Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದಾಸವಾಳದಲ್ಲಿ ಅಡಗಿದೆ ಆರೋಗ್ಯಕರ ಅಂಶಗಳು*
ರೋಗ ಮುಕ್ತ

*ದಾಸವಾಳದಲ್ಲಿ ಅಡಗಿದೆ ಆರೋಗ್ಯಕರ ಅಂಶಗಳು*

June 13, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ದಾಸವಾಳ ಒಂದು ಸುಂದರವಾದ ಹೂವು. ಈ ಅದ್ಭುತವಾದ ಹೂವು ಅನೇಕ ಆರೊಗ್ಯ ಸಮಸ್ಯೆಗಳಿಂದ ದೂರ ಉಳಿಸುತ್ತದೆ. ಇದು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುವುದಲ್ಲದೇ, ಹೃದಯ ರಕ್ತನಾಳದ ಕಾಯಿಲೆಗಳನ್ನು ತಡೆಯುತ್ತದೆ.

ದಾಸವಾಳ ಹೂವಿನಲ್ಲಿ ಅತ್ಯಂತ ಪ್ರಯೋಜನಕಾರಿಯಾದ ಆರೋಗ್ಯಕರ ಅಂಶಗಳಿವೆ ಅನ್ನೋದು ಬಹುತೇಕ ಮಂದಿಗೆ ಗೊತ್ತಿಲ್ಲ. ದಾಸವಾಳ ಹೂವು ತನ್ನ ಒಡಲಲ್ಲಿ ಹೃದಯಕ್ಕೆ ಸಂಬಂಧಿಸಿದಂತೆ ಹಲವಾರು ಆರೋಗ್ಯದಾಯಕ ಗುಣಗಳನ್ನು ಹೊಂದಿದೆ. ಈ ಹೂವು ಅನೇಕ ಔಷಧೀಯ ಗುಣಗಳನ್ನು ಒಳಗೊಂಡಿರುವುದಲ್ಲದೆ, ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ರಕ್ಷಣೆ ಕೊಡುವ ಆಹಾರವಾಗಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ.

ಅದರಲ್ಲೂ ಕೂದಲು ಉದುರುವಿಕೆ ನಿವಾರಣೆಗೆ ದಾಸವಾಳವು ಹೇಳಿ ಮಾಡಿಸಿದ ಔಷಧ. ಕೇವಲ ಆರೋಗ್ಯಕ್ಕೆ ಮಾತ್ರವಲ್ಲ ಬದಲಾಗಿ ತ್ವಚೆಯಲ್ಲಿನ ವಯಸ್ಸಾದ ಚಿಹ್ನೆಗಳನ್ನು ಕೂಡ ತಡೆಯಲು ಸಹಾಯ ಮಾಡುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ : ದಾಸವಾಳವು ರಕ್ತದೊತ್ತಡವನ್ನು ಕಡಿಮೆ ಮಾಡುವಲ್ಲಿ ಹೆಚ್ಚಿನ ಪರಿಣಾಮಕಾರಿಯಾಗಿದೆ. ‘ಜರ್ನಲ್​ ಆಫ್​ ನ್ಯೂಟ್ರೀಶನ್​’ನಲ್ಲಿ ಪ್ರಕಟವಾದ ಅಧ್ಯಯನವೊಂದರ ಪ್ರಕಾರ ದಾಸವಾಳದ ಚಹಾವನ್ನು ಕುಡಿಯುವುದರಿಂದ ಸಿಸ್ಟೋಲಿಕ್​ ರಕ್ತದೊತ್ತಡ ಕಡಿಮೆಯಾಗುತ್ತದೆ. ಜತೆಗೆ ಡಯಾಸ್ಟೋಲಿಕ್​ ರಕ್ತದೊತ್ತಡವನ್ನೂ ಕಡಿಮೆ ಮಾಡುವಲ್ಲಿ ಸಹಕಾರಿ ಎಂಬುದು ತಿಳಿದು ಬಂದಿದೆ.

ಕೊಲೆಸ್ಟ್ರಾಲ್​ ಮಟ್ಟ ತಗ್ಗಿಸುತ್ತದೆ : ಜರ್ನಲ್​ ಆಫ್​ ಆಲ್ಟರ್ನೇಟಿವ್​ ಮತ್ತು ಕಾಂಪ್ಲಿಮೆಂಟರಿ ಮೆಡಿಸಿನ್​’ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ದಾಸವಾಳ ಚಹಾದ ಸೇವೆನೆಯಿಂದ ಕೊಲೆಸ್ಟ್ರಾಲ್​ ಮಟ್ಟವನ್ನು ಶೇ.22 ರಷ್ಟು ಕಡಿಮೆ ಮಾಡುತ್ತದೆ. ಜತೆಗೆ ಕೆಟ್ಟ ಕೊಲೆಸ್ಟ್ರಾಲ್​ ಮಟ್ಟವನ್ನು ತಡೆದು ಹೃದಯಕ್ಕೆ ಸಂಭವಿಸುವ ಅಪಾಯವನ್ನು ತಡೆಯಲು ಹೆಚ್ಚು ಸಹಾಯ ಮಾಡುತ್ತದೆ.

