Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವ ರೈಡರ್ಸ್ ಕ್ಲಬ್ ತಂಡದಿಂದ ಕೋಣಂಗೇರಿಯಲ್ಲಿ ವನಮಹೋತ್ಸವ : ಕೊಡವರು ಜಾಗ ಮಾರಾಟ ಮಾಡದಂತೆ ಕರೆ*
ಇತ್ತೀಚಿನ ಸುದ್ದಿಗಳು

*ಕೊಡವ ರೈಡರ್ಸ್ ಕ್ಲಬ್ ತಂಡದಿಂದ ಕೋಣಂಗೇರಿಯಲ್ಲಿ ವನಮಹೋತ್ಸವ : ಕೊಡವರು ಜಾಗ ಮಾರಾಟ ಮಾಡದಂತೆ ಕರೆ*

June 25, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಮಡಿಕೇರಿ ಜೂ.25 : ಕೊಡಗು ಜಿಲ್ಲೆಯ ಶ್ರೀಮಂತ ಸಂಸ್ಕೃತಿಯ ಮೇಲೆ ಅತ್ಯಾಚಾರ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಸಾಮಾಜಿಕ ಅಭದ್ರತೆ ಕಾಡುತ್ತಿದೆ. ಯಾವುದೇ ಕಾರಣಕ್ಕೂ ಕೊಡವರು ತಮ್ಮ ಜಾಗವನ್ನು ಹೊರಗಿನವರಿಗೆ ಮಾರಾಟ ಮಾಡಬಾರದು ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಕರೆ ನೀಡಿದರು.
ಕೊಡವ ರೈಡರ್ಸ್ ಕ್ಲಬ್ ಮುಂದಾಳತ್ವದಲ್ಲಿ ಬಾಂಡಿಂಗ್ ಬ್ಲೂಮ್ಸ್ ಕೊಡಗು ಸಂಸ್ಥೆ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜು ಸಹಯೋಗದಲ್ಲಿ ಕೋಣಂಗೇರಿ ತುಪ್ಪನಾಣಿ ಭಗವತಿ ದೇವಸ್ಥಾನದ ಅವರಣದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಜಿಲ್ಲೆಯ ಪರಿಸ್ಥಿತಿ ಹಿಂದಿನಂತಿಲ್ಲ ಎಂದರು.
ಜಿಲ್ಲೆಯಲ್ಲಿ ಸಾಮಾಜಿಕ ಅಭದ್ರತೆ ಕಾಡುವುದರ ಜೊತೆಗೆ ಪ್ರಾಕೃತಿಕ ಅಸಮತೋಲನ ಎದುರಾಗಿದೆ, ಒಂದೆಡೆ ಗಿಡ ನೆಡುವ ಕೆಲಸವಾಗುತ್ತಿದ್ದರೆ ಮತ್ತೊಂದೆಡೆ ಕಾಡಿನಲ್ಲಿ ಮಾತ್ರವಲ್ಲ ನಾಡಿನಲ್ಲಿ ಕೂಡ ಮರಗಳ ಹನನವಾಗುತ್ತಿದೆ. ಸ್ಥಳೀಯರಿಂದ ಅರಣ್ಯವನ್ನು ಕಾಪಾಡುವ ಕೆಲಸವಾದರೆ, ಹೊರಗಿನ ಮರಗಳ್ಳರಿಂದ ಅರಣ್ಯ ನಾಶವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮತ್ತೋರ್ವ ಮುಖ್ಯ ಅತಿಥಿ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಮಾತನಾಡಿ ಒಂದು ಸಮಯದಲ್ಲಿ ಭತ್ತದ ಕಣಜವಾಗಿದ್ದ ಕೊಡಗಿನಲ್ಲಿ ಭತ್ತ ಬೆಳೆಯುವ ಪ್ರದೇಶಗಳು ಮಾಯವಾಗಿದೆ, ಇದಕ್ಕೆ ಮೂಲ ಕಾರಣ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದಿರುವುದು ರೈತರ ಭತ್ತ ಬೆಳೆಯುವ ಪ್ರದೇಶಕ್ಕೆ ಇಂತಿಷ್ಟು ಸಹಾಯಧನ ನೀಡಬೇಕಿದೆ  ಎಂದು ಅಭಿಪ್ರಾಯಪಟ್ಟ ಅವರು ನಮ್ಮ ಪೂರ್ವಿಕರ ತಿಳುವಳಿಕೆ ಜ್ಞಾನ ಇಂದಿನ ಯಾವುದೇ ವಿಜ್ಞಾನಿಗಳಿಗೂ ಕಡಿಮೆ ಇಲ್ಲ, ಭತ್ತದ ಗದ್ದೆಗಳಿಗೆ ನೀರುಣಿಸುವ ಬರೆಕಾಡ್ ಹಾಗೂ ದೇವರಕಾಡು ಹೀಗೆ ಒಂದೊಂದು ಅರಣ್ಯಕ್ಕೂ ಒಂದೊಂದು ಹೆಸರಿಟ್ಟು ಅರಣ್ಯ ರಕ್ಷಣೆ ಮಾಡುವ ಜೊತೆಗೆ ನೀರಿನ ಸೆಲೆಯನ್ನು ಕಾಪಾಡಿದ ವಿಜ್ಞಾನಿಗಳು ನಮ್ಮ ಹಿರಿಯರು. ಇದನ್ನು ನಮ್ಮ ಇಂದಿನ ಪೀಳಿಗೆ ನಾವು ಮಾಡಿದೆ, ಆದರೆ ನಂತರದ ದಿನಗಳಲ್ಲಿ ಕಾಡಿನ ಬಗ್ಗೆ ಮಾಹಿತಿ ಇಲ್ಲದವರು ಕೂಡ ಅರಣ್ಯ ಮಂತ್ರಿಗಳಾಗಿ ಆಯ್ಕೆಯಾಗುತ್ತಿರುವುದು ನಮ್ಮ ದುರ್ದೈವ, ಅವರಿಗೆ ಕಾಡಿನ ಬಗ್ಗೆ ಜ್ಞಾನ ಎಲ್ಲಿರಬೇಕು, ಬೆಂಗಳೂರಿನ ಹವಾ ನಿಯಂತ್ರಣ ಕೊಠಡಿಯಲ್ಲಿ ಕುಳಿತು ಅರಣ್ಯದ ಬಗ್ಗೆ ಕಾನೂನು ರೂಪಿಸುವ ಮಂದಿಯಿಂದ ಇಂದು ಅರಣ್ಯ ನಾಶವಾಗಿದೆ, ಇದರಿಂದಲೇ ಒಂದು ಕಾಲದಲ್ಲಿ ಸಮೃದ್ಧವಾಗಿದ್ದ ಕಾಡನ್ನು ಕುಡಿದು ತೇಗ, ಬೀಟಿ ಹಾಗೂ ನೀಲಗಿರಿ ತೋಪುಗಳಾಗಿ ಪರಿವರ್ತನೆ ಮಾಡಿರುವುದರ ಫಲ ಇವತ್ತು ವನ್ಯಮೃಗಗಳು ಆಹಾರ ಹರಿಸಿ ನಾಡಿಗೆ ಬರುವಂತಾಗಿದೆ ಎನ್ನುತ್ತಾ ಇವುಗಳನ್ನು ನಮ್ಮ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಸರಿಪಡಿಸಬೇಕಿದೆ, ಭವ್ಯ ಭಾರತದ ಭವಿಷ್ಯ ಯುವಕ ಯುವತಿಯರ ಹೆಗಲ ಮೇಲಿದೆ ಎಂದರು.
ಮತ್ತೋರ್ವ ಅತಿಥಿ ಹಾಗೂ ಸಾಮಾಜ ಸೇವಕರಾದ ಅಜ್ಜಿಕುಟ್ಟೀರ ಕಮಲ ಪೂಣಚ್ಚ ಮಾತನಾಡಿ ಕಾಡು ಪ್ರಾಣಿಗಳಿಗೆ ಕಾಡಿನಲ್ಲಿ ಸರಿಯಾದ ಆಹಾರ ದೊರಕದೆ ಅವು ನಾಡಿಗೆ ಲಗ್ಗೆ ಇಡುತ್ತಿದ್ದು, ಕಾಡಿನಲ್ಲಿ ಸರಿಯಾದ ನೀರಿನ ವ್ಯವಸ್ಥೆ ಹಾಗೂ ಆಹಾರ ದೊರೆತರೆ ಅವು ಖಂಡಿತಾ ನಾಡಿಗೆ ಬರುವುದಿಲ್ಲ. ಕಾಡಿನೊಳಗೆ ಇವುಗಳಿಗೆ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಬೇಕಿದೆ ಎನ್ನುತ್ತಾ, ಬಹುತೇಕ ಅರಣ್ಯ ನಾಶವಾಗಿದ್ದೆ ವನ್ಯಮೃಗಗಳು ನಾಡಿಗೆ ಬರಲು ಕಾರಣವಾಗಿದೆ ಎಂದರು. ನಾವು ತಿಂದು ಬಿಸಾಡುವ ಹಣ್ಣಿನ ಬೀಜಗಳನ್ನು ಕಾಡಿಗೆ ಬಿಸಾಡುವುದರ ಮೂಲಕ ಮತ್ತೆ ಕಾಡನ್ನು ಸೃಷ್ಟಿಸಬಹುದು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ರೈಡರ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಕ್ಲಬ್ ಬೆಳೆದು ಬಂದಿರುವ ಹಾದಿಯ ಬಗ್ಗೆ ತಿಳಿಸಿ, ಗಿಡನೆಡುವ ಉದ್ದೇಶಗಳನ್ನು ಹಾಗೂ ಪ್ರತಿವರ್ಷ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಕೊರೋನ ಸಮಯದಲ್ಲಿ ಕೂಡ ಮನೆಯಲ್ಲಿಯೇ ಕುಳಿತು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು, ಇದರಿಂದ ಸಾವಿರಾರು ಪರಿಸರ ಪ್ರೇಮಿಗಳು ಗಿಡನೆಟ್ಟು ವಿಡಿಯೋ ಹಂಚಿಕೊಂಡರು ಎಂದು ಸಂತೋಷ ವ್ಯಕ್ತಪಡಿಸಿದರು.
