Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *‘ಕೊಡಗು ಮತ್ತು ಚುನಾವಣೆ’ : ವಿಶೇಷ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಿದ್ಧತೆ*
ಇತ್ತೀಚಿನ ಸುದ್ದಿಗಳು

*‘ಕೊಡಗು ಮತ್ತು ಚುನಾವಣೆ’ : ವಿಶೇಷ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಿದ್ಧತೆ*

April 1, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಏ.1 : ವಿಧಾನಸಭಾ ಚುನಾವಣೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂಬರುವ ಭಾನುವಾರಗಳಂದು ‘ಕೊಡಗು ಮತ್ತು ಚುನಾವಣೆ’ ಎಂಬ ವಿಷಯದಡಿ ದೊಡ್ಡ ಮಟ್ಟದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಡಳಿತ ಉದ್ದೇಶಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ‘ಮಾಧ್ಯಮಗಳೊಂದಿಗೆ ಸಂವಾದ’ ದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ, ಮುಂದಿನ ಏ.9 ರ ಭಾನುವಾರ ಜಿಲ್ಲೆಯ ಕಲಾವಿದರಿಂದ ಕೊಡಗಿನ ಚುನಾವಣೆಗೆ ಸಂಬಂಧಿಸಿದಂತೆ ಕಲಾಕೃತಿಗಳನ್ನು ರಚಿಸುವ ಮತ್ತು ಅದನ್ನು ಪ್ರದರ್ಶಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಚಿಂತಿಸಲಾಗಿದೆ. ಕಲಾವಿದರ ಕಲಾಕೃತಿಗಳನ್ನು ಗಮನಿಸಿ ಅವುಗಳನ್ನು ‘ಡಿಜಿಟಲೈಸ್ಟ್’ ಮಾಡುವ ಮೂಲಕ ಚುನಾವಣಾ ಜಾಗೃತಿ ಪ್ರಚಾರಕ್ಕೂ ಬಳಸಿಕೊಳ್ಳುವ ಉದ್ದೇಶವಿದೆ ಎಂದರು.
::: ಅನುಮತಿ ಅಗತ್ಯ :::
ಸಾಮಾಜಿಕ ಜಾಲತಾಣಗಳಾದ ವ್ಯಾಟ್ಸ್ ಅಪ್, ಯೂಟ್ಯೂಬ್, ಫೇಸ್, ಬುಕ್, ಟ್ವಿಟ್ಟರ್ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಚುನಾವಣಾ ಘೋಷಿತ ಅಭ್ಯರ್ಥಿUಳು, ಆಕಾಂಕ್ಷಿಗಳು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವವರು ಯಾರೇ ಆಗಿರಲಿ ಚುನಾವಣಾ ಪ್ರಚಾರದ ಅಂಶಗಳನ್ನು ಒಳಗೊಂಡ ವಿಚಾರಗಳನ್ನು ಪೋಸ್ಟ್ ಮಾಡುವುದಿದ್ದಲ್ಲಿ ಅನುಮತಿ ಪಡೆಯವುದು ಕಡ್ಡಾಯವೆಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಚುನಾವಣಾ ನಾಮಪತ್ರ ಸಲ್ಲಿಕೆಯ ಬಳಿಕ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ ವೆಚ್ಚವೂ ಅಭ್ಯರ್ಥಿಯ ಲೆಕ್ಕಕ್ಕೆ ಒಳಪಡಲಿದೆ ಎಂದರು.
ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ವಿಚಾರಗಳನ್ನು ಹಾಕುವುದಿದ್ದಲ್ಲಿ ಅದಕ್ಕೆ ಅನುಮತಿಯನ್ನು ಕಡ್ಡಾಯವಾಗಿರುತ್ತದೆ. ಈ ರೀತಿ ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕೆಲವರಿಗೆ ಈಗಾಗಲೆ ಕಾರಣ ಕೇಳಿ ನೋಟಿಸ್ ನೀಡಿ ಅವರ ಅಭಿಪ್ರಾಯವನ್ನು ಪಡೆಯಲಾಗಿದೆ ಎಂದು ತಿಳಿಸಿದರು.
