Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಅಂತರ್ ರಾಷ್ಟ್ರೀಯ ಕಾರ್ಯಾಗಾರ : ಸಮಾಜದ ಒಳಿತಿಗಾಗಿ ವಿಜ್ಞಾನ ತಂತ್ರಜ್ಞಾನದ ಬಳಕೆಯಾಗಬೇಕು : ಡಾ.ಅಶೋಕ್ ಸಂಗಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಅಂತರ್ ರಾಷ್ಟ್ರೀಯ ಕಾರ್ಯಾಗಾರ : ಸಮಾಜದ ಒಳಿತಿಗಾಗಿ ವಿಜ್ಞಾನ ತಂತ್ರಜ್ಞಾನದ ಬಳಕೆಯಾಗಬೇಕು : ಡಾ.ಅಶೋಕ್ ಸಂಗಪ್ಪ*

ಮೇ 22, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 22 : ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಮತ್ತು ನಿರ್ವಹಣೆಗಳು ಒಂದೇ ದಾರದಲ್ಲಿ ಪೋಣಿಸಿರುವ ಮಣಿಗಳಂತೆ. ಹೊಸ ದೃಷ್ಟಿಕೊನದೊಂದಿಗೆ ಹೊಸ ಅವಿಷ್ಕಾರಗಳು ಹುಟ್ಟುಹಾಕುವ ಅನಿವಾರ್ಯತೆ ಯುವ ಸಮಾಜಕ್ಕೆ ಬೇಕಾಗಿದೆ ಎಂದು ಜ್ಞಾನ ಕಾವೇರಿ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಪ್ರಸ್ತುತ ಜಾಗತಿಕ ಮಟ್ಟದ ಹೊಸ ದೃಷ್ಟಿಕೊನ” ಎಂಬ ವಿಷಯದ ಬಗ್ಗೆ ಒಂದು ದಿನದ ಅಂತರ್ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದೇಶ ಮತ್ತು ವಿಶ್ವವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧನೆಗೈದಿದೆ. ದಿನದಿಂದ ದಿನಕ್ಕೆ ಹೊಸ ಹೊಸ ಅವಿಷ್ಕಾರಗಳು ಉಗಮವಾಗುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ನೂತನವಾದ ಅವಿಷ್ಕಾರಗಳು ಉದಯವಾದರು. ಪರಿಸರಕ್ಕೆ ಮಾರಕವಾಗುವ ವಿಷಯಗಳು ವಸ್ತುಗಳಿಗೆ ಪೂರಕವಾಗಿ ಸಮಾಜವು ನಿಲ್ಲಬಾರದು. ತಂತ್ರಜ್ಞಾನ ಬಳಕೆಯು ಮಾನವ ನಿರ್ಮಿತವಾಗಿದೆ. ತಂತ್ರಜ್ಞಾನದಿಂದ ಪರಿಸರದಿಂದ ಲಭಿಸುವ ವಸ್ತುಗಳನ್ನು ಪುನರ್ ನಿರ್ಮಾಣ ಮಾಡಲು ಅಸಾಧ್ಯವಾಗಿದೆ. ಕೃತಕ ಬುದ್ದಿಮತೆಯ ತಂತ್ರಜ್ಞಾನ ಎಲ್ಲಡೆ ಪಸರಿಸಿದೆ, ಮಾನವನ ತೀಕ್ಷಣವಾದ ಬುದ್ದಿಮತೆಯ ಶಕ್ತಿಯಿಂದ ಉದಯವಾದ ಕೃತಕ ವಸ್ತುಗಳು ಜಾಗತಿಕ ವಸ್ತುವಾಗಿ ಪರಿಣಮಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೃತಕ ಬುದ್ಧಿಮತೆಯಿಂದ ಸೃಷ್ಟಿಗೊಂಡ ವಸ್ತುಗಳು ಜೀವವಿಲ್ಲಾವಾದರು ಮಾನವ ವರ್ತಿಸುವಂತೆ ರೂಪುಗೊಳಿಸುತ್ತಾರೆ ತಂತ್ರಜ್ಞರು.  ಆದರೆ ಯಾವುದೇ ವಸ್ತುಗಳು ಶಾಶ್ವತವಾಗಿರುವುದಿಲ್ಲಾ. ವಿಜ್ಞಾನದ ಒಂದು ಭಾಗವೇ ತಂತ್ರಜ್ಞಾನವಾಗಿದೆ, ವಿಜ್ಞಾನ ತಂತ್ರಜ್ಞಾನದಿಂದ ಉತ್ಪಾದನೆವಾಗುವ ವಸ್ತುಗಳಿಗೆ ಮಾರುಕಟ್ಟೆ ಒದಗಿಸಬೇಕು ಮತ್ತು ನಿರ್ವಹಣೆ ಮಾಡುವ ಗುರಿ ಬಹುಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಯುವ ಸಮೂದಾಯವು ಹೊಸ ಚಿಂತನೆಯೊಂದಿಗೆ ಸಮಾಜಮಖಿ ಪರಿಸರ ಸ್ನೇಹಿ ವಸ್ತುಗಳನ್ನು ಅವಿಷ್ಕಾರ ಮಾಡುವಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು.

