Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಾಖಲೆಗಳಲ್ಲಿ “ಕೊಡವ” ಪದ ಬಳಕೆ : ಕ್ಯಾಬಿನೆಟ್ ಅನುಮೋದನೆ : ಸರ್ಕಾರದ ಕ್ರಮಕ್ಕೆ ಸಿಎನ್‌ಸಿ ಶ್ಲಾಘನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ದಾಖಲೆಗಳಲ್ಲಿ “ಕೊಡವ” ಪದ ಬಳಕೆ : ಕ್ಯಾಬಿನೆಟ್ ಅನುಮೋದನೆ : ಸರ್ಕಾರದ ಕ್ರಮಕ್ಕೆ ಸಿಎನ್‌ಸಿ ಶ್ಲಾಘನೆ*

ಜುಲೈ 28, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.28 : ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು “ಕೊಡವ” ಎಂದು ನಮೂದಿಸುವ ಕುರಿತು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಸರ್ಕಾರದ ಈ ಕ್ರಮಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಶ್ಲಾಘನೆ ವ್ಯಕ್ತಪಡಿಸಿದೆ.
ಕಳೆದ 15 ವರ್ಷಗಳ ಸಿಎನ್‌ಸಿಯ ಸತತ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಕೊಡವರ ಕುಲ ಸಮಸ್ಯೆಗೆ ಸಂಬಂಧಿಸಿದ ಅತಿ ಪ್ರಧಾನ ಬೇಡಿಕೆಗಳಲ್ಲಿ ಒಂದಾದ “ಕೊಡವ” ಪದವನ್ನು ಕ್ಯಾಬಿನೆಟ್ ನಿರ್ಣಯದ ಮೂಲಕ ಅಧಿಕೃತಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. “ಕೊಡವ” ಎನ್ನುವ ಉಜ್ವಲ ಶಾಸ್ತ್ರೀಯ ನಾಮಕ್ಕೆ ಶಾಸನಬದ್ಧ ಸ್ಥಿರೀಕರಣ ದೊರೆತ್ತಿದ್ದು, ಇದು ಸಿಎನ್‌ಸಿಯ ಮಹತ್ವದ ಮೈಲುಗಲ್ಲಾಗಿದೆ.
ಕೊಡವರನ್ನು “ಕೊಡವ” ಎಂದು ನಮೂದಿಸದೆ “ಕೊಡಗರು” ಎಂದು ನಮೂದಿಸುವ ಮೂಲಕ ಕೊಡವ ಬುಡಕಟ್ಟು ಆದಿಮ ಸಂಜಾತ ಮೂಲನಿವಾಸಿಗಳ ಅಸ್ತಿತ್ವದ ಬಗ್ಗೆ ಆತಂಕ ಮೂಡಿಸಲಾಗುತ್ತಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಿಎನ್‌ಸಿ ಸಂಘಟನೆ 2008 ರಿಂದಲೇ ಹೋರಾಟವನ್ನು ಆರಂಭಿಸಿತು. ಕೊಡವರ ಭಾವನೆಯನ್ನು ಅರ್ಥ ಮಾಡಿಕೊಂಡು ನಮ್ಮ ಬೇಡಿಕೆಯನ್ನು ಈಡೇರಿಸುವ ಮೂಲಕ ನ್ಯಾಯ ಒದಗಿಸುವ ಕೆಲಸವನ್ನು ಆಡಳಿತ ವ್ಯವಸ್ಥೆಗಳು ಇಲ್ಲಿಯವರೆಗೆ ಮಾಡಿರಲಿಲ್ಲ.
ಆದರೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮುಖ್ಯಮಂತ್ರಿಗಳನ್ನು ಭೇಟಿಯಾದ ನಂತರ ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಕೊಡವರನ್ನು “ಕೊಡವ” ಎಂದು ನಮೂದಿಸುವ ಕುರಿತು ಅನುಮೋದನೆ ನೀಡಿದೆ. ಇದು ನಮಗೆ ಸಿಕ್ಕ ದೊಡ್ಡ ಜಯವಾಗಿದ್ದು, ಇದಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಎ.ಎಸ್.ಪೊನ್ನಣ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರುಗಳಾಗಿದ್ದ ಡಾ.ದ್ವಾರಕನಾಥ್, ಡಾ.ಜಯಪ್ರಕಾಶ್ ಹೆಗ್ಡೆ, ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ನ್ಯಾಯವಾದಿ ಬಲ್ಲಚಂಡ ಬೆಳ್ಳಿಯಪ್ಪ ಹಾಗೂ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ ಅವರ ಸುದೀರ್ಘ ಹೋರಾಟದಲ್ಲಿ ತಾಳ್ಮೆಯಿಂದ ನಿರಂತರವಾಗಿ ಕೈಜೋಡಿಸಿದ ಸಿಎನ್‌ಸಿ ಸ್ವಯಂ ಸೇವಕರು, ಅಭಿಮಾನಿಗಳು, ಪರೋಕ್ಷ ಮತ್ತು ನೇರವಾಗಿ ಬೆಂಬಲಿಸಿದವರಿಗೆ  ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
::: ಹೋರಾಟದ ಹಾದಿ :::
2008 ರಲ್ಲಿ ಡಾ.ದ್ವಾರಕಾನಾಥ್ ನೇತೃತ್ವದ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.  2009 ರಲ್ಲಿ ಆಯೋಗವು ಕೊಡಗಿಗೆ ಭೇಟಿ ನೀಡಿತು. (ಇದನ್ನು ವಿಫಲಗೊಳಿಸಲು ಅವರು ತಂಗಿದ್ದ ಅತಿಥಿ ಗೃಹದಲ್ಲಿ ಅವರ ಮೇಲೆ ಹಲ್ಲೆ ಯತ್ನ ನಡೆಸಿ ಅವರನ್ನು ಅಪಮಾನಿಸಲಾಯಿತು. ಆದರೂ ಅವರು ಕೊಟ್ಟ ಭರವಸೆಯಂತೆ ನಡೆದುಕೊಂಡರು) ಆಯೋಗದ ಕರೆಯ ಮೇರೆಗೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ ಅವರೊಂದಿಗಿನ ತಂಡ ಬೆಂಗಳೂರಿನಲ್ಲಿರುವ ಆಯೋಗದ ಕಚೇರಿಯಲ್ಲಿನ ನ್ಯಾಯಾಲಯದಲ್ಲಿ ಕೊಡವ ಪದ ಬಳಕೆಯ ಸಮಗ್ರ ಚಾರಿತ್ರಿಕ ಹಿನ್ನೆಲೆ ಮತ್ತು ದಾಖಲಾತಿಯೊಂದಿಗೆ ಜ್ಞಾಪನಾ ಪತ್ರ ಸಲ್ಲಿಸಿತು. 2010 ರಲ್ಲಿ ಡಾ.ದ್ವಾರಕಾನಾಥ್ ಆಯೋಗ ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ‘ಕೊಡಗರು’ ಬದಲಿಗೆ ನಮ್ಮ “ಕೊಡವ” ಪದ ಬಳಕೆಗೆ ಶಿಫಾರಸ್ಸು ಮಾಡಿತು. ಇದಕ್ಕೆ ಸ್ಪಂದನೆ ಸಿಗದೆ ಇದ್ದಾಗ 2014 ರಲ್ಲಿ ಸಿಎನ್‌ಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತು. 2016 ರಲ್ಲಿ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆಯನ್ನು ಸಲ್ಲಿಸಿತಾದರೂ ಯಾವುದೇ ಸ್ಪಂದನೆ ದೊರೆಯದೆ ಆದೇಶದ ಪ್ರತಿ ಕಸದ ಬುಟ್ಟಿ ಸೇರಿತು. 2018 ರಲ್ಲಿ ಮತ್ತೆ ಕೊಡವ ನ್ಯಾಷನಲ್ ಕೌನ್ಸಿಲ್ ಕೋರ್ಟ್ ಮೊರೆ ಹೋಯಿತು.
