ ವಿಚಾರವಾಗಿದ್ದು, ಪ್ರಶಸ್ತಿಗಳು ಸ್ಫೂರ್ತಿಯನ್ನು ತುಂಬುತ್ತವೆ. ಮತ್ತಷ್ಟು ಚಿತ್ರಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು ನನ್ನ ಗುರಿಯಾಗಿದೆ ಎಂದು ತಿಳಿಸಿದರು.
ಗೋವಾ ಮತ್ತು ಕೊಲ್ಕತ್ತ ಏಷಿಯನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದ್ದ ನನ್ನದೇ ನಿರ್ದೇಶನದ “ಪೊಮ್ಮಾಲೆ ಕೊಡಗ್” ಕೊಡಗಿನಲ್ಲಿ ಪ್ರದರ್ಶನಗೊಳ್ಳಲಿದೆ. 100 ಪ್ರದರ್ಶನಗಳನ್ನು ಕಾಣುವ ನಿರೀಕ್ಷೆ ಇದೆ ಎಂದು ಹೇಳಿದರು.
ತಾವು ಮತ್ತೊಂದು ಕೊಡವ ಚಿತ್ರ “ಬೇರ್” (ದಿ ರೂಟ್) ನ್ನು ನಿರ್ದೇಶಿಸುತ್ತಿದ್ದು, ಏ.6 ರಿಂದ ಚಿತ್ರೀಕರಣ ಆರಂಭಗೊಳ್ಳಲಿದೆ. ವಿಶ್ವದಲ್ಲಿರುವ ಸಣ್ಣಪುಟ್ಟ ಜಾತಿ, ಜನಾಂಗ, ಸಂಸ್ಕೃತಿ ನಶಿಸಿ ಹೋಗುತ್ತಿದ್ದು, ಇವುಗಳನ್ನು ಉಳಿಸುವ ಅನಿವಾರ್ಯತೆ ಯಾಕಿದೆ ಎನ್ನುವ ಬಗ್ಗೆ ಚಿತ್ರದಲ್ಲಿ ಪ್ರತಿಬಿಂಬಿಸಲಾಗುವುದು. ಇದು ಎಲ್ಲರಿಗೂ ಹೊಂದುವಂತಹ ಚಿತ್ರವಾಗಲಿದೆ ಎಂದರು.
“ನಾಡ ಪೆದ ಅಶಾ” ಚಿತ್ರದ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ 62 ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಚಿತ್ರ ಇತಿಹಾಸವನ್ನೇ ಸೃಷ್ಟಿಸಿದೆ. ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರ ನಿರ್ದೇಶನದ “ಕೊಡಗರ್ ಸಿಪಾಯಿ” ಚಿತ್ರ ಬಿಡುಗಡೆಯಾದ ನಂತರ ಕೊಡಗಿನಲ್ಲಿ ಚಿತ್ರಗಳ ನಿರ್ಮಾಣ ಸಂಖ್ಯೆ ಹೆಚ್ಚಾಗಿದೆ. ಈ ಚಿತ್ರದ ನಂತರ 7 ಕೊಡವ ಸಿನಿಮಾಗಳು ನಿರ್ಮಾಣಗೊಂಡಿವೆ ಎಂದು ಹೇಳಿದರು.
ತಮಗೆ ಯೋಧನ ಪಾತ್ರ ನೀಡಿದ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.