Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೆ.8 ರ ವರೆಗೆ 38ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ*
ಇತ್ತೀಚಿನ ಸುದ್ದಿಗಳು

*ಸೆ.8 ರ ವರೆಗೆ 38ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ*

August 30, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.30 :  ಹದಿನೆಂಟು ವರ್ಷ ವಯಸ್ಸಿನ ಮೇಲ್ಪಟ್ಟವರು ನೋಂದಣಿ ಪತ್ರವನ್ನು ತುಂಬುವ ಮೂಲಕ ಅಥವಾ ಜೀವ ಸಾರ್ಥಕತೆ ವೆಬ್‍ಸೈಟ್ https://www.jeevasarthakathe.karnataka.gov.in ಮೂಲಕ ನೇತ್ರದಾನಿಗಳಾಗಲು ನೋಂದಣಿ ಮಾಡಿಸಬಹುದು. ಆದರೆ ನೇತ್ರದಾನಕ್ಕೆ ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ನೇತ್ರದಾನ ಮಾಡಲು ಲಿಂಗ, ಶರೀರದ ಖಾಯಿಲೆಗಳಾದ ಸಕ್ಕರೆ, ರಕ್ತದ ಒತ್ತಡ ಮತ್ತು ಕಣ್ಣಿನ ರೋಗಗಳಾದ ದೃಷ್ಠಿದೋಷ, ಪೊರೆ, ಅಕ್ಷಿಪಟಲ ಕೀಳುವಿಕೆ, ಯಾವುದೇ ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುವಿಕೆ ಇವುಗಳ ಅಡ್ಡಿಯಿಲ್ಲದೆ ಕಣ್ಣಿನ ಪಾರದರ್ಶಕ ಪಟಲ ಆರೋಗ್ಯವಾಗಿದ್ದಲ್ಲಿ ನೇತ್ರದಾನ ಮಾಡಬಹುದು.
ರೇಬಿಸ್, ಸಿಫಿಲಿಸ್, ಏಡ್ಸ್, ಹೆಪಟೈಟಿಸ್ ಮುಂತಾದ ಕಾಯಿಲೆಗಳಿಂದ ಸಾಯುವ ವ್ಯೆಕ್ತಿ ನೇತ್ರದಾನ ಮಾಡುವಂತಿಲ್ಲ
ಮರಣ ಹೊಂದಿದವರು ನೇತ್ರದಾನಕ್ಕೆ ನೋಂದಣಿ ಮಾಡಿಸದಿದ್ದಲ್ಲಿ ಅವರ ಬಂಧುಗಳು ಮರಣ ಹೊಂದಿದವರ ನೇತ್ರದಾನಕ್ಕೆ ಸಮ್ಮತಿ ನೀಡಬಹುದು.
ಮರಣ ಹೊಂದಿದವರ ನೇತ್ರದಾನ ಮಾಡಲು ಹತ್ತಿರದ “ನೇತ್ರ ಭಂಡಾರ” / ನೇತ್ರ ತಜ್ಞರನ್ನು ಯಾವುದೇ ಸಮಯದಲ್ಲಾದರೂ ಸಂಪರ್ಕಿಸಬಹುದು. ಮರಣ ಹೊಂದಿದ 6 ಗಂಟೆಗಳಲ್ಲಿ ನೇತ್ರದಾನ ಮಾಡಬೇಕು. ಅಲ್ಲಿಯವರೆಗೂ ಮರಣ ಹೊಂದಿದವರ ರೆಪ್ಪೆಗಳನ್ನು ಮುಚ್ಚಿರಬೇಕು.
ನೇತ್ರಗಳನ್ನು ತೆಗೆಯಲು 15-20 ನಿಮಿಷಗಳು ಸಾಕು. ಇದನ್ನು ಮರಣ ಹೊಂದಿದವರು ಇದ್ದ ಜಾಗದಲ್ಲೇ ದಿನದ ಯಾವುದೇ ಸಮಯದಲ್ಲಾದರೂ ಮಾಡಲಾಗುವುದು. ಮತ್ತು ಇದರಿಂದ ಮುಖ ವಿಕಾರವಾಗುವುದಿಲ್ಲ ಹಾಗೂ ಇದಕ್ಕೆ ದಾನಿಗಳ ಬಂಧುಗಳು ಯಾವ ಖರ್ಚನ್ನು ಭರಿಸಬೇಕಿಲ್ಲ.
ನಮ್ಮ ದೇಶದಲ್ಲಿ ಅಂದಾಜು 15 ಲಕ್ಷ ಮಂದಿ ಕಣ್ಣಿನ ಪಾರದರ್ಶಕ ಪಟಲದ ತೊಂದರೆಯಿಂದ ಉಂಟಾದ ಕುರುಡುತನದಿಂದ ನರಳುತ್ತಿದ್ದಾರೆ. ಇದನ್ನು ಪಾರದರ್ಶಕ ಪಟಲದ ಕಸಿ ಮಾಡುವುದರ ಮೂಲಕ ಗುಣ ಪಡಿಸಬಹುದು.
