Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಹೆದ್ದಾರಿಗಳಲ್ಲಿ ‘ಸೈನ್‍ಬೋರ್ಡ್’ ಆದ್ಯತೆ ಮೇಲೆ ಅಳವಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು

*ಕೊಡಗು : ಹೆದ್ದಾರಿಗಳಲ್ಲಿ ‘ಸೈನ್‍ಬೋರ್ಡ್’ ಆದ್ಯತೆ ಮೇಲೆ ಅಳವಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

July 6, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತಗಳನ್ನು ತಡೆಯಲು ಅಗತ್ಯ ಇರುವ ಕಡೆಗಳಲ್ಲಿ ‘ಸೈನ್‍ಬೋರ್ಡ್’ (ಸೂಚನಾ ಫಲಕ) ಅಳವಡಿಸುವಂತೆ ಸಂಬಂಧಪಟ್ಟ ವಿಭಾಗದ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.
ಕೊಡಗು ಜಿಲ್ಲೆಗೆ ರಾಜ್ಯ, ಅಂತರ ರಾಜ್ಯಗಳಿಂದ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಸ್ಥಳೀಯರು ಸೇರಿದಂತೆ ಯಾರಿಗೂ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸುವುದು ಅತ್ಯಗತ್ಯ. ಪ್ರತಿಯೊಬ್ಬರ ಜೀವ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಅಪಘಾತ ತಡೆಯುವಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.
ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸೈನ್ ಬೋರ್ಡ್ ಅಳವಡಿಸುವ ಸಂಬಂಧ ಪೊಲೀಸ್ ಇಲಾಖೆಯಿಂದ ಸ್ಥಳದ ಮಾಹಿತಿ ಪಟ್ಟಿ ಪಡೆದು ಕೂಡಲೇ ಸೈನ್‍ಬೋರ್ಡ್‍ನ್ನು ಆದ್ಯತೆ ಮೇಲೆ ಅಳವಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮಳೆ ಜೊತೆಗೆ ಮಂಜು ಆವರಿಸುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಸೈನ್‍ಬೋರ್ಡ್ ಅಳವಡಿಸುವುದು, ಜೀಬ್ರಾ ಕ್ರಾಸ್ ಬರೆಸುವುದು, ರೈಲಿಂಗ್ಸ್ ನಿರ್ಮಾಣ ಅತ್ಯವಶ್ಯಕವಾಗಿದ್ದು, ಈ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಶಾಲನಗರದಿಂದ ಸಂಪಾಜೆ ವರೆಗೆ ಅಷ್ಟಾಗಿ ಸೂಚನಾ ಫಲಕಗಳು ಇಲ್ಲ. ಆದ್ದರಿಂದ ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂದು ಹೇಳಿದರು.
‘ರಾಷ್ಟ್ರೀಯ, ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗಿಡಗಂಟೆಗಳನ್ನು ಕಡಿದು ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಕೆ.ರಾಮರಾಜನ್ ಅವರು ಸಲಹೆ ಮಾಡಿದರು.’
ಅಪಘಾತ ವಲಯಗಳನ್ನು ಗುರುತಿಸಿ ಸೈನ್‍ಬೋರ್ಡ್ ಇಲ್ಲದ ಕಡೆ ಸೈನ್‍ಬೋರ್ಡ್ ಅಳವಡಿಸಬೇಕು. ಶಾಲಾ- ಕಾಲೇಜು ವ್ಯಾಪ್ತಿಯಲ್ಲಿ ಸಂಚಾರಿ ಮಾರ್ಗದ ವಿವರ ಮಾಹಿತಿ ಫಲಕ ಅಳವಡಿಸುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಆದ್ಯತೆ ಮೇಲೆ ಸಂಚಾರಕ್ಕೆ ಸೈನ್ ಬೋರ್ಡ್ ಅಳವಡಿಸುವುದು, ಜೀಬ್ರಾ ಕ್ರಾಸ್ ಬರೆಸುವುದು, ರೈಲಿಂಗ್ಸ್ ಮತ್ತಿತರ ಕೆಲಸಗಳು ಆಗಬೇಕಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಜಿ.ಪಂ. ಇಇ ಸುರೇಶ್ ಕುಮಾರ್, ಹೆದ್ದಾರಿ ವಿಭಾಗದ ಸಹಾಯಕ ಎಂಜಿನಿಯರ್ ಹನುಮಂತ ಅವರು ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗದ ಮುಖ್ಯಸ್ಥರಾದ ಜಯಕರ ಶೆಟ್ಟಿ ಅವರು ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬಸ್‍ಗಳಿಗೆ ವೇಗದ ಮಿತಿ ಅಳವಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ, ಕಾರ್ಮಿಕ ಇಲಾಖಾ ಅಧಿಕಾರಿ ಹರ್ಷವರ್ಧನ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ನಯನ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸಂಚಾರ ನಿಯಮ ಉಲ್ಲಂಘನೆ : ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ*
Next Article *ಮದೆನಾಡು : ಹೆದ್ದಾರಿ ದುರಸ್ತಿ*

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.