Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*“ಅಗ್ನಿಯಾತ್ರೆ” ಕಾದಂಬರಿ ಬಿಡುಗಡೆ : ಅಶ್ಲೀಲತೆಯ ಮೇಲೆ ಆಸಕ್ತಿ ಅಪಾಯಕಾರಿ : ಬಿ.ಜಿ.ಅನಂತಶಯನ ಅಭಿಪ್ರಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*“ಅಗ್ನಿಯಾತ್ರೆ” ಕಾದಂಬರಿ ಬಿಡುಗಡೆ : ಅಶ್ಲೀಲತೆಯ ಮೇಲೆ ಆಸಕ್ತಿ ಅಪಾಯಕಾರಿ : ಬಿ.ಜಿ.ಅನಂತಶಯನ ಅಭಿಪ್ರಾಯ*

ಮಾರ್ಚ್ 29, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.29 : ಇಂದು ಭ್ರಮೆ ಮತ್ತು ವಾಸ್ತವದ ನಡುವೆ ಹೋರಾಟಗಳು ನಡೆಯುತ್ತಿದೆ, ಮಾನವನ ಮನೋಬಲ ಧ್ವಂಧ್ವದಲ್ಲಿ ಸಿಲುಕಿದೆ. ಅಶ್ಲೀಲತೆಯ ಕಡೆ ಆಕರ್ಷಣೆ ಹೆಚ್ಚಾಗುತ್ತಿದ್ದು, ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ವಿಷಾದ ವ್ಯಕ್ತಪಡಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಕೊಡವ ಮಕ್ಕಡ ಕೂಟದ 64ನೇ ಪುಸ್ತಕ ಬರಹಗಾರ್ತಿ, ಚಿತ್ರ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಅವರು ಬರೆದಿರುವ ಮಹಿಳಾ ಪ್ರಧಾನವಾದ “ಅಗ್ನಿಯಾತ್ರೆ” ಕಾದಂಬರಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ವಾಸ್ತವತೆಯನ್ನು ಮರೆಮಾಚಿ ಭ್ರಮಾಲೋಕವನ್ನು ಸೃಷ್ಟಿಸುವ ಕಾಲ ಇದಾಗಿದ್ದು, ಗೌರವಯುತ ಸ್ಥಾನದಲ್ಲಿರುವ ಮಹಿಳೆಯರನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಸ್ತ್ರೀಯ ಬಗ್ಗೆ ಕಾಮನೆಗಳ ವಿಕೃತಿ ಮೆರೆಯುತ್ತಿದೆ, ಇತ್ತೀಚೆಗೆ ಮಕ್ಕಳ ಆಲೋಚನಾ ಲಹರಿ ಕೂಡ ಇದೇ ರೀತಿಯದ್ದಾಗಿದ್ದು, ಇದು ಅತ್ಯಂತ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು.
ದೇವತೆಯ ಪ್ರತಿರೂಪವಾಗಿರುವ ಸ್ತ್ರೀಕುಲಕ್ಕೆ ತನ್ನದೇ ಆದ ಗೌರವವಿದೆ. ಆದರೆ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಯುವತಿಯರೇ ಮದ್ಯ ಮತ್ತು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ, ಅಶ್ಲೀಲತೆಗೆ ಮಾರು ಹೋಗುತ್ತಿದ್ದಾರೆ ಎಂದರು.
ಸಮಾಜದ ಸುಧಾರಣೆಗಾಗಿ ಹಲವು ಪ್ರಯತ್ನಗಳು ನಡೆಯುತ್ತಿದೆ. ಪುಸ್ತಕ ಮತ್ತು ಸಿನಿಮಾದ ರೂಪದಲ್ಲಿ ಸಾಮಾಜಿಕ ಜಾಗೃತಿಯನ್ನು ಉಂಟು ಮಾಡಲಾಗುತ್ತಿದೆ. ಸಾಹಿತ್ಯ ಕ್ಷೇತ್ರದ ಮೂಲಕ ಸಾಮಾಜಿಕ ಪಿಡುಗುಗಳ ವಿರುದ್ಧ ಗುರುತಿಸಿಕೊಳ್ಳಲು ಮಹಿಳಾ ಬರಹಗಾರ್ತಿಯರಿಗೆ ಧೈರ್ಯ ಬೇಕು. ಸಾಹಿತ್ಯ ಮತ್ತು ಸಿನಿಮಾ ಎರಡೂ ಕ್ಷೇತ್ರಗಳಲ್ಲಿ ಈರಮಂಡ ಹರಿಣಿ ವಿಜಯ್ ಅವರು ಧೈರ್ಯದಿಂದ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೊಡವ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಮಾತನಾಡಿ ಕಳೆದ ಅನೇಕ ವರ್ಷಗಳಿಂದ 15 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮತ್ತು ವಿದೇಶದಲ್ಲಿ ಕೊಡವ ಜಾನಪದ ಕಲೆಯನ್ನು ಪರಿಚಯಿಸುವ ಕೆಲಸ ಮಾಡಿದ್ದೇನೆ. ಹಲವು ವಿದ್ಯಾರ್ಥಿಗಳು ಕಲಾವಿದರಾಗಿ ಮಾರ್ಪಟ್ಟಿದ್ದಾರೆ. ನನ್ನ ಕಲಾ ಸೇವೆಯ ಅವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಪರಿಣಾಮ ಇಂದು ನನಗೆ ಪದ್ಮಶ್ರೀಯಂತಹ ಪ್ರಶಸ್ತಿ ಲಭಿಸಿದೆ ಎಂದರು.
ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಎಲ್ಲಾ ವರ್ಗದ ಕಲಾವಿದರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಎಂ.ಎ.ಕೊಡವ ವಿಭಾಗದ ಸಂಯೋಜಕರಾದ ಮೇಚಿರ ರವಿಶಂಕರ್ ನಾಣಯ್ಯ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸ್ತ್ರೀದೌರ್ಬಲ್ಯದ ದುರ್ಬಳಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹಿಳಾ ಬರಹಗಾರ್ತಿಯರಿಂದ ಸ್ತ್ರೀಹೋರಾಟ, ಬದುಕು, ಬವಣೆಗಳ ಬರಹವನ್ನು ನಿರೀಕ್ಷಿಸಬಹುದಾಗಿದೆ. ಸಂಸ್ಕೃತಿ ಮತ್ತು ಸಮಾಜವನ್ನು ಉಳಿಸಲು ಪೂರಕವಾಗುವಂತಹ ಸಣ್ಣ ಪ್ರಯತ್ನದ ಮೂಲಕ ದೊಡ್ಡ ಸಾಧನೆ ಮಾಡಲು ಹೊರಟಿರುವ ಈರಮಂಡ ಹರಿಣಿ ವಿಜಯ್ ಅವರ ಕಾರ್ಯ ಯುವ ಪ್ರತಿಭೆಗಳಿಗೆ ಸ್ಫೂರ್ತಿಯನ್ನು ತುಂಬಲಿದೆ ಎಂದರು.
ಸಾಹಿತಿ ಹಾಗೂ ಮಕ್ಕಳ ತಜ್ಞ ಮೇಜರ್ ಕುಶ್ವಂತ್ ಕೋಳಿಬೈಲು ಮಾತನಾಡಿ ಕೊಡಗಿನಲ್ಲಿ ಮಹಿಳಾ ಕಥೆಗಾರ್ತಿಯರ ದೊಡ್ಡ ಇತಿಹಾಸವೇ ಇದೆ. ಬರಹಗಳು ಪರಂಪರೆಯನ್ನು ಪರಿಚಯಿಸುತ್ತವೆ, ಸಾಮಾಜಿಕ ಕಳಕಳಿಯನ್ನು ಮೆರೆಯುತ್ತವೆ ಎಂದು ಅಭಿಪ್ರಾಯಪಟ್ಟರು.