ಈ ಸಂದರ್ಭ ದಾನಿಗಳು ಹಾಗೂ ಸಮಾಜ ಸೇವಕ ಅಜ್ಜಿಕುಟ್ಟೀರ ಶಾಂತು ಪೂಣಚ್ಚ, ಬಾಂಡಿಂಗ್ ಬ್ಲೂಮ್ಸ್ ಕೊಡಗು ಅಧ್ಯಕ್ಷೆ ಬಾಚಮಾಡ ಲಿಜೇಟ್ ಭವಿ ಕುಮಾರ್, ತುಪ್ಪನಾಣಿ ಭಗವತಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕುಪ್ಪಣಮಾಡ ಗಣೇಶ್, ಅಂಜಿಕೇರಿ ನಾಡ್ ಜೋಡಿ ತಕ್ಕರಲ್ಲಿ ಒಬ್ಬರಾದ ಚಕ್ಕೇರ ರಾಜೇಶ್, ಕಾವೇರಿ ಕಾಲೇಜು ಎನ್, ಎಸ್,ಎಸ್ ವಿಭಾಗದ ಅಧಿಕಾರಿ ಮಂದೆಯಂಡ ವನಿತ್ ಕುಮಾರ್ ಉಪಸ್ಥಿತರಿದ್ದು ಮಾತನಾಡಿದರು. ದೇವಸ್ಥಾನ ಅವರಣದಲ್ಲಿ ಗಿಡ ನೆಡುವುದರ ಬಳಿಕ ಹುದಿಕೇರಿ ಸಮುದಾಯ ಆರೋಗ್ಯ ಕೇಂದ್ರ ಅವರಣದಲ್ಲಿ ಗಿಡ ನೆಡಲಾಯಿತು ಕೊಡವ ರೈಡರ್ಸ್ ಕ್ಲಬ್ ಸದಸ್ಯರು, ಬಾಂಬಿಂಗ್ ಬ್ಲೂಮ್ಸ್ ಸದಸ್ಯರು ಸೇರಿದಂತೆ ಊರಿನವರು ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜು ಎನ್ ಎಸ್ ಎಸ್ ವಿಭಾಗದ ವಿದ್ಯಾರ್ಥಿಗಳು, ವಿರಾಜಪೇಟೆ ತ್ರೀವೇಣಿ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚೆನ್ನಪಂಡ ಕಲ್ಪನ ತಿಮ್ಮಯ್ಯ ನಿರೂಪಿಸಿದರು. ಕೊಡವ ಜನಾಂಗದ ಕಾರೋಣ ಹಿಡಿಯುವ ಗೆಜ್ಜೆತಂಡ್ ಬಳಕೆಯ ಕರಿಮರ ಸೇರಿದಂತೆ, ಹಣ್ಣಿನ ಗಿಡಗಳು, ಕಾಡು ಜಾತಿಯ ಗಿಡಗಳನ್ನು ನೆಡಲಾಯಿತು.
Share. Facebook Twitter Pinterest LinkedIn Tumblr Email WhatsApp
Previous Article*ಶಾರ್ಜಾದಲ್ಲಿ ಅಪಘಾತ : ಪ್ರವೀಣ್ ಮೃತದೇಹವನ್ನು ಕೊಡಗಿಗೆ ತರಲು ಸಹಕರಿಸಿದ ರಫೀಕಲಿ*
Next Article *ಮೂವರ ಮೇಲೆ ದಾಳಿ ಮಾಡಿದ್ದ ಕಾಡಾನೆ ಸೆರೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.