Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*
  • *ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*
  • *ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*
  • *ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*
  • ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”
  • *ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*
  • *ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಬಿ.ಆರ್.ಭವಿಷ್‍ಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ಥಳೀಯರೆ ಕೊಡಗು ಉಸ್ತುವಾರಿ ಸಚಿವರಾಗಲಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ಥಳೀಯರೆ ಕೊಡಗು ಉಸ್ತುವಾರಿ ಸಚಿವರಾಗಲಿ*

ಮೇ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 : ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಜಿಲ್ಲೆಯ ಶಾಸಕರಿಗೆ ಅವಕಾಶ ಒದಗಿಸುವುದರೊಂದಿಗೆ, ಸ್ಥಳೀಯರನ್ನೆ ಜಿಲ್ಲಾ ಉಸ್ತುವಾರಿಯನ್ನಾಗಿ ನಿಯುಕ್ತಿಗೊಳಿಸಬೇಕೆಂದು ಮಾಜಿ ಎಂಎಲ್‍ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಡಿಕೇರಿ ಕ್ಷೇತ್ರದಿಂದ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಅಜ್ಜಿಕುಟ್ಟೀರ ಪೊನ್ನಣ್ಣ ಅವರು ಆಯ್ಕೆಯಾಗಿದ್ದು, ಇವರಿಬ್ಬರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಕಾಳಜಿಯನ್ನು ಹೊಂದಿದ್ದು, ಇವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸಭೆ ನಡೆಸಿ ಕಾಂಗ್ರೆಸ್ ವರಿಷ್ಠರ ಬಳಿಗೆ ನಿಯೋಗ ತೆರಳಿ ಆಗ್ರಹಿಸಲಾಗುವುದೆಂದು ಸ್ಪಷ್ಟಪಡಿಸಿದರು.
ಕೊಡಗಿಗೆ ಆದ್ಯತೆ ನೀಡಿ- ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಪಡೆದುಕೊಂಡಿದ್ದು, ನೂತನ ಸರ್ಕಾರದಲ್ಲಿ ಮುಖ್ಯ ಮಂತ್ರಿಗಳಾಗಿ ಯಾರೇ ಅಧಿಕಾರಕ್ಕೆ ಬರಲಿ, ಅವರು ಕೊಡಗಿನ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುವಂತಾಗಬೇಕು. ಜಿಲ್ಲೆಯ ಸರ್ವಾಂಗಿಣ ಪ್ರಗತಿಗೆ ಒತ್ತು ನೀಡುವಂತೆ ಸರ್ಕಾರವನ್ನು ಆಗ್ರಹಿಸಲು ಎಲ್ಲಾ ಸಂಘ ಸಂಸ್ಥೆಗಳು, ಪಕ್ಷದ ಮುಖಂಡರೊಂದಿಗೆ ಸೇರಿ ಹೋರಾಟವನ್ನು ರೂಪಿಸಿ, ಒಗ್ಗಟ್ಟಿನ ಪ್ರದರ್ಶನವನ್ನು ಮಾಡುವುದಾಗಿ ವೀಣಾ ಅಚ್ಚಯ್ಯ ಸ್ಪಷ್ಟಪಡಿಸಿದರು.
ಜಿಲ್ಲೆಯ ಜನತೆಯ ಆಶೋತ್ತರ ಪರಿಗಣಿಸಿ- ಜಿಲ್ಲೆಯ ಎರಡು ಕ್ಷೇತ್ರಗಳಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮುಂಬರುವ ದಿನಗಳಲ್ಲಿ, ಜಿಲ್ಲೆಯ ಜನತೆ ತಮ್ಮ ಮೇಲಿ ಇರಿಸಿರುವ ನಂಬಿಕೆಗೆ ತಕ್ಕಂತೆ ಅವರ ಆಶೋತ್ತರಗಳ ಈಡೇರಿಕೆಗೆ ಹೆಚ್ಚಿನ ಮುತುವರ್ಜಿ ವಹಿಸುವುದು ಅವಶ್ಯ. ಸರ್ಕಾರ ರಚನಾ ಪ್ರಕ್ರಿಯೆಗಳು ಮುಕ್ತಾಯಗೊಂಡು ಜಿಲ್ಲೆಗೆ ಆಗಮಿಸುವ ನೂತನ ಶಾಸಕರುಗಳೊಂದಿಗೆ, ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸಭೆ ನಡೆಸಿ, ಕೊಡಗಿನ ಸಮಗ್ರ ಅಭಿವೃದ್ಧಿಗೆ ಯಾವೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆನ್ನುವ ಬಗ್ಗೆ ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ಪ್ರಣಾಳಿಕೆ ಈಡೇರಿಕೆ ಒತ್ತು ನೀಡಿ- ಜಿಲ್ಲೆಯ ಎರಡು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರು ಅಭ್ಯರ್ಥಿಗಳು ತಮ್ಮ ಕ್ಷೇತ್ರಕ್ಕೆ ಸೀಮಿತವಾದ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಆ ಪ್ರಣಾಳಿಕೆಯಲ್ಲಿ ಸೂಚಿಸಿರುವ ಭರವಸೆಗಳ ಈಡೇರಿಕೆಗೆ ಅಗತ್ಯ ಪ್ರಯತ್ನಗಳನ್ನು ನಡೆಸಬೇಕು. ಅಂತಹ ಪ್ರಯತ್ನಗಳನ್ನು ನಡೆಸುವ ಪೂರ್ಣ ವಿಶ್ವಾಸ ತಮಗಿರುವುದಾಗಿ ಸ್ಪಷ್ಟಪಡಿಸಿದರು.