ಮುಟ್ಟಿನ ನೋವನ್ನು ನಿವಾರಿಸುತ್ತದೆ ; ಋತುಚಕ್ರದ ಸಮಯದಲ್ಲಿ ದಾಸವಾಳ ಹೂವು ಹೆಚ್ಚು ಪ್ರಯೋಜನಕಾರಿಯಾಗಿದೆ. ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನುಭವಿಸುವ ನೋವು ಮತ್ತು ಸೆಳೆತದಿಂದ ಹೊರಬರಲು ದಾಸವಾಳ ಬೆಸ್ಟ್ ಎಂದೇ ಹೇಳಬಹುದು.
ಏಕೆಂದರೆ, ಇದು ಹಾರ್ಮೋನುಗಳ ಸಮತೋಲನವನ್ನು ಮರುಸ್ಥಾಪಿಸುವ ಮೂಲಕ ಅದನ್ನು ನಿವಾರಿಸಲು ಅನುವು ಮಾಡಿಕೊಡುತ್ತದೆ. ಈ ಹೂವಿನ ಚಹಾ ಕುಡಿಯವುದರಿಂದ ಮನಸ್ಥಿತಿ ಮತ್ತು ಖಿನ್ನತೆಯಿಂದ ದೂರ ಉಳಿಯಬಹುದು. ಇದೊಂದು ಪರಿಪೂರ್ಣವಾದ ಪಾನೀಯವಾಗಿದ್ದು, ನಿಮ್ಮ ದೈನಂದಿನ ಜೀವನದಲ್ಲಿ ದಾಸವಾಳ ಹೂವನ್ನು ಆಹಾರವಾಗಿ ಬಳಸಿ.

ಮೊಡವೆಗೆ ಮದ್ದು :  ಮೊಡವೆ ಕಡಿಮೆ ಮಾಡಲು ದುಬಾರಿ ಚಿಕಿತ್ಸೆ ಮಾಡಿಸುತ್ತೇವೆ, ಆದರೆ ದಿನಾ ದಾಸವಾಳ ಹೂವಿನ ಜ್ಯೂಸ್ ಕುಡಿಯುವುದರಿಂದ ಮೊಡವೆ ಬರುವುದನ್ನು ತಡೆಯಬಹುದು, ಅಲ್ಲದೆ ಈ ಜ್ಯೂಸ್ ನಿಮ್ಮ ತ್ವಚೆ ಕಾಂತಿಯನ್ನೂ ಹೆಚ್ಚಿಸುತ್ತದೆ.

ದೇಹದ ನೀರಿನಂಶ : ದೇಹದಲ್ಲಿ ನೀರಿನಂಶ ಕಮ್ಮಿಯಾಗದಂತೆ ನೋಡಿಕೊಳ್ಳುತ್ತದೆ. ನೀರಿನಂಶದ ಕೊರತೆಯಿಂದ ಬಳಲುತ್ತಿರುವವರು, ಡ್ರೈ ಸ್ಕಿನ್ ಇರುವವರು ಇದರ ಜ್ಯೂಸ್ ಕುಡಿಯುವುದು ಒಳ್ಳೆಯದು. ಕೆಲವರಿಗೆ ಹೊಟ್ಟೆ ಸರಿಯಾಗಿ ಹಸಿಯುವುದಿಲ್ಲ, ಹೊಟ್ಟೆ ಹಸಿಯುತ್ತಿಲ್ಲ ಎಂದು ಊಟ ಸರಿಯಾಗಿ ಮಾಡದಿದ್ದರೆ ನಿಶ್ಯಕ್ತಿ ಉಂಟಾಗುವುದು. ಹೊಟ್ಟೆ ಹಸಿವು ಸರಿಯಾದ ರೀತಿಯಲ್ಲಿ ಆಗಲು ದಾಸವಾಳವನ್ನು ತಿನ್ನುವುದು ಒಳ್ಳೆಯದು.

