Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಾಜ್ಯ ಹಣಕಾಸು ಸಂಸ್ಥೆಯಿಂದ 19,680.73 ಕೋಟಿ ರೂ.ಗಳ ಸಂಚಿತ ಸಾಲ ಮಂಜೂರು*
ಇತ್ತೀಚಿನ ಸುದ್ದಿಗಳು

*ರಾಜ್ಯ ಹಣಕಾಸು ಸಂಸ್ಥೆಯಿಂದ 19,680.73 ಕೋಟಿ ರೂ.ಗಳ ಸಂಚಿತ ಸಾಲ ಮಂಜೂರು*

June 19, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.19 : ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ನಡೆದ 64ನೇ ವಾರ್ಷಿಕ ಮಹಾಸಭೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಏಕರೂಪ್ ಕೌರ್ ಅವರು ಸಂಸ್ಥೆಯ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದರು.
64ನೇ ವಾರ್ಷಿಕ ಮಹಾಸಭೆಯಲ್ಲಿ 2023ರ ಮಾರ್ಚ್ 31 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷ 2022-23 ರ ಸಂಸ್ಥೆಯ ವಾರ್ಷಿಕ ಕಾರ್ಯಾಚರಣೆ ಹಾಗೂ ಪರಿಶೋಧಿಸಲ್ಪಟ್ಟ ಲೆಕ್ಕಪತ್ರಗಳ ಪ್ರಮುಖ ಅಂಶಗಳನ್ನು ಹಂಚಿಕೊಂಡರು.
ಸಂಸ್ಥೆಯು ಪ್ರಸಕ್ತ 2022-23ನೇ ಸಾಲಿನ ಆರ್ಥಿಕ ಸ್ಥಿತಿಯನ್ನು ಕ್ರೋಡಿಕರಿಲಾಗಿದ್ದು, ತೆರಿಗೆ ಪೂರ್ವ ರೂ. 138.78 ಕೋಟಿಗಳ ದಾಖಲೆ ಲಾಭಗಳಿಸಿದೆ ಹಾಗೂ ರೂ.107.31 ಕೋಟಿಗಳ ತೆರಿಗೆ ನಂತರದ ಲಾಭಗಳಿಸಿದೆ. ಸಂಸ್ಥೆಯು 2022-23 ರ ಹಣಕಾಸು ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 901.10 ಕೋಟಿ ರೂ.ಗಳ ಸಾಲದ ಮಂಜೂರಾತಿ ಮಾಡಿದ್ದು, ಇದರಲ್ಲಿ ರೂ.874.68 ಕೋಟಿಗಳ ಮೊತ್ತದ ಮಂಜೂರಾತಿಯು 682 ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಘಟಕಗಳಿಗೆ ಒಳಗೊಂಡಿದೆ. 2023 ರ ಮಾರ್ಚ್ ಅಂತ್ಯದವರೆಗೆ 1,75,833 ಉದ್ಯಮಗಳಿಗೆ 19,680.73 ಕೋಟಿ ರೂ.ಗಳ ಸಂಚಿತ ಸಾಲ ಮಂಜೂರಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ವರ್ಷದಲ್ಲಿ 445.81 ಕೋಟಿ ರೂ.ಗಳ ಸಾಲ ವಿತರಿಸಿದ್ದು, 2023 ರ ಮಾರ್ಚ್ ಅಂತ್ಯದವರೆಗೆ 15,222.10 ಕೋಟಿ ರೂ.ಗಳಷ್ಟು ಸಂಚಿತ ವಿತರಣೆ ಮಾಡಲಾಗಿದೆ. ಹಣಕಾಸು ವರ್ಷ 2022-23ರಲ್ಲಿ ಒಟ್ಟು 763.71 ಕೋಟಿ ರೂ.ಗಳ ವಸೂಲಾತಿ ಮಾಡಲಾಗಿದೆ, ಇದರಲ್ಲಿ 295.64 ಕೋಟಿ ರೂ.ಗಳಷ್ಟು ಮೊತ್ತವು ಬಡ್ಡಿಯ ಆದಾಯವಾಗಿದೆ. 2023 ರ ಮಾರ್ಚ್ ಅಂತ್ಯದವರೆಗೆ ಸಂಚಿತ ವಸೂಲಾತಿಯ ಮೊತ್ತವು 20,023.64 ಕೋಟಿ ರೂ.ಗಳಷ್ಟಾಗಿದೆ. ಹಾಗೆಯೇ ಹಿಂದಿನ ಹಣಕಾಸು ವರ್ಷ 2021-22ರಲ್ಲಿ ಶೇ.4.74ರಷ್ಟು ಇದ್ದ ನಿವ್ವಳ ಅನುತ್ಪಾದಕ ಆಸ್ತಿಯು ಪ್ರಸಕ್ತ ಹಣಕಾಸು ವರ್ಷ 2022-23ರಲ್ಲಿ ಶೇ.3.51 ಕ್ಕೆ ಇಳಿದಿದೆ.
ಸಂಸ್ಥೆಯು ಸ್ಥಾಪಿತ ದಿನದಿಂದ ಮಾರ್ಚ್ 31, 2023 ರ ಅಂತ್ಯದವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 22,362 ಉದ್ಯಮಿಗಳಿಗೆ 2,762.72 ಕೋಟಿ ರೂ.ಗಳಿಗೂ ಅಧಿಕ ಸಾಲಗಳ ಮಂಜೂರಾತಿ ನೆರವು ನೀಡಿದೆ. ಮುಂದುವರೆದು 31,448 ಕ್ಕೂ ಹೆಚ್ಚಿನ ಮಹಿಳಾ ಉದ್ಯಮಿದಾರರಿಗೆ 4,859.86 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಿದೆ. ಹಾಗೆಯೇ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ 41,265 ಉದ್ಯಮಿಗಳಿಗೂ ಸುಮಾರು 1,906.55 ಕೋಟಿ ರೂ.ಗಳ ಸಾಲ ಮಂಜೂರಾತಿ ನೆರವನ್ನು ಒದಗಿಸಿದೆ ಎಂದು ತಿಳಿಸಿದ್ದಾರೆ.
ಈ ವರ್ಷದಲ್ಲಿ ಸಂಸ್ಥೆಯು, ರಾಜ್ಯ ಸರ್ಕಾರದ ಬೆಂಬಲದೊಂದಿಗೆ ರೂಪಿತವಾದ ವಿವಿಧ ಬಡ್ಡಿ ಸಹಾಯಧನ ಯೋಜನೆಗಳಲ್ಲಿ, 105 ಮಹಿಳಾ ಉದ್ಯಮಿಗಳಿಗೆ 131.13 ಕೋಟಿ ರೂ.ಗಳ ಮಂಜೂರಾತಿ ಮಾಡಲಾಗಿದೆ. 31 ನೇ ಮಾರ್ಚ್ 2023ರ ಅಂತ್ಯದವರೆಗೆ 1,048.48 ಕೋಟಿ ರೂ.ಗಳ ಸಂಚಿತ ನೆರವನ್ನು 1,357 ಮಹಿಳಾ ಉದ್ಯಮಿಗಳಿಗೆ ಒದಗಿಸಲಾಗಿದೆ.
ಹಾಗೆಯೇ ಈ ವರ್ಷದಲ್ಲಿ 96 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ 106.18 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಲಾಗಿದೆ. ಸದರಿ ಹಣಕಾಸು ವರ್ಷದ ಅಂತ್ಯದವರೆಗೆ 2,228.84 ಕೋಟಿ ರೂ.ಗಳ ಸಂಚಿತ ನೆರವನ್ನು 3,724 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ನೀಡಲಾಗಿದೆ.
ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಘಟಕಗಳಿಗೆ ಬಡ್ಡಿ ಸಹಾಯಧನ ಯೋಜನೆಯಡಿಯಲ್ಲಿ 287 ಘಟಕಗಳಿಗೆ 366.98 ಕೋಟಿ ರೂ.ಗಳ ಸಾಲ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿಯಲ್ಲಿ ಸದರಿ ಹಣಕಾಸು ವರ್ಷದ ಅಂತ್ಯದವರೆಗೆ, 1,199 ಉದ್ಯಮಗಳಿಗೆ 1,362.18 ಕೋಟಿ ರೂ.ಗಳ ಸಂಚಿತ ನೆರವನ್ನು ನೀಡಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಏಕರೂಪ್ ಕೌರ್ ಅವರು ತಿಳಿಸಿದ್ದಾರೆ.
2022-23ರ ಹಣಕಾಸು ವರ್ಷದಲ್ಲಿ ಕರ್ನಾಟಕ ಸರ್ಕಾರವು ಸಂಸ್ಥೆಗೆ 54.60 ಕೋಟಿ ರೂ.ಗಳ ಈಕ್ವಿಟಿ ಬಂಡವಾಳವನ್ನು ಹಾಗೂ 173.62 ಕೋಟಿ ರೂ.ಗಳ ಬಡ್ಡಿ ಸಹಾಯಧನ ಯೋಜನೆಗಳಿಗೆ ಪೂರಕ ನೆರವನ್ನು ಒದಗಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳು ಸ್ಥಾಪಿಸುವ ಜವಳಿ ಮತ್ತು ಕೈಮಗ್ಗ ಘಟಕಗಳಿಗೆ ವಿಶೇಷ ಅನುದಾನ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರವು 19.75 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ.
ಸಂಸ್ಥೆಯು ಹಣಕಾಸು ವರ್ಷ 2023-24 ರಲ್ಲಿ ರೂ.1,100.00 ಕೋಟಿಗಳ ಸಾಧಾರಣ ಮಂಜೂರಾತಿ ಗುರಿ ಇಟ್ಟುಕೊಂಡು ಗುಣಮಟ್ಟದ ಉದ್ಯಮಗಳಿಗೆ ಹಣಕಾಸು ನೆರವು ನೀಡಿ ಆರ್ಥಿಕ ಅಭಿವೃದ್ಧಿಯ ಯೋಜನೆ ಹೊಂದಿದೆ. 2023-24ರ ಹಣಕಾಸು ವರ್ಷದಲ್ಲಿ ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಮತ್ತು ಮಹಿಳಾ ಉದ್ಯಮಿಗಳಿಗೆ ಹಾಗೂ ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಘಟಕಗಳಿಗೆ ಲಭ್ಯವಿರುವ ಬಡ್ಡಿ ಸಹಾಯಧನ ಯೋಜನೆಗಳಿಂದ ಮುಂಬರುವ ಹಣಕಾಸು ವರ್ಷದಲ್ಲಿ ಹೆಚ್ಚಿನ ಮಂಜೂರಾತಿ ಹಾಗೂ ವಿತರಣೆಯ ಗುರಿ ಸಾಧಿಸಲು ಅನುಕೂಲವಾಗುವ ನಿರೀಕ್ಷೆಯಿದೆ. ಜೊತೆಗೆ ಅನುತ್ಪಾದಕ ಆಸ್ತಿಗಳನ್ನು ಮತ್ತಷ್ಟು ಕಡಿಮೆಗೊಳಿಸಲು ಸಂಸ್ಥೆಯು ಹೆಚ್ಚಿನ ಒತ್ತು ನೀಡಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಏಕರೂಪ್ ಕೌರ್ ವಿವರಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಟೇಷನ್ ಆಹ್ವಾನ*
Next Article *ಗೃಹ ಜ್ಯೋತಿ ಯೋಜನೆ : ಅರ್ಜಿ ನೋಂದಣಿಗೆ ಅವಕಾಶ*

Website design development company services in Mangalore

Forex Trading Teacher in India

Related Posts

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

ಮುಂಬೈ: ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ…

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.