Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಕೆಲಸ ಮಾಡಬೇಕು : ಸಾಯಿ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಕೆಲಸ ಮಾಡಬೇಕು : ಸಾಯಿ ಕುಮಾರ್*

ಜುಲೈ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.1 : ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕೆಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಟಿ.ಕೆ. ಸಾಯಿ ಕುಮಾರ್ ಸಲಹೆ ನೀಡಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ವತಿಯಿಂದ ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.
ಪತ್ರಿಕೆಗಳಿಂದ ದೈನಂದಿನ ಆಗುಹೋಗುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ. ಸಂಕ್ಷಿಪ್ತವಾಗಿ ಪತ್ರಿಕಾ ದಿನಾಚರಣೆಯ ಇತಿಹಾಸವನ್ನು ಸ್ಮರಿಸಿದ ಅವರು ಪತ್ರಿಕೆಗಳು ಸದಾ ಕಾಲವೂ ಸಮಾಜಕ್ಕೆ ಪ್ರತಿಸ್ಪಂದಿಸುವ ಕೆಲಸವನ್ನು ಮಾಡುತ್ತಲೇ ಬಂದಿರುವುದನ್ನು ಕಾರಣಬಹುದಾಗಿದೆ. ಇಂದಿನ ಮಕ್ಕಳು ಪತ್ರಿಕೆಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ತಮ್ಮ ತಂದೆ ಮತ್ತು ತಾಯಿ ಹೆಸರಿನಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘಕ್ಕೆ ದತ್ತಿನಿಧಿ ಘೋಷಣೆ ಮಾಡಿದರು.
ಮುಖ್ಯ ಭಾಷಣಕಾರಾಗಿ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ ಮಾತನಾಡಿ ಪತ್ರಿಕೋದ್ಯಮ ಇಂದು ಪತ್ರಿಕಾ ವಾಣಿಜ್ಯೋದ್ಯಮವಾಗಿ ಬದಲಾಗಿದೆ. ಜನರು ಅಪರಾಧ ಮತ್ತು ಅಪಘಾತದ ಸುದ್ದಿಗಳನ್ನು ಮುಖಪುಟದಲ್ಲಿ ಓದಲು ಬಯಸುತ್ತಾರೆ ಎಂಬ ವಿಷಯಗಳು ಕಳವಳಕಾರಿಯಾಗಿದೆ. ಹಣ ಒಳ್ಳೆಯವರ ಹಿಂದೆ ಹೋಗುತ್ತಿಲ್ಲ. ಒಳ್ಳೆಯವರು ಹಣದ ಹಿಂದೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸಾಮಾಜಿಕ ಬದಲಾವಣೆ ಮತ್ತು ಸುಧಾರಣೆಗಳನ್ನು ಮಾಡಲು ಬಯಸುವವರು ಪತ್ರಿಕೋದ್ಯಮದ ಮೂಲಕ ಏನನ್ನೂ ಸಾಧಿಸಲು ಅಸಾಧ್ಯವಾದಂತೆ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಮಾರ್ಮಿಕವಾಗಿ ನುಡಿಸಿದರು.
ಕೊಡಗು ಪತ್ರಿಕೋದ್ಯಮದ ಒಂದು ವಿಹಂಗಮ ನೋಟ ನೀಡಿದ ಅವರು, ಅನೇಕ ಪತ್ರಿಕೆ ಹುಟ್ಟು ಹಾಗೂ ಏಳುಬೀಳುಗಳನ್ನು ಅನುಭವದ ಹಿನ್ನೆಲೆಯಲ್ಲಿ ವಿವರಿಸಿದರು. ಕೊಡಗಿನಲ್ಲಿ ಕೂಡ ದೃಶ್ಯ ಮಾಧ್ಯಮಗಳ ಹುಟ್ಟು, ಬೆಳವಣಿಗೆ ಹಾಗೂ ಪ್ರಭಾವಗಳ ಕುರಿತು ಮಾತನಾಡಿದ ಅವರು ಪ್ರಸ್ತುತ ಜನಪ್ರಿಯವಾಗಿರುವ ಮೊಬೈಲ್ ಪತ್ರಿಕೋದ್ಯಮ ಮತ್ತು ಆನ್ಲೈನ್ ಪತ್ರಿಕೋದ್ಯಮದ ಬೆಳಕು ಚೆಲ್ಲಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ. ರಮೇಶ್ ಮಾತನಾಡಿ ಕೊಡಗಿನಲ್ಲಿ 58ಕ್ಕೂ ಹೆಚ್ಚು ಪತ್ರಿಕೆಗಳು ಬೆಳಕು ಕಂಡಿದ್ದು, ಕೇವಲ ನಾಲ್ಕರಿಂದ ಐದು ಮಾತ್ರ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸುವುದು ಎಷ್ಟು ಕಷ್ಟ ಎಂಬುದನ್ನು ವಿವರಿಸಿದರು.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಮಾತನಾಡಿ ಪತ್ರಿಕೆಗಳಿಂದ ಗ್ರಾಮೀಣ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಮಾತ್ರವಲ್ಲದೆ ಕ್ರೀಡೆ, ಕೃಷಿ, ಆರೋಗ್ಯ, ಶಿಕ್ಷಣ, ಪರಿಸರ, ವ್ಯಕ್ತಿತ್ವ ವಿಕಸನ, ಸ್ಪರ್ಧಾತ್ಮಕ ವಿಷಯಗಳಿಗೆ ತಯಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ಲಭ್ಯವಾಗುತ್ತದೆ. ನಮ್ಮ ಸಂಘದ ಧ್ಯೇಯೋದೇಶಗಳÀಲ್ಲಿ ಅಭಿವೃದ್ಧಿ ಪತ್ರಿಕೋದ್ಯಮವನ್ನು ಮುಖ್ಯವಾಗಿ ಇಟ್ಟುಕೊಂಡು ಕೃಷಿಗೆ ಪೂರಕವಾದ ವಿಷಯಗಳನ್ನು ಹೆಚ್ಚು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮುಂದುವರೆಯುತ್ತಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಎಸ್. ಜಾನ್, ಮಾತನಾಡಿದರು.
ಪತ್ರಿಕಾ ದಿನಾಚರಣೆ ಅಂಗವಾಗಿ ತಾಲೂಕಿನ ಹಿರಿಯ ಪತ್ರಕರ್ತರಾದ ಕೆ.ಎಚ್.ಶಿವಣ್ಣ, ಕೆ.ತಿಮ್ಮಪ್ಪ, ಬಿ.ಸಿ. ದಿನೇಶ್ ಹಾಗೂ ಕೊಡಗು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ವಿಘ್ನೇಶ್ ಭೂತನಕಾಡು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಮೊದಲಿಗೆ ವನಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಬೆಣ್ಣೆಹಣ್ಣಿನ ಗಿಡವನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಂಘದ ಸಿಲ್ವೆಸ್ಟರ್ ಡಿಸೋಜ ಸ್ವಾಗತಿಸಿ, ಕೆ.ತಿಮ್ಮಪ್ಪ ನಿರೂಪಿಸಿ, ನವೀನ್ ವಂದಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.