Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣಕ್ಕೆ ಭೂಮಿ ಪೂಜೆ : ಆಯುರ್ವೇದ ಔಷಧ ಬಳಕೆಗೆ ಜನ ಮುಂದಾಗಬೇಕು : ಶಾಸಕ ಅಪ್ಪಚ್ಚು ರಂಜನ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣಕ್ಕೆ ಭೂಮಿ ಪೂಜೆ : ಆಯುರ್ವೇದ ಔಷಧ ಬಳಕೆಗೆ ಜನ ಮುಂದಾಗಬೇಕು : ಶಾಸಕ ಅಪ್ಪಚ್ಚು ರಂಜನ್ ಕರೆ

ಮಾರ್ಚ್ 17, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.17 : ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಉದ್ದೇಶಿತ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣ ಕಾರ್ಯಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆ ನೆರವೇರಿಸಿದರು.
ಹಾರಂಗಿ ವೃಕ್ಷೋದ್ಯಾನವನ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಫಲಕ ಅನಾವರಣಗೊಳಿಸಿ, ಸಾಂಕೇತಿಕವಾಗಿ ಔಷಧಿಯ ಗಿಡಗಳನ್ನು ನೆಡುವ ಮೂಲಕ ಉದ್ದೇಶಿತ ಯೋಜನೆಗೆ ಚಾಲನೆ ನೀಡಿದರು.
ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಹತ್ವವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತಿಳಿಸುವ ನಿಟ್ಟಿನಲ್ಲಿ 2.5 ಹೆಕ್ಟೇರ್ ಪ್ರದೇಶದಲ್ಲಿ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಿಸಲು ಮಂಡಳಿ ಮುಂದಾಗಿದೆ.
ಚಾಲನೆ ನೀಡಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ಪಚ್ಚು ರಂಜನ್ ಅವರು ಔಷಧ ಉದ್ಯಾನ ನಿರ್ಮಾಣಕ್ಕೆ ಹಾರಂಗಿ ಉತ್ತಮ ಜಾಗ. ಔಷಧಿ ಸಸ್ಯಗಳನ್ನು ಉಳಿಸುವ ಕಾರ್ಯ ನಿರಂತರವಾಗಿ ಆಗಬೇಕು. ನಮ್ಮ ಪರಿಸರ ಉಳಿದರೆ ಮಾತ್ರ ಜೀವರಾಶಿಗಳು ಬದುಕಲು ಸಾಧ್ಯ ಎಂದರು.
ಭಾರತೀಯರು ಪ್ರಕೃತಿ ಆರಾಧಕರು. ಈ ಮೊದಲೆಲ್ಲ ವಿದೇಶಿಗರು ನಮ್ಮ ಸಂಸ್ಕøತಿಯನ್ನು ಲೇವಡಿ ಮಾಡಿಕೊಳ್ಳುತ್ತಿದ್ದರು. ಆದರೆ ಇಂದು ಪ್ರಕೃತಿ ಆರಾಧನೆಯ ಮಹತ್ವ ವಿದೇಶಿಗರಿಗೆ ಅರಿವಾಗಿದೆ. ಕೊಡಗಿನಲ್ಲಿ ಪ್ರತಿ ಊರಿನಲ್ಲೂ ದೇವರ ಕಾಡುಗಳು ಇವೆ. ಹಿಂದಿನಿಂದಲೂ ಆ ಕಾಡುಗಳನ್ನು ಸಂರಕ್ಷಿಸಿಕೊಂಡು ಬರಲಾಗುತ್ತಿದೆ. ಈ ಕಾಡುಗಳಲ್ಲೂ ಅಪಾರ ಔಷಧೀಯ ಗಿಡಗಳು, ಜೀವ ವೈವಿಧ್ಯಗಳಿವೆ ಎಂದು ತಿಳಿಸಿದರು.
ಮುಂದುವರೆದ ರಾಷ್ಟ್ರಗಳು ಆಯುರ್ವೇದ ಔಷಧಗಳಿಗೆ ಹೆಚ್ಚಿನ ಒತ್ತು ನೀಡುತ್ತಿವೆ. ಭಾರತದಿಂದ ಹೇರಳ ಪ್ರಮಾಣದಲ್ಲಿ ಆಯುರ್ವೇದ ಔಷಧಿ ವಿದೇಶಕ್ಕೆ ರಫ್ತಾಗುತ್ತಿವೆ. ಆಯುರ್ವೇದಿಂದ ಯಾವುದೇ ಅಡ್ಡ ಪರಿಣಾಮಗಳಿರುವುದಿಲ್ಲ. ಹೀಗಾಗಿ ನಮ್ಮ ಪಾರಂಪರಿಕ ಔಷಧಗಳತ್ತ ನಾವು ಕೂಡಾ ಒಲವು ಹೊಂದಬೇಕು. ಔಷಧಿ ಗಿಡಮೂಲಿಕೆಗಳ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಿಕೊಡುವ ಕಾರ್ಯವನ್ನು ಅರಿತವರು ಮಾಡಬೇಕು. ಪಶ್ಚಿಮಘಟ್ಟ ಪ್ರದೇಶದ ನದಿಮೂಲಗಳ ಸಂರಕ್ಷಣೆಗೂ ಎಲ್ಲರು ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಕೊಡಗಿನಲ್ಲಿ ಔಷಧೀಯ ಸಸ್ಯಗಳ ಉದ್ಯಾನ ಮಾಡಬೇಕೆಂದು ಈ ಹಿಂದೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು ಆಶಯ ವ್ಯಕ್ತಪಡಿಸಿದ್ದರು. ಈ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಮಂಡಳಿ ಸಭೆಯಲ್ಲಿ ಅನುಮೋದನೆ ಪಡೆದು, ಈಗ ಕಾರ್ಯರೂಪಕ್ಕೆ ತರಲಾಗುತ್ತಿದೆ. ನಮ್ಮಲ್ಲಿರುವ ಔಷಧ ಸಸ್ಯಗಳು ಹಾಗೂ ಅವುಗಳ ಮಹತ್ವದ ಬಗ್ಗೆ ನಮಗೆ ತಿಳಿದಿಲ್ಲ. ಔಷಧೀಯ ಸಸ್ಯ ಸಂಪತ್ತಿನ ಬಗ್ಗೆ ಜನರಿಗೆ ತಿಳಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶ ಎಂದರು.