ಕೊಡಗಿನ ಗೌರಮ್ಮ, ತ್ರಿವೇಣಿ, ವೈದೇಹಿ ಸೇರಿದಂತೆ ಅನೇಕ ಮಹಿಳಾ ಕಥೆಗಾರ್ತಿಯರು ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ಈರಂಡ ಹರಿಣಿ ವಿಜಯ್ ಅವರು ಭರವಸೆಯ ಬರಹಗಾರ್ತಿಯಾಗಿದ್ದು, “ಅಗ್ನಿಯಾತ್ರೆ” ಕಾದಂಬರಿಯನ್ನು ಎಲ್ಲರೂ ಓದಿ ಪ್ರೋತ್ಸಾಹಿಸಿ ಎಂದು ಕರೆ ನೀಡಿದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 63 ಕೃತಿಗಳನ್ನು ಕೂಟದ ಮೂಲಕ ಬಿಡುಗಡೆ ಮಾಡಲಾಗಿದೆ. ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು, ಚಿಗುರೆಲೆಗಳು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ ಲಭಿಸಿದೆ. ಮೂರು ಪುಸ್ತಕಗಳು ಕೊಡವ ಸಿನಿಮಾವಾಗಿದೆ. ಇದೀಗ 64 ನೇ ಪುಸ್ತಕವಾಗಿ “ಅಗ್ನಿಯಾತ್ರೆ” ಕಾದಂಬರಿಯನ್ನು ಬಿಡುಗಡೆ ಮಾಡಲಾಗಿದೆ ಎಂದರು.
“ಅಗ್ನಿಯಾತ್ರೆ” ಯ ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಮಾತನಾಡಿ ಸಣ್ಣ ಕಥೆಯಾಗಿ ಆರಂಭಗೊಂಡ “ಅಗ್ನಿಯಾತ್ರೆ” 272 ಪುಟಗಳ ದೊಡ್ಡ ಕಾದಂಬರಿಯಾಗಿ ಮಾರ್ಪಟ್ಟಿದೆ. ಇದು ನನ್ನ ಎರಡನೇ ಪುಸ್ತಕವಾಗಿದ್ದು, ಇದನ್ನು ರಚಿಸಲು ಒಂದೂವರೆ ವರ್ಷ ಬೇಕಾಯಿತು. ಹೆಣ್ಣೊಬ್ಬಳು ತಾನು ಅನುಭವಿಸುವ ಸಂಕಷ್ಟದ ಅಗ್ನಿಯಿಂದ ಹೊರ ಬರಲು ನಡೆಸುವ ಹೋರಾಟದ ಸುತ್ತ ಕಥೆಯನ್ನು ಹೆಣೆಯಲಾಗಿದೆ ಎಂದು ವಿವರಿಸಿದರು.
ಕಾದಂಬರಿಯನ್ನು ಹೊರತರಲು ಸಹಕರಿಸಿದ ಕೊಡವ ಮಕ್ಕಡ ಕೂಟ, ದಾನಿಗಳು ಸೇರಿದಂತೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
::: ಈರಮಂಡ ಹರಿಣಿ ವಿಜಯ್ ಪರಿಚಯ :::
ಮಡಿಕೇರಿ ತಾಲೂಕಿ ಮೂರ್ನಾಡು ಕೋಡಂಬೂರು ಗ್ರಾಮದ ಈರಮಂಡ ವಿಜಯ್ ಉತ್ತಯ್ಯ ಅವರ ಪತ್ನಿ ಹರಿಣಿ ಬಿಸಿಎ ಪಿಜಿಡಿಸಿಎ ವ್ಯಾಸಂಗ ಮಾಡಿರುವ ಇವರಿಗೆ ಕೇಸರಿಬೋಜಮ್ಮ ಹಾಗೂ ಕುಶಿ ಕಾವೇರಮ್ಮ ಎಂಬ ಇಬ್ಬರು ಪುತ್ರಿಯರಿದ್ದು, ಪ್ರಸ್ತುತ ಎಸ್‍ಎಮ್‍ಎಸ್ ವಿದ್ಯಾ ಸಂಸ್ಥೆ ಅರಮೇರಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
2016ರಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಆಯೋಜಿತ ಉಮ್ಮತ್ತಾಟ್ ಶಿಬಿರದಲ್ಲಿ ಕೊಡಗಿನ ಆಸಕ್ತ ಯುವತಿಯರಿಗೆ ಉಮ್ಮತ್ತಾಟನ್ನು ಕಲಿಸಿ ಜಿಲ್ಲೆಯ ಹಲವು ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿ ಕಲೆಯ ಪೋಷಣೆಗೆ ಶ್ರಮಿಸಿರುವ ಇವರಿಗೆ ಸಾಹಿತ್ಯ ಹಾಗೂ ಸಿನಿಮಾ ಕ್ಷೇತ್ರದ ಬಗ್ಗೆ ಆಸಕ್ತಿಯಿಂದ “ನಂಗ ಕೊಡವ” ಕೊಡವ ಧಾರಾವಾಹಿಯ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಕಲರ್ಸ್ ಕನ್ನಡ ಚಾನೆಲ್‍ನಲ್ಲಿ ಕನ್ನಡದ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ನಡೆಸಿಕೊಡುತ್ತಿದ್ದ “ಫ್ಯಾಮಿಲಿ ಪವರ್” ರಿಯಾಲಿಟಿ ಶೋ ನಲ್ಲಿಯೂ ಕುಟುಂಬದೊಂದಿಗೆ ಪಾಲ್ಗೊಂಡಿದ್ದರು.
