ದೆಹಲಿ ಜು.6 : ದಶಮತ್ ರಾವತ್ ಎಂಬ ವ್ಯಕ್ತಿಯ ಮೇಲೆ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ಅವರ ಪಾದಪೂಜೆ ಮಾಡಿ ಸಂತೈಸಿದ್ದಾರೆ. ಈ ಫೋಟೋಗಳು ಈಗ ವೈರಲ್ ಆಗಿದೆ. ಆರೋಪಿ ಪ್ರವೇಶ್ ಶುಕ್ಲಾನನ್ನು ಈಗಾಗಲೇ ಬಂಧಿಸಿದ್ದು, ಈತನ ಅಕ್ರಮ ಮನೆಗಳನ್ನು ಧ್ವಂಸಗೊಳಿಸಲಾಗಿದೆ.