ಕಾಲೇಜಿನಲ್ಲಿ ಆಯೋಜಿಸಿದ ಕಾರ್ಯಕ್ರಮ ಸಹಕಾರವಾಗಲು ವಿಧ್ಯಾರ್ಥಿಗಳು ಪಡೆದ ಜ್ಞಾನವನ್ನು ಸದ್ಬಳಕೆಯಾಗುವ ಗುರಿ ಹೊಂದಬೇಕು ಎಂದು ಹೇಳಿದರು.

ಮೈಸೂರಿನ ಸಂತ ಫಿಲೋಮಿನಾ ಪದವಿ ಕಾಲೇಜಿನ  ಮಾಜಿ ಪ್ರಾಂಶುಪಾಲರಾದ ಡಾ. ರುತ್ ಶಾಂತ ಕುಮಾರಿ ಮಾತನಾಡಿ,  ಜಗತ್ತು ಇಂದು ಹೊಸ ತ್ರಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಅವಿಷ್ಕಾರಗಳನ್ನು ಹುಟ್ಟುಹಾಕುತ್ತಿವೆ. ಈ ನಿಟ್ಟಿನಲ್ಲಿ ಪ್ರಕೃತಿಯಲ್ಲಿ ಕಂಡುಬರುವ ಪ್ರಾಣಿ ಸಂಕುಲಗಳ ಚಲನವಲನಗಳ ಮೇಲೆ ಅಧ್ಯಯನ ನಡೆಸಿ ಪ್ರಕೃತಿಗೆ ಪೂರಕವಾಗಿ ವಾಹನಗಳು ಮತ್ತು ಇತರ ವಸ್ತುಗಳನ್ನು ಸಿದ್ದಗೊಳಿಸಲಾಗುತ್ತಿದೆ. ಇದು ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆದ ಬದಲಾವಣೆಗಳಾಗಿವೆ.  ಕೃತಕ ಬುದ್ದಿಮತೆಯಿಂದ ತಯಾರಾಗುವ ವಸ್ತುಗಳ ಬಗ್ಗೆ ಯುವ ಸಮೂಹದಲ್ಲಿ ಆಸಕ್ತಿ ಮೂಡಿದೆ. ವಿವಿಧ ಕ್ಷೇತ್ರಗಳಲ್ಲಿರುವ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಮುಂದಾಗಬೇಕು ಅಲ್ಲದೆ ಪರಿಹಾರ ಕಂಡುಕೊಳ್ಳಲು ಯುವ ಜನತೆಗೆ ಸಾಧ್ಯವಾಗಬೇಕು ಎಂದು  ಹೇಳಿದರು.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ ರಾಜ್ಯ ಮತ್ತು ದೇಶ ವಿದೇಶದ ವಿದ್ಯಾರ್ಥಿಗಳು ಕಳುಹಿಸಿರುವ ವಿವಿಧ ವಿಭಾಗಗಳಲ್ಲಿನ ಪ್ರಬಂಧ ಪೀಠಿಕಾ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ,  ಜಗತ್ತು ಎದುರು ನೋಡುವಂತೆ ಪ್ರಸ್ತುತ ಸಮಾಜಕ್ಕೆ ಬೇಕಾಗಿರುವ ರೀತಿಯಲ್ಲಿ ವಸ್ತು ತಯಾರಿಕೆಗೆ ಯುವ ಸಮೂಹ ಮುಂದಾಗಬೇಕು. ಆಯೋಜಿತ ಕಾರ್ಯಕ್ರಮವು ಪ್ರತಿಯೊಂದು ಕಾಲೇಜುವಿನಲ್ಲಿ ಆಯೋಜನೆಯಾಗಬೇಕು. ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿತು ಮುಂದಿನ ಪೀಳಿಗೆಗೆ ಧಾರೆ ಎರೆಯಬೇಕೆಂದು ಸಲಹೆ ನೀಡಿದರು.

