Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನುಡಿದಂತೆ ನಡೆದ ಸರ್ಕಾರ : ನೂರು ದಿನದಲ್ಲಿ 4 ಗ್ಯಾರಂಟಿ ಜಾರಿ*
ಇತ್ತೀಚಿನ ಸುದ್ದಿಗಳು

*ನುಡಿದಂತೆ ನಡೆದ ಸರ್ಕಾರ : ನೂರು ದಿನದಲ್ಲಿ 4 ಗ್ಯಾರಂಟಿ ಜಾರಿ*

August 29, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.29 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ ಸರ್ಕಾರ ಯಶಸ್ಸಿನತ್ತ ಸಾಗಿದೆ.
ಇದೇ ಮೇ,20 ರಂದು ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಹಲವು ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲರ ಮನಃ ಗೆದ್ದಿದೆ.
ಶಕ್ತಿ ಯೋಜನೆ: ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆಯು ಜೂನ್, 11 ರಂದು ಪ್ರಥಮ ಯೋಜನೆಯಾಗಿ ಜಾರಿಗೊಂಡಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿರುವುದು ವಿಶೇಷವಾಗಿದೆ. ಕೊಡಗು ಜಿಲ್ಲೆಯಲ್ಲಿ ಆಗಸ್ಟ್, 27 ರವರೆಗೆ 11,10,983 ಮಂದಿ ಮಹಿಳೆಯರು ಬಸ್‍ನಲ್ಲಿ ಪ್ರಯಾಣ ಬೆಳೆಸಿದ್ದು, 4,10,54,728 ರೂ. ವೆಚ್ಚವನ್ನು ಸರ್ಕಾರ ಭರಿಸಿದೆ.
‘ಅನ್ನಭಾಗ್ಯ ಯೋಜನೆ’ : ಸರ್ಕಾರ ಬಿಪಿಎಲ್, ಎಎವೈ ಫಲಾನುಭವಿಗಳಿಗೆ ಈಗಾಗಲೆ ವಿತರಿಸುತ್ತಿರುವ 05 ಕೆ.ಜಿ ಅಕ್ಕಿಯೊಂದಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲು ಉದ್ದೇಶಿಸಿತ್ತು, ಆದರೆ ಅಕ್ಕಿಯ ಕೊರತೆ ಇರುವ ಕಾರಣ ಹೆಚ್ಚುವರಿ 05 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ 34 ರೂ. ನಂತೆ ಪ್ರತೀ ಫಲಾನುಭವಿಗೆ ಮಾಹೆಗೆ 170 ರೂ ನಂತೆ ಡಿ.ಬಿ.ಟಿ ಮೂಲಕ ಫಲಾನುಭವಿಗಳಿಗೆ ಜುಲೈ ತಿಂಗಳಲ್ಲಿ 4.24 ಕೋಟಿ ರೂ. ನಗದನ್ನು ವರ್ಗಾವಣೆ ಮಾಡಲಾಗಿದೆ. ಆಗಸ್ಟ್ ತಿಂಗಳಲ್ಲಿನ ನಗದು ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಗೃಹಜ್ಯೋತಿ: ಪ್ರತೀ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕಲ್ಪಿಸುವ ‘ಗೃಹಜ್ಯೋತಿ’ ಯೋಜನೆ ಇದೇ ಆಗಸ್ಟ್, 05 ರಂದು ಚಾಲನೆಗೊಂಡಿದೆ. ಸರ್ವರನ್ನು ಒಳಗೊಂಡ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ನುಡಿದಂತೆ ನಡೆಯುತ್ತಿರುವುದು ವಿಶೇಷವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1.30 ಲಕ್ಷ ಕ್ಕೂ ಹೆಚ್ಚು ಮಂದಿ ಗೃಹಜ್ಯೋತಿ ಯೋಜನೆಗೆ ಹೆಸರು ನೋಂದಾಯಿಸಿದ್ದು, ಈ ಯೋಜನೆಯಡಿ ರೂ 3 ಕೋಟಿಗೂ ಹೆಚ್ಚು ಹಣವನ್ನು ಸರ್ಕಾರ ಭರಿಸಿದೆ.
