Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗೋಪಾಯಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗೋಪಾಯಗಳು*

ಮೇ 23, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳು:- ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ Indian Meteorlogical Department (ಐಎಂಡಿ) ನಿಂದ ನೀಡುವ ಗುಡುಗು-ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocol (ಸಿಎಪಿ) ನ ಮೂಲಕ ಪ್ರಸಾರ ಮಾಡುವುದು ಹಾಗೂ ಈ ಕುರಿತು ಅರಿವು ಮೂಡಿಸುವುದು. ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕವೂ ಸಹ ಮಾಹಿತಿ ನೀಡುವುದು ಹಾಗೂ ಜಾಗೃತಿ ಮೂಡಿಸುವುದು.
ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡುವುದು.
ಗುಡುಗು ಸಿಡಿಲು ಸಂಧರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಮಾಹಿತಿ ಶಿಕ್ಷಣ ಸಂವಹನ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.
ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆ. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು Common Alerting Protocol (ಸಿಎಪಿ) ಮುಖಾಂತರ ಬರುವ ಮೆಸೇಜ್‍ಗಳನ್ನು ಮೊಬೈಲ್‍ನಲ್ಲಿ ಗಮನಿಸುವುದು. ಪ್ರತಿಕೂಲ ಹವಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು ಸಿಡಿಲನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.
ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಲ್ಲಿ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ ದೂರವಾಣಿ ಸಂಪರ್ಕ ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿ ಆಶ್ರಯ ಪಡೆಯುವುದು.
ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.
ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.
ಮಕ್ಕಳು ವಯೋವೃದ್ದರೂ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದು ಹಾಕುವುದು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಬಟ್ಟೆ, ಪಾತ್ರೆಗಳನ್ನು ತೊಳೆಯಬಾರದು, ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.
ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷತೆ ಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು. ಅರಣ್ಯ ಪ್ರದೇಶದಿಂದ ಗಿಡ-ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು, ಮಿಂಚಿನ ಹೊಡೆತದಿಂದ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇದೆ ಎಂದು ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ  ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವತಿಯಿಂದ ನಗರದ ಜನರಲ್…

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.