Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ನವಶಕ್ತಿಪೀಠಗಳಲ್ಲೊಂದಾದ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ಶಕ್ತಿಪೀಠ
ಮಹಾದೇಗುಲ

ನವಶಕ್ತಿಪೀಠಗಳಲ್ಲೊಂದಾದ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ಶಕ್ತಿಪೀಠ

March 30, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಶ್ರೀ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಉಡುಪಿಯ ನವಶಕ್ತಿಪೀಠಗಳಲ್ಲೊಂದಾದ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ಶಕ್ತಿಪೀಠ. ಉಡುಪಿ ಕುರಿತು ಕರ್ನಾಟಕದ ಕರಾವಳಿ ತೀರದಲ್ಲಿ ನೆಲೆಸಿರುವ ಒಂದು ಪ್ರಖ್ಯಾತ ಪ್ರವಾಸಿ ತಾಣ ಉಡುಪಿ. ಉಡುಪಿಯು ಕೇವಲ ಕಡಲ ತೀರಗಳಿಂದಾಗಿ ಮಾತ್ರವಲ್ಲದೆ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದ ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲೊಂದು. ಉಡುಪಿಯು ಮೂಲತಃ ಶ್ರೀಕೃಷ್ಣ ಮಠದಿಂದಾಗೆ ದೇಶದಲ್ಲೆ ಸಾಕಷ್ಟು ಪ್ರಸಿದ್ಧಿಗಳಿಸಿದ ಧಾರ್ಮಿಕ ಕೇಂದ್ರವಾಗಿದೆ.ಉಡುಪಿಯಲ್ಲಿ ಸಾಕಷ್ಟು ಇತರೆ ದೇವಾಲಯಗಳಿದ್ದು ಎಲ್ಲವೂ ವಿಶೇಷ ಹಾಗೂ ಮಹತ್ವವುಳ್ಳ ದೇವಾಲಯಗಳೆ ಆಗಿವೆ. ಅಂತೆಯೆ ಕರ್ನಾಟಕದಲ್ಲಿ ಉಡುಪಿಯನ್ನು ದೇವಾಲಯಗಳ ಪಟ್ಟಣ ಎಂದೆ ಕರೆಯುತ್ತಾರೆ. ಅಲ್ಲದೆ ಉಡುಪಿಯು ತನ್ನದೆ ಆದ ಕೆಲವು ವಿಶೇಷ ಶಕ್ತಿಪೀಠಗಳಿಂದಾಗಿ ಪ್ರವಾಸಿಗರ ಗಮನಸೆಳೆಯುತ್ತದೆ. ಅವುಗಳಲ್ಲೊಂದಾಗಿದೆ ಇಂದ್ರಾಣಿ ಶಕ್ತಿಪೀಠ.

ನಿರ್ಮಾಣ
ಶ್ರೀ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನವು 11ನೇ ಶತಮಾನದ ದೇವಾಲಯವಾಗಿದ್ದು, ಇದು ದುರ್ಗಾ ದೇವಿಗೆ ಸಮರ್ಪಿತವಾಗಿದೆ. ಈ ದೇವಾಲಯವನ್ನು 1993 ರಲ್ಲಿ ಪುನಃ ನಿರ್ಮಾಣ ಮಾಡಲಾಗಿದೆ. ನೇಪಾಳದ ಪ್ರಖ್ಯಾತ ಪಶುಪತಿನಾಥ ದೇವಾಲಯ ಮಾಜಿ ಮುಖ್ಯ ಅರ್ಚಕರಾದ ರಾವಲ್ ಪದ್ಮನಾಭ ಶಾಸ್ತ್ರಿಯವರ ಮಾರ್ಗದರ್ಶನದಲ್ಲಿ ಈ ದೇವಾಲಯದ ನವೀನ ಮಾದರಿಯನ್ನು ನಿರ್ಮಿಸಲಾಗಿದೆ.

