Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಸಂವಾದ ಕಾಯ೯ಕ್ರಮ : ಜನರ ಅಗತ್ಯಕ್ಕೆ ತಕ್ಕಂತೆ ಪೊಲೀಸ್ ಇಲಾಖೆ ಕಾಯ೯ನಿವ೯ಹಣೆಗೆ ಬದ್ದ  : ಎಸ್ಪಿ ರಾಮರಾಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಸಂವಾದ ಕಾಯ೯ಕ್ರಮ : ಜನರ ಅಗತ್ಯಕ್ಕೆ ತಕ್ಕಂತೆ ಪೊಲೀಸ್ ಇಲಾಖೆ ಕಾಯ೯ನಿವ೯ಹಣೆಗೆ ಬದ್ದ  : ಎಸ್ಪಿ ರಾಮರಾಜನ್*

ಆಗಷ್ಟ್ 9, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.9 : ಸಮಾಜದ ಅಗತ್ಯತೆಗಳಿಗೆ ತಕ್ಕಂತೆ ಜನರಪರವಾಗಿ ಕಾಯ೯ಪ್ರವೖತ್ತವಾಗಲು ಕೊಡಗು ಪೊಲೀಸ್ ಇಲಾಖೆ ಬದ್ದವಾಗಿದೆ. ಕೊಡಗಿನಲ್ಲಿ ಹೆಚ್ಚುತ್ತಿದ್ದ ಗಾಂಜಾ ಮಾದಕ ದ್ರವ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿರುವ ಸಮರಕ್ಕೆ ಸಾವ೯ಜನಿಕರೂ ಸಹಕಾರ ನೀಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ.

ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಪೊಲೀಸ್ ವರಿಷ್ಟಾಧಿಕಾರಿಗಳೊಂದಿಗೆ ವಿವಿಧ ಸಂಘಸಂಸ್ಥೆಗಳ ಪ್ರಮುಖರ ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ರಾಮರಾಜನ್ ಹಲವಾರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು.

ಕೊಡಗಿನಲ್ಲಿ ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣಗಳು ಹೆಚ್ಚಾದರೇ ಅದು ಪ್ರವಾಸೋದ್ಯಮದ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಕೌಟುಂಬಿಕ ಪ್ರವಾಸೋದ್ಯಮಕ್ಕೆ ಧಕ್ಕೆ ಬರಲಿದೆ ಎಂದು ಎಚ್ಚರಿಸಿದ ರಾಮರಾಜನ್ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾದಕ ದ್ರವ್ಯ ಮಾರಾಟಗಾರರನ್ನು ಬಗ್ಗು ಬಡಿಯುತ್ತಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಂಥವರ ವಿರುದ್ದವೂ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು. ಡ್ರಗ್ಸ್ ಮುಕ್ತ ಕೊಡಗು ಎಂಬ ಅಭಿಯಾನಕ್ಕೆ ಪೊಲೀಸರೊಂದಿಗೆ ಸಾವ೯ಜನಿಕರೂ ಸಹಕಾರ ನೀಡಬೇಕು. ಅಗತ್ಯ ಮಾಹಿತಿಗಳನ್ನು ಪೊಲೀಸರೊಂದಿಗೆ ವಿನಿಮಯ ಮಾಡಿಕೊಳ್ಳಬೇಕೆಂದು  ಕೋರಿದರು.

ಕಾನೂನು ಉಲ್ಲಂಘಿಸುವವರಿಗೆ ದಂಡಶುಲ್ಕ ಹಾಕುವ ನಿಟ್ಟಿನಲ್ಲಿಯೂ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದ ಪೊಲೀಸ್ ವರಿಷ್ಟಾಧಿಕಾರಿಗಳು, ವಾಹನ ಸಂಚಾರ ಕ್ರಮಗಳ ಬಗ್ಗೆಯೂ ವಿವಿಧ ಸಂಘಸಂಸ್ಥೆಗಳ ಸಹಕಾರದಲ್ಲಿ ಜಾಗ್ರತಿ ಅಭಿಯಾನ ಹಮ್ಮಿಕೊಳ್ಳುವ ನಿಟ್ಟಿನಲ್ಲಿಯೂ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಮಡಿಕೇರಿ ನಗರದಲ್ಲಿ ಪೊಲೀಸ್ ಸಂಚಾರಿ ವಾಹನಗಳ ಮೂಲಕ ಸಂಚಾರ ನಿಯಂತ್ರಣ ಬಗ್ಗೆ ಅರಿವು ಮೂಡಿಸಲಾಗುತ್ತದೆ. ವಾಹನ ನಿಲುಗಡೆಯ ಬಗ್ಗಯೂ ಧ್ವನಿವಧ೯ಕದ ಮೂಲಕ ಸಂಚಾರಿ ವಾಹನಗಳಲ್ಲಿ ತಿಳಿಸಲಾಗುತ್ತದೆ. ಪೊಲೀಸ್ ಗಸ್ತನ್ನು ನಗರ ಮತ್ತು ಹೊರವಲಯದಲ್ಲಿ ಹೆಚ್ಚಿಸಲು ಕ್ರಮಕೈಗೊಳ್ಳಲಾಗುತ್ತದೆ.
ತಾನು ಸ್ವತ ಮಫ್ತಿಯಲ್ಲಿ ಖುದ್ದಾಗಿ ನಗರ ಪ್ರದೇಶಗಳಲ್ಲಿ ರಾತ್ರಿ ಬೀಟ್ ತೆರಳಿ ಪುಂಡ ಪೋಕರಿಗಳ ಹಾವಳಿ ನಿಯಂತ್ರಿಸಲು ಮುಂದಾಗುವುದಾಗಿಯೂ ರಾಮರಾಜನ್ ಘೋಷಿಸಿದರು.

ಮಡಿಕೇರಿ ಗಿರಿಪ್ರದೇಶವಾದ್ದರಿಂದಾಗಿ ಸ್ಥಳದ ಕೊರತೆ ಬಹಳವಾಗಿ ಕಾಡುತ್ತಿದೆ. ಹೀಗಾಗಿಯೇ ಮಡಿಕೇರಿಯಲ್ಲಿ ಮುಂದಿನ ದಿನಗಳಲ್ಲಿ ವಾಹನ ನಿಲುಗಡೆಯೇ ಬೖಹತ್ ಸಮಸ್ಯೆಯಾಗಿ ಕಾಡಲಿದೆ. ಈ ನಿಟ್ಟಿನಲ್ಲಿ ನಗರಸಭೆ, ಜಿಲ್ಲಾಡಳಿತ, ಮೂಡಾ ಸೂಕ್ತ ಸ್ಥಳಗಳನ್ನು ವಾಹನ ನಿಲುಗಡೆಗೆ ಗುರುತಿಸಬೇಕು, ಮಲ್ಟಿ ಲೆವಲ್ ಪಾಕಿ೯ಂಗ್ ವ್ಯವಸ್ಥೆಯೂ ನಗರದ 2-3 ಕಡೆಗಳಲ್ಲಿ ಜಾರಿಯಾಗುವ ಅನಿವಾಯ೯ತೆ ಇದೆ ಎಂದೂ ರಾಮರಾಜನ್ ಹೇಳಿದರು.

ಮಡಿಕೇರಿ – ಕುಶಾಲನಗರ ಹೆದ್ದಾರಿಯಲ್ಲಿ ಅಪಾಯಕಾರಿ ತಿರುವುಗಳಲ್ಲಿ ಎಚ್ಚರಿಕೆಯ ಫಲಕ ಅಳವಡಿಸುವಿಕೆ. ರಾತ್ರಿ ವೇಳೆ ಕಾಣುವಂತೆ ರಸ್ತೆ ಬದಿಗಳಲ್ಲಿ ಬ್ಲಿಂಕರ್ಸ್ ಗಳನ್ನು ಹಾಕಲಾಗುತ್ತದೆ. ಕೊಡಗು ಜಿಲ್ಲೆಯ ಪ್ರವೇಶ ದ್ವಾರದಲ್ಲಿಯೇ ಡ್ರಗ್ಸ್ ಸೇವನೆ ಬಗ್ಗೆ ಎಚ್ಚರಿಕೆಯ ಸಂದೇಶ ಫಲಕ ಅಳವಡಿಸಲಾಗುತ್ತದೆ ಎಂದೂ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು.

ಮಡಿಕೇರಿಯ ಕೈಗಾರಿಕಾ ಬಡಾವಣೆಯ ರಸ್ತೆ ಸೇರಿದಂತೆ ನಗರದ ಕೆಲವು ರಸ್ತೆಗಳಲ್ಲಿ ಏಕ ಮುಖ ಸಂಚಾರ ನಿಯಮ ಪಾಲನೆಯಾಗುತ್ತಿಲ್ಲ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ರಾಮರಾಜನ್, ಈ ನಿಟ್ಟಿನಲ್ಲಿ ಕೂಡಲೇ ಕ್ರಮಕೈಗೊಂಡು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವುದಾಗಿ ಹೇಳಿದರು.

ಗಾಂಜಾ ಮಾರಾಟ ದಂಧೆಯಲ್ಲಿ ಆರೋಪಿಗಳ ಪರವಾಗಿ ಪೊಲೀಸ್ ಸಿಬ್ಬಂದಿಗಳು ಶಾಮೀಲಾಗಿರುವುದು ತಿಳಿದುಬಂದಲ್ಲಿ ಅಂಥ ಸಿಬ್ಬಂದಿಗಳ ಬಗ್ಗೆ ಕಠಿಣ ಕ್ರಮ ಖಂಡಿತಾ ಎಂದು ಭರವಸೆ ನೀಡಿದ ರಾಮರಾಜನ್, ಗಾಂಜಾ ದಂಧೆಯಲ್ಲಿ ಬೖಹತ್ ಜಾಲವೇ ಶಾಮೀಲಾಗಿದ್ದು ಅಂಥವರನ್ನು ಪತ್ತೆಹಚ್ಚುವ ಕಾಯ೯ ನಡೆದಿದೆ ಎಂದರು.

ಮಾದಕ ದ್ರವ್ಯ ಸೇವನೆ ಬಗ್ಗೆ ಯುವಪೀಳಿಗೆಯಲ್ಲಿ ಜಾಗ್ರತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಲಾಕಾಲೇಜುಗಳಲ್ಲಿ ಸಂಘಸಂಸ್ಥೆಗಳ ಸಹಕಾರದೊಂದಿಗೆ ಜಾಗ್ರತಿ ಕಾಯ೯ಕ್ರಮಗಳನ್ನು ಆಯೋಜಿಸಲಾಗುತ್ತದೆ. ಪೋಷಕರೊಂದಿಗೆ ಚಚಿ೯ಸಿ ಜಾಗೃತಿ ಮೂಡಿಸಲಾಗುತ್ತದೆ ಎಂದೂ ಪೊಲೀಸ್ ವರಿಷ್ಟಾಧಿಕಾರಿ ಭರವಸೆ ನೀಡಿದರು.

ಖಾಸಗಿ ಬಸ್ ನಿಲ್ದಾಣಕ್ಕೆ ರಾಜಾಸೀಟ್ ಮೂಲಕ ಸಾಗುವ ಬಸ್ ಗಳಿಗೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಅಂತೆಯೇ ಪ್ರೆಸ್ ಕ್ಲಬ್ ರಸ್ತೆಯಲ್ಲಿಯೂ ಬಸ್ ಸಂಚಾರ ಕಷ್ಟಕರವಾಗಿದೆ ಎಂಬ ದೂರಿಗೆ ಪ್ರತಿಕ್ರಿಯಿಸಿದ ಪೊಲೀಸ್ ಮುಖ್ಯಸ್ಥರು, ಸ್ಥಳ ಪರಿಶೀಲಿಸಿ ಸೂಕ್ತ ಪರಿಹಾರ ಕ್ರಮಕೈಗೊಳ್ಳುವುದಾಗಿ ಹೇಳಿದರು.

ಕಾನೂನು ಸಮಸ್ಯೆಗೆ ಸಂಬಂಧಿಸಿದಂತೆ ಯಾವುದೇ ದೂರನ್ನು ಸಾವ೯ಜನಿಕರು ಕೆ.ಎಸ್.ಪಿ. ಆ್ಯಪ್ ಮೂಲಕ ಸಲ್ಲಿಸಬಹುದಾಗಿದ್ದು ಕೂಡಲೇ ಕ್ರಮಖಂಡಿತಾ ಎಂದು ರಾಮರಾಜನ್ ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಗಳ ತೀವ್ರ ಕೊರತೆಯಿದೆ. ಸದ್ಯದಲ್ಲಿಯೇ ಜಿಲ್ಲೆಗೆ ಹೆಚ್ಚಿನ ಸಿಬ್ಬಂದಿಗಳು ನೇಮಕಗೊಳ್ಳುವ ನಿರೀಕ್ಷೆ ಇದೆ. ಈ ಸಂದಭ೯ ಪೊಲೀಸ್ ಇಲಾಖೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾಯ೯ಪ್ರವೃತ್ತವಾಗಲಿದೆ ಎಂದೂ ರಾಮರಾಜನ್ ಹೇಳಿದರು.

ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಮಾತನಾಡಿ, ಜಿಲ್ಲೆಯಲ್ಲಿರುವ ಕಾನೂನು ಸಂಬಂಧಿತ ವಿವಿಧ ಸಮಸ್ಯೆಗಳ ಬಗ್ಗೆ ಚಚಿ೯ಸಲು ಪೊಲೀಸ್ ವರಿಷ್ಟಾಧಿಕಾರಿಯೊಂದಿಗೆ ಈ ಸಂವಾದ ಆಯೋಜಿಸಲಾಗಿದೆ. ಸಮಸ್ಯೆಗಳ ಅನಾವರಣದೊಂದಿಗೆ ಅಂಥ ಸಮಸ್ಯೆಗಳು ಶೀಘ್ರ ನಿವಾರಣೆಯಾಗಲು ಸಂವಾದ ನೆರವಾಗಲಿದೆ. ಪೊಲೀಸ್ ಇಲಾಖೆ ಮತ್ತು ಜನರ ನಡುವಿನ ಸೌಹಾಧ೯ ಸಂಬಂಧಕ್ಕೆ ರೋಟರಿ ಮಿಸ್ಟಿ ಹಿಲ್ಸ್ ವೇದಿಕೆ ಕಲ್ಪಿಸಿದೆ ಎಂದರು.

ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ರತ್ನಾಕರ್ ರೈ ವಂದಿಸಿದ ಕಾಯ೯ಕ್ರಮದಲ್ಲಿ ರೋಟರಿ ವಲಯದ ಸಹಾಯಕ ಗವನ೯ರ್ ದೇವಣಿರ ತಿಲಕ್ ಉಪಸ್ಥಿತರಿದ್ದು, ರೋಟರಿ ನಿದೇ೯ಶಕ ಅನಿಲ್ ಎಚ್.ಟಿ.ನಿರೂಪಿಸಿ, ಅಂಬೆಕಲ್ ವಿನೋದ್ ಕುಶಾಲಪ್ಪ ಅತಿಥಿಗಳ ಪರಿಚಯ ನೆರವೇರಿಸಿದರು.

ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ರೋಟರಿ ಮಾಜಿ ಗವನ೯ರ್ ಡಾ.ರವಿ ಅಪ್ಪಾಜಿ ಸ ಮಡಿಕೇರಿ ರೋಟರಿ ಅಧ್ಯಕ್ಷೆ ಗೀತಾ ಗಿರೀಶ್, ಮಡಿಕೇರಿ ರೋಟರಿ ವುಡ್ಸ್ ಅಧ್ಯಕ್ಷ ಕೆ.ವಸಂತ್ ಕುಮಾರ್, ಕೊಡಗು ಗೌಡ ಒಕ್ಕೂಟದ ಅಧ್ಯಕ್ಷ ಸೂತ೯ಲೆ ಸೋಮಣ್ಣ, ಕೊಡವ ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ, ಹೋಟೇಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ, ಆಟೋ ಚಾಲಕರ ಸಂಘದ ಅಧ್ಯಕ್ಷ ಮೇದಪ್ಪ, ಲಯನ್ಸ್ ಸಂಸ್ಥೆಯ ವಲಯಾಧ್ಯಕ್ಷ ಎ.ಕೆ.ನವೀನ್, ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಂಬೆಕಲ್ ಜೀವನ್, ಮಡಿಕೇರಿ ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಎಂ.ಧನಂಜಯ್, ಭಾರತೀಯ ರೆಡ್ ಕ್ರಾಸ್ ಕೊಡಗು ಘಟಕದ ಸಭಾಪತಿ ಬಿ.ಕೆ.ರವೀಂದ್ರ ರೈ, ಕೊಡಗು ಪತ್ರಕತ೯ರ ಸಂಘ (ರಿ) ನಿದೇ೯ಶಕ ಸುರೇಶ್ ಬಿಳಿಗೇರಿ, ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಚೆಯ್ಯಂಡ ಸತ್ಯ, ಜಿಲ್ಲಾ ಕಂಟ್ರಾಕ್ಟರ್ಸ್ ಸಂಘದ ಅಧ್ಯಕ್ಷ ರಾಜೀವ್ ಲೋಚನ, ಬಂಟರ ಸಂಘದ ಅಧ್ಯಕ್ಷ ಜಗದೀಶ್ ರೈ, ಬ್ರಾಹ್ಮಣ ವಿಧ್ಯಾಭಿವೖದ್ದಿನಿಧಿ ಅಧ್ಯಕ್ಷ ಗೋಪಾಲಕೖಷ್ಣ, ಹೋಂಸ್ಟೇ ಅಸೋಸಿಯೇಷನ್ ನಿದೇ೯ಶಕಿ ಕಲ್ಮಾಡಂಡ ಶಶಿಮೊಣ್ಣಪ್ಪ, ಸೋಮವಾರಪೇಟೆ ರೈತ ಸಂಘದ ಪ್ರಮುಖ ಕೆ.ಎಂ.ಲಕ್ಷ್ಮಣ್ ವಿವಿಧ ಸಲಹೆಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡಿದ್ದರು .

ಬೇರೆ ಜಿಲ್ಲೆಗಳಲ್ಲಿ ಸಕಾ೯ರಿ ಅಧಿಕಾರಿಗಳೆಂದರೆ ಜನರು ದೇವರ ಹಾಗೆ ಕಾಣುತ್ತಾರೆ. ಕೊಡಗಿನಲ್ಲಿ ಅಧಿಕಾರಿಗಳನ್ನು ಜನಸೇವಕರಂತೆಯೇ ಕಾಣುತ್ತಾರೆ. ಅಧಿಕಾರಿಯಾದವನಿಗೆ ಸಕಾ೯ರ ಎಲ್ಲಾ ಸೌಲಭ್ಯ ನೀಡುತ್ತದೆ. ಹೀಗಾಗಿ ಜನರ ಪಾಲಿಗೆ ದೇವರ ಸ್ಥಾನ ಪಡೆಯುವುದಕ್ಕಿಂತ ಸಕಾ೯ರದ ಸೇವೆಯಲ್ಲಿ ಜನಸೇವಕನಾಗಿ ಕಾಯ೯ನಿವ೯ಹಿಸುವುದೇ ನನಗೆ ತೃಪ್ತಿ ನೀಡುತ್ತದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.