Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗೋಣಿಕೊಪ್ಪದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ‘ಆರೋಗ್ಯ ಅರಿವು’ ಕುರಿತು ಕಾರ್ಯಾಗಾರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತೆ ಅಗತ್ಯ : ಡಾ.ಸತೀಶ್ ಕುಮಾರ್* 
ಇತ್ತೀಚಿನ ಸುದ್ದಿಗಳು

*ಗೋಣಿಕೊಪ್ಪದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ‘ಆರೋಗ್ಯ ಅರಿವು’ ಕುರಿತು ಕಾರ್ಯಾಗಾರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತೆ ಅಗತ್ಯ : ಡಾ.ಸತೀಶ್ ಕುಮಾರ್* 

August 11, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಗೋಣಿಕೊಪ್ಪ, ಆ.11 : ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಮೂಲಕ ಯಾವುದೇ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುಂಜಾಗ್ರತೆ ವಹಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ. ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆಯೇ ಮದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್  ಹೇಳಿದರು.
ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿರಾಜಪೇಟೆ ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ
ಮಲೇರಿಯಾ ಮಾಸಾಚರಣೆ ಅಂಗವಾಗಿ ಡೆಂಗ್ಯೂ, ಮಲೇರಿಯಾ ಇನ್ನಿತರ ಸಾಂಕ್ರಾಮಿಕ ರೋಗಗಳ ಕುರಿತಂತೆ “ಆರೋಗ್ಯ ಅರಿವು” ಕಾರ್ಯಕ್ರಮದಡಿ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ”ದ ಕುರಿತು ವಿರಾಜಪೇಟೆ ತಾಲ್ಲೂಕು ಮಟ್ಟದ ಶಿಕ್ಷಕರ ಅಡ್ವೊಕೆಸಿ ಕಾರ್ಯಾಗಾರದಲ್ಲಿ “ರೋಗವಾಹಕಗಳ ನಿಯಂತ್ರಣ” ಕುರಿತ ಕೈಪಿಡಿ ಬಿಡುಗಡೆಗೊಳಿಸಿ ಆರೋಗ್ಯ ಮಾಹಿತಿ ನೀಡಿದರು.
ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ರೋಗಗಳು ಹರಡುವ ಕ್ರಮ ಮತ್ತು ಇವುಗಳನ್ನು ತಡೆಗಟ್ಟುವ ವಿಧಾನ ಕ್ರಮಗಳ ಬಗ್ಗೆ ಅವರು ವಿವರಿಸಿದರು.

ಸೊಳ್ಳೆಗಳ ನಿಯಂತ್ರಣ ಮಾಡುವ ಮೂಲಕ ನವೀನ ವಿಧಾನವನ್ನು ಅಳವಡಿಸಿ ಅನುಷ್ಠಾನಗೊಳಿಸುವ ಮೂಲಕ 2025 ರ ವೇಳೆಗೆ ಶೂನ್ಯ ಮಲೇರಿಯಾವನ್ನು ತಲುಪಲು ಆರೋಗ್ಯ ಇಲಾಖೆಯು ಕಾರ್ಯಯೋಜನೆ ರೂಪಿಸಿಕೊಂಡಿದೆ ಎಂದು ಡಾ ಸತೀಶ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಈ ವರ್ಷದಲ್ಲಿ ಈ ತನಕ 92 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಮಳೆ ಕ್ಷೀಣಿಸಿದಂತೆ ಡೆಂಗ್ಯೂ ರೋಗ ಕ್ರಮೇಣವಾಗಿ ಕ್ಷೀಣಿಸಿದೆ ಎಂದರು.
ಶಿಕ್ಷಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಕ್ಕಳು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಎಲ್ಲಾ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದರು.
ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ,
ಈ ಉಪಯುಕ್ತ ಆರೋಗ್ಯ ಕಾರ್ಯಕ್ರಮದಡಿ ಶಿಕ್ಷಕರು ಮಕ್ಕಳಿಗೆ ಸಾಂಕ್ರಾಮಿಕ ರೋಗ ಹರಡುವ ಎಚ್ಚರಿಕೆ ಹಾಗೂ ಇವುಗಳನ್ನು ತಡೆಗಟ್ಟಲು ಕೈಗೊಳ್ಳುವ ಕುರಿತು ಅವರಲ್ಲಿ ಆರೋಗ್ಯ ಅರಿವು ಮೂಡಿಸುವ ಮೂಲಕ ಸಮುದಾಯದಲ್ಲಿ ಆರೋಗ್ಯ ಅರಿವು ಮೂಡಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಾಗಾರ ಸಹಕಾರಿಯಾಗಿದೆ ಎಂದರು.
ಜಿಲ್ಲಾ ಕಸಾಪ ವತಿಯಿಂದ ಶಾಲಾ ಮಕ್ಕಳಿಗೆ ಕನ್ನಡ ಪರ ಚಟುವಟಿಕೆಗಳೊಂದಿಗೆ ಆರೋಗ್ಯ, ವೈದ್ಯಕೀಯ ಕ್ಷೇತ್ರಕ್ಕೆ ಪೂರಕವಾದ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಾಗುವುದು ಎಂದು ಕೇಶವಕಾಮತ್ ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ.ಬಿ.ಎಲ್. ಶ್ರೀನಿವಾಸ್, ರೋಗವಾಹಕ ಆಶ್ರಿತ ರೋಗಗಳ ಹರಡುವಿಕೆ ಮತ್ತು ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು.
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದ
ವಿರಾಜಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್ , ಮನೆ ಮತ್ತು ಸುತ್ತಮುತ್ತಲಿನ‌ ಸ್ಥಳಗಳಲ್ಲಿ ಟೈರುಗಳು, ತೆಂಗಿನ ಚಿಪ್ಪುಗಳಲ್ಲಿ ಹಾಗೂ ಮನೆಯ ನೀರಿನ ಮೂಲಗಳನ್ನು ಸೊಳ್ಳೆ ಪ್ರವೇಶಿಸದಂತೆ
ಸೊಳ್ಳೆಗಳ ಆಶ್ರಯ ತಾಣ ಗಳನ್ನು ನಿರ್ಮೂಲನೆ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದರು.
ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ರೋಗಗಳು ಹರಡುವ ಕ್ರಮ ಮತ್ತು ಇವುಗಳನ್ನು ತಡೆಗಟ್ಟುವ ವಿಧಾನ ಕ್ರಮಗಳ ಬಗ್ಗೆ ಅವರು ವಿವರಿಸಿದರು.
ಸ್ವಚ್ಛ ಪರಿಸರ ಹಾಗೂ ಆರೋಗ್ಯ ಅರಿವು ಕುರಿತು ಮಾಹಿತಿ ನೀಡಿದ ಸಂಪನ್ಮೂಲ ವ್ಯಕ್ತಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಕುರಿತು ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ವಿವರಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ , ಸ್ಲೈಡ್ಸ್ ಗಳ ಮೂಲಕ ಸೊಳ್ಳೆಗಳ ಹರಡುವಿಕೆ ಮತ್ತು
ಸೊಳ್ಳೆಗಳ ನಿಯಂತ್ರಣದ ಕುರಿತು ಹಾಗೂ ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ ಆರೋಗ್ಯ ರಕ್ಷಣೆ ಕುರಿತು
ಮಾಹಿತಿ ನೀಡಿದರು.

ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ವನಜಾಕ್ಷಿ, ಕಿರಿಯ ಆರೋಗ್ಯ ನಿರೀಕ್ಷಕ ಎಂ.ಪಿ.ಶಶಿಕಾಂತ್, ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಹೇಶ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಅನ್ರಿತಾ ಫುರ್ಟಾಡೋ, ಸಂಘದ ತಾಲ್ಲೂಕು ಘಟಕದ ಕೋಶಾಧಿಕಾರಿ ಡಿ.ಚಂದನ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ಸಿ.ಆರ್ ಪಿ ಬಿ.ಕೆ.ರಾಧಾ, ಬಿ.ಆರ್.ಪಿ ಗೀತಾಂಜಲಿ, ಇತರರು ಇದ್ದರು.
ಬಿ ಆರ್ ಪಿ ಗೀತಾಂಜಲಿ ಕಾರ್ಯಕ್ರಮ ನಿರ್ವಹಿಸಿದರು. ಆರೋಗ್ಯ ಸಹಾಯಕಿ ರುಕ್ಮಿಣಿ ಗೀತೆ ಹಾಡಿದರು.
ಕಾರ್ಯಾಗಾರದಲ್ಲಿ ವಿರಾಜಪೇಟೆ ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳ ವಿಜ್ಞಾನ ಹಾಗೂ ಸಂಪನ್ಮೂಲ ಶಿಕ್ಷಕರು ಪಾಲ್ಗೊಂಡಿದ್ದರು. 

Share. Facebook Twitter Pinterest LinkedIn Tumblr Email WhatsApp
Previous Article*ಮಕ್ಕಂದೂರು ಸಹಕಾರ ಸಂಘದ ಮಹಾಸಭೆ : ವಿವಿಧೋದ್ದೇಶ ಸಹಕಾರ ಸಂಘದಿಂದ ಸದಸ್ಯರಿಗೆ ವಿವಿಧ ಸೌಲಭ್ಯ : ಕೊಕ್ಕಲೇರ ಸುಜು ತಿಮ್ಮಯ್ಯ*
Next Article *ಐಗೂರು ಗ್ರಾ.ಪಂ ಅಧ್ಯಕ್ಷರಾಗಿ ಜಿ.ಕೆ.ವಿನೋದ್ ಆಯ್ಕೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.