Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ತೊರೆನೂರು : ಸುತ್ತೂರಿನ 23ನೇ ಪೀಠಾಧಿಪತಿ ಡಾ.ರಾಜೇಂದ್ರ ಸ್ವಾಮೀಜಿ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು

*ತೊರೆನೂರು : ಸುತ್ತೂರಿನ 23ನೇ ಪೀಠಾಧಿಪತಿ ಡಾ.ರಾಜೇಂದ್ರ ಸ್ವಾಮೀಜಿ ಜಯಂತಿ ಆಚರಣೆ*

August 29, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲಗರ ಆ.29 : ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯವಾದ ಸೇವೆಗೈವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆಗಳ ಮೂಲಕ ತಮ್ಮ ಜೀವನವೇ ಒಂದು ಸಂದೇಶವೆಂಬಂತೆ ಬಾಳಿ ಬದುಕಿದ ಮಹಾ ತಪಸ್ವಿ ಸುತ್ತೂರಿನ 23ನೇ ಜಗದ್ಗುರು ಡಾ.ರಾಜೇಂದ್ರ ಮಹಾ ಸ್ವಾಮೀಜಿ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಸ್ಮರಿಸಿದರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಸುತ್ತೂರು ಮಠದ 23ನೇ ಪೀಠಾಧಿಪತಿ ಡಾ.ರಾಜೇಂದ್ರ ಸ್ವಾಮೀಜಿಯವರ 108ನೇ ಜಯಂತಿ ಅಂಗವಾಗಿ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಚನ ದಿನಾಚರಣೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನಾಡಿನ ಕ್ಷೇಮಕ್ಕೆ ಸದಾ ಮಿಡಿಯುತ್ತಿದ್ದ ಮಾತೃ ಹೃದಯದ ಕೋಮಲ ಮನಸ್ಸಿನ ಡಾ.ರಾಜೇಂದ್ರ ಸ್ವಾಮೀಜಿ ಹಲವು ವರ್ಷಗಳ ಕಾಲ ತಪಸ್ಸನ್ನಾಚರಿಸಿದ ಮಹಾ ತಪಸ್ವಿ ಎಂದು ಬಣ್ಣಿಸಿದರು.
ಬಡ ಮಕ್ಕಳ ಅನ್ನಕ್ಕಾಗಿ ರುದ್ರಾಕ್ಷಿ ಮಾಲೆಯ ಚಿನ್ನದ ಸರವನ್ನು ಮಾರಿದ, ಹೇಮ ಕಿರೀಟಧಾರಣೆ ಹಾಗೂ ಅಡ್ಡಪಲ್ಲಕ್ಕಿ ಉತ್ಸವವನ್ನು ನಿರಾಕರಿಸಿದ, ಜಾತಿ ಬೇಧ ಲೆಕ್ಕಿಸದೇ ಎಲ್ಲಾ ವರ್ಗಗಳ ಮಕ್ಕಳಿಗೆ ಶ್ರೀಮಠದಲ್ಲಿ ಅನ್ನಾಶ್ರಯ ನೀಡಿ ಕೋಟ್ಯಾಂತರ ಮಂದಿಯ ಬದುಕಿಗೆ ಬೆಳಕಾದ ಮಹಾ ಯೋಗಿ ಎಂದು ಸದಾಶಿವ ಸ್ವಾಮೀಜಿ ಬಣ್ಣಿಸಿದರು.
ಶ್ರೀಗಳಲ್ಲಿ ಮಿಳಿತವಾಗಿದ್ದ ಸಮಾಜೋಧಾರ್ಮಿಕ ಭಾವನೆ, ಸಾಮಾಜಿಕ ಕಳಕಳಿ, ಬಡವರ ಬಗೆಗಿನ ಅನುಕಂಪದ ಕೃಷಿಯೇ ಜೆಎಸ್‍ಎಸ್ ಮಹಾ ವಿದ್ಯಾಪೀಠ ನಾಡಿನಾದ್ಯಂತ ಬೆಳೆದು ನಿಲ್ಲಲು ಕಾರಣವಾಯಿತು ಎಂದು ಸದಾಶಿವ ಸ್ವಾಮೀಜಿ ಹೇಳಿದರು.
ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದ ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಅವರು ಮಾತನಾಡಿ, ಬಡತನ ಮತ್ತು ದಟ್ಟ ದಾರಿದ್ರ್ಯ ತುಂಬಿದ ಕಾಲಘಟ್ಟದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಜನ ಕಲ್ಯಾಣಕ್ಕಾಗಿ ಕಾಯಕ ಮಾಡಿ ಸಮಾಜದ ಕಲ್ಯಾಣಕ್ಕೆ ಮುಂದಡಿ ಇಟ್ಟವರು ರಾಜೇಂದ್ರ ಸ್ವಾಮೀಜಿಗಳು.
ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ ಅಳಿವಿನಂಚಿನಲ್ಲಿದ್ದಾಗ ಅದರ ಪೋಷಣೆಗಾಗಿ ರಾಜೇಂದ್ರ ಸ್ವಾಮೀಜಿಗಳು ವಚನಗಳ ಪುಸ್ತಕಗಳನ್ನು ಅಚ್ಚು ಹಾಕಿಸಿ ಪ್ರಸಾರ ಮಾಡಿದ ಮಹಾಮುರುಷ ರಾಜೇಂದ್ರ ಸ್ವಾಮೀಜಿ ಎಂದು ಶಿವಪ್ಪ ಸ್ಮರಿಸಿದರು.
ಪ್ರಾಸ್ತಾವಿಕ ನುಡಿಗಳಾಡಿದ ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಅಪಾರ ಸಾಧನೆಗಳನ್ನು ಮಾಡಿದ ಡಾ.ರಾಜೇಂದ್ರ ಸ್ವಾಮಿಗಳದು ಹನ್ನೆರಡನೇ ಶತಮಾನದ ಬಸವೇಶ್ವರರ ಕಾಯಕದಾಸೋಹಾದಿ ತತ್ವಗಳ ಅನುಷ್ಠಾನಗೊಳಿಸಿದ ಅಧುನಿಕ ಶರಣ ಶ್ರೇಷ್ಠರಾಗಿ ಮರೆಯಾಗಿದ್ದಾರೆ.
ಆದರೆ ಅವರು ಸಾಹಿತ್ಯ ಹಾಗೂ ಸಾಂಸ್ಕೃತಿಕ ರಂಗದ ಉದ್ದೀಪನಕ್ಕೆ ವಚನ ಸಾಹಿತ್ಯ ಪರಿಷತ್ತನ್ನು ಕಟ್ಟುವ ಮೂಲಕ ಬಸವಾದಿ ಶರಣರ ಸಂದೇಶಗಳನ್ನು ನಾಡಿನಾದ್ಯಂತ ಪಸರಿಸಲು ಕಾರಣರು. ಹಾಗಾಗಿ ಶ್ರೀಗಳ ಸ್ಮರಣೆಯನ್ನು “ವಚನ ದಿನೋತ್ಸವ” ವಾಗಿ ಆಚರಿಸಲಾಗುತ್ತಿದೆ ಎಂದರು.
ತೊರೆನೂರು ಸರ್ಕಾರಿ ಶಾಲಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಿ.ಆರ್.ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ವಚನ ಸಾಹಿತ್ಯದ ಕುರಿತು ಮಾತನಾಡಿದರು.
ಶಿಕ್ಷಕ ಟಿ.ಬಿ.ಮಂಜುನಾಥ್ ನಿರೂಪಿಸಿದರು. ಶಿಕ್ಷಕಿ ಎಂ.ಯು.ದಿವ್ಯಾ ಸ್ವಾಗತಿಸಿದರು. ಎಸ್.ಕೆ.ಶೈಲಾ ವಂದಿಸಿದರು. ವಿದ್ಯಾರ್ಥಿಗಳಿಂದ ವಚನಗಾಯನ ನಡೆಯಿತು.

Share. Facebook Twitter Pinterest LinkedIn Tumblr Email WhatsApp
Previous Article*ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ ಮೈಸೂರಿಗೆ ಸ್ಥಳಾಂತರ*
Next Article *ಸೆ.5 ರಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ : ಅಭಿನಂದನಾ ಸಮಾವೇಶ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.