Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*
  • *ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*
  • *ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*
  • *ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮ*

ಜೂನ್ 26, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 : ಸತ್ಯ ನಿಷ್ಟೂರ ವರದಿಗಾರಿಕೆಯ ಮೂಲಕ, ಸಮಾಜದ ಯಾವುದೇ ವಿಷಯಗಳನ್ನು ತಮ್ಮದೇ ಆದ ಹೊಸ ಆಯಾಮದಿಂದ ನೋಡುವ ಪರಿಕಲ್ಪನೆಯನ್ನು ಮೂಡಿಸಿದ ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕರಾಗಿದ್ದ ದಿವಂಗತ ಮನು ಶೆಣೈರವರ ನೆನಪುಗಳನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ನಡೆಯಬೇಕೆನ್ನುವ ಆಶಯವನ್ನು ಗಣ್ಯರು ವ್ಯಕ್ತಪಡಿಸಿದರು.
ಕೊಡಗು ಪತ್ರಿಕಾ ಭವನ ಟ್ರಸ್ಟ್, ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಸಮಾಚಾರ ಅಭಿಮಾನಿ ಬಳಗ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಆಯೋಜಿತ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಉದ್ಘಾಟಿಸಿದರು.
ಈ ಸಂದರ್ಭ ಮೌನಾಚರಣೆ ಮತ್ತು ಮನು ಶೆಣೈ ಅವರ ಭಾವ ಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.
ನಂತರ ಮಾತನಾಡಿದ ಟಿ.ಪಿ.ರಮೇಶ್, ವರ್ಷದ ಹಿಂದೆಯಷ್ಟೆ ನಮ್ಮನ್ನು ಅಗಲಿದ ಮನು ಶೆಣೈ ಅವರು ಪತ್ರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ಕಾರ್ಯ ಅಗತ್ಯವಾಗಿ ನಡೆಯಬೇಕಾಗಿದೆ. ಸುದೀರ್ಘ ಇಪ್ಪತ್ತಾರು ವರ್ಷ ಕೊಡಗು ಸಮಾಚಾರ ವಾರ ಪತ್ರಿಕೆಯನ್ನು ಅತ್ಯಂತ ಶ್ರದ್ಧೆಯಿಂದ ಮನು ಶೆಣೈ ಅವರು ಹೊರ ತಂದಿದ್ದಾರೆ. ಅವರು ತಮ್ಮ ಪತ್ರಿಕಾ ವೃತ್ತಿ ಧರ್ಮವನ್ನು ಅತ್ಯಂತ ಗಟ್ಟಿಯಾಗಿ ಪ್ರತಿಪಾದಿಸಿಕೊಂಡು ಬಂದವರಾಗಿದ್ದು, ಭ್ರಷ್ಟ ಅಧಿಕಾರಿಗಳು, ಕೆಟ್ಟ ಆಡಳಿತಗಾರರಿಗೆ ಅವರ ಬರಹ ದುಸ್ವಪ್ನವಾಗಿತ್ತು. ಅವರ ಲೇಖನಿಯಿಂದ ಮೂಡಿದ ಕಸ್ತೂರಿ ರಂಗನ್ ವರದಿಯ ಸಾಧ್ಯಾಸಾಧ್ಯತೆಗಳು, ಕಾಡಾನೆ-ಮಾನವ ಸಂಘರ್ಷ ಸೇರಿದಂತೆ ಹಲ ವರದಿಗಳು ನಿರ್ಭೀತಿಯಿಂದ ಕೂಡಿತ್ತೆಂದು ಹೇಳಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ತಾವು ನಂಬಿದ ಸಿದ್ಧಾಂತಕ್ಕೆ ಬದ್ಧವಾಗಿ ಮನು ಶೆಣೈ ಅವರು ಯಾವುದೇ ಟೀಕೆಗಳಿಗೆ ಜಗ್ಗದೆ ನಿಷ್ಟೂರವಾಗಿ, ನಿರ್ಭೀತಿಯಿಂದ ಪತ್ರಿಕೆಯನ್ನು ನಡೆಸಿದ ಚೇತನ. ಅವರ ಚಿಂತನೆಗಳು, ಆದರ್ಶಗಳು ಯುವ ಪೀಳಿಗೆಗೆ ಅತ್ಯವಶ್ಯಕ. ಈ ಹಿನ್ನೆಲೆ ಕೊಡಗು ಪತ್ರಕರ್ತರ ಸಂಘದಿಂದ ಬಿ.ಎನ್.ಮನುಶೆಣೈ ಅವರ ಹೆಸರಿನ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದರು.
ಕೊಡಗು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಅವರ ಒಡನಾಟವನ್ನು ಮೆಲುಕು ಹಾಕಿ, ಅವರ ನೆನಪು ನಮ್ಮೆಲ್ಲರ ಮನಸಿನಲ್ಲಿ ಸದಾಹಸಿರಾಗಿದೆಯೆಂದು ತಿಳಿಸಿದರು.
ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಟ್ರಸ್ಟಿ ಅನಿಲ್ ಎಚ್.ಟಿ. ಮಾತನಾಡಿ, ಅಲೆಯ ವಿರುದ್ಧವಾಗಿ ಈಜು ಸುಲಭ ಸಾಧ್ಯವಲ್ಲ. ಹಲ ವಿಚಾರಗಳಲ್ಲಿ ತಮ್ಮ ಪತ್ರಿಕಾ ಕ್ಷೇತ್ರದ ನಿಲುವಿಗೆ ಅನುಗುಣವಾಗಿ ಮನು ಶೆಣೈ ಅವರು ಅಲೆಯ ವಿರುದ್ಧವಾಗಿ ಪತ್ರಿಕೆಯನ್ನು ಹೊರ ತರುವ ಮೂಲಕ ರಾಜಿ ಇಲ್ಲದೆ ಪತ್ರಿಕೋದ್ಯಮ ಮಾಡಿದವರು. ಅವರು ಪ್ರತಿಯೊಂದು ವಿಚಾರವನ್ನು ದಾಖಲೆಗಳ ಸಹಿತ ಮುಂದಿಡುತ್ತಿದ್ದ ಪತ್ರಕರ್ತ. ಇಂತಹ ಮನು ಶೆಣೈ ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ಯೋಜನೆ ರೂಪಿಸಬೇಕಾಗಿದೆ ಎಂದರು.
ಹಿರಿಯ ಪತ್ರಕರ್ತ ಶ್ರೀಧರ ನೆಲ್ಲಿತ್ತಾಯ ಅವರು, ಮನು ಶೆಣೈ ಅವರು ಸಮಾಜದ ಅಂಕು ಡೊಂಕುಗಳನ್ನು ನಿಷ್ಟೂರವಾಗಿ ತಮ್ಮ ಪತ್ರಕೆಯ ಮೂಲಕ ತೆರೆದಿಟ್ಟ ಧೀಮಂತ ಪತ್ರಕರ್ತರೆಂದು ಅಭಿಪ್ರಾಯಿಸಿದರು.
ಸಮಾಜ ಸೇವಕ ವಿ.ಪಿ.ಶಶಿಧರ್ ಮಾತನಾಡಿ, ಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ಎಗ್ಗಿಲ್ಲದೆ, ಅಂಜಿಕೆ ಇಲ್ಲದೆ ಬರೆದ ಪತ್ರಕರ್ತ ಮನು ಶೆಣೈ ಅವರಾಗಿದ್ದಾರೆ. ಅವರ ಹೆಸರನ್ನು ಶಾಶ್ವತವಾಗಿಸುವ ಕಾರ್ಯವಾಗಬೇಕೆಂದು ತಿಳಿಸಿದರು. ವಕೀಲ ಕೆ.ಆರ್. ವಿದ್ಯಾಧರ್, ಮನು ಶೆಣೈ ಅವರು ನಡೆಸಿಕೊಂಡು ಬಂದ ‘ಕೊಡಗು ಸಮಾಚಾರ’ ಪತ್ರಿಕೆಯನ್ನು ಅವರ ವೈಚಾರಿಕ ನಿಲುವು ಚಿಂತನೆಗಳಂತೆ ಹೊರತರಲು ಆಸಕ್ತಿ ಇರುವವರು ಮುಂದೆ ಬರಬೇಕೆಂದು ಮನವಿ ಮಾಡಿದರು.
ವಿರಾಜಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ, ನಿವೃತ್ತ ಶಿಕ್ಷಕ ಅಬ್ದುಲ್ ಲತೀಫ್ ಅವರು ಮನು ಶೆಣೈ ಅವರ ಒಡನಾಟವನ್ನು ಸ್ಮರಿಸಿಕೊಂಡರಲ್ಲದೆ, ವಿರಾಜಪೇಟೆಯಲ್ಲಿ ಅವರ ನೆನಪಿನ ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್, ತಮ್ಮ ವೃತ್ತಿ ಜೀವನದ ಉದ್ದಕ್ಕೂ ಯಾವುದೇ ಆಮಿಷಗಳಿಗೆ ಒಳಗಾಗದೆ ಮನು ಶೆಣೈ ಅವರು ಪತ್ರಿಕೆಯನ್ನು ಹೊರ ತಂದಿದ್ದಾರೆ. ಅವರ ಹೆಸರಿನಲ್ಲಿ ಜಿಲ್ಲಾ ಕಸಾಪದಲ್ಲಿ ದತ್ತಿಯೊಂದನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ದಿ.ಮನುಶೈಣ್ಯ ಅವರ ಪುತ್ರ ಕಾರ್ತಿಕ್ ಶೆಣೈ ಮತ್ತು ಮಗಳು ನಮಿತಾ ಶೆಣೈ ಅವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ಡಿ.ಹೆಚ್. ರಜತ್ ರಾಜ್ ಪ್ರಾರ್ಥಿಸಿ, ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ಸ್ವಾಗತಿಸಿದರು. ಟ್ರಸ್ಟ್‍ನ ಖಜಾಂಚಿ ಕೆ.ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿ, ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ಕೊಡಗು ಜಿಲ್ಲೆಯ ಜನಸ್ನೇಹಿ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ…

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.