Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನ ನೀಡಿ : ಟಿ.ಎಂ.ಶಾಹಿದ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನ ನೀಡಿ : ಟಿ.ಎಂ.ಶಾಹಿದ್ ಒತ್ತಾಯ*

ಮೇ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 17 :  ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಸಲ್ಮಾನರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೊಡಗು ಜಿಲ್ಲಾ ಮಾಜಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ, ಧರ್ಮ, ಭೇದ ಮರೆತು ರಾಜ್ಯದ ಸರ್ವ ಧರ್ಮೀಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿ ಅಧಿಕಾರಕ್ಕೆ ತಂದಿದ್ದಾರೆ. ಮುಸಲ್ಮಾನರು ಸಂಪೂರ್ಣವಾಗಿ ಕಾಂಗ್ರೆಸ್ ಗೆ ಮತ ಚಲಾಯಿಸುವ ಮೂಲಕ ಪಕ್ಷವನ್ನು ಬಲಗೊಳಿಸಿದ್ದಾರೆ ಎಂದರು.
ಸರ್ಕಾರ ರಚಿಸುವ ಸಂದರ್ಭ ಓರ್ವ ಮುಸಲ್ಮಾನ ಶಾಸಕರಿಗೆ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಐವರು ಮುಸಲ್ಮಾನರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಪಕ್ಷದ ವರಿಷ್ಠರ ಬಳಿಯೂ ಕೋರುವುದಾಗಿ ಹೇಳಿದರು.
ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ ಶಾಸಕರುಗಳಾಗಿದ್ದಾರೆ. ಇವರುಗಳು ಮುಂದಿನ ದಿನಗಳಲ್ಲಿ ಸಚಿವರಾಗಿ ಬಂದು ಕೊಡಗಿನ ಏಳಿಗೆಗಾಗಿ ಶ್ರಮಿಸಲಿದ್ದಾರೆ ಶಾಂತಿ ಸೌಹಾರ್ದತೆ ಅಭಿವೃದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೂತನ ಮುಖ್ಯಮಂತ್ರಿಗಳು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ನ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಜನ ಕೋಮು ಭಾವನೆಯನ್ನು ಕೆರಳಿಸುವ ರಾಜಕಾರಣವನ್ನು ತಿರಸ್ಕರಿಸಿ ಶಾಂತಿ, ಸೌಹಾರ್ದತೆ ಮತ್ತು ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ. 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕೂಡ ಇದೇ ಪರಿಸ್ಥಿತಿ ಮುಂದುವರೆಯಲಿದ್ದು, ಕೋಮು ಭಾವನೆಯ ರಾಜಕೀಯ ನಡೆಯುವುದಿಲ್ಲ. ಕೇಂದ್ರ ಸರ್ಕಾರ ಕಳಪೆ ಆಡಳಿತವನ್ನು ನೀಡುತ್ತಿದ್ದು, ಕೇವಲ ಜಾಹೀರಾತಿನ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ನೋಟ್ ಬ್ಯಾನ್ ಕ್ರಮದಿಂದ ಆರ್ಥಿಕ ಬೆಳವಣಿಗೆ ಕುಸಿದಿದೆ, ಜಿಎಸ್‌ಟಿಯ ಹೊರೆ ಜನಸಾಮಾನ್ಯರ ಜೀವನಕ್ಕೆ ಹೊರೆಯಾಗಿದೆ. ದೇಶದ ಜನ ಬಿಜೆಪಿ ನೇತೃತ್ವದ ಸರ್ಕಾರದಿಂದ ಬೇಸತ್ತಿದ್ದಾರೆ ಎಂದು ಆರೋಪಿಸಿದರು.

::: ಮುಸ್ಲಿಮರು, ಕ್ರೈಸ್ತರು ಜಾಗೃತರಾಗಿರಬೇಕು :::
ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವ ಸಮೂಹ ಯಾವುದೇ ಕಾರಣಕ್ಕೂ ಉದ್ವೇಗ ಮತ್ತು ಪ್ರಚೋದನೆಗೆ ಒಳಗಾಗಬಾರದು. ಈ ನಾಡಿನ ಕಾನೂನನ್ನು ಗೌರವಿಸುವ ಮೂಲಕ ಶಾಂತಿಯನ್ನು ಕಾಪಾಡಬೇಕು,ಅಪಪ್ರಚಾರ ಮಾಡುವವರಿಗೆ ಆಹಾರವಾಗಬಾರದು ಎಂದು ಟಿ.ಎಂ.ಶಾಹಿದ್ ಮನವಿ ಮಾಡಿದರು.
ಮುಸ್ಲಿಂ ಧ್ವಜವನ್ನು ಹಾರಿಸಿದರೆ ಪಾಕಿಸ್ತಾನದ ಧ್ವಜವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರ ಹಾದಿ ತಪ್ಪಿಸಲು ಮತ್ತು ಅಶಾಂತಿಯನ್ನು ಮೂಡಿಸಲು ಈ ರೀತಿಯ ಅಪಪ್ರಚಾರಗಳು ಆರಂಭಗೊಂಡಿದೆ. ಆದ್ದರಿಂದ ರಾಜ್ಯದ ಮುಸಲ್ಮಾನರು ಹಾಗೂ ಕ್ರೈಸ್ತರು ಜಾಗೃತಗೊಳ್ಳಬೇಕು. ಪ್ರಚೋದನೆ ಮತ್ತು ಆಮಿಷಗಳಿಗೆ ಒಳಗಾಗಬಾರದು, ಯಾವುದೇ ಅನ್ಯಾಯ ಅಥವಾ ಗೊಂದಲಗಳಾದಲ್ಲಿ ಶಾಸಕರುಗಳ ಗಮನಕ್ಕೆ ತರುವ ಪ್ರಯತ್ನ ಮಾಡಿ. ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದರು.
ಎಲ್ಲಾ ಸಮುದಾಯದಲ್ಲೂ ಕೆಲವರು ಕೋಮುವಾದಿಗಳಿದ್ದಾರೆ, ಯಾವುದೇ ಸಮುದಾಯ ಅಥವಾ ಸಂಘಟನೆ ಇರಲಿ. ಕಾನೂನು ಮೀರಿ ವರ್ತಿಸಿದರೆ ನೂತನ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ ಚುನಾವಣೆ ಸಂದರ್ಭ ಕೋಮು ಭಾವನೆ ಕೆರಳಿಸಿ ಮತಗಳಿಸುವ ಸಾಧ್ಯತೆಗಳಿದೆ. ಆದ್ದರಿಂದ ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲಾ ಧರ್ಮೀಯರು ಜಾಗೃತರಾಗಬೇಕೆಂದು ಶಾಹಿದ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಮಡಿಕೇರಿ ನಗರ ಉಪಾಧ್ಯಕ್ಷ ಎಂ.ಎ.ಯಾಕುಬ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಎಂ.ಹೆಚ್.ಜಫ್ರುಲ್ಲ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.29 NEWS DESK  : ಜಿಲ್ಲೆಯಲ್ಲಿ ಇನ್‍ಫ್ಲುಯೆಂಜಾ (ಎಚ್1ಎನ್1) ವೈರಸ್ ನಿಂದ ಹರಡುವ ಜ್ವರ ತಡೆಯಲು ಆರೋಗ್ಯ ಇಲಾಖೆಯು…

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.