Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*
  • *ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*
  • *ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*
  • *ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ*

ಜೂನ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.25 : ಇನ್ನೊಬ್ಬರ ಒತ್ತಡಕ್ಕೆ ಮಣಿಯದೆ ತಮ್ಮ ಮನಸ್ಸಿಗೆ ಹಿಡಿಸುವ ವೃತ್ತಿಯ ಕಡೆಗೆ ಆಸಕ್ತಿ ಬೆಳೆಸಿಕೊಂಡು ಮಕ್ಕಳು ಈ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಸಮಾಜ ಸೇವಕ ಸಂಕೇತ್ ಪೂವಯ್ಯ ಕಿವಿಮಾತು ಹೇಳಿದರು.
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಭಾನುವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಪೋಷಕರು, ಗುರುಗಳ ಮಾರ್ಗದರ್ಶನದಲ್ಲಿ ಮಕ್ಕಳು ಇನ್ನೂ ಚೆನ್ನಾಗಿ ಓದಬೇಕು. ಮಕ್ಕಳು ಒಳ್ಳೆಯ ಸ್ನೇಹ ಬಳಗ ಬೆಳೆಸಿಕೊಳ್ಳಬೇಕು. ಗೆಳೆಯರ ಮಧ್ಯೆ ಸಾತ್ವಿಕ ಚರ್ಚೆ ನಡೆಯಬೇಕು. ಪ್ರಕೃತಿ ಮೇಲೆ ಮಕ್ಕಳು ಪ್ರೀತಿ ಬೆಳೆಸಿಕೊಳ್ಳಬೇಕು. ತಂತ್ರಜ್ಞಾನದ ಪ್ರಯೋಜನ ಪಡೆದುಕೊಳ್ಳಬೇಕು. ಹೆಚ್ಚು ಹೆಚ್ಚು ಆಟವಾಡಬೇಕು. ಗ್ರಂಥಾಲಯದ ಬಳಕೆ ಆಗಬೇಕು. ಪ್ರಕೃತಿ ಉಳಿಸುವ ಸಂಬಂಧ ವಾರಕ್ಕೆ ಕನಿಷ್ಠ 2 ಗಂಟೆ ಕಲಿಯುವಂತಾಗಬೇಕು ಎಂದರು.
ಮಕ್ಕಳನ್ನು ಪ್ರಕೃತಿ ಮಡಿಲಿಗೆ ಕರೆದುಕೊಂಡು ಹೋಗಿ ಕಲಿಸುವ ವ್ಯವಸ್ಥೆ ಆಗಬೇಕು. ಮಕ್ಕಳಿಗೆ ಕಾಡು ತೋರಿಸುವ ಜವಾಬ್ದಾರಿ ಸರ್ಕಾರದ್ದು ಎಂದ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ದೇಶ ಮತ್ತು ಸಮಾಜಕ್ಕೆ ನಿರೀಕ್ಷಿತ ಕೊಡುಗೆ ಸಿಗುತ್ತಿಲ್ಲ ಎಂದು ವಿಷಾದಿಸಿದರು. ಪ್ರಜಾತಂತ್ರ ಬೇರು ಗಟ್ಟಿ ಮಾಡಬೇಕು. ಜಾತಿ ವ್ಯವಸ್ಥೆ ತೊಲಗಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳು ತಮಗಿಷ್ಟದ ಸಿದ್ದಾಂತ ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಉಳ್ಳಿಯಡ ಪೂವಯ್ಯ ಮಾತನಾಡಿ, ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸುವುದು ಸ್ವಾಗತಾರ್ಹ. ಮಕ್ಕಳ ಪ್ರತಿಭೆ ಗುರುತಿಸಲು ಅವಕಾಶ ಸಿಗಬೇಕು. ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರ ಬದುಕಿಗೆ ದಾರಿ ತೋರಿಸಿದಂತಾಗುತ್ತದೆ ಎಂದು ಹೇಳಿದರು.
ಬೆಳ್ಳಿಹಬ್ಬ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಮಾತನಾಡಿ ಮಾಧ್ಯಮದವರು ಎಂದರೆ ಪ್ರಚಾರಕ್ಕೆ ಬಳಸಿಕೊಳ್ಳುವ ಯಂತ್ರ ಎಂಬಂತೆ ಪರಿಗಣಿಸಲಾಗಿದೆ. ಪತ್ರಕರ್ತರಿಗೆ ಬೈಗುಳವೇ ಸಿಗುತ್ತಿದೆ. ಸುದ್ದಿ ಪ್ರಕಟವಾದಾಗ ಗುರುತಿಸುವುದು ಕಡಿಮೆ. ಪ್ರತಿಭಾ ಪುರಸ್ಕಾರದಂತಹ ಕಾರ್ಯ ಮುಂದುವರಿಯಬೇಕು. ಪತ್ರಕರ್ತರಲ್ಲಿ ಒಗ್ಗಟ್ಟು ಇರಬೇಕು. ಪತ್ರಕರ್ತರ ಸಂಕಷ್ಟಗಳಿಗೆ ಸಹಕಾರಿ ಆಗಲು ಶಾಶ್ವತ ನಿಧಿ ಒಂದನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿ, ಪೋಷಕರ ಮುಂದೆಯೇ ಮಕ್ಕಳಿಗೆ ಗೌರವ ನೀಡುವುದು ಒಂದು ಸುಸಂದರ್ಭ. ಈ ನೆನಪು ಬದುಕಿನ ಉದ್ದಕ್ಕೂ ಇರುತ್ತದೆ. ಮಕ್ಕಳು ಸನ್ಮಾನ ಸ್ವೀಕರಿಸುವಾಗ ಪೋಷಕರಿಗೂ ಖುಷಿ. ಅರ್ಥಪೂರ್ಣ ಕಾರ್ಯಕ್ಕಮಕ್ಕೆ ಪ್ರೆಸ್ ಕ್ಲಬ್ ವೇದಿಕೆ ಆಗಿದೆ ಎಂದು ಹೇಳಿದರು.
ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಚೀಯಂಡಿ ತೇಜಸ್ ಪಾಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಪತ್ರಕರ್ತ ಹಿರಿಕರ ರವಿ ಅವರಿಗೆ ಕೆ.ಬಿ. ಮಹಂತೇಶ್ ಸ್ಮಾರಕ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ್ಲಬ್ ಸದಸ್ಯರ 31 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭ ಪ್ರೋತ್ಸಾಹಿಸಿ ಗೌರವಿಸಲಾಯಿತು.
ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಗುಹ್ಯ ಸೇರಿದಂತೆ ಪ್ರೆಸ್ ಕ್ಲಬ್ ಪದಾಧಿಕಾರಿಗಳು ಇದ್ದರು.
ಕಾರ್ಯಕ್ರಮಕ್ಕೂ ಮೊದಲು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ಕೊಡಗು ಜಿಲ್ಲೆಯ ಜನಸ್ನೇಹಿ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ…

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.