Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಧಾನಿ ಅಭಿವೃದ್ಧಿ ಕುರಿತು ಮಾತನಾಡುತ್ತಿಲ್ಲ : ಹೆಚ್.ವಿಶ್ವನಾಥ್ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಧಾನಿ ಅಭಿವೃದ್ಧಿ ಕುರಿತು ಮಾತನಾಡುತ್ತಿಲ್ಲ : ಹೆಚ್.ವಿಶ್ವನಾಥ್ ಟೀಕೆ*

ಮೇ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 4 : ನರೇಂದ್ರ ಮೋದಿ ಅವರು ಈ ರಾಷ್ಟ್ರದ ಪ್ರಧಾನಿಯಾಗಿದ್ದು, ಅವರನ್ನು ಗೌರವಿಸುತ್ತೇನೆ. ಆದರೆ ಅವರ ಮನಸು ಬದಲಾವಣೆಯಾಗಬೇಕು, ಭಾರತದಷ್ಟು ವಿಶಾಲವಾಗಬೇಕು. ಇಂದು ರಾಜ್ಯಕ್ಕೆ ಪದೇ ಪದೇ ಬರುತ್ತಿರುವ ಮೋದಿ ಅವರು, ಮುಚ್ಚುವ ಸ್ಥಿತಿಯಲ್ಲಿರುವ 6 ಸಾವಿರ ಸರ್ಕಾರಿ ಶಾಲೆಗಳು, ಏಕೋಪಾಧ್ಯಾಯ ಇರುವ ಒಂದು ಸಾವಿರ ಪ್ರೌಢ ಶಾಲೆಗಳು ಮತ್ತು ಅಭಿವೃದ್ಧಿಯ ಬಗ್ಗೆ ಮಾತನಾಡಬೇಕು. ಚುನಾವಣೆಯ ಬಗೆಗಿನ ಹೆದರಿಕೆಯಿಂದ ಮೋದಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆಯೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.
::: ಗಲ್ಲ್ಲಿ ಗಲ್ಲಿಗೆ ಬಂದಿಲ್ಲ :::
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಪದೇ ಪದೇ ಇಂದು ಭೇಟಿ ನೀಡುತ್ತಿದ್ದು, ಈ ಅವಧಿಯಲ್ಲಿ ಅವರು ಅನ್ನ, ಅಕ್ಷರ, ಆರೋಗ್ಯ, ಉದ್ಯೋಗ, ಆರ್ಥಿಕ ನೀತಿಗಳ ಬಗ್ಗೆ ಮಾತನಾಡಿಲ್ಲ. ರಾಷ್ಟçದ ಪ್ರಧಾನಿಗಳಾಗಿದ್ದವರಲ್ಲಿ ಯಾರೊಬ್ಬರು ಈ ರೀತಿ ಗಲ್ಲಿ ಗಲ್ಲಿಗೆ ಬಂದಿಲ್ಲವೆಂದು ಟೀಕಿಸಿದರು.
ಚುನಾವಣಾ ಹಂತದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಕುರಿತು ಮಾತನಾಡುವುದಕ್ಕಿಂತ ಉಚಿತ ಶಿಕ್ಷಣ ಮತ್ತು ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾತನಾಡಬೇಕು. ವಿವಿಧ ಕೊಡುಗೆಗಳನ್ನು ಉಚಿತವಾಗಿ ನೀಡಲು ಹಣ ಎಲ್ಲಿದೆ ಪ್ರಶ್ನಿಸಿದರು.
ಚುನಾವಣಾ ಹಂತದಲ್ಲಿ ಎಲ್ಲಾ ಪಕ್ಷಗಳು ಉಚಿತ ಕೊಡುಗೆಗಳ ಬಗ್ಗೆ ಮಾತನಾಡಿವೆ. ಇವುಗಳನ್ನು ಕಾರ್ಯಗತಗೊಳಿಸಲು ಹಣವೆಲ್ಲಿದೆಯೆಂದು ಪ್ರಶ್ನಿಸಿದ ಅವರು, ಬೊಮ್ಮಾಯಿ ಅವರು ತಾವು 3.17 ಲಕ್ಷ ಕೋಟಿಯ ಬಜೆಟ್ ತಮ್ಮದೆಂದು ಹೇಳಿಕೊಳ್ಳುತ್ತಾರೆ. ಇದರಲ್ಲಿ 1.76 ಲಕ್ಷ ಕೋಟಿ ವೇತನಕ್ಕೆ ಬಳಕೆಯಾಗಿ ಹೋಗುತ್ತದೆ, ಇದರ ಮೇಲೆ 7 ಸಾವಿರ ಕೋಟಿ ಸಾಲವಿದ್ದು, ಉಚಿತ ಕೊಡುಗೆಗಳಿಗೆ ಹಣವೆಲ್ಲಿದೆಯೆಂದು ಪ್ರಶ್ನಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇಂದು ತಾನು ನಾಮ ನಿರ್ದೇಶಿತ ವಿಧಾನ ಪರಿಷತ್‌ನ ಸದಸ್ಯನಾಗಿದ್ದು, ಯಾವುದೇ ಪಕ್ಷದಲ್ಲಿ ಇಲ್ಲದ ಸ್ವತಂತ್ರ ವ್ಯಕ್ತಿಯಾಗಿದ್ದೇನೆ ಮತ್ತು ಕಾಂಗ್ರೆಸ್‌ನ್ನು ಬೆಂಬಲಿಸುತ್ತಿದ್ದೇನೆ ಎಂದರು.