ಸಂತ ಅನ್ನಮ್ಮ ಪದವಿ ಕಾಲೇಜು ಮತ್ತು ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್  ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿ, ವಿಜ್ಞಾನ, ತಂತ್ರಜ್ಞಾನ ವಾಣಿಜ್ಯ ಮತ್ತು ನಿರ್ವಹಣೆಗೆ ಸಂಭಂದಿಸಿದಂತೆ ಅಂತರ್ ರಾಷ್ಟ್ರೀಯ ವಿಚಾರ ಸಂಕಿರಣ  ಕಾರ್ಯಕ್ರಮ ಕಾಲೇಜಿನಲ್ಲಿ ಆಯೋಜಿಸಿರುವುದು ಸಂತೋಷದಾಯಕ ಬೆಳವಣಿಗೆಯಾಗಿದೆ. ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ವಿದ್ಯಾರ್ಥಿಗಳು ಭಾಗವಹಿಸಬೇಕು ಅಲ್ಲದೆ ವಿಷಯ ಮಂಡನೆಯ ವಿಷಯಗಳನ್ನು ಅರಿತು ಇತರರಿಗೆ ಅರಿವಿಕೆ ನೀಡುವ ಪ್ರಯತ್ನವಾಗಬೇಕು ಎಂದು ಹೇಳಿದರು.

ಸಂತ ಅನ್ನಮ್ಮ ಪದವಿ ಕಾಲೇಜು ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ  ಪ್ರಾಸ್ತಾವಿಕ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯದ ಕುಲಪತಿ  ಡಾ.ಅಶೋಕ್ ಎಸ್. ಅಲೂರು ಅವರಿಗೆ ನೆನಪಿನ ಕಾಣಿಕೆ ನೀಡಿ  ಸನ್ಮಾನಿಸಲಾಯಿತು, ವಿವಿಧ ಸ್ಥಳಗಳ ವಿವಿಧ ಕಾಲೇಜು ವಿದ್ಯಾರ್ಥಿಗಳ ಪ್ರಬಂಧ ಪಿಠೀಕಾ ಪುಸ್ತಕವನ್ನು ಸರ್ವ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಉಪನ್ಯಾಸ ನೀಡಲು ಆಗಮಿಸಿದ ಡಾ. ಜಿ.ಅಜೇಯ್ ಕುಮಾರ್, ಎಸ್.ಡಿ.ಎಂ.ಐ.ಎಂ.ಡಿ ಮೈಸೂರು ಕಾಲೇಜಿನ ಪ್ರಾದ್ಯಪಕ ಡಾ. ಮೌಸಮಿ ಸೆನ್ ಗುಪ್ತಾ, ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ  ಪ್ರಾಧ್ಯಪಕ  ಡಾ. ಜೆ.ಜಿ. ಮಂಜುನಾಥ್, ವಾಣಿಜ್ಯ ವಿಭಾಗದ ಹೆಚ್.ಓ.ಡಿ  ಕೆ.ಪಿ.ದೃಶ್ಯ , ಕಾರ್ಯಕ್ರಮ ಸಂಚಾಲಕರಾದ ಬಿ.ಡಿ.ಹೇಮಾ  ಹಾಜರಿದ್ದರು.

ಕಾಲೇಜಿನ ವಿಧ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಸಂತ ಅನ್ನಮ್ಮ ಕಾಲೇಜನ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕರಾದ ಸಿ.ಎಲ್.ನಿಶಾ  ಸ್ವಾಗತಿಸಿದರು, ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರೂಪಣೆ ಮಾಡಿದರು. ವಾಣಿಜ್ಯ ವಿಭಾಗದ ಸಹ ಪ್ರಾಧ್ಯಪಕರಾದ ಶಿಲ್ಪ ಸರ್ವರನ್ನು  ವಂದಿಸಿದರು.

ಜಿಲ್ಲೆ, ರಾಜ್ಯ ಮತ್ತು ದೇಶದ ವಿವಿಧ ಸ್ಥಳಗಳ ಪದವಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ, ಸಂತ ಅನ್ನಮ್ಮ ಪದವಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ವಿವಿಧ ಕಾಲೇಜಿನ ಉಪನ್ಯಾಸಕರು, ಪದವಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವರದಿ :  ಕಿಶೋರ್ ಕುಮಾರ್ ಶೆಟ್ಟಿ   

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.