Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ : ಧಾರ್ಮಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು

*ಕುಶಾಲನಗರ : ಧಾರ್ಮಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ ಚಾಲನೆ*

April 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಏ.7 : ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದ ಪೀಠಾಧ್ಯಕ್ಷರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಬೃಹತ್ ಜಾಗತಿಕ ಧಾರ್ಮಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞದ ಕೊಡಗು ಜಿಲ್ಲಾ ಅಭಿಯಾನಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು.
ಕುಶಾಲನಗರದ ಶ್ರೀ ವಾಸವಿ ಕನ್ಯಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಮಠದ ಸಂಕರ್ಷಣ ಪ್ರಖಂಡದ ಗೀತಾ ಪ್ರಚಾರಕ ಶ್ರೀ ರಮಣ ಆಚಾರ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭಿಯಾನದ ಜಿಲ್ಲಾ ಗೌರವಾಧ್ಯಕ್ಷರಾಗಿ ಕುಶಾಲನಗರದ ಉದ್ಯಮಿ ಎಸ್ ಕೆ ಸತೀಶ್ ಅವರನ್ನು ಜಿಲ್ಲಾ ಗೌರವ ಸಲಹೆಗಾರರಾಗಿ ಹಿರಿಯ ಪತ್ರಕರ್ತರಾದ ಜಿ. ಚಿದ್ವಿವಿಲಾಸ್ ಆಯ್ಕೆ ಮಾಡಲಾಯಿತು.
ಕೊಡಗು ಜಿಲ್ಲಾ ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ಗೌರವಾಧ್ಯಕ್ಷರಾಗಿ ಆಯ್ಕೆಗೊಂಡ ಎಸ್ ಕೆ ಸತೀಶ್ ಅವರು ಜಿಲ್ಲಾ ತಾಲೂಕು ಮತ್ತು ಗ್ರಾಮವಾರು ಸಂಯೋಜಕರನ್ನು ಘೋಷಿಸಿದರು.
ಜಿಲ್ಲೆಯ ತಾಲೂಕುಗಳಿಗೆ ಹಾಗೂ ಗ್ರಾಮವಾರು ಸಂಯೋಜಕರುಗಳನ್ನು ನೇಮಕ ಮಾಡಲಾಯಿತು.
ಕೋಟಿಗೀತಾ ಲೇಖನ ಯಜ್ಞದ ಕೊಡಗು ಜಿಲ್ಲಾ ಮಹಿಳಾ ಘಟಕದ ಸಂಯೋಜಿಕಿಯಾಗಿ ಅಪೇಕ್ಷಿಸುವವರು ಕುಶಾಲನಗರದ ರಮಾ ವಿಜಯೇಂದ್ರ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಗೌರವಾಧ್ಯಕ್ಷರಾದ ಸತೀಶ್ ತಿಳಿಸಿದರು.
ಈ ಸಂದರ್ಭ ಮಾತನಾಡಿದ ಉಡುಪಿ ಮಠದ ಸಂಕರ್ಷಣ ಪ್ರಖಂಡದ ಗೀತಾ ಪ್ರಚಾರಕ ಶ್ರೀ ರಮಣ ಆಚಾರ್ಯ, ಶ್ರೀ ಭಗವದ್ಗೀತೆಯನ್ನು ಸಂಪೂರ್ಣವಾಗಿ ಬರೆದು 2024 ಜನವರಿ 18 ರಿಂದ 2026 ಜನವರಿ 17ರ ವರೆಗಿನ ಶ್ರೀ ಪುತ್ತಿಗೆ ಶ್ರೀಗಳ ಪರ್ಯಾಯದ ಎರಡು ವರ್ಷಗಳ ಅವಧಿಯಲ್ಲಿ, ಬರೆದ ಪುಸ್ತಕವನ್ನು ಯಾವಾಗ ಬೇಕಾದರೂ ಶ್ರೀಗಳ ಮೂಲಕ ಉಡುಪಿ ಶ್ರೀ ಕೃಷ್ಣನಿಗೆ ಸಮರ್ಪಿಸಿ ಪ್ರಸಾದ ರೂಪವಾಗಿ ಸ್ವೀಕರಿಸಬಹುದಾಗಿದೆ ಎಂದರು.
