Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಒಂದೇ ವೇದಿಕೆಯಡಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಆಚರಣೆಯಾಗಲಿ : ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ*
ಇತ್ತೀಚಿನ ಸುದ್ದಿಗಳು

*ಒಂದೇ ವೇದಿಕೆಯಡಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಆಚರಣೆಯಾಗಲಿ : ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ*

August 16, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಮಡಿಕೇರಿ ಆ.16 : ಪೊನ್ನಂಪೇಟೆ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳು ಒಂದೇ ವೇದಿಕೆಯಡಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವಂತೆ ಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ ನೀಡಿದರು.
ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು “ನಿನಾದ” ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,  ಜಿಲ್ಲೆಯ ಆಯಾಯ ತಾಲೂಕಿನ ಶಾಲಾ ಕಾಲೇಜುಗಳು ಒಂದೇ ವೇದಿಕೆಯಡಿಯಲ್ಲಿ ಸೇರಿ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ವಿವಿಧ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಂತಾಗಬೇಕು, ಇದರಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಇತರರಿಗೂ ಪಸರಿಸಲು ಸಹಕಾರಿಯಾಗುತ್ತದೆ ಹಾಗೂ ಸ್ವಾತಂತ್ರ್ಯ ದಿನಾಚರಣೆಗೂ ಒಂದು ಅರ್ಥ ಬರುತ್ತದೆ ಎಂದರು.
ಪೊನ್ನಂಪೇಟೆ ತಾಲೂಕಿನಲ್ಲಿರುವ ಶಾಲಾ ಕಾಲೇಜುಗಳು ಬೇರೆ ಬೇರೆ ಕಾರ್ಯಕ್ರಮ ಮಾಡುವ ಬದಲು ತಾಲೂಕು ಆಡಳಿತದ ಸಹಕಾರದಲ್ಲಿ ಒಂದೇ ವೇದಿಕೆಯಡಿಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸುವ ಮೂಲಕ ಅದ್ದೂರಿಯ ಹಾಗೂ ಅರ್ಥಪೂರ್ಣ ಕಾರ್ಯಕ್ರಮ ನೀಡಬೇಕಿದೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ನಮ್ಮ ಸ್ಥಳೀಯ ಜನಪ್ರತಿನಿಧಿಗಳು ಗಮನಹರಿಸಬೇಕಿದೆ ಎಂದರು.
ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ನಾವು ದುರ್ಬಳಕೆ ಮಾಡಿಕೊಳ್ಳದೆ ಸಮಾಜ ನಮಗೇನು ನೀಡಿದೆ ಎನ್ನುವುದಕ್ಕಿಂತ ನಾವು ಸಮಾಜಕ್ಕೆ ಏನೂ ನೀಡುತ್ತಿದ್ದೇವೆ ಎಂದು ಯೋಚಿಸಿ ಹೆಜ್ಜೆ ಹಾಕಬೇಕಿದೆ. ವಿಧ್ಯಾರ್ಥಿಗಳಿಗೆ ದೇಶದ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಪರಿಚಯದ ಜೊತೆ ಜೊತೆಗೆ ಆಯಾಯ ಪ್ರದೇಶದ ಸ್ಥಳೀಯ ಹೋರಾಟಗಾರರ ಪರಿಚಯ ಮಾಡಿಕೊಡಬೇಕಾಗಿದೆ, ಕೊಡಗಿನಲ್ಲಿ ಸ್ವಾತಂತ್ರ್ಯ ಕಿಚ್ಚನ್ನು ಹಚ್ಚಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದರು ಆದರೆ ಇವರು ಯಾರು ರಾಷ್ಟ್ರ ಮಟ್ಟದಲ್ಲಿ ದಾಖಲೆಯಾಗಿ ಉಳಿಯಲಿಲ್ಲ. ಮಡಿಕೇರಿ ಕೋಟೆ ಆವರಣದಲ್ಲಿ ಹಾರಾಡುತ್ತಿದ್ದ ಬ್ರಿಟಿಷ್ ಧ್ವಜವನ್ನು ಕಿತ್ತೆಸೆದು ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಕೀರ್ತಿ ಸ್ವಾತಂತ್ರ್ಯ ವೀರ ಮಲ್ಲೇಂಗಡ ಚೆಂಗಪ್ಪ ಮತ್ತು ಸಂಗಡಿಗರಿಗೆ ಸೇರುತ್ತದೆ. ಅಂದು ನ್ಯಾಯಾಧೀಶರ ಕುರ್ಚಿಯಲ್ಲಿಯೇ ಕುಳಿತು ನ್ಯಾಯಾಧೀಶರ ವಿರುದ್ಧವಾಗಿಯೇ ತೀರ್ಪನ್ನು ನೀಡಿದವರು ಮಲ್ಲೇಂಗಡ ಚೆಂಗಪ್ಪನವರು. ಇವರ ಸಾಹಸದ ಕಥೆಗಳು ಒಂದೇ ಎರಡೇ, ಕಲ್ಪನೆಗೆ ಸಿಗದಷ್ಟು ಸಾಹಸಗಳನ್ನು ಹೋರಾಟಗಳನ್ನು ಮಾಡಿದ್ದಾರೆ. ಹಾಗೇ ಹುಬ್ಬಳ್ಳಿ ಹುಲಿ ಎಂದು ಕರೆಸಿಕೊಳ್ಳುತ್ತಿದ್ದ ಚಕ್ಕೇರ ಮೊಣ್ಣಯ್ಯನವರ ಹೆಸರು ಕೇಳಿದರೆ ಬ್ರಿಟಿಷರಿಗೆ ನಡುಕ ಪ್ರಾರಂಭವಾಗುತಿತ್ತು, ಇವರ ಹೋರಾಟದ ಕಿಚ್ಚನ್ನು ಅರಿತ ಅಂದಿನ ಬ್ರಿಟಿಷ್ ಸರ್ಕಾರ ಇವರಿಗೆ ತಮಿಳುನಾಡಿನ ಸೇಲಂ ಕಾರ್ಖಾನೆಯಲ್ಲಿ 90ರೂಪಾಯಿಗೆ ಉನ್ನತ ಹುದ್ದೆಯನ್ನು ನೀಡಿದ್ದರೂ ಅಂದು ಒಬ್ಬ ಸ್ಕೂಲ್ ಹೆಡ್ ಮಾಸ್ಟರ್’ಗೆ ಕೇವಲ 18 ರೂಪಾಯಿ ಸಂಬಳವಿತ್ತು ಆದರೆ 90 ರೂಪಾಯಿ ದುಬಾರಿ ವೇತನವನ್ನು ತಿರಸ್ಕರಿಸಿ ಹೋರಾಟಕ್ಕೆ ಧುಮುಕಿದವರು ಚಕ್ಕೇರ ಮೊಣ್ಣಯ್ಯ, ಇದರಿಂದಲೇ ಅವರನ್ನು ಸುಧೀರ್ಘ ಅವಧಿಯವರೆಗೆ ಗಡಿಪಾರು ಮಾಡಿದ್ದರು ಕೂಡ ಮಾರುವೇಷದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಣ್ಣಯ್ಯನವರ ಸಾಹಸವನ್ನು ಮೆಚ್ಚಿ ಹುಬ್ಬಳಿಯ ಜನರೇ ಹುಬ್ಬಳ್ಳಿ ಹುಲಿ ಎಂದು ಕರೆದರು ಆದರೆ ಇದ್ಯಾವುದೂ ಪಠ್ಯದಲ್ಲಿ ದಾಖಲಾಗಲಿಲ್ಲ. ಇನ್ನೂ ತನ್ನ ಚಿಕ್ಕ ವಯಸ್ಸಿನಲ್ಲಿಯೇ ಸ್ವಾತಂತ್ರ್ಯದ ಕಿಚ್ಚನ್ನು ಮೈಗೂಡಿಸಿಕೊಂಡ ಕೊಳೇರ ಕಾವೇರಿಯ ಬಲಿದಾನ ಜಿಲ್ಲೆಯ ಮೊದಲ ಬಲಿದಾನ ಎಂದರೆ ತಪ್ಪಲ್ಲ. ಇಂತಹ ಅನೇಕ ಸ್ವಾತಂತ್ರ್ಯ ಹೋರಾಟಗಾರರು ನಮ್ಮ ಕಣ್ಣಿನ ಮುಂದೆ ಇದ್ದು ಹೋದರು ಅವರ ಹೆಸರು ಕೇವಲ ಕೆಲವೇ ಮಂದಿಯ ಬಾಯಿಯಲ್ಲಿ ಹಾಗೂ ಜನಾಂಗಕ್ಕೆ ಸೀಮಿತವಾಯಿತು ಹೊರತು ದಾಖಲೆಯಾಗಿ ಉಳಿಯಲಿಲ್ಲ.
