Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ವಾಹನ ನಿಲುಗಡೆ ಶುಲ್ಕ ಮತ್ತು ತೆರಿಗೆ ಏರಿಕೆ ಅವೈಜ್ಞಾನಿಕ : ನಾಗರಿಕ ಸಮಿತಿ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ವಾಹನ ನಿಲುಗಡೆ ಶುಲ್ಕ ಮತ್ತು ತೆರಿಗೆ ಏರಿಕೆ ಅವೈಜ್ಞಾನಿಕ : ನಾಗರಿಕ ಸಮಿತಿ ಆರೋಪ*

ಏಪ್ರಿಲ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ 25 : ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಣಗೊಳಿಸಲು ಪುರಸಭೆಯು ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದೆ ಅಲ್ಲದೆ ಮೂಲಭೂತ ಸೌಕರ್ಯಗಳನ್ನು ನೀಡದೆ ತೆರಿಗೆ ಏರಿಕೆಗೊಳಿಸಿರುವುದು ಖಂಡನೀಯ ಎಂದು ನಾಗರಿಕ ಸಮಿತಿ ಸಂಚಾಲಕ ಇ.ಆರ್.ದುರ್ಗಾ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು.

ಗೋಣಿಕೊಪ್ಪ ರಸ್ತೆಯಲ್ಲಿರುವ ಸಮಿತಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿಧಿಸುವ ಕ್ರಮವನ್ನು ಪುರಸಭೆಯ ಆಡಳಿತರೂಢ ಸದಸ್ಯರು ಒಪ್ಪಿರುವುದು ಅವೈಜ್ಞಾನಿಕ. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿದರು ಆದೇಶ ಜಾರಿಗೆ ಮಾಡಲಾಗಿದೆ ಎಂದು ಆರೋಪಿಸಿದರು.
ವಾಹನ ಶುಲ್ಕ ವಿಧಿಸುವುದರಿಂದ ವಾಹನ ದಟ್ಟಣೆ ನಿಯಂತ್ರಣ ಮಾಡಬಹುದಾಗಿದೆ ಎಂದು ಸಭೆಯು ಒಪ್ಪಿಗೆ ಸೂಚಿಸಿ ಶುಲ್ಕ ವಿಧಿಸುವ ಕ್ರಮ ಜಾರಿಗೆಗೊಳಿಸಿದೆ. ನಗರದ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಅವ್ಯವಸ್ಥೆಯಿಂದ ಕೂಡಿದೆ. ಪಾದಚಾರಿಗಳಿಗೆ ಸಂಚಾರ ಮಾಡಲು ಯೋಗ್ಯವಾದ ಪಾದಚಾರಿ ರಸ್ತೆಗಳು ಇಲ್ಲಾ, ಒಳಚರಂಡಿ ವ್ಯವಸ್ಥೆಯು ಕ್ರಮಬದ್ಧವಾಗಿ ನಿರ್ವಹಣೆಯಿಲ್ಲಾ. ವಾಹನ ಮಾಲೀಕರು ಎಲ್ಲೆಂದರಲ್ಲಿ ವಾಹನ ನಿಲುಗಡೆಗೊಳಿಸಿ ಇತರ ಪ್ರದೇಶಗಳಿಗೆ ತೆರಳುವುದು ಸಾಮಾನ್ಯವಾಗಿದೆ. ನೂತನವಾಗಿ ಕಟ್ಟಡ ನಿರ್ಮಾಣ ಮಾಡುವವರು ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಬೇಕು ಎಂಬುದು ಕಾನೂನು ಇದ್ದರು ಸೂಕ್ತ ಸೌಕರ್ಯಯಿಲ್ಲದೆ ರಸ್ತೆಯ ಬದಿಯಲ್ಲಿ ವಾಹನ ನಿಲುಗಡೆಗೊಳಿಸಲಾಗುತ್ತಿದೆ ಇದು ಸರಿಯಾದ ಕ್ರಮವಲ್ಲ ಎಂದರು.
ಮುಖ್ಯ ರಸ್ತೆ ಸೇರಿದಂತೆ ಗೊಣಿಕೊಪ್ಪಲು ರಸ್ತೆ ಎಲ್ಲಾ ರಸ್ತೆ ಸಂಚಾರವು ದುಸ್ತರವಾಗಿದೆ. ಸಮಿತಿ ಹಲವು ಬಾರಿ ವಾಹನ ದಟ್ಟಣೆಯನ್ನು ನಿಯಂತ್ರಣ ಮಾಡಲು ಕೆಲವು ಸಲಹೆಗಳನ್ನು ನೀಡಿತ್ತು. ಸಲಹೆಗಳಿಗೆ ಬೆಲೆ ನೀಡದೆ ತನ್ನ ಬೇಜವಾಬ್ದಾರಿಯನ್ನು ಪ್ರದರ್ಶನ ಮಾಡಿದೆ. ಪುರಸಭೆಯ ಅಧ್ಯಕ್ಷರು ಸರ್ವಾಧಿಕಾರದ ಧೋರಣೆಯಿಂದ ಆದೇಶವನ್ನು ಮಾಡಿದ್ದಾರೆ. ಒಳಚರಂಡಿ ವ್ಯವಸ್ಥೆ ಸರಿಪಡಿಸಬೇಕು, ಬಾರಿ ವಾಹನಗಳಿಗೆ ಮತ್ತು ದ್ವಿಚಕ್ರ ವಾಹನಗಳಿಗೆ ನಿಲುಗಡೆಗಾಗಿ ಸೂಕ್ತ ಅವಕಾಶ ಕಲ್ಪಿಸಬೇಕು. ಜನತೆಯ ಹಣ ಸಂಗ್ರಹ ಮಾಡುವತ್ತಾ ಪುರಸಭೆಯ ಚಿತ್ತವಾಗಿದೆ ಎಂದು ದೂರಿದರು.
ಸಮಸ್ಯೆಗಳು ಬೆಟ್ಟದಷ್ಟುಯಿದ್ದರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿಫಲರಾಗಿದ್ದಾರೆ. ವಾಹನಗಳ ದಟ್ಟಣೆಯ ಸಮಸ್ಯೆಯ ಬಗೆಹರಿಸುವ ಬದಲು ವಾಹನಗಳ ಮೇಲಿನ ಶುಲ್ಕ ಹೆಚ್ಚಿಸಿರುವುದು ಮೂರ್ಖತನವಾಗಿದೆ ಎಂದು ಆರೋಪಿಸಿದ ದುರ್ಗಾಪ್ರಸಾದ್ ವಾಹನ ಶುಲ್ಕ ಏರಿಕೆಯನ್ನು ವಿರೋಧಿಸುತ್ತದೆ ಅಲ್ಲದೆ ನಾಗರಿಕ ಸಮಿತಿ ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ತರುವುವಂತೆ ಒತ್ತಾಯಿಸಿದರು.
ಸಮಿತಿಯ ಸದಸ್ಯ ಅಬ್ದುಲ್ ರೆಹಮಾನ್ ಮಾತನಾಡಿ, ನಗರದಲ್ಲಿ ಕುಡಿಯುವ ನೀರಿಗೆ ಆಹಕಾರ ತೆಲೆದೊರತ್ತದೆ ಎಂದು ತಿಳಿದಿದ್ದರು ಯಾವುದೇ ಮುಂಜಾಗೃತ ಕ್ರಮಕ್ಕೆ ಮುಂದಾಗದಿರುವುದು ಶೋಚನೀಯ, ನಾಗರಿಕರಿಗೆ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಪುರಸಭೆಯು ವಿಫಲವಾಗಿದೆ, ಕೋಟಿ ಕೋಟಿ ಅನುದಾನಗಳು ಬಂದರು ಮುಂದಾಲೋಚನೆಯಿಲ್ಲದೆ ಕ್ರಿಯಾಯೋಜನೆ ತಯಾರಿಸುವಲ್ಲಿ ವಿಫಲತೆಯನ್ನು ಕಾಣಲಾಗಿದೆ. ಸಮಸ್ಯೆಗಳಿದ್ದರು ಈ ಹಿಂದೆ ನಡೆದ ಪುರಸಭೆಯ ಸಮಾನ್ಯ ಸಭೆಯಲ್ಲಿ ಅಧ್ಯಕ್ಷರು, ಉಪಧ್ಯಕ್ಷರು ಇಲ್ಲದೆ ಚುನಾಯಿತ ಪ್ರತಿನಿಧಿಯಿಂದ ಸಭೆಯನ್ನು ನಡೆಸಲಾಗಿದೆ. ಪುರಸಭೆಯು ಸಾಮಾನ್ಯ ಜನತೆಯ ಮೇಲಿರುವ ಹೊಣೆಗಾರಿಕೆಯನ್ನು ಮರೆತಿದೆ, ಈ ಎಲ್ಲಾ ಕಾರಣಗಳಿಂದ ಪುರಸಭೆಯನ್ನು ವಿಸರ್ಜನೆ ಮಾಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಟಿಯಲ್ಲಿ ವಕೀಲ ಮತ್ತು ನಾಗರಿಕ ಸಮಿತಿಯ ಸಹ ಸಂಚಾಲಕ ಬಿ.ಇ.ಸೋಮಲೋಕನಾಥ್, ಸದಸ್ಯರಾದ ಎಲ್.ಜಿ. ಆಶೋಕ್ ಮತ್ತು ಶರೀಫ್ ಉಪಸ್ಥಿತರಿದ್ದರು.

ವರದಿ : ಕಿಶೋರ್ ಕುಮಾರ್ ಶೆಟ್ಟಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.