Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*
  • *ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
  • *ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*
  • *ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 
  • *ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ನನ್ನ ಗಿಡ ನನ್ನ ಹೆಮ್ಮೆ” ವನ ಮಹೋತ್ಸವ ಸಪ್ತಾಹ : ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು : ಡಾ.ಸತೀಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ನನ್ನ ಗಿಡ ನನ್ನ ಹೆಮ್ಮೆ” ವನ ಮಹೋತ್ಸವ ಸಪ್ತಾಹ : ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು : ಡಾ.ಸತೀಶ್*

ಜುಲೈ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.9 : ನಾವು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿ ನಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಸಂರಕ್ಷಣೆಯೊಂದಿಗೆ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಸತೀಶ್ ಮನವಿ ಮಾಡಿದರು.
ಕರ್ನಾಟಕ ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ಕಾವೇರಿ ಪರಿಸರ ಬಳಗ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಕಾಲೇಜಿನ ಎನ್.ಎಸ್.ಎಸ್.ಘಟಕ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಸಹಯೋಗದಲ್ಲಿ ಶನಿವಾರ ಕುಶಾಲನಗರ ಸರ್ಕಾರಿ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 250 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಭೂಮಂಡಲದಲ್ಲಿ ಭೂಮಿಯ ಮೇಲಿನ ನೀರು ಕಡಿಮೆಯಾಗುತ್ತಿದೆ. ಸಮುದ್ರ ಮಟ್ಟ ಹೆಚ್ಚಾಗುತ್ತಿದೆ. ಆದ್ದರಿಂದ ಮಾನವ ಸಂಕುಲದ ಜೊತೆಗೆ ಅರಣ್ಯ ಮತ್ತು ವನ್ಯ ಸಂಪತ್ತನ್ನು ಉಳಿಸಿ ಬೆಳೆಸುವಂತಾಗಲು ಗಿಡ ಮರಗಳನ್ನು ಹೆಚ್ಚಾಗಿ ಬೆಳೆಸಬೇಕು. ಪರಿಸರ ಸಂರಕ್ಷಣೆಗೆ ಹಿಂದಿಗಿಂತ ಇಂದು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ನಮ್ಮ ಪೂರ್ವಿಕರು ದೂರದೃಷ್ಠಿಯಿಂದ ಬೆಳೆಸಿರುವ ಗಿಡ- ಮರಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಡಾ.ಸತೀಶ್ ಹೇಳಿದರು.
ಪರಿಸರವನ್ನು ರಕ್ಷಣೆ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದ್ದು, ತಮ್ಮ ಕಾಲೇಜು ಆವರಣದಲ್ಲಿ ಕೈಗೊಂಡಿರುವ ಹಸರೀಕರಣ ಕಾರ್ಯಕ್ಕೆ
ಎಲ್ಲರ ಸಹಕರಿಸಬೇಕು ಎಂದು ಪ್ರಾಂಶುಪಾಲ ಡಾ ಸತೀಶ್ ಮನವಿ ಮಾಡಿದರು.
“ಪರಿಸರ ಸಂರಕ್ಷಣೆ” ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಬೋಧಿಸಿ ಮಾತನಾಡಿದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಮಾತನಾಡಿ, ‘ಪ್ರತಿವರ್ಷ ನಾನಾ ಧ್ಯೇಯವಾಕ್ಯದೊಂದಿಗೆ ವನ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಈ ಬಾರಿ “ನನ್ನ ಗಿಡ ನನ್ನ ಹೆಮ್ಮೆ” ಧ್ಯೇಯವಾಕ್ಯದೊಂದಿಗೆ ಸಸಿ ನೆಡುವ ಸಪ್ತಾಹ ಆಚರಿಸಲಾಗುತ್ತಿದ್ದು, ಇಂತಹ ಹಸಿರು ನಿರ್ಮಾಣ ಅಭಿಯಾನದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದರು.
ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ.ಶಿವರಾಂ ಮಾತನಾಡಿ, ಅರಣ್ಯ ಇಲಾಖೆಯ ವತಿಯಿಂದ ನಾಗರಿಕರ ಸಹಭಾಗಿತ್ವದಲ್ಲಿ ಶಾಲಾ- ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 2500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಕಾವೇರಿ ಪರಿಸರ ಬಳಗದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಪರಿಸರ ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಎಲ್ಲರೂ ಜತೆಗೂಡಿ ಹಸಿರು ಹೊದಿಕೆ ನಿರ್ಮಾಣಕ್ಕೆ ಪಣ ತೊಡಬೇಕು ಎಂದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ಕಾಲೇಜಿನ ಡಾ ಎಲೆಕ್ಟ್ರಾನಿಕಗಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಮುಖ್ಯಸ್ಥ ಡಾ ಚೂಡಾ ರತ್ನಾಕರ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಪರಶಿವಮೂರ್ತಿ, ಉಪನ್ಯಾಸಕರಾದ ಮಹೇಂದ್ರ, ಮಂಜುನಾಥ್, ಕಛೇರಿ ಅಧೀಕ್ಷಕಿ ಎಚ್.ಎ.ರೂಪ, ಡಿ ಆರ್ ಎಫ್ ಓ ಕೆ.ಎನ್.ದೇವಯ್ಯ, ಶ್ರವಣಕುಮಾರ್ ವಿಭೂತಿ, ಚೇತನ್, ಗಸ್ತು ವನ ಪಾಲಕ ವಿ.ಎಸ್. ಮಂಜೇಗೌಡ, ಸಿದ್ದರಾಮ ನಾಟೀಕರ್, ದಿನೇಶ್, ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮೈಸೂರು NEWS DESK ಜೂ.2 : ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ…

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026

*ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 

ಜೂನ್ 1, 2026

*ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*

ಜೂನ್ 1, 2026

*ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.