ಗೃಹಲಕ್ಷ್ಮಿ: ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂ. ನೀಡುವ ‘ಗೃಹ ಲಕ್ಷ್ಮಿ’ ಯೋಜನೆ ಇದೇ ಆಗಸ್ಟ್ 30 ರಿಂದ ಅಧಿಕೃತವಾಗಿ ಚಾಲನೆ ದೊರೆಯಲಿದೆ.
ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲಿದೆ.
ಆ ದಿಸೆಯಲ್ಲಿ ಸರ್ಕಾರ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದು, ನೋಂದಣಿ ಕಾರ್ಯ ಮುಂದುವರಿದಿದೆ. ಕೊಡಗು ಜಿಲ್ಲೆಯಲ್ಲಿ 1,31,863 ಗುರಿಯಲ್ಲಿ ಆಗಸ್ಟ್, 28 ರವರೆಗೆ 1,05122 ಮಂದಿ ಹೆಸರು ನೋಂದಾಯಿಸಿದ್ದು, ಶೇ.81.14 ರಷ್ಟು ಪ್ರಗತಿ ಸಾಧಿಸಲಾಗಿದೆ.
ಹಾಗೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರಾಜ್ಯದ ಮುಂಗಡ ಪತ್ರದಲ್ಲಿ ಹಣವನ್ನು ಕಾಯ್ದಿರಿಸಿದೆ. 5 ಗ್ಯಾರಂಟಿಗಳ ಅನುಷ್ಠಾನ ಇಡೀ ರಾಷ್ಟ್ರದಲ್ಲಿಯೇ ಹೆಸರು ಗಳಿಸಿ, ರಾಜ್ಯದ ಎಲ್ಲಾ ಬಡ ಜನರ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಹಾಗೆಯೇ ಸರ್ಕಾರ ಬಜೆಟ್‍ನಲ್ಲಿ ಪರಿಶಿಷ್ಟ ಪಂಗಡದ ಸೋಲಿಗ, ಜೇನುಕುರುಬ, ಕಾಡುಕುರುಬ, ಬೆಟ್ಟಕುರುಬ, ಕೊರಗ, ಇರುಳಿಗ ಮೊದಲಾದ ಆದಿವಾಸಿಗಳು ಮತ್ತು ಅಲೆಮಾರಿ ಜನಾಂಗದವರ ಅಭಿವೃದ್ಧಿಗೆ 50 ಕೋಟಿ ರೂ. ವನ್ನು ಸರ್ಕಾರ ಮುಂಗಡ ಪತ್ರದಲ್ಲಿ ಪ್ರಕಟಿಸಿದೆ.
‘ಬುಡಕಟ್ಟು ಆದಿವಾಸಿ ಪಂಗಡದವರಿಗೆ ನೀಡಲಾಗುತ್ತಿದ್ದ ಪೌಷ್ಠಿಕ ಆಹಾರ ಯೋಜನೆಯನ್ನು 6 ತಿಂಗಳಿನಿಂದ 12 ತಿಂಗಳವರೆಗೆ ವಿಸ್ತರಿಸಿರುವುದು ವಿಶೇಷವಾಗಿದೆ. ಇದರಿಂದ ಕೊಡಗಿನ ಆದಿವಾಸಿ ಜನರಿಗೆ ಬಹು ಉಪಯುಕ್ತವಾಗಲಿದೆ.’ ಅಮೃತ್ 2.0 ಯೋಜನೆಯಡಿ ನಗರ ನೀರು ಸರಬರಾಜು ಯೋಜನೆಗೆ ಹೆಚ್ಚಿನ ಹಣ ಕಾಯ್ದಿರಿಸಲಾಗಿದೆ.
ಹೀಗೆ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿರುವುದು ವಿಶೇಷವಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗಿನಲ್ಲಿ ಮುಂಗಾರು ಬೆಳೆ ಸಮೀಕ್ಷೆ ಆರಂಭ*
Next Article *ತೆರಿಗೆ ಪಾವತಿದಾರ ವರ್ತಕರಿಗೆ ಅನ್ಯಾಯ : ಸೂಕ್ತ ಕ್ರಮಕ್ಕೆ ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.