ಪ್ರಜಾತಂತ್ರ ವ್ಯವಸ್ಥೆಯಡಿ ಯಾರು ಯಾವುದೇ ಪಕ್ಷದಲ್ಲಿರಲು ಅವಕಾಶವಿದೆ. ಅದರಂತೆ ತಾನು ವಿವಿಧ ಪಕ್ಷಗಳಲ್ಲಿ ಇದ್ದೆನಾದರು, ಆ ಎಲ್ಲಾ ಪಕ್ಷಗಳಲ್ಲಿ ತನ್ನ ಅನಿಸಿಕೆಗಳನ್ನು ದಿಟ್ಟವಾಗಿ ಮುಂದಿಟ್ಟಿದ್ದೇನೆ. ತನ್ನ ಚಿಂತನೆಗಳಿಗೆ ಸರಿ ಹೊಂದಲಿಲ್ಲ ಎನ್ನುವ ಕಾರಣಕ್ಕಾಗಿ ಆಯಾ ಪಕ್ಷಗಳಿಂದ ಹೊರ ಹೋಗಿದ್ದೇನೆಂದು ಸ್ಪಷ್ಟಪಡಿಸಿದರು.
::: ಮುಸ್ಲಿಮರಿಗೇಕೆ ಟಿಕೆಟ್ ನೀಡಿಲ್ಲ :::
ರಾಷ್ಟ್ರದ ಸಂವಿಧಾನ, ಅದನ್ನು ರಚಿಸಿದ ಡಾ.ಅಂಬೇಡ್ಕರ್ ಅವರನ್ನು ಗೌರವಿಸುವುದಾಗಿ ಹೇಳಿಕೊಳ್ಳುವ ಬಿಜೆಪಿ, ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮೂಹದ ಮುಸ್ಲಿಮರಿಗೆ ಯಾಕೆ ಟಿಕೆಟ್ ನೀಡಿಲ್ಲವೆಂದು ವಿಶ್ವನಾಥ್ ಪ್ರಶ್ನಿಸಿದರು.
::: ಭಜರಂಗದಳ ಮತ್ತು ಆಂಜನೇಯ ಬೇರೆ ಬೇರೆ :::
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವ ಅಂಶ ಪ್ರಸ್ತಾಪಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ಭಜರಂಗದಳ ಮತ್ತು ಆಂಜನೇಯ ಬೇರೆ ಬೇರೆ. ಭಜರಂಗದಳ ಎನ್ನುವುದು ಒಂದು ಸಂಘಟನೆ, ಈ ಸಂಘಟನೆ ನೈತಿಕ ಪೊಲೀಸ್ ಗಿರಿಯಲ್ಲಿ ನಿರತವಾದ ಸಂಘಟನೆಯೆಂದು ಆರೋಪಿಸಿದರು.
::: ಮೀಸಲಾತಿಯನ್ನು ಹಳ್ಳ ಹಿಡಿಸಲಾಗಿದೆ :::
ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿಯನ್ನು ಹಳ್ಳ ಹಿಡಿಸಿದೆಯೆಂದು ಟೀಕಿಸಿದ ವಿಶ್ವನಾಥ್, ಯಾವುದೇ ಮೀಸಲಾತಿಯನ್ನು ಒದಗಿಸುವುದಕ್ಕೂ ಮೊದಲು ಅದರ ಅಧ್ಯಯನಕ್ಕೆ ಆಯೋಗ ರಚನೆಯಾಗಬೇಕು. ಅದು ನೀಡುವ ವರದಿಯಂತೆ ಮೀಸಲಾತಿಗೆ ಕ್ರಮ ಕೈಗೊಳ್ಳಬೇಕು. ಅದಾವುದನ್ನು ಮಾಡದ ಸರ್ಕಾರ ಒಟ್ಟು ಮೀಸಲಾತಿಯನ್ನು ಹಳ್ಳ ಹಿಡಿಸಿದೆಯೆಂದು ಲೇವಡಿ ಮಾಡಿದರು.
ಪ್ರಸ್ತುತ ಚುನಾವಣೆಯಲ್ಲಿ ಸುಧಾರಣೆಗೋಸ್ಕರ ಜನತೆ ಬದಲಾವಣೆಯನ್ನು ಬಯಸಿದ್ದಾರೆ ಎಂದು ತಿಳಿಸಿದ ಅವರು, ಕೊಡಗಿನ ಎರಡು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರನ್ನು ಜಿಲ್ಲೆಯ ಜನತೆ ಗೆಲ್ಲಿಸುವ ಮೂಲಕ ಹೊಸ ಗಾಳಿ ಬೀಸಲಿ ಎಂದರು.
ಕೆಪಿಸಿಸಿ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ ಮಾತನಾಡಿ, ಕೊಡಗಿನಲ್ಲಿ ರಾಜಕೀಯ ಬದಲಾವಣೆಯ ತಂಗಾಳಿ ಬೀಸುತ್ತಿದೆ. ಸುದೀರ್ಘ ಆಡಳಿತ ನಡೆಸಿದವರಿಗೆ ವಿರಾಮ ನೀಡಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನತೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ರಾಜ್ಯ ಉಪಾಧ್ಯಕ್ಷ ಪಿ.ಸಿ.ಹಸೈನಾರ್ ಹಾಗೂ ಪ್ರಮುಖರಾದ ಕೆ.ಎಂ.ಲೋಕೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.