ಯಾವುದೇ ನೇತ್ರ ಭಂಡಾರದಲ್ಲಿ ನೋಂದಣಿ ಮಾಡಿಸಿದ್ದರೂ ಮರಣ ಹೊಂದಿದ ಸ್ಥಳಕ್ಕೆ ಹತ್ತಿರದಲ್ಲಿರುವ ನೇತ್ರ ಭಂಡಾರಕ್ಕೆ ನೇತ್ರಗಳನ್ನು ನೀಡಬಹುದು. ನೇತ್ರ ಭಂಡಾರಗಳ ಬಗ್ಗೆ ಹೆಚ್ಚಿನ ಮಾಹಿತಿಗೆ 104 ಸಹಾಯವಾಣಿಗೆ ಕರೆ ಮಾಡಿ ತಿಳಿದು ಕೊಳ್ಳಬಹುದು.
ದಾನ ಮಾಡಿದ ಕಣ್ಣುಗಳನ್ನು ಮರಣದ ನಂತರವೇ ತೆಗೆಯಬೇಕು. ಜೀವಂತ ವ್ಯಕ್ತಿಯ ಕಣ್ಣುಗಳನ್ನು ದಾನಕ್ಕಾಗಿ ತೆಗೆಯಬಾರದು. ಯಾವುದೇ ಕೃತಕ ಅಥವಾ ಪ್ರಾಣಿಯ ಕಣ್ಣು ಮನುಷ್ಯನ ಕಣ್ಣಿಗೆ ಬದಲಾಗಿ ಉಪಯೋಗಿಸುವುದಿಲ್ಲ. ಅಂತರಾಷ್ಟ್ರೀಯ ನಿಯಮಗಳನುಸಾರ ದಾನಿಗಳ ಹಾಗೂ ದಾನ ಪಡೆದವರ ಹೆಸರುಗಳನ್ನು ನೇತ್ರ ಭಂಡಾರದಲ್ಲಿ ಗೌಪ್ಯವಾಗಿರಿಸಲಾಗುವುದು.
ನೇತ್ರದಾನಕ್ಕೆ ನೋಂದಣಿ ಮಾಡಿಸುವ ಮೊದಲು, ವಿಷಯದ ಬಗ್ಗೆ ನಿಮ್ಮ ಕುಟುಂಬದವರ ಸ್ನೇಹಿತರ ವಕೀಲರ ಹಾಗೂ ವೈದ್ಯರೊಡನೆ ಚರ್ಚಿಸುವುದು ಸೂಕ್ತ. ಏಕೆಂದರೆ ನಿಮ್ಮ ನೇತ್ರದಾನ ನಿಮ್ಮ ಮನೆಯವರ ಅರಿವಿಲ್ಲದೇ ಅಥವಾ ಅವರ ಮರೆವಿನಿಂದ ಸಾಧ್ಯವಾಗದೇ ಇರಬಹುದು.
ನಿಮ್ಮ ಸ್ನೇಹಿತರನ್ನು ಹಾಗೂ ಬಂಧುಗಳನ್ನು ನೇತ್ರದಾನಕ್ಕೆ ಪ್ರೇರೇಪಿಸಿ ಯಾವುದೇ ವ್ಯಕ್ತಿಯ ಸಾವಿನ ಸಂದರ್ಭದಲ್ಲಿ ನೇತ್ರದಾನಕ್ಕೆ ಅವಕಾಶವಿದೆಯೇ ಎಂದು ವಿಚಾರಿಸಿ ಇದರ ಬಗ್ಗೆ ಹತ್ತಿರದ ನೇತ್ರ ಭಂಡಾರವನ್ನು ಸಂಪರ್ಕಿಸಿ
ನೇತ್ರದಾನದ ನೋಂದಣಿ ಚೀಟಿಯನ್ನು ನಿಮ್ಮ ವೈದ್ಯರಿಂದ ಪೂರ್ಣಗೊಳಿಸಿ ಯಾವಾಗಲೂ ನಿಮ್ಮ ಕಿಸೆಯಲ್ಲೇ ಇಡಿ. ನಿಮ್ಮ ವಿಳಾಸ ಬದಲಾದಲ್ಲಿ ಅದನ್ನು ನೇತ್ರ ಭಂಡಾರಕ್ಕೆ ತಿಳಿಸಿ, ನಿಮ್ಮ ನೋಂದಣಿ ಸಂಖ್ಯೆಯನ್ನು ಪತ್ರದಲ್ಲಿ ನಮೂದಿಸುವುದನ್ನು ಮರೆಯಬೇಡಿ.
“ಒಬ್ಬ ವ್ಯಕ್ತಿಯು ದಾನ ಮಾಡಿದ ನೇತ್ರಗಳು ಇಬ್ಬರು ಕಾರ್ನಿಯಾ ಅಂಧರಿಗೆ ದೃಷ್ಠಿ ನೀಡುತ್ತದೆ” ನಿಮ್ಮ ನೇತ್ರಗಳನ್ನು ದಾನ ಮಾಡಿ ಅಂಧಕಾರದಲ್ಲಿ ಇರುವವರಿಗೆ ದೃಷ್ಠಿ ನೀಡಿ.
ಪ್ರಕಟಣೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ರಿ) ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಮಡಿಕೇರಿ ಕೊಡಗು ಜಿಲ್ಲೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08272-223444.

Share. Facebook Twitter Pinterest LinkedIn Tumblr Email WhatsApp
Previous Article*ಆ.31 ರಂದು ನುಲಿಯ ಚಂದಯ್ಯ ಜಯಂತಿ*
Next Article *ವಿರಾಜಪೇಟೆ : ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಎನ್‍ಎಸ್‍ಎಸ್ ಪಾತ್ರ ಮಹತ್ತರ : ರೆ.ಫಾ.ಐಸಾಕ್ ರತ್ನಕರ್*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.