Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ: ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ : ಶತ್ರುವಿನ ಗುಂಡಿಗೆ ಮೊದಲು ಎದೆಯೊಡ್ಡುವ ಗಡಿಭದ್ರತಾ ಪಡೆಯ ನಿವೃತ್ತ ಸಿಬ್ಬಂದಿಗಳ ಕಡೆಗಣನೆ : ಸಮಾವೇಶದಲ್ಲಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ : ಶತ್ರುವಿನ ಗುಂಡಿಗೆ ಮೊದಲು ಎದೆಯೊಡ್ಡುವ ಗಡಿಭದ್ರತಾ ಪಡೆಯ ನಿವೃತ್ತ ಸಿಬ್ಬಂದಿಗಳ ಕಡೆಗಣನೆ : ಸಮಾವೇಶದಲ್ಲಿ ಅಸಮಾಧಾನ*

ಮಾರ್ಚ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.23 : ರಾಷ್ಟ್ರ ರಕ್ಷಣೆಗಾಗಿ ಶತ್ರುವಿನ ಗುಂಡಿಗೆ ಮೊದಲು ಎದೆಯೊಡ್ಡುವ ಗಡಿಭದ್ರತಾ ಪಡೆ ಸಿಬ್ಬಂದಿಗಳು ನಿವೃತ್ತರಾದ ಬಳಿಕ ಅವರಿಗೆ ಮೂಲಭೂತ ಸೌಲಭ್ಯಗಳು ದೊರಕುತ್ತಿಲ್ಲ. ಈ ಬಗ್ಗೆ ಸರ್ಕಾರಗಳು ಸೂಕ್ತ ಸ್ಪಂದನವನ್ನು ನೀಡುತ್ತಿಲ್ಲವೆನ್ನುವ ಅಸಮಾಧಾನ ಅರೆ ಸೇನಾ ಪಡೆಯ ನಿವೃತ್ತ ಯೋಧರ ಸಮಾವೇಶದಲ್ಲಿ ವ್ಯಕ್ತವಾಯಿತು.
ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರ ಸಭಾಂಗಣದಲ್ಲಿ ನಡೆದ ಸಮಾವೇಶವನ್ನು ಸಮಾಜ ಸೇವಕ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕೊಡಗು ನಿವೃತ್ತ ಅರೆ- ಮಿಲಿಟರಿ ಸಂಘದ ಅಧ್ಯಕ್ಷ ಪುಲಿಯಂಡ ಚಂಗಪ್ಪ ಅವರು, ನಿವೃತ್ತ ಅರೆ ಮಿಲಿಟರಿ ಯೋಧರ ಜ್ವಲಂತ ಸಮಸ್ಯೆಗಳ ಕುರಿತು ಅತಿಥಿಗಳಿಗೆ ಮಾಹಿತಿ ಒದಗಿಸಿದರು.
ಅರೆಸೇನಾ ಪಡೆಯ ಮಾಜಿ ಯೋಧ ನೂರೇರ ಭೀಮಯ್ಯ ಮಾತನಾಡಿ, ದೇಶದ ಸೇನಾ ಪಡೆ ಮತ್ತು ಅರೆಸೇನಾ ಪಡೆ ಒಂದೇ ಎಂಬ ಭಾವನೆ ಜನತೆಯಲ್ಲಿದೆ. ಈ ಹಿಂದೆ ಸಂಘದ ದಶಮಾನೋತ್ಸವದ ಸಂದರ್ಭ ನಮ್ಮ ಅಹವಾಲುಗಳನ್ನು ಕೊಡಗಿನ ಹಾಲಿ ಶಾಸಕರಿಗೆ ನೀಡಲಾಗಿದ್ದರು ಸೂಕ್ತ ಸ್ಪಂದನ ದೊರಕಿಲ್ಲವೆಂದು ತಮ್ಮ ಅಳಲು ತೋಡಿಕೊಂಡರು.
ಜಿಲ್ಲಾಡಳಿತ ಸಂಸದರು, ಶಾಸಕರನ್ನು ಒಳಗೊಂಡoತೆ ಮೂರು ತಿಂಗಳಿಗೊಮ್ಮೆಯಾದರೂ ನಮ್ಮೊಂದಿಗೆ ಕುಂದು ಕೊರತೆ ಸಭೆ ನಡೆಸಬೇಕೆಂದು ಮನವಿ ಮಾಡಿದರು.