ಇತಿಹಾಸ
ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ದೇವಾಲಯ ಉಡುಪಿ ನಗರ ಕೇಂದ್ರದಿಂದ ಪೂರ್ವಕ್ಕೆ ಎರಡು ಕಿ.ಮೀ ಸಾಗಿದರೆ ಕುಂಜಿಬೆಟ್ಟು ಎಂಬ ಸ್ಥಳವು ದೊರೆಯುತ್ತದೆ. ವೇದಾಚಲ ಅಂದರೆ ಇಂದಿನ ಮಣಿಪಾಲದ ಪಶ್ಚಿಮಕ್ಕೆ ಈ ಪ್ರದೇಶವಿದೆ. ಸಾಕಷ್ಟು ಐತಿಹಾಸಿಕ ಶ್ರೀಮಂತಿಕೆಯನ್ನು ಪಡೆದ ಸ್ಥಳ ಇದಾಗಿದ್ದು ಇಲ್ಲಿರುವ ಶಕ್ತಿ ದೇವಿಯ ದೇವಾಲಯವನ್ನೆ ಇಂದ್ರಾಣಿ ಶಕ್ತಿಪೀಠ ಎಂದು ಕರೆಯುತ್ತಾರೆ. ಶ್ರೀ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ದೇವಾಲಯ ಎಂದು ಕರೆಯಲಾಗುವ ಈ ದೇವಾಲಯವು ಸಾಕಷ್ಟು ಪುರಾತನವಾದ ದೇವಾಲಯಲವೆ ಆಗಿದೆ. ಸುಮಾರು ಹನ್ನೊಂದನೇಯ ಶತಮಾನದಲ್ಲಿ ನಿರ್ಮಾಣಗೊಂಡ ದೇವಾಲಯ ಇದಾಗಿದೆ ಎಂದು ಹೇಳಲಾಗುತ್ತದೆ. ಆದರೆ ಪ್ರಸ್ತುತ ದೇವಾಲಯವು ನವೀಕರಣಗೊಂಡ ರಚನೆಯಾಗಿದೆ. ಇಂದ್ರಾಣಿಯನ್ನು ವೇದ-ಪುರಾಣಗಳಲ್ಲಿ ಅವಲೋಕಿಸಿದಾಗ ಇವಳೊಬ್ಬ ಸಪ್ತ ಮಾತೃಕೆಯರಲ್ಲೊಬ್ಬಳಾದ ದೇವಿಯಾಗಿ ಕಂಡುಬರುತ್ತಾಳೆ. ತದನಂತರ ಮುಂದಿನ ಗ್ರಂಥಾದಿಗಳಲ್ಲಿ ಇಂದ್ರಾಣಿಯನ್ನು ಶಕ್ತಿಯ ದ್ಯೋತಕವಾಗಿ ವಿವರಿಸಲಾಗಿದೆ. ಪ್ರಬುದ್ಧ ಶಕ್ತಿ ಮಾತೆಯಾಗಿಯೂ ಕೆಲವು ಕಡೆ ದುರ್ಗಾ ದೇವಿಯ ಅವತಾರವಾಗಿಯೂ ಇಂದ್ರಾಣಿಯನ್ನು ವರ್ಣಿಸಲಾಗಿದೆ.

ಪೌರಾಣಿಕ ಹಿನ್ನೆಲೆ
ಅನಾರೋಗ್ಯದಿಂದಿದ್ದ ಚ್ಯವನ ಮಹರ್ಷಿಗಳು ತಮ್ಮ ರೋಗ ನಿವಾರಣೆಗಾಗಿ ತಪೋನಿರತರಾಗಿದ್ದಾಗ ಶ್ರೀಮನ್ನಾರಾಯಣನು ಪ್ರತ್ಯಕ್ಷನಾಗಿ ಚ್ಯವನ ಮಹರ್ಷಿಗಳನ್ನು ರೋಗಮುಕ್ತರನ್ನಾಗಿ ಅನುಗ್ರಹಿಸಿದ ಈ ಪವಿತ್ರ ಕ್ಷೇತ್ರವೇ ವೇದಾದ್ರಿ (ವೇದಾಚಲ) ಎಂಬ ಐತಿಹ್ಯವಿದೆ. ತನ್ನ ಪತಿ ಇಂದ್ರನು ಊರ್ವಶಿಯಲ್ಲಿಅನುರಕ್ತನಾಗಿರುತ್ತಾನೆಂದು ಕುಪಿತಳಾದ ಶಚೀದೇವಿ ಎಲ್ಲೆಲ್ಲೋ ಸುತ್ತುತ್ತಿದ್ದಾಗ ನಾರದ ಮಹರ್ಷಿಯು ಆಕೆಯನ್ನು ಸಾಂತ್ವನಗೊಳಿಸಿ ಚ್ಯವನ ಮಹರ್ಷಿಗಳಿದ್ದ ಈ ಕ್ಷೇತ್ರಕ್ಕೆ ಕರೆತಂದರು. ಶ್ರೀದೇವಿಯ ವರದಿಂದ ಆಕೆ ಪತಿ ಇಂದ್ರನೊಡನೆ ಸಮಾಗಮವನ್ನು ಹೊಂದಿದಳೆಂದು ಸ್ಕಂದ ಪುರಾಣ ಹೇಳುತ್ತದೆ. ಬಳಿಕ ಈ ಕ್ಷೇತ್ರವು ಶಚಿಯ ಹೆಸರಿನಿಂದ ಇಂದ್ರಾಣಿಯಾಗಿ ಪ್ರಸಿದ್ಧಿ ಪಡೆಯಿತು. ಇಂದ್ರಾಣಿ ತೀರ್ಥದಲ್ಲಿ ತೀರ್ಥ ಸ್ನಾನ, ದೇವಿ ದರ್ಶನ ಪಡೆದಲ್ಲಿ ವಿವಾಹಾಸಕ್ತ ವಧು ಶೀಘ್ರವೇ ಯೋಗ್ಯ ವರನನ್ನು ಪಡೆದು ಸುಖೀ ದಾಂಪತ್ಯ ಜೀವನ ನಡೆಸುತ್ತಾಳೆ.

Share. Facebook Twitter Pinterest LinkedIn Tumblr Email WhatsApp
Previous Articleಹೆಸರಾಂತ ಪ್ರವಾಸಿ ಆಕರ್ಷಣೆ ತಾಣ ನಂದಿ ಬೆಟ್ಟ
Next Article *ಮೇ 27 ಮತ್ತು 28 ರಂದು ಕೊಡವ ಒಕ್ಕ ತೋಕ್ ನಮ್ಮೆ*

Recommended: Website design development company services in Mangalore Forex Trading Teacher in India

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

December 22, 2025

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

November 29, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

October 22, 2025

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.