Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಡಳಿತ ಪಕ್ಷದ ವೈಫಲ್ಯ ಮತ್ತು ದೌರ್ಬಲ್ಯಗಳು ಕಾಂಗ್ರೆಸ್ ಗೆ ಅಸ್ತ್ರ : ಚುನಾವಣೆ ಸಂದರ್ಭ ರಾಜೀನಾಮೆ ಪರ್ವ ಸಾಮಾನ್ಯ : ಕೊಡಗು ಕಾಂಗ್ರೆಸ್ ಸಮರ್ಥನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಡಳಿತ ಪಕ್ಷದ ವೈಫಲ್ಯ ಮತ್ತು ದೌರ್ಬಲ್ಯಗಳು ಕಾಂಗ್ರೆಸ್ ಗೆ ಅಸ್ತ್ರ : ಚುನಾವಣೆ ಸಂದರ್ಭ ರಾಜೀನಾಮೆ ಪರ್ವ ಸಾಮಾನ್ಯ : ಕೊಡಗು ಕಾಂಗ್ರೆಸ್ ಸಮರ್ಥನೆ*

ಮೇ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 3 : ಚುನಾವಣೆ ಸಂದರ್ಭ ರಾಜೀನಾಮೆ ಪರ್ವ ಸಾಮಾನ್ಯ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾದರೆ ಅವರ ಸಲಹೆಗಳನ್ನು ಪಡೆಯಲು ನಾವು ಬದ್ಧರಾಗಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸ್ಪರ್ಧೆಯಲ್ಲಿದ್ದ ಏಳು ಕಾಂಗ್ರೆಸ್ಸಿಗರಲ್ಲಿ ಓರ್ವರನ್ನು ಒಮ್ಮತದಿಂದ ಆಯ್ಕೆ ಮಾಡಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಗೆಲ್ಲಿಸಿಕೊಂಡು ಬರುವ ಕುರಿತು ಸಲಹೆ ನೀಡಿದ ಜೀವಿಜಯ ಅವರೇ ಇದೀಗ ರಾಜೀನಾಮೆ ನೀಡಿರುವುದು ಸರಿಯಲ್ಲಿ. ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ಈ ರೀತಿ ನಡೆದುಕೊಂಡಿರುವುದು ಬೇಸರವನ್ನುಂಟು ಮಾಡಿದೆ ಎಂದರು.
ಜಾತ್ಯತೀತ ನೆಲೆಗಟ್ಟಿನ ರಾಜಕಾರಣ ಮಾಡಿಕೊಂಡು ಬಂದವರು ಇದೀಗ ಬಿಜೆಪಿ ಅಭ್ಯರ್ಥಿ ಅಪ್ಪಚ್ಚುರಂಜನ್ ಹಾಗೂ ಜೆಡಿಎಸ್ ಅಭ್ಯರ್ಥಿ ಮುತ್ತಪ್ಪ ಅವರ ಪರ ಮಾತನಾಡುತ್ತಿದ್ದಾರೆ. ಈಗ ಜೀವಿಜಯ ಅವರ ಜಾತ್ಯತೀತ ಸಿದ್ಧಾಂತ ಎಲ್ಲಿಗೆ ಹೋಯಿತು ಪ್ರಶ್ನಿಸಿದರು.
ಕಾಂಗ್ರೆಸ್ ಅಭ್ಯರ್ಥಿಯನ್ನು ಹೊರಗಿನವರು ಎಂದು ಟೀಕಿಸುತ್ತಿರುವ ಜೀವಿಜಯ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಡಾ.ಮಂತರ್ ಗೌಡರನ್ನು ಬೆಂಬಲಿಸಿದ ಮೊದಲ ವ್ಯಕ್ತಿಯಾಗಿದ್ದಾರೆ. ಇದೀಗ ವಿಧಾನಸಭಾ ಚುನಾವಣೆ ಸಂದರ್ಭ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ತಿಳಿಸಿದರು.
ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗರು ಒಗ್ಗಟ್ಟಿನಿಂದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಡಾ.ಮಂತರ್ ಗೌಡ ಪರ ಜನಸಾಗರವೇ ಹರಿದು ಬರುತ್ತಿದೆ. ಅವರಿಗೆ ಜನಬೆಂಬಲವಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅನಂತಕುಮಾರ್ ಅವರಿಗೆ ಪಕ್ಷ ಎಲ್ಲಾ ಸ್ಥಾನಮಾನಗಳನ್ನು ನೀಡಿದೆ. ಆದರೆ ಅವರು ಯಾಕೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಯುತ್ತಿಲ್ಲ. ವೈಯುಕ್ತಿಕ ಭಿನ್ನಾಭಿಪ್ರಾಯಗಳನ್ನು ಅವರುಗಳೇ ಬಗೆಹರಿಸಿಕೊಳ್ಳಬಹುದಿತ್ತು ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಎರಡನೇ ಹಂತದ ನಾಯಕರಿಗೆ ಮಾರ್ಗದರ್ಶನ ಮಾಡಬೇಕಾದ ಮತ್ತು ರಾಜಕೀಯವಾಗಿ ಬೆಳೆಸಬೇಕಾದ ಜೀವಿಜಯ ಅವರು ರಾಜೀನಾಮೆ ನೀಡುವ ಅಗತ್ಯವಿರಲಿಲ್ಲ. ಇವರು ತೆಗೆದುಕೊಂಡಿರುವ ನಿಲುವು ದು:ಖವನ್ನು ತಂದಿದೆ, ಹಿರಿಯ ರಾಜಕಾರಣಿಯಾಗಿ ಮಾರ್ಗದರ್ಶನ ಮಾಡುವ ಬದಲು ಅಧಿಕಾರದಾಹದ ರಾಜಕಾರಣ ಮಾಡಿರುವುದು ಸರಿಯಲ್ಲ ಎಂದು ಟೀಕಿಸಿದರು.
ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನಿಂದ ಸಮರ್ಥವಾಗಿ ಚುನಾವಣೆಯನ್ನು ಎದುರಿಸುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿದೆ. ಕಳೆದ 20- 25 ವರ್ಷಗಳಿಂದ ಇದ್ದ ಜನಪ್ರತಿನಿಧಿಗಳ ಆಡಳಿತದಿಂದ ಬೇಸತ್ತಿರುವ ಜನತೆ ಬದಲಾವಣೆಯನ್ನು ಬಯಸಿದ್ದು, ಗೆಲುವು ನಿಶ್ಚಿತವಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಹೋಂಸ್ಟೇ ಮಾಲೀಕರುಗಳಿಗೆ ಶೇ.5 ರ ಬಡ್ಡಿ ದರದಲ್ಲಿ 10 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ರೈತರಿಗೆ 10 ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಮಲೆನಾಡು, ಮೈಸೂರು ಭಾಗದ ಅಭಿವೃದ್ಧಿಗೆ ವಿಶೇಷ ನಿಧಿ ಸ್ಥಾಪಿಸಲಾಗುವುದು, ಕರ್ನಾಟಕ ಕಾಫಿ ಬ್ರ್ಯಾಂಡ್ ಮೂಲಕ ಕಾಫಿಗೆ ಉತ್ತೇಜನ ನೀಡಲಾಗುವುದು. ಕಾವೇರಿ ನದಿ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ರಮೇಶ್ ಭರವಸೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ ಆಡಳಿತ ಪಕ್ಷದ ವೈಫಲ್ಯ ಮತ್ತು ದೌರ್ಬಲ್ಯಗಳು ಕಾಂಗ್ರೆಸ್ ಗೆ ಅಸ್ತ್ರವಾಗಲಿದೆ. ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಒಗ್ಗಟಿನಿಂದ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
ಕಾಫಿ ವಾಣಿಜ್ಯ ಬೆಳೆ ಎಂದು ಉಚಿತ ವಿದ್ಯುತ್ ನೀಡದೆ ಸರ್ಕಾರ ವಂಚಿಸಿದೆ. ಜಮ್ಮಾ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವುದಾಗಿ ಕಂದಾಯ ಸಚಿವರು ಹೇಳಿಕೆ ನೀಡುತ್ತಾರೆ. ಆದರೆ ಜಿಲ್ಲೆಯ ಇಬ್ಬರು ಶಾಸಕರುಗಳು ಮಾತ್ರ ಏನೂ ಮಾತನಾಡದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.
ಗಿರಿಜನರ ಬದುಕು ಅತಂತ್ರವಾಗಿದೆ, ಮಾನವ- ವನ್ಯಜೀವಿಗಳ ಸಂಘರ್ಷ ಅಧಿಕವಾಗಿದೆ. ಜಿಲ್ಲೆಯ ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಆದರೆ ಸುದೀರ್ಘ ಕಾಲ ಶಾಸಕರಾದವರು ಏನನ್ನೂ ಮಾಡದೆ ಜಾತಿ, ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅರುಣ್ ಮಾಚಯ್ಯ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ ಹಾಗೂ ನಗರಾಧ್ಯಕ್ಷ ಬಿ.ವೈ.ರಾಜೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.