ಹಾರಂಗಿ ಜಲಾಶಯ, ಆನೆ ಶಿಬಿರ, ವೃಕ್ಷೋದ್ಯಾನಕ್ಕೆ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಾರೆ. ಮುಂದಿನ ದಿನದಲ್ಲಿ ಔಷಧ ಉದ್ಯಾನ ಆದ ಬಳಿಕ ಪ್ರವಾಸಿಗರು ಅದರ ಲಾಭವನ್ನೂ ಪಡೆಯಬಹುದು. ಉದ್ಯಾನ ನಿರ್ಮಾಣದ ಬಳಿಕ ಅದರ ನಿರ್ವಹಣೆ ನಿಟ್ಟಿನಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಪಂಚಾಯಿತಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಗಮನ ಸೆಳೆದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಔಷಧಿಯ ಉದ್ಯಾನ ನಿರ್ಮಾಣಕ್ಕೆ ಯೋಜನೆ ಜಾರಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಪ್ರಾಸ್ತಾವಿಕ ಮಾತನಾಡಿದ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ, ಪ್ರಪಂಚದಲ್ಲಿ ಒಟ್ಟು 12 ಜೀವ ವೈವಿಧ್ಯದ ಹಾಟ್ ಸ್ಪಾಟ್‍ಗಳಿವೆ. ಅವುಗಳಲ್ಲಿ ಎರಡು ಭಾರತದಲ್ಲಿದ್ದು, ಪಶ್ಚಿಮ ಘಟ್ಟ ಪ್ರದೇಶ ಅವುಗಳಲ್ಲಿ ಒಂದಾಗಿದೆ. ಹಲವು ಬಗೆಯ ಔಷಧೀಯ ಸಸ್ಯಗಳು ಪಶ್ಚಿಮ ಘಟ್ಟ ಪ್ರದೇಶದಲ್ಲಿದೆ. ಪಶ್ಚಿಮ ಘಟ್ಟ ಮತ್ತು ಹಿಮಾಲಯ ಇಲ್ಲದಿದ್ದರೆ ಭಾರತ ಬರಡು ಪ್ರದೇಶವಾಗಿರುತ್ತಿತ್ತು ಎಂದರು.
ಅಭಿವೃದ್ಧಿ ಹಾಗೂ ಪರಿಸರ ಸಮತೋಲನದಿಂದ ಸಾಗಬೇಕು. ಕೊಂಚ ಏರುಪೇರಾದರೂ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ. ಹಾರಂಗಿಯಲ್ಲಿ ನಿರ್ಮಾಣವಾಗಲಿರುವ ‘ಜೀವ ವೈವಿಧ್ಯ ಔಷಧ ಉದ್ಯಾನ’ದಲ್ಲಿ ಮುಂದಿನ ಮುಂಗಾರು ಆರಂಭದಿಂದ ಸಸ್ಯಗಳನ್ನು ನೆಡಲು ಕಾರ್ಯಪ್ರವೃತ್ತರಾಗುವುದಾಗಿ ತಿಳಿಸಿದರು.
ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಇಂದಿರಾ ರಮೇಶ್, ಜೀವ ವೈವಿಧ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತಾ ಎಸ್. ಅರೇಕಲ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಿವರಾಂ ಬಾಬು, ಶರಣಬಸಪ್ಪ, ಎಂ.ಜೆ.ಗೋವರ್ಧನ್ ಸಿಂಗ್, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಹ್ಮಣಿ, ಲ್ಯಾಂಪ್ಸ್ ಅಧ್ಯಕ್ಷರಾ ಚಂದ್ರು ಮತ್ತಿತರರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೆ ಮುನ್ನ ಅತಿಥಿಗಳು ಸ್ಥಳೀಯ ಶಿಬಿರದ ಆನೆಗಳಿಗೆ ಬಾಳೆಹಣ್ಣು, ಕಬ್ಬು, ಬೆಲ್ಲ ನೀಡಿದರು. ಅಕ್ಷತಾ ಪ್ರಾರ್ಥಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಸ್ವಾಗತಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ ವಂದಿಸಿದರು. ಪ್ರಸನ್ನ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.