Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ವಾಂಡರರ್ಸ್ ಉಚಿತ ಬೇಸಿಗೆ ಶಿಬಿರಕ್ಕೆ ಸಂಭ್ರಮದ ತೆರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ವಾಂಡರರ್ಸ್ ಉಚಿತ ಬೇಸಿಗೆ ಶಿಬಿರಕ್ಕೆ ಸಂಭ್ರಮದ ತೆರೆ*

ಮೇ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 3 : ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ ನಗರದ ಜಿಲ್ಲಾ ಕ್ರೀಡಂಗಣದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಮಕ್ಕಳ ಉಚಿತ ಬೇಸಿಗೆ ಶಿಬಿರ ಮುಕ್ತಾಯಗೊಂಡಿತು.
ಅತಿಥಿ ಗಣ್ಯರೊಂದಿಗೆ ಶಿಬಿರದ ಮಕ್ಕಳು, ಪೋಷಕರು, ವಾಂಡರರ್ಸ್ ಪದಾಧಿಕಾರಿಗಳು ಸಂಭ್ರಮದಿಂದ ಪಾಲ್ಗೊಂಡು ೨೯ನೇ ವರ್ಷದ ಶಿಬಿರಕ್ಕೆ ತೆರೆ ಎಳೆದರು.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ್ದ ನೂರಕ್ಕೂ ಅಧಿಕ ಮಕ್ಕಳು ತಾವು ಶಿಬಿರದಲ್ಲಿ ಕಲಿತ ಪ್ರಾಣಾಯಾಮವನ್ನು ಅತಿಥಿಗಳೆದುರು ಪ್ರದರ್ಶಿಸಿ ಮೆಚ್ಚುಗೆಗಳಿಸಿದರು. ಶಿಬಿರದ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಹಾಕಿ ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು.
ಇದೇ ಸಂದರ್ಭ ಶಿಬಿರದ ಬಗ್ಗೆ ಶಿಬಿರಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶಿಬಿರಾರ್ಥಿಗಳ ಪರವಾಗಿ ಸೃಷ್ಟಿ, ಆದ್ಯ ಹಾಗೂ ದಾರಿಕಾ, ಪೋಷಕರ ಪರವಾಗಿ ಬೊಟ್ಟೋಳಂಡ ನಿವ್ಯ ದೇವಯ್ಯ ಅನಿಸಿಕೆ ವ್ಯಕ್ತಪಡಿಸಿದರೆ, ತರಬೇತುದಾರರ ಪರವಾಗಿ ವಾಂಡರರ್ಸ್ ಆಡಳಿತಾಧಿಕಾರಿ ಬೊಪ್ಪಂಡ ಶಾಂ ಪೂಣಚ್ಚ ಮಾತನಾಡಿದರು.
ಡೆಕಾಥ್ಲಾನ್ ಚಾಂಪಿಯನ್ ಕೋದಂಡ ಪೂವಯ್ಯ ಅಪ್ಪಣ್ಣ ಮಾತನಾಡಿ, ಜಿಲ್ಲಾ ಕ್ರೀಡಾಂಗಣದಲ್ಲಿ ಆಟವಾಡಿದ ಅನೇಕರು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಸಿದ್ದಾರೆ. ೧೯೭೫ರಲ್ಲಿ ವಿಶ್ವ ಕಪ್ ಗೆದ್ದ ಭಾರತ ತಂಡದ ನಾಯಕರಾಗಿದ್ದ ಪೈಕೇರ ಕಾಳಯ್ಯ ಕೂಡ ಈ ಮೈದಾನದ ಕೊಡುಗೆ. ಇಲ್ಲಿ ಸಿಗುವಂತಹ ತರಬೇತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಶಿಬಿರದಲ್ಲಿ ಕಲಿಸಿದವರಿಗೆ ಗೌರವ ನೀಡಬೇಕು. ಕಲಿತದ್ದನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅರ್ಥ ಬರುತ್ತದೆ. ನಮ್ಮ ದೇಹವೇ ದೇಗುಲವಾಗಿದ್ದು, ದೇಹವನ್ನು ಗೌರವಿಸಿದರೆ ಅದು ನಮ್ಮನ್ನು ಗೌರವಿಸುತ್ತದೆ. ಕ್ರೀಡೆ ಶಿಸ್ತನ್ನು ಕಲಿಸುತ್ತದೆ, ಎಲ್ಲರೂ ಸಾಧನೆ ಮಾಡುವತ್ತ ಕನಸು ಕಾಣಬೇಕೆಂದು ಕಿವಿಮಾತು ಹೇಳಿದರು.