ಅರೆ ಸೇನಾಪಡೆಯ ನಿವೃತ್ತರಿಗೆ ಮಿಲಿಟರಿ ಕ್ಯಾಂಟೀನ್ ಸೌಲಭ್ಯವಿಲ್ಲ. ಮಾಜೀ ಅರೆಸೇನಾ ಪಡೆ ಯೋಧರು ಮೃತಪಟ್ಟಾಗ ಅವರಿಗೆ ಸೂಕ್ತ ಗೌರವ ನೀಡುವ ಕಾರ್ಯ ನಡೆದಿಲ್ಲ. ಅರೆ ಸೇನಾ ಪಡೆಗಳ ಕುಟುಂಬದ ತೆರಿಗೆ ಪಾವತಿಗೆ ಗ್ರಾಪಂ, ಪಟ್ಟಣ ಪಂಚಾಯ್ತಿಯಲ್ಲಿ ಶೇ.50 ರಿಯಾಯಿತಿ ಇದ್ದರೂ ಕೆಲವು ಪಿಡಿಒಗಳು ತೆರಿಗೆ ರಿಯಾಯಿತಿ ನೀಡುತ್ತಿಲ್ಲ. ಅರೆಸೇನಾ ಪಡೆದ ಸೈನಿಕರು ಯುದ್ಧ ಇತ್ಯಾದಿ ಸಂದರ್ಭದಲ್ಲಿ ಸಾವನ್ನಪ್ಪಿದ್ದಲ್ಲಿ ಅವರ ಅವಲಂಬಿತರಿಗೆ ತುರ್ತು ಪಿಂಚಣಿ ವ್ಯವಸ್ಥೆ ಜಾರಿ ಮಾಡದೆ ವಿಳಂಬ ಮಾಡಲಾಗುತ್ತಿದೆಯೆಂದು ಬೇಸರ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಎಂಎಲ್‌ಸಿ ಸಿ.ಎಸ್. ಅರುಣ್ ಮಾಚಯ್ಯ ಮಾತನಾಡಿ, ಭಾರತದ ಗಡಿಭದ್ರತಾ ಪಡೆ ವಿಶ್ವದಲ್ಲೆ ಅತೀ ದೊಡ್ಡ ಯೋಧರ ಪಡೆಯಾಗಿದೆಯೆಂದು ಮೆಚ್ಚುಗೆ ವ್ಯಕ್ತಪಡಿಸಿ, ರಾಷ್ಟç ರಕ್ಷಣೆಗಾಗಿ ಕೊಡಗು ಯೋಧರನ್ನು ನಿಡುವ ಕಾರ್ಖಾನೆಯಂತೆ ಕೆಲಸ ಮಾಡುತ್ತಿದೆಯೆಂದು ನುಡಿದರು.
ನ್ಯಾಯ ದೊರಕಿಸಿಕೊಡುವೆ- ಸಮಾವೇಶ ಉದ್ಘಾಟಿಸಿದ ಎ.ಎಸ್. ಪೊನ್ನಣ್ಣ ಮಾತನಾಡಿ, ಅರೆ ಸೇನಾ ಪಡೆಯ ಯೋಧರ ಸಮಸ್ಯೆಗಳಿಗೆ
ನ್ಯಾಯಾಲಯದ ಮೂಲಕ ಹೋರಾಟ ನಡೆಸಿಯಾದರೂ ನ್ಯಾಯ ಒದಗಿಸುವದಾಗಿ ಪೊನ್ನಣ್ಣ ಭರವಸೆ ನೀಡಿದರು.
ಯೋಧರೆಂದರೆ ಗೌರವವಿದೆ. ಆದರೆ, ಕೇವಲ ಗೌರವದಿಂದ ಜೀವನ ನಡೆಸಲು ಸಾಧ್ಯವಿಲ್ಲವೆಂದು ತಿಳಿಸಿದ ಅವರು, ಗ್ರಾ.ಪಂ.ಮಟ್ಟದಲ್ಲಿ ತೆರಿಗೆ ರಿಯಾಯಿತಿ ಬಗ್ಗೆ ಬಗ್ಗೆ ಮಾತುಕತೆ ಮಾಡಲಾಗುವುದು. ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಅರೆ ಮಿಲಿಟರಿ ಪಡೆಯ ವಿವಿಧ ಬೇಡಿಕೆಗೆ ಸ್ಪಂದಿಸುವುದಾಗಿ ತಿಳಿಸಿ, ಈಗಾಗಲೇ ಅಧಿಕಾರಿಗಳ ಮಟ್ಟದ ಮಾತುಕತೆ ಮಾಡಿದ್ದೇನೆ. ಅರೆ ಮಿಲಿಟರಿ ಪಡೆಯ ನಿವೃತ್ತ ಯೋಧರು ನಿವೇಶನಕ್ಕಾಗಿ ನ್ಯಾಯಾಲಯ ಮೆಟ್ಟಿಲೇರಬೇಕಾಗಿದೆ. ನ್ಯಾಯಾಲಯದಲ್ಲಿ ಉಚಿತವಾಗಿ ಕಾನೂನು ಸೇವೆ ನೀಡಲಿದ್ದೇನೆಂದು ಸ್ಪಷ್ಟಪಡಿಸಿದರು.
ಬಿಎಸ್‌ಎಫ್ ನಿವೃತ್ತ ಇನ್ಸ್ ಪೆಕ್ಟರ್ ಪುಲಿಯಂಡ ಚಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲೆಯ ವಿವಿಧೆಡೆಗಳಲ್ಲಿನ ಅರೆ ಸೇನಾ ಪಡೆಯ ನಿವೃತ್ತ ಯೋಧರು, ಅವರ ಕುಟುಂಬಸ್ಥರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ: ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ: ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಆ.28: 48ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಒದಗಿಸಿರುವ ಒಂದು ಕೋಟಿ ರೂ. ಅನುದಾನದಲ್ಲಿ ದಶಮಂಟಪಗಳಿಗೆ…

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.