Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೊಡರು ಪುಸ್ತಕ ವಿತರಣೆ : ಪತ್ರಿಕಾರಂಗ ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುವ ದಿಟ್ಟತನವನ್ನು ಹೊಂದಿದೆ : ಪ್ರೊ.ಅಶೋಕ್ ಸಂಗಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೊಡರು ಪುಸ್ತಕ ವಿತರಣೆ : ಪತ್ರಿಕಾರಂಗ ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುವ ದಿಟ್ಟತನವನ್ನು ಹೊಂದಿದೆ : ಪ್ರೊ.ಅಶೋಕ್ ಸಂಗಪ್ಪ*

ಮೇ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 18 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 4ನೇ ಅಂಗವಾಗಿರುವ ಪತ್ರಿಕಾರಂಗ ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುವ ದಿಟ್ಟತನವನ್ನು ಹೊಂದಿದೆ. ಪತ್ರಕರ್ತರಾದವರಿಗೆ ವಿವೇಚನಾ ಶಕ್ತಿಯ ಅಗತ್ಯವಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಅಶೋಕ್ ಸಂಗಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ರಚಿತ “ಸೊಡರು” ಪುಸ್ತಕ ವಿಮರ್ಶೆ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರಿಗೆ ಭಾಷಾ ಕೌಶಲ್ಯ, ವಿಷಯದ ಆಳವಾದ ಜ್ಞಾನ, ಅಧ್ಯಯನ, ವಿಷಯವನ್ನು ವಿಶ್ಲೇಷಿಸುವ ಅರಿವು ಇರಬೇಕು, ವಿವೇಚನಾತ್ಮಕ ಶಕ್ತಿಯನ್ನು ಹೊಂದಿರಬೇಕು ಮತ್ತು ಸನ್ನಿವೇಶದ ಗಾಂಭೀರ್ಯತೆ ತಿಳಿದಿರಬೇಕು ಎಂದರು.
ವಿದ್ಯಾರ್ಥಿಗಳಿಗಾಗಿ ಪತ್ರಿಕೋದ್ಯಮದ ಬಗ್ಗೆ ಕಾರ್ಯಾಗಾರ ಮತ್ತು ಸಮಾಜದ ಅಂಕು ಡೊಂಕುಗಳನ್ನು ಸರಿಪಡಿಸುವ ಕುರಿತು ಹಿರಿಯರ ಮಾರ್ಗದರ್ಶನದಲ್ಲಿ ಚಿಂತನ-ಮಂಥನ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು.
ಸೊಡರು ಎಂದರೆ ದೀಪ ಎಂದರ್ಥ, ಸೊಡರು ಎಂಬ ಜ್ಞಾನದ ಜ್ಯೋತಿಯ ಮೂಲಕ ನಮ್ಮಲ್ಲಿರುವ ಅಜ್ಞಾನವನ್ನು ತೊಡೆದು ಹಾಕಬೇಕು. ಸತ್ಯವನ್ನು ಎಂದೂ ಅಸತ್ಯ ಎಂದು ಹೇಳಲು ಸಾಧ್ಯವಿಲ್ಲ. ಜೀವನದಲ್ಲಿ ಸತ್ಯವನ್ನು ಮರೆಮಾಚುವ ಪ್ರಯತ್ನ ಮಾಡಬಾರದು. ಸತ್ಯ ಎಂಬುವುದು ಅತ್ಯಂತ ಪವಿತ್ರವಾದ ದಾರಿ ಎಂದು ಪ್ರೊ.ಅಶೋಕ್ ಸಂಗಪ್ಪ ತಿಳಿಸಿದರು.
ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಮಾತನಾಡಿ, ಸೊಡರು ಪುಸ್ತಕ ಮಾರ್ಗದರ್ಶಿ ಕೈಪಿಡಿಯಂತಿದೆ, ನೈಜ ಅನುಭವವನ್ನು ವಿವರಿಸಲಾಗಿದೆ, ವಿದ್ಯಾರ್ಥಿಗಳು ಓದುವ ಅಗತ್ಯವಿದೆ ಎಂದರು.
ಯಾವುದೇ ಪರಿಸ್ಥಿತಿಯಲ್ಲೂ ಪತ್ರಕರ್ತರು ಎದೆಗುಂದದೆ ಮುನ್ನಗ್ಗಿ ಕಾರ್ಯ ನಿರ್ವಹಿಸುವಂತಿರಬೇಕು. ಸತ್ಯಕ್ಕೆ ಸಮೀಪದ ವರದಿಗಳನ್ನು ಮಾಡಬೇಕು, ನೀಡುವ ಸುದ್ದಿ ಸಂಶಯಾಸ್ಪದವಾಗಿರಬಾರದು. ಪತ್ರಕರ್ತರು ಜನರು ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಸೇತುವೆಯಿದ್ದಂತೆ, ಆದ್ದರಿಂದ ಅತಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಹಾಗೂ ಸೊಡರು ಪುಸ್ತಕದ ಲೇಖಕ ಬಿ.ಜಿ.ಅನಂತಶಯನ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದ ದುರಾಡಳಿತವನ್ನು ಜನತೆಗೆ ಮುಟ್ಟಿಸುವ ಮೂಲಕ ಸ್ವಾತಂತ್ರö್ಯ ಪಡೆಯುವ ನಿಟ್ಟಿನಲ್ಲಿ ಅಂದು ಪತ್ರಿಕೋದ್ಯಮ ಹುಟ್ಟಿಕೊಂಡಿತು. ಆದರೆ ಸ್ವಾತಂತ್ರ್ಯ ನಂತರ ಪತ್ರಿಕೋದ್ಯಮ ತನ್ನ ಮೂಲ ಉದ್ದೇಶವನ್ನೇ ಮರೆತು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು. ಪತ್ರಿಕೋದ್ಯಮ ಸವಾಲಿನ ಕೆಲಸವಾಗಿದ್ದು, ಪತ್ರಕರ್ತನಿಗೆ ಸಮಯಪಾಲನೆ ಬಹಳ ಮುಖ್ಯ. ಸೊಡರು ಪುಸ್ತಕದಲ್ಲಿ ಪತ್ರಿಕೋದ್ಯಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ಪತ್ರಿಕೋದ್ಯಮದಲ್ಲಿ ಬರುವ ಸವಾಲುಗಳ ಕುರಿತು ಅವರು ವಿವರಿಸಿದರು.
ಕಾಲೇಜು ಪ್ರಾಂಶುಪಾಲ ಡಾ.ಮೇಜರ್ ರಾಘವ ಬಿ. ಪ್ರಾಸ್ತವಿಕವಾಗಿ ಮಾತನಾಡಿ, ಪತ್ರಕರ್ತರು ಸಾಕಷ್ಟು ಏಳು ಬೀಳುಗಳ ನಡುವೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಒಂದು ದೋಣಿ ಮುಂದೆ ಸಾಗಲು ನಾವಿಕ ಹೇಗೆ ಮುಖ್ಯವೋ ಅದೇ ರೀತಿ ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಪತ್ರಕರ್ತರು ಮುಖ್ಯ. “ಸೊಡರು” ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೃತಿಯಾಗಿದೆ ಎಂದು ಶ್ಲಾಘಿಸಿದರು.
ವಿದ್ಯಾರ್ಥಿ ಕೃತಿಕ ನಿರೂಪಿಸಿ, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಪತ್ರಿಕೋದ್ಯಮ ವಿಭಾಗದ ಸಂAಯೋಜಕಿ ಡಾ.ನಯನಾ ಕಶ್ಯಪ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ “ಸೊಡರು” ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.