ನಾಡ ಪೆದ ಆಶಾ, ಪೊಮ್ಮಾಲೆ ಕೊಡಗ್, ದೃಶ್ಯ-2, ನೀ ಮಾಯೇ ಯೊಳಗೊ ಮಾಯೇ ನಿನ್ನಳೋಗೋ, ಕಂದೀಲು ಎಂಬ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ನಿರ್ಮಾಣ ಮಾಡಿರುವ “ನಾಡ ಪೆದ ಆಶಾ” ಕೊಡವ ಸಿನಿಮಾಕ್ಕೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ 70 ಪ್ರಶಸ್ತಿಗಳು ದೊರೆತಿದೆ.
ಕೊಡವ ಭಾಷೆ, ಸಂಸ್ಕೃತಿಯನ್ನು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾದಲ್ಲಿ ಮುಖಾಂತರ ಪಸರಿಸಿದ ಇವರು “ಪೊಮ್ಮಾಲೆ ಕೊಡಗ್” ಕೊಡವ ಸಿನಿಮಾದಲ್ಲಿ ನಟಿಸಿರುವುದಲ್ಲದೆ, ಇಂಗ್ಲಿಷ್‍ನಲ್ಲಿ ಸಂಭಾಷಣೆ ಬರೆದು ತಾಂತ್ರಿಕ ವಿಭಾಗದಲ್ಲೂ ಕಾರ್ಯನಿರ್ವಹಿಸಿದ್ದಾರೆ.
ಹಲವಾರು ಪತ್ರಿಕೆ, ಸಂಚಿಕೆಗಳಲ್ಲಿ ಇವರ ಕಥೆಗಳು, ಕವನಗಳು, ಲೇಖನಗಳು ಪ್ರಕಟಗೊಂಡಿವೆ. ದಸರಾ ಕವಿಗೋಷ್ಠಿಯಲ್ಲಿ ಕವನ ರಚಿಸಿ-ವಾಚಿಸಿ ದಸರಾಭಿಮಾನಿಗಳ ಮನ ಗೆದ್ದಿದ್ದು, ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿ ಕನ್ನಡಾಭಿಮಾನಿಗಳ ಪ್ರಶಂಸೆಗೆ ಪಾತ್ರರಾಗಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಪ್ರಸ್ತುತ ಕೊಡಗು ಕಲಾವಿದರ ಸಂಘದ ಕಾರ್ಯದರ್ಶಿಯಾಗಿ, ಕೊಡಗು ಸಿರಿಗನ್ನಡ ವೇದಿಕೆಯ ಮಡಿಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾ ಸಾಹಿತ್ಯ ಮತ್ತು ಸಿನಿಮಾ ಕ್ಷೇತ್ರವನ್ನು ಬೆಳೆಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ.
ಹರಿಣಿ ವಿಜಯ್ ಅವರ ಚೊಚ್ಚಲ ಪುಸ್ತಕ “ಬದುಕಿನ ಚಕ್ರ” ಈಗಾಗಲೇ ಲೋಕಾರ್ಪಣೆಗೊಂಡಿದ್ದು, “ಅಗ್ನಿಯಾತ್ರೆ” ಎರಡನೇ ಪುಸ್ತಕವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.