ಚುನಾಯಿತ ಜನಪ್ರತಿನಿಧಿಗಳು ಎಲ್ಲರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಮುನ್ನಡಿ ಇಡುವುದು ಅತ್ಯವಶ್ಯ. ಆ ಮೂಲಕ ಕೊಡಗಿನ ಜ್ವಲಂತ ಹತ್ತು ಹಲ ಸಮಸ್ಯೆಗಳಿಗೆ ಪರಿಹಾರವನ್ನು ಹಂತ ಹಂತವಾಗಿ ಕಂಡು ಕೊಳ್ಳುವ ಅಗತ್ಯವಿದೆ. ಚುನಾವಣೆಯ ಹಂತದಲ್ಲಿ ಪರ ವಿರೋಧದ ಹೇಳಿಕೆಗಳು ಬರುವುದು ಸಾಮಾನ್ಯವಾಗಿದ್ದು, ಗೆದ್ದು ಕ್ಷೇತ್ರದ ಜನಪ್ರತಿನಿಧಿ ಎನಿಸಿಕೊಂಡ ಬಳಿಕ ಇಬ್ಬರು ನೂತನ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಕಾರ್ಯನಿರ್ವಹಿಸುವ ಆಶಯವನ್ನು ವೀಣಾ ಅಚ್ಚಯ್ಯ ವ್ಯಕ್ತಪಡಿಸಿದರು.
ನೂತನ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಕುಂಠಿತಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮತ್ತೆ ಚುರುಕು ನೀಡುವ ಕೆಲಸವನ್ನು ಮಾಡುವುದರೊಂದಿಗೆ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕಾಗುತ್ತದೆ. ವಿವಿಧ ಇಲಾಖೆಗಳಲ್ಲಿ ಅಗತ್ಯ ಕೆಲಸ ಕಾರ್ಯಗಳಿಗೆ ಶ್ರೀಸಾಮಾನ್ಯ ಸಂಕಷ್ಟವನ್ನು ಎದುರಿಸುತ್ತಿದ್ದು, ಕೆಲಸಕ್ಕಾಗಿನ ಜನರ ಅಲೆದಾಟ ತಪ್ಪಿಸಲು, ಮಧ್ಯವರ್ತಿಗಳ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನ ಕಾರ್ಯ ನಡೆಯಬೇಕು, ಅಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕಾರ್ಯವನ್ನು ನೂತನ ಜನಪ್ರತಿನಿಧಿಗಳು ಮಾಡುವಂತಾಗಲೆಂದು ಹಾರೈಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಿವು ಮಾದಪ್ಪ ಮಾತನಾಡಿ, ಸರ್ಕಾರಿ ಇಲಾಖೆಗಳಲ್ಲಿನ ಮಧ್ಯವರ್ತಿಗಳ ಹಾವಳಿ, ಲಂಚ ರುಷುವತ್ತುಗಳಿಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಜಿಲ್ಲೆಯ ಅಭಿವೃದ್ಧಿಯ ಕಾಳಜಿ ಇಲ್ಲದ ಅಧಿಕಾರಿಗಳಿಗೆ ಕಾರ್ಯನಿರ್ವಹಿಸಲು ಅವಕಾಶವಿಲ್ಲವೆಂದು ದೃಢವಾಗಿ ನುಡಿದು, ನೂತನ ಜನಪ್ರತಿನಿಧಿಗಳು ಕೊಡಗಿನ ಆನೆ ಮಾನವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ, ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಮೊದಲಾದ ಜನಪರವಾದ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕಾಂಗ್ರೆಸ್ ಮುಖಂಡರಾದ ಬೊಳ್ಳಜಿರ ಅಯ್ಯಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4…

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*

ಜುಲೈ 9, 2026

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026

ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”

ಜುಲೈ 9, 2026

*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*

ಜುಲೈ 9, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*

ಜುಲೈ 9, 2026

*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಜುಲೈ 9, 2026

*ಬಿ.ಆರ್.ಭವಿಷ್‍ಗೆ ಸನ್ಮಾನ*

ಜುಲೈ 8, 2026

*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*

ಜುಲೈ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.