ಕೂದಲುದುರುವಿಕೆಗೆ ಮದ್ದು :  ಕೂದಲು ಉದುರುವುದನ್ನು ತಡೆಯುವ ಉತ್ತಮ ಮನೆ ಮದ್ದು ಇದಾಗಿದೆ. ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಹೊಂದಬಹುದು. ಕೂದಲು ಉದುರುವುದನ್ನು ತಡೆಯುವುದು ಮಾತ್ರವಲ್ಲ, ಪ್ರತೀದಿನ ಈ ಎಣ್ಣೆ ಹಚ್ಚಿದರೆ ಕಪ್ಪಾದ ಕೂದಲಿನ ಸೌಂದರ್ಯ ನಿಮ್ಮದಾಗುವುದು. ಈ ಹೂವಿನಿಂದ ತೆಗೆದ ರಸ ಕೂದಲಿಗೆ ಹೊಳಪು ನೀಡಿ ಉತ್ತಮ ಕಂಡೀಶನರ್ ನಂತೆ ವರ್ತಿಸುತ್ತದೆ. ತಲೆಹೊಟ್ಟು ನಿವಾರಿಸಿ, ಇದು ಕೂದಲಿಗೆ ಕಪ್ಪು ಬಣ್ಣ ನೀಡುತ್ತದೆ. ದಾಸವಾಳ ಎಲೆಯ ಲೋಳೆ, ಸ್ವಲ್ಪ ತೆಂಗಿನೆಣ್ಣೆಗೆ 7-8 ಬಿಳಿ ದಾಸವಾಳದ ಎಲೆ ಹಾಕಿ ಕಾಯಿಸಿ ತಣಿಸಿ ಕೂದಲಿಗೆ ಹಚ್ಚಿ ನಂತರ ಸ್ನಾನ ಮಾಡಿದರೆ ಕೂದಲು ಸ್ಮೂತ್ ಆಗಿ ಹೊಳಪು ಬರುತ್ತದೆ.

ಚರ್ಮದ ಆರೈಕೆ : ದಾಸವಾಳ ಹೂವಿನ ತೈಲದ ಬಳಕೆಯಿಂದ ಚರ್ಮಕ್ಕೆ ಹೊಳಪು ಬರುತ್ತದೆ. ಹೂವು ಹಾಗೂ ಎಲೆಗಳನ್ನು ಒಣಗಿಸಿ, ಸುಟ್ಟ ಬಳಿಕ ಸಿಗುವ ಬೂದಿಯನ್ನು ಹಚ್ಚಿದರೆ, ಕಣ್ಣಹುಬ್ಬುಗಳು ಹೊಳಪು ಪಡೆಯುತ್ತವೆ. ಈ ಸಸ್ಯದ ಬೇರುಗಳನ್ನು ಎಣ್ಣೆಯಲ್ಲಿ ಹಾಕಿ, ಬೇರಿನಲ್ಲಿರುವ ನೀರಿನ ಅಂಶ ಆವಿಯಾಗುವವರೆಗೂ ಕುದಿಸಬೇಕು. ಗಾಯಗಳಿಗೆ ಈ ಎಣ್ಣೆ ಲೇಪಿಸಿದರೆ ಗುಣಮುಖವಾಗುತ್ತದೆ.

ದಾಸವಾಳವು ಹೃದ್ರೋಗ ಸೇರಿದಂತೆ ವಿವಿಧ ರೋಗಗಳನ್ನು ಉಂಟು ಮಾಡುವ ಜೀವಕೋಶಗಳನ್ನು ನಾಶಪಡಿಸಲು ಸಹಕಾರಿಯಾಗಿದೆ. ಹೀಗಾಗಿ ವೈದ್ಯರ ಸಲಹೆ ಪಡೆದು ದಾಸವಾಳ ಚಹಾ ಸೇವಿಸುವುದನ್ನು ರೂಢಿಸಿಕೊಂಡರೆ ಉತ್ತಮ ಆರೋಗ್ಯವನ್ನು ಕಂಡುಕೋಳ್ಳಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿದ್ದು, ಇದಕ್ಕೆಲ್ಲ ದಾಸವಾಳ ರಾಮಬಾಣದಂತೆ ಕೆಲಸ ಮಾಡುತ್ತದೆ.

Share. Facebook Twitter Pinterest LinkedIn Tumblr Email WhatsApp
Previous Article*ಯಾತ್ರೆ : ಜಾಮೂನ್, ಪಿಜ್ಜಾ, ದೋಸೆ, ಕರಿದ ರೊಟ್ಟಿ, ಜಂಕ್ ಮತ್ತು ಅನಾರೋಗ್ಯಕರ ಆಹಾರ ನಿಷೇಧ*
Next Article *ಕೊಡಗಿನಲ್ಲಿ ಮಳೆಯ ಆಗಮನದ ನಿರೀಕ್ಷೆ : ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗೃತಾ ಕ್ರಮ : ಬೆಟ್ಟ, ನದಿ ಪಾತ್ರದ ಜನರಿಗೆ ಎಚ್ಚರದಿಂದಿರಲು ಸೂಚನೆ*

Recommended: Website design development company services in Mangalore Forex Trading Teacher in India

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.