ಕೋಟಿಗೀತಾ ಯಜ್ಞದ ಸಂಪೂರ್ಣ ಮಾಹಿತಿ ನೀಡಿದ ವಿದ್ವಾನ್ ರಮಣಾಚಾರ್, ಆತ್ಮೋದ್ಧಾರ ಮತ್ತು ಲೋಕಕಲ್ಯಾಣಾರ್ಥದ ಜೀವಮಾನದಲ್ಲಿ ಒಂದೇ ಒಂದು ಬಾರಿ ಲಭಿಸಬಹುದಾದ ಅತ್ಯಪೂರ್ವವಾದ ಈ ಯಜ್ಞದಲ್ಲಿ ಜಾತಿ, ಮತ, ಧರ್ಮ, ಲಿಂಗ, ವಯೋ ಬೇಧಗಳಿಲ್ಲದೆ ಸರ್ವರೂ ದೀಕ್ಷ ಬದ್ಧರಾಗಬಹುದಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.
ಈ ಸಂದರ್ಭ ಮಾತನಾಡಿದ ಸಮಿತಿಯ ಗೌರವಾಧ್ಯಕ್ಷರಾದ ಎಸ್ ಕೆ ಸತೀಶ್, ಆಸಕ್ತರು ಗೀತೆ ಬರೆಯುವ ಪುಸ್ತಕ ಮತ್ತು ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಯಾವುದೇ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ಅವರು ಕೋರಿದ್ದಾರೆ. ಈ ಪುಣ್ಯ ಕಾರ್ಯದಲ್ಲಿ ಸಂಯೋಜಕರಾಗಿ ಸೇವೆ ಸಲ್ಲಿಸುವುದಕ್ಕೂ ಮುಕ್ತ ಅವಕಾಶವಿದೆ ಎಂದು ಅವರು ತಿಳಿಸಿದರು. ಹೆಚ್ಚಿನ ಮಾಹಿತಿಗೆ ವಿದ್ವಾನ್ ರಮಣ ಆಚಾರ್ (8792258946),ಎಸ್ ಕೆ ಸತೀಶ್ (9845699508), ರಮಾ ವಿಜಯೇಂದ್ರ (9886448226), ಬಿ ಆರ್ ನಾಗೇಂದ್ರ ಪ್ರಸಾದ್ (9448074528), ಮಧುಸೂದನ್ (8495006857) ಅವರುಗಳನ್ನು ಸಂಪರ್ಕಿಸುವoತೆ ಕೋರಲಾಗಿದೆ.
ಕುಶಾಲನಗರ ತಾಲೂಕು ಸಂಚಾಲಕರಾಗಿ ಬಿ ಆರ್ ನಾಗೇಂದ್ರ ಪ್ರಸಾದ್, ಸಮರ್ ಪೇಟೆ ತಾಲೂಕು ಸಂಚಾಲಕರಾಗಿ ದಾಮೋದರ್, ವಿರಾಜಪೇಟೆ ತಾಲೂಕು ಸಂಚಾಲಕರಾಗಿ ಮಂಜುನಾಥ್ ಮಲ್ಯ, ಪೊನ್ನಂಪೆಟ್ಟಿ ತಾಲೂಕು ಸಂಚಾಲಕರಾಗಿ ಬೋಪಣ್ಣ, ಮಡಿಕೇರಿ ತಾಲೂಕು ಸಂಚಾಲಕರಾಗಿ ರಂಜಿತ್ ಅವರುಗಳನ್ನು ನೇಮಿಸಿ, ಪ್ರತಿ ತಾಲೂಕುಗಳಿಗೆ ಸಹ ಸಂಚಾಲಕರುಗಳನ್ನು ನಿಯೋಜಿಸಲಾಯಿತು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ ಎಲ್ ಉದಯಕುಮಾರ್ ಸ್ವಾಗತಿಸಿದರು.
ರಶ್ಮಿ ಸಂಜಯ್ ಮತ್ತು ಲತಾ ರಮೇಶ್ ಪ್ರಾರ್ಥಿಸಿದರು, ಮಹೇಶ್ ಅಮೀನ್ ವೈಯಕ್ತಿಕ ಗೀತೆ ಹಾಡಿದರು. ಅಮೃತ ರಾಜ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕಾಂಗ್ರೆಸ್ ಪಕ್ಷದಲ್ಲಿ ರೋಗಗ್ರಸ್ತ ಮನಸ್ಸುಗಳಿಗೆ ಅವಕಾಶ ಇಲ್ಲ : ಮಂತರ್ ಪರ ನಿಂತ ಹೆಚ್.ಎಸ್.ಚಂದ್ರಮೌಳಿ*
Next Article *ಚಿತ್ರಕಲಾ ಸ್ಪಧೆ೯ : ರಾಜಾಸೀಟ್ ನಲ್ಲಿ ಹೆಸರು ನೋಂದಾಯಿಸಿ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.