2021 ಡಿ.8 ರಂದು ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಪೀಠವು “ಕೊಡಗರು” ಬದಲಿಗೆ “ಕೊಡವ” ಪದ ಬಳಸುವಂತೆ ಮಹತ್ವದ ತೀರ್ಪು ನೀಡಿತು. 2022 ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ನ್ಯಾಯಾಲಯದ ಆದೇಶದೊಂದಿಗೆ ಜ್ಞಾಪನಾ ಪತ್ರವನ್ನು ಸಲ್ಲಿಸಲಾಯಿತು. ನಂತರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮೂಲಕ ಅಂದಿನ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ತಲುಪಿತು. ಆದರೂ ಆಗಿನ ಕೊಡವ ಸ್ನೇಹಿ ಎಂದು ಕರೆಸಿಕೊಳ್ಳುತ್ತಿದ್ದ ಸರ್ಕಾರ ಬದ್ಧತೆ ತೋರದೆ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿತು. ಈ ಬೆಳವಣಿಗೆ ಕೊಡವರ ಭಾವನೆಗೆ ಧಕ್ಕೆಯನ್ನುಂಟು ಮಾಡಿತ್ತು ಎಂದು ನಾಚಪ್ಪ ಉಲ್ಲೇಖಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಎ.ಎಸ್.ಪೊನ್ನಣ್ಣ ಅವರುಗಳು ನುಡಿದಂತೆ ನಡೆದಿದ್ದಾರೆ. ಇವರುಗಳ ಸಕಾರಾತ್ಮಕ ನಡೆಯು ಉನ್ನತ ಅಧಿಕಾರದಲ್ಲಿ ಉತ್ತಮ ವ್ಯಕ್ತಿಗಳು ಆಡಳಿತ ನಡೆಸುತ್ತಿದ್ದರೆ ಎಲ್ಲಾ ಸಾಂವಿಧಾನಿಕ ಹೋರಾಟಗಳು ಫಲಕಾರಿಯಾಗಲಿವೆ ಎಂಬುವುದಕ್ಕೆ ಇದೊಂದು ಉದಾಹರಣೆ. ಕೆಲವರು ತಮ್ಮ ಮೋಡಿಯ ಮಾತಿನ ಮೂಲಕ ಇಲ್ಲಿಯವರೆಗೆ ಕೊಡವರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಾ ನಮ್ಮನ್ನು ವಂಚಿಸುವುದು ಬಿಟ್ಟರೆ ಬೇರೇನನ್ನೂ ಮಾಡಲಿಲ್ಲ.
ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು ನಮ್ಮ ಬೇಡಿಕೆ ಈಡೇರುವಂತೆ ನೋಡಿಕೊಂಡಿದ್ದಾರೆ. ಇದೇ ಜು.15 ರಂದು ಸಿಎನ್‌ಸಿ ನಿಯೋಗಕ್ಕೆ ನೀಡಿದ ಭರವಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನಡೆದುಕೊಂಡಿದ್ದು, ನಮ್ಮ ಭಾವನೆಗೆ ಗೌರವ ನೀಡಿ ಜು.27 ರಂದು ಕ್ಯಾಬಿನೆಟ್ ಅನುಮೋದನೆ ದೊರೆಯುವಂತೆ ಮಾಡಿದ್ದಾರೆ. ಸಂವಿಧಾನದ ಚೌಕಟ್ಟಿನಲ್ಲಿರುವ ಸಿಎನ್‌ಸಿಯ ನ್ಯಾಯ ಸಮ್ಮತವಾದ ಇತರ ಬೇಡಿಕೆಗಳನ್ನು ಕೂಡ ಮುಂದಿನ ದಿನಗಳಲ್ಲಿ ಸರ್ಕಾರ ಈಡೇರಿಸುತ್ತದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.