Advertisement
3:27 PM Sunday 3-December 2023

*14 ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ*

21/07/2023

ಮಡಿಕೇರಿ ಜು.21   : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ‘ಕಲ್ಯಾಣ ಸಂಘಟಕರು ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ‍್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿಪಡಿಸಿದ ಅರ್ಜಿ ನಮೂನೆ 1 ನ್ನು ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆ.5 ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಬೆಂಗಳೂರು-560025 ಇವರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.