ಮಡಿಕೇರಿ ಆ.20 : ಇತ್ತೀಚೆಗೆ ನಾಪೋಕ್ಲು ವ್ಯಾಪ್ತಿಯಲ್ಲಿ ಸಾಕು ನಾಯಿಯಿಂದ ದಾಳಿಗೆ ಒಳಗಾದ ಆರೋಗ್ಯ ಇಲಾಖೆ ಸಿಬ್ಬಂದಿ ಕೆ.ಕೆ.ಭವ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸುವ ಮೂಲಕ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮಾನವೀಯತೆ ಮೆರೆದರು. ಇವರ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.