ತಮ್ಮ ಪಕ್ಷದ ಗುರುತು, ಬಾವುಟ, ಬ್ಯಾನರ್‍ಗಳನ್ನು ಅಳವಡಿಸುವುದಿದ್ದಲ್ಲಿ ಆಯಾ ಖಾಸಗಿ ಜಾಗದ ಮಾಲೀಕರ ಒಪ್ಪಿಗೆಯೊಂದಿಗೆ ಡಿಸ್ಟ್ರಿಕ್ಟ್ ಮಿಡಿಯಾ ಸರ್ಟಿಫಿಕೇಶನ್ ಅಂಡ್ ಮಾನಿಟರಿಂಗ್ ಕಮಿಟಿಯಿಂದ ಅನುಮತಿ ಪಡೆಯುವುದು ಅತ್ಯವಶ್ಯವೆಂದರು.
::: ಅನ್ನದಾನಕ್ಕೆ ಅವಕಾಶವಿಲ್ಲ :::
ವಿವಾಹ ಸಮಾರಂಭ ಮೊದಲಾದ ಖಾಸಗಿ ಕಾರ್ಯಕಗಳ ಆಯೋಜನೆಗೆ ಯಾವುದೇ ನಿರ್ಬಂಧಗಳಿಲ್ಲ. ಸಾರ್ವಜನಿಕವಾಗಿ ಆಚರಿಸುವ ದೇವರ ಉತ್ಸವಗಳಲ್ಲಿ ನಡೆಸುವ ಮೆರವಣಿಗೆ ಮೊದಲಾದವುಗಳಿಗೆ ಅನುಮತಿಯನ್ನು ಪಡೆದುಕೊಳ್ಳಬೇಕು. ಪ್ರಸಾದ ವಿತರಣೆ ಬಿಟ್ಟರೆ ಯಾವುದೇ ಕಾರಣಕ್ಕು ಅನ್ನದಾನಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
::: ಕಟ್ಟು ನಿಟ್ಟಿನ ತಪಾಸಣೆ :::
ಜಿಲ್ಲೆಯ ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೆರುಂಬಾಡಿಯಲ್ಲಿದ್ದ ಚೆಕ್ ಪೋಸ್ಟ್‍ನ್ನು ಮಾಕುಟ್ಟಕ್ಕೆ ಸ್ಥಳಾಂತರಿಸಲಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.
::: ಮಾಧ್ಯಮಗಳಿಗೆ ನಿರ್ಬಂಧವಿಲ್ಲ :::
ಮುದ್ರಣ ಮತ್ತು ದೃಶ್ಯ ವಾಹಿನಿಗಳಲ್ಲಿ ಚುನಾವಣೆ ಸಂಬಂಧವಾದ ಸುದ್ದಿಗಳನ್ನು ಪ್ರಕಟಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಅಭ್ಯರ್ಥಿಗಳ ಸಂದರ್ಶನವನ್ನು ಪ್ರಕಟಿಸುವ ಅಥವಾ ದೃಶ್ಯ ವಾಹಿನಿಗಳಲ್ಲಿ ಬಿತ್ತರ ಮಾಡುವ ಸಂದರ್ಭ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶವನ್ನು ನೀಡುವುದು ಅವಶ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
::: ಬಂದೂಕುಗಳ ಠೇವಣಿ :::
ಚುನಾವಣಾ ಅವಧಿಯಲ್ಲಿ ಬಂದೂಕು ಪರವಾನಗಿ ಹೊಂದಿರುವವರು ಸಮೀಪದ ಠಾಣೆಗಳಲ್ಲಿ ಬಂದೂಕುಗಳನ್ನು ಠೇವಣಿ ಇರಿಸಬೇಕಾಗುತ್ತದೆ ಎಂದು ತಿಳಿಸಿದರು.
::: ‘ಸಖಿ ಬೂತ್’ :::
ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ಮಹಿಳಾ ಮತದಾರರಿಗೆ ಮತದಾನದ ಕುರಿತು ಪ್ರೇರಣೆ ನೀಡಲು ಚುನಾವಣಾ ಸಂದರ್ಭ ಮಹಿಳೆಯರೇ ನಿರ್ವಹಿಸುವ ‘ಸಖಿ ಬೂತ್’ಗಳನ್ನು ತೆರೆಯಲಾಗುತ್ತದೆ ಎಂದರು.
ಸಂವಾದದಲ್ಲಿ ಎಡಿಸಿ ಡಾ.ನಂಜುಂಡೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿಲ್ಲಾ ವಾರ್ತಾಧಿಕಾರಿ ಚಿನ್ನಸ್ವಾಮಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಮಡಿಕೇರಿ ಕಾರ್ಯಪ್ಪ ಕಾಲೇಜಿನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ
Next Article *ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ : ಅನುಮತಿ ಅಗತ್ಯ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.