ಅಂತರರಾಷ್ಟ್ರೀಯ ಮಾಸ್ಟರ್ ಅಥ್ಲೆಟ್ ಪಾಲೆಕಂಡ ಬೋಪಯ್ಯ ಮಾತನಾಡಿ ವ್ಯಾಯಾಮದಲ್ಲಿ ತೊಡಗಿಕೊಳ್ಳುವುದರಿಂದ ಶಕ್ತಿ ಬರುತ್ತದೆ. ನಂತರ ಯಾವುದೇ ಕ್ರೀಡೆಯಲ್ಲಿಯೂ ಭಾಗವಹಿಸಬಹುದು. ಅಭ್ಯಾಸ ಮಾಡಬೇಕು, ಅದು ಕ್ರಿಯಾತ್ಮಕವಾಗಿರಬೇಕು ಎಂದು ಹೇಳಿದರು.
ಪಾಲೆಕಂಡ ಬೆಳ್ಯಪ್ಪ ಮಾತನಾಡಿ ವಿದ್ಯಾರ್ಥಿಗಳು ಉತ್ತಮರ ಸಂಘ ಮಾಡಬೇಕು. ತಂದೆ ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕೆಂದು ಹೇಳಿದರು.
ಪ್ರಮುಖರಾದ ಮಾರಮಾಡ ಮಾಚಮ್ಮ ಮಕ್ಕಳಿಗೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ವಾಂಡರರ್ಸ್ ಅಧ್ಯಕ್ಷ ಕೋಟೇರ ಮುದ್ದಯ್ಯ ಮಾತನಾಡಿ ಶಿಬಿರಾರ್ಥಿಗಳ ಶಿಸ್ತಿನಿಂದ ಶಿಬಿರ ಯಶಸ್ವಿಯಾಗಿದೆ. ಇದಕ್ಕೆ ಮಕ್ಕಳೇ ಕಾರಣ. ಕಲಿತದ್ದನ್ನು ಇಲ್ಲಿಗೆ ನಿಲ್ಲಿಸಬೇಡಿ, ಇನ್ನು ಮುಂದಕ್ಕೂ ಎಲ್ಲ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳ ಪತ್ನಿ ರೂಪಾ ಸುರೇಶ್, ವಾಂಡರರ್ಸ್ ಮಾಜಿ ಅಧ್ಯಕ್ಷ ಮಣಿ ಮೇದಪ್ಪ, ಪದಾಧಿಕಾರಿಗಳಾದ ಕಾರೇರ ಕವನ್ ಮಾದಪ್ಪ, ನಂದಾ ನಂಜಪ್ಪ ಇತರರು ಇದ್ದರು.

ಇದೇ ಸಂದರ್ಭದಲ್ಲಿ ಕೋದಂಡ ಪೂವಯ್ಯ ಅಪ್ಪಣ್ಣ, ಪಾಲೆಕಂಡ ಬೋಪಯ್ಯ, ಬೆಳ್ಯಪ್ಪ, ಮಾರಮಾಡ ಮಾಚಮ್ಮ ಹಾಗೂ ಕೋಟೆರ ಮುದ್ದಯ್ಯ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
ತರಬೇತುದಾರರುಗಳಾದ ಎಸ್.ಟಿ.ವೆಂಕಟೇಶ್, ಶಾಂ ಪೂಣಚ್ಚ, ಕಿರುಂದಂಡ ಗಣೇಶ್, ಕುಡೆಕಲ್ ಸಂತೋಷ್, ಯೋಗೇಶ್ ನಾಯ್ಡು, ಕಿರಣ್ ಚಿಣ್ಣಪ್ಪ, ಹರೇಂದ್ರ, ಯೋಗಶಿಕ್ಷಕ ಕೆ.ಕೆ. ಮಹೇಶ್‌ಕುಮಾರ್, ಉಪಾಹಾರದ ವ್ಯವಸ್ಥೆ ಮಾಡಿಕೊಡುತ್ತಿದ್ದ ಜನಾರ್ಧನ ಅವರುಗಳನ್ನು ಉಡುಗೊರೆಯೊಂದಿಗೆ ಅಭಿನಂದಿಸಲಾಯಿತು.
ಶಿಬಿರಾರ್ಥಿಗಳಾದ ಆರ್ಯ, ಲಕ್ಷಿತಾ, ಸಿಂಚನಾ, ದ್ಯುತಿ ಅತಿಥಿಗಳನ್ನು ಪರಿಚಯಿಸಿದರು. ದಾರಿಕಾ, ಲಕ್ಷಿತಾ, ಸ್ನೇಹ, ನಿಧಿ ಹಾಗೂ ಜನ್ಯಶ್ರೀ ಪ್ರಾರ್ಥಿಸಿದರೆ, ಎಸ್.ಟಿ.ವೆಂಕಟೇಶ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಎಲ್ಲರಿಗೂ ಹಾಲು, ಮೊಟ್ಟೆ, ಬ್ರೆಡ್ ಜಾಮ್, ಬಾಳೆ ಹಣ್ಣು ಹಾಗೂ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.