 ಕೊಡಗಿನಲ್ಲಿ ಸ್ವಾತಂತ್ರ್ಯದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪದ್ಯಂಡ ಬೆಳ್ಳಿಯಪ್ಪ, ಕೊಳ್ಳಿಮಾಡ ಕರುಂಬಯ್ಯ, ಮಂಡೇಪಂಡ ಕಾರ್ಯಪ್ಪ, ಪಡೆಬೀರ ಮಾತಂಡ ಅಪ್ಪಚ್ಚು, ಅಬ್ದುಲ್ ಗಫರ್ ಖಾನ್, ಎಂ.ಎಂ ಸಿದ್ದಿಕ್, ಪಾರುವಂಗಡ ಕುಶಾಲಪ್ಪ, ಪುತ್ತಮನೆ ಗಣಪಮಯ್ಯ, ಮಂಡೀರ ಉತ್ತಯ್ಯ ಹೀಗೆ ಹೆಸರು ಹೇಳುತ್ತಾ ಹೋದರೆ ಕೊಡಗಿನಲ್ಲಿ ಸ್ವಾತಂತ್ರ್ಯದ ಕಿಚ್ಚು ಹೆಚ್ಚಾಗಿಯೇ ಇತ್ತು ಎಂದರೆ ತಪ್ಪಲ್ಲ. ಆದರೆ ಇದು ಒಂದು ಜನಾಂಗಕ್ಕೆ ಹಾಗೂ ಒಂದು ಪ್ರದೇಶಕ್ಕೆ ಸೀಮಿತವಾಯಿತು ಹೊರತು ವಿದ್ಯಾರ್ಥಿಗಳಿಗೆ ಸೇರಿದಂತೆ ಇತರರಿಗೆ ಪರಿಚಯ ಮಾಡುವ ಕೆಲಸವಾಗಲಿಲ್ಲ. ಇನ್ನಾದರೂ ಈ ನಿಟ್ಟಿನಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳು ಸ್ಥಳೀಯ ಹೊರಾಟಗಾರರ ಪರಿಚಯ ಮಾಡಿಕೊಡುವ ಮೂಲಕ ಅವರಿಗೆ ಗೌರವ ನೀಡಬೇಕಿದೆ ಹಾಗೂ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸಬೇಕಿದೆ ಎಂದು ಚಮ್ಮಟೀರ ಪ್ರವೀಣ್ ಉತ್ತಪ್ಪ ಹೇಳಿದ್ದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಿನಾದ ಶಾಲೆಯ ಆಡಳಿತಾಧಿಕಾರಿ ನಾಗೇಶ್ ಹಾಗೂ ಪ್ರಾಂಶುಪಾಲರಾದ ಅಮ್ಮತೀರ ಶಿಲ್ಪ ದೀಪಕ್ ಮಾತನಾಡಿದ್ದರು, ಶಿಕ್ಷಕಿ ಮತ್ರಂಡ ನೇತ್ರಾ ಸ್ವಾಗತಿಸಿ ನಿರೂಪಿಸಿದರು. ಶಿಕ್ಷಕಿ ದೀಪಿಕಾ ವಂದಿಸಿದ್ದರು. ಧ್ವಜಾರೋಹಣ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ದೆಶಭಕ್ತಿ ಗೀತೆ ಸೇರಿದಂತೆ ದೇಶಭಕ್ತಿಯ ವಿವಿಧ ಕಾರ್ಯಕ್ರಮಗಳು, ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಗಮನ ಸೆಳೆಯಿತು.
Share. Facebook Twitter Pinterest LinkedIn Tumblr Email WhatsApp
Previous Article*ಅಖಿಲ ಕೊಡವ ಸಮಾಜದಿಂದ ಪಾಡಿ ಶ್ರೀ ಇಗ್ಗುತ್ತಪ್ಪನಲ್ಲಿ ಮಳೆಗಾಗಿ ಪ್ರಾರ್ಥನೆ*
Next Article *ವಯಕೋಲ್ ಮದ್ರಸದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.