Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲಿಕೆಯೊಂದಿಗೆ ಮಾತ್ರ ಕೌಶಲ್ಯ ಸಾಧ್ಯ : ಪ್ರೊ.ಅಶೋಕ ಸಂಗಪ್ಪ ಆಲೂರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲಿಕೆಯೊಂದಿಗೆ ಮಾತ್ರ ಕೌಶಲ್ಯ ಸಾಧ್ಯ : ಪ್ರೊ.ಅಶೋಕ ಸಂಗಪ್ಪ ಆಲೂರು*

ಸೆಪ್ಟೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.6 :  ಮುಂದಿನ ಶೈಕ್ಷಣಿಕ ವರ್ಷದಿಂದ ಕೊಡಗು ವಿಶ್ವವಿದ್ಯಾಲಯವು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುವ ಯೋಜನೆಯನ್ನು ರೂಪಿಸಿಕೊಂಡಿದೆ. ಮಾತ್ರವಲ್ಲ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತಲಾ ಒಂದೊಂದು ಲಾಂಗ್ವೇಜ್ ಲ್ಯಾಬ್ ಗಳನ್ನು ರೂಪಿಸಲಾಗುವುದು. ಜೊತೆಯಲ್ಲಿ ಕರ್ನಾಟಕ ಸರ್ಕಾರದ ಕಲಿಕೆಯೊಂದಿಗೆ ಕೌಶಲ್ಯ ಎಂಬ ಯೋಜನೆಯನ್ನು ಕೊಡಗು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗಾಗಿ ಪರಿಚಯಿಸಲಾಗುವುದು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ನುಡಿದರು.

ಕರ್ನಾಟಕ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಫೋರ್