Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಹಣಕಾಸು ಸಂಸ್ಥೆಯಿಂದ 19,680.73 ಕೋಟಿ ರೂ.ಗಳ ಸಂಚಿತ ಸಾಲ ಮಂಜೂರು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ರಾಜ್ಯ ಹಣಕಾಸು ಸಂಸ್ಥೆಯಿಂದ 19,680.73 ಕೋಟಿ ರೂ.ಗಳ ಸಂಚಿತ ಸಾಲ ಮಂಜೂರು*

ಜೂನ್ 19, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.19 : ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ನಡೆದ 64ನೇ ವಾರ್ಷಿಕ ಮಹಾಸಭೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಏಕರೂಪ್ ಕೌರ್ ಅವರು ಸಂಸ್ಥೆಯ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದರು.
64ನೇ ವಾರ್ಷಿಕ ಮಹಾಸಭೆಯಲ್ಲಿ 2023ರ ಮಾರ್ಚ್ 31 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷ 2022-23 ರ ಸಂಸ್ಥೆಯ ವಾರ್ಷಿಕ ಕಾರ್ಯಾಚರಣೆ ಹಾಗೂ ಪರಿಶೋಧಿಸಲ್ಪಟ್ಟ ಲೆಕ್ಕಪತ್ರಗಳ ಪ್ರಮುಖ ಅಂಶಗಳನ್ನು ಹಂಚಿಕೊಂಡರು.
ಸಂಸ್ಥೆಯು ಪ್ರಸಕ್ತ 2022-23ನೇ ಸಾಲಿನ ಆರ್ಥಿಕ ಸ್ಥಿತಿಯನ್ನು ಕ್ರೋಡಿಕರಿಲಾಗಿದ್ದು, ತೆರಿಗೆ ಪೂರ್ವ ರೂ. 138.78 ಕೋಟಿಗಳ ದಾಖಲೆ ಲಾಭಗಳಿಸಿದೆ ಹಾಗೂ ರೂ.107.31 ಕೋಟಿಗಳ ತೆರಿಗೆ ನಂತರದ ಲಾಭಗಳಿಸಿದೆ. ಸಂಸ್ಥೆಯು 2022-23 ರ ಹಣಕಾಸು ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 901.10 ಕೋಟಿ ರೂ.ಗಳ ಸಾಲದ ಮಂಜೂರಾತಿ ಮಾಡಿದ್ದು, ಇದರಲ್ಲಿ ರೂ.874.68 ಕೋಟಿಗಳ ಮೊತ್ತದ ಮಂಜೂರಾತಿಯು 682 ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಘಟಕಗಳಿಗೆ ಒಳಗೊಂಡಿದೆ. 2023 ರ ಮಾರ್ಚ್ ಅಂತ್ಯದವರೆಗೆ 1,75,833 ಉದ್ಯಮಗಳಿಗೆ 19,680.73 ಕೋಟಿ ರೂ.ಗಳ ಸಂಚಿತ ಸಾಲ ಮಂಜೂರಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ವರ್ಷದಲ್ಲಿ 445.81 ಕೋಟಿ ರೂ.ಗಳ ಸಾಲ ವಿತರಿಸಿದ್ದು, 2023 ರ ಮಾರ್ಚ್ ಅಂತ್ಯದವರೆಗೆ 15,222.10 ಕೋಟಿ ರೂ.ಗಳಷ್ಟು ಸಂಚಿತ ವಿತರಣೆ ಮಾಡಲಾಗಿದೆ. ಹಣಕಾಸು ವರ್ಷ 2022-23ರಲ್ಲಿ ಒಟ್ಟು 763.71 ಕೋಟಿ ರೂ.ಗಳ ವಸೂಲಾತಿ ಮಾಡಲಾಗಿದೆ, ಇದರಲ್ಲಿ 295.64 ಕೋಟಿ ರೂ.ಗಳಷ್ಟು ಮೊತ್ತವು ಬಡ್ಡಿಯ ಆದಾಯವಾಗಿದೆ. 2023 ರ ಮಾರ್ಚ್ ಅಂತ್ಯದವರೆಗೆ ಸಂಚಿತ ವಸೂಲಾತಿಯ ಮೊತ್ತವು 20,023.64 ಕೋಟಿ ರೂ.ಗಳಷ್ಟಾಗಿದೆ. ಹಾಗೆಯೇ ಹಿಂದಿನ ಹಣಕಾಸು ವರ್ಷ 2021-22ರಲ್ಲಿ ಶೇ.4.74ರಷ್ಟು ಇದ್ದ ನಿವ್ವಳ ಅನುತ್ಪಾದಕ ಆಸ್ತಿಯು ಪ್ರಸಕ್ತ ಹಣಕಾಸು ವರ್ಷ 2022-23ರಲ್ಲಿ ಶೇ.3.51 ಕ್ಕೆ ಇಳಿದಿದೆ.
ಸಂಸ್ಥೆಯು ಸ್ಥಾಪಿತ ದಿನದಿಂದ ಮಾರ್ಚ್ 31, 2023 ರ ಅಂತ್ಯದವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 22,362 ಉದ್ಯಮಿಗಳಿಗೆ 2,762.72 ಕೋಟಿ ರೂ.ಗಳಿಗೂ ಅಧಿಕ ಸಾಲಗಳ ಮಂಜೂರಾತಿ ನೆರವು ನೀಡಿದೆ. ಮುಂದುವರೆದು 31,448 ಕ್ಕೂ ಹೆಚ್ಚಿನ ಮಹಿಳಾ ಉದ್ಯಮಿದಾರರಿಗೆ 4,859.86 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಿದೆ. ಹಾಗೆಯೇ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ 41,265 ಉದ್ಯಮಿಗಳಿಗೂ ಸುಮಾರು 1,906.55 ಕೋಟಿ ರೂ.ಗಳ ಸಾಲ ಮಂಜೂರಾತಿ ನೆರವನ್ನು ಒದಗಿಸಿದೆ ಎಂದು ತಿಳಿಸಿದ್ದಾರೆ.
ಈ ವರ್ಷದಲ್ಲಿ ಸಂಸ್ಥೆಯು, ರಾಜ್ಯ ಸರ್ಕಾರದ ಬೆಂಬಲದೊಂದಿಗೆ ರೂಪಿತವಾದ ವಿವಿಧ ಬಡ್ಡಿ ಸಹಾಯಧನ ಯೋಜನೆಗಳಲ್ಲಿ, 105 ಮಹಿಳಾ ಉದ್ಯಮಿಗಳಿಗೆ 131.13 ಕೋಟಿ ರೂ.ಗಳ ಮಂಜೂರಾತಿ ಮಾಡಲಾಗಿದೆ. 31 ನೇ ಮಾರ್ಚ್ 2023ರ ಅಂತ್ಯದವರೆಗೆ 1,048.48 ಕೋಟಿ ರೂ.ಗಳ ಸಂಚಿತ ನೆರವನ್ನು 1,357 ಮಹಿಳಾ ಉದ್ಯಮಿಗಳಿಗೆ ಒದಗಿಸಲಾಗಿದೆ.
ಹಾಗೆಯೇ ಈ ವರ್ಷದಲ್ಲಿ 96 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ 106.18 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಲಾಗಿದೆ. ಸದರಿ ಹಣಕಾಸು ವರ್ಷದ ಅಂತ್ಯದವರೆಗೆ 2,228.84 ಕೋಟಿ ರೂ.ಗಳ ಸಂಚಿತ ನೆರವನ್ನು 3,724 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ನೀಡಲಾಗಿದೆ.
ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಘಟಕಗಳಿಗೆ ಬಡ್ಡಿ ಸಹಾಯಧನ ಯೋಜನೆಯಡಿಯಲ್ಲಿ 287 ಘಟಕಗಳಿಗೆ 366.98 ಕೋಟಿ ರೂ.ಗಳ ಸಾಲ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿಯಲ್ಲಿ ಸದರಿ ಹಣಕಾಸು ವರ್ಷದ ಅಂತ್ಯದವರೆಗೆ, 1,199 ಉದ್ಯಮಗಳಿಗೆ 1,362.18 ಕೋಟಿ ರೂ.ಗಳ ಸಂಚಿತ ನೆರವನ್ನು ನೀಡಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಏಕರೂಪ್ ಕೌರ್ ಅವರು ತಿಳಿಸಿದ್ದಾರೆ.
2022-23ರ ಹಣಕಾಸು ವರ್ಷದಲ್ಲಿ ಕರ್ನಾಟಕ ಸರ್ಕಾರವು ಸಂಸ್ಥೆಗೆ 54.60 ಕೋಟಿ ರೂ.ಗಳ ಈಕ್ವಿಟಿ ಬಂಡವಾಳವನ್ನು ಹಾಗೂ 173.62 ಕೋಟಿ ರೂ.ಗಳ ಬಡ್ಡಿ ಸಹಾಯಧನ ಯೋಜನೆಗಳಿಗೆ ಪೂರಕ ನೆರವನ್ನು ಒದಗಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳು ಸ್ಥಾಪಿಸುವ ಜವಳಿ ಮತ್ತು ಕೈಮಗ್ಗ ಘಟಕಗಳಿಗೆ ವಿಶೇಷ ಅನುದಾನ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರವು 19.75 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ.
ಸಂಸ್ಥೆಯು ಹಣಕಾಸು ವರ್ಷ 2023-24 ರಲ್ಲಿ ರೂ.1,100.00 ಕೋಟಿಗಳ ಸಾಧಾರಣ ಮಂಜೂರಾತಿ ಗುರಿ ಇಟ್ಟುಕೊಂಡು ಗುಣಮಟ್ಟದ ಉದ್ಯಮಗಳಿಗೆ ಹಣಕಾಸು ನೆರವು ನೀಡಿ ಆರ್ಥಿಕ ಅಭಿವೃದ್ಧಿಯ ಯೋಜನೆ ಹೊಂದಿದೆ. 2023-24ರ ಹಣಕಾಸು ವರ್ಷದಲ್ಲಿ ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಮತ್ತು ಮಹಿಳಾ ಉದ್ಯಮಿಗಳಿಗೆ ಹಾಗೂ ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಘಟಕಗಳಿಗೆ ಲಭ್ಯವಿರುವ ಬಡ್ಡಿ ಸಹಾಯಧನ ಯೋಜನೆಗಳಿಂದ ಮುಂಬರುವ ಹಣಕಾಸು ವರ್ಷದಲ್ಲಿ ಹೆಚ್ಚಿನ ಮಂಜೂರಾತಿ ಹಾಗೂ ವಿತರಣೆಯ ಗುರಿ ಸಾಧಿಸಲು ಅನುಕೂಲವಾಗುವ ನಿರೀಕ್ಷೆಯಿದೆ. ಜೊತೆಗೆ ಅನುತ್ಪಾದಕ ಆಸ್ತಿಗಳನ್ನು ಮತ್ತಷ್ಟು ಕಡಿಮೆಗೊಳಿಸಲು ಸಂಸ್ಥೆಯು ಹೆಚ್ಚಿನ ಒತ್ತು ನೀಡಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಏಕರೂಪ್ ಕೌರ್ ವಿವರಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.