Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*
  • *25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*
  • *ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*
  • *ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*
  • *ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*
  • *ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನ ನೀಡಿ : ಟಿ.ಎಂ.ಶಾಹಿದ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನ ನೀಡಿ : ಟಿ.ಎಂ.ಶಾಹಿದ್ ಒತ್ತಾಯ*

ಮೇ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 17 :  ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಸಲ್ಮಾನರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೊಡಗು ಜಿಲ್ಲಾ ಮಾಜಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ, ಧರ್ಮ, ಭೇದ ಮರೆತು ರಾಜ್ಯದ ಸರ್ವ ಧರ್ಮೀಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿ ಅಧಿಕಾರಕ್ಕೆ ತಂದಿದ್ದಾರೆ. ಮುಸಲ್ಮಾನರು ಸಂಪೂರ್ಣವಾಗಿ ಕಾಂಗ್ರೆಸ್ ಗೆ ಮತ ಚಲಾಯಿಸುವ ಮೂಲಕ ಪಕ್ಷವನ್ನು ಬಲಗೊಳಿಸಿದ್ದಾರೆ ಎಂದರು.
ಸರ್ಕಾರ ರಚಿಸುವ ಸಂದರ್ಭ ಓರ್ವ ಮುಸಲ್ಮಾನ ಶಾಸಕರಿಗೆ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಐವರು ಮುಸಲ್ಮಾನರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಪಕ್ಷದ ವರಿಷ್ಠರ ಬಳಿಯೂ ಕೋರುವುದಾಗಿ ಹೇಳಿದರು.
ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ ಶಾಸಕರುಗಳಾಗಿದ್ದಾರೆ. ಇವರುಗಳು ಮುಂದಿನ ದಿನಗಳಲ್ಲಿ ಸಚಿವರಾಗಿ ಬಂದು ಕೊಡಗಿನ ಏಳಿಗೆಗಾಗಿ ಶ್ರಮಿಸಲಿದ್ದಾರೆ ಶಾಂತಿ ಸೌಹಾರ್ದತೆ ಅಭಿವೃದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೂತನ ಮುಖ್ಯಮಂತ್ರಿಗಳು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ನ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಜನ ಕೋಮು ಭಾವನೆಯನ್ನು ಕೆರಳಿಸುವ ರಾಜಕಾರಣವನ್ನು ತಿರಸ್ಕರಿಸಿ ಶಾಂತಿ, ಸೌಹಾರ್ದತೆ ಮತ್ತು ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ. 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕೂಡ ಇದೇ ಪರಿಸ್ಥಿತಿ ಮುಂದುವರೆಯಲಿದ್ದು, ಕೋಮು ಭಾವನೆಯ ರಾಜಕೀಯ ನಡೆಯುವುದಿಲ್ಲ. ಕೇಂದ್ರ ಸರ್ಕಾರ ಕಳಪೆ ಆಡಳಿತವನ್ನು ನೀಡುತ್ತಿದ್ದು, ಕೇವಲ ಜಾಹೀರಾತಿನ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ನೋಟ್ ಬ್ಯಾನ್ ಕ್ರಮದಿಂದ ಆರ್ಥಿಕ ಬೆಳವಣಿಗೆ ಕುಸಿದಿದೆ, ಜಿಎಸ್‌ಟಿಯ ಹೊರೆ ಜನಸಾಮಾನ್ಯರ ಜೀವನಕ್ಕೆ ಹೊರೆಯಾಗಿದೆ. ದೇಶದ ಜನ ಬಿಜೆಪಿ ನೇತೃತ್ವದ ಸರ್ಕಾರದಿಂದ ಬೇಸತ್ತಿದ್ದಾರೆ ಎಂದು ಆರೋಪಿಸಿದರು.

::: ಮುಸ್ಲಿಮರು, ಕ್ರೈಸ್ತರು ಜಾಗೃತರಾಗಿರಬೇಕು :::
ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವ ಸಮೂಹ ಯಾವುದೇ ಕಾರಣಕ್ಕೂ ಉದ್ವೇಗ ಮತ್ತು ಪ್ರಚೋದನೆಗೆ ಒಳಗಾಗಬಾರದು. ಈ ನಾಡಿನ ಕಾನೂನನ್ನು ಗೌರವಿಸುವ ಮೂಲಕ ಶಾಂತಿಯನ್ನು ಕಾಪಾಡಬೇಕು,ಅಪಪ್ರಚಾರ ಮಾಡುವವರಿಗೆ ಆಹಾರವಾಗಬಾರದು ಎಂದು ಟಿ.ಎಂ.ಶಾಹಿದ್ ಮನವಿ ಮಾಡಿದರು.
ಮುಸ್ಲಿಂ ಧ್ವಜವನ್ನು ಹಾರಿಸಿದರೆ ಪಾಕಿಸ್ತಾನದ ಧ್ವಜವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರ ಹಾದಿ ತಪ್ಪಿಸಲು ಮತ್ತು ಅಶಾಂತಿಯನ್ನು ಮೂಡಿಸಲು ಈ ರೀತಿಯ ಅಪಪ್ರಚಾರಗಳು ಆರಂಭಗೊಂಡಿದೆ. ಆದ್ದರಿಂದ ರಾಜ್ಯದ ಮುಸಲ್ಮಾನರು ಹಾಗೂ ಕ್ರೈಸ್ತರು ಜಾಗೃತಗೊಳ್ಳಬೇಕು. ಪ್ರಚೋದನೆ ಮತ್ತು ಆಮಿಷಗಳಿಗೆ ಒಳಗಾಗಬಾರದು, ಯಾವುದೇ ಅನ್ಯಾಯ ಅಥವಾ ಗೊಂದಲಗಳಾದಲ್ಲಿ ಶಾಸಕರುಗಳ ಗಮನಕ್ಕೆ ತರುವ ಪ್ರಯತ್ನ ಮಾಡಿ. ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದರು.
ಎಲ್ಲಾ ಸಮುದಾಯದಲ್ಲೂ ಕೆಲವರು ಕೋಮುವಾದಿಗಳಿದ್ದಾರೆ, ಯಾವುದೇ ಸಮುದಾಯ ಅಥವಾ ಸಂಘಟನೆ ಇರಲಿ. ಕಾನೂನು ಮೀರಿ ವರ್ತಿಸಿದರೆ ನೂತನ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ ಚುನಾವಣೆ ಸಂದರ್ಭ ಕೋಮು ಭಾವನೆ ಕೆರಳಿಸಿ ಮತಗಳಿಸುವ ಸಾಧ್ಯತೆಗಳಿದೆ. ಆದ್ದರಿಂದ ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲಾ ಧರ್ಮೀಯರು ಜಾಗೃತರಾಗಬೇಕೆಂದು ಶಾಹಿದ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಮಡಿಕೇರಿ ನಗರ ಉಪಾಧ್ಯಕ್ಷ ಎಂ.ಎ.ಯಾಕುಬ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಎಂ.ಹೆಚ್.ಜಫ್ರುಲ್ಲ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 24 : ಸಮಾಜದಲ್ಲಿ ಕೋಮು ಪ್ರಚೋದನೆ, ದ್ವೇಷ ಭಾಷಣ, ಗಲಭೆ ಸೃಷ್ಟಿ ಹಾಗೂ ಗೋ…

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026

*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*

ಮೇ 24, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*

ಮೇ 24, 2026

*ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*

ಮೇ 24, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*

ಮೇ 24, 2026

*ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*

ಮೇ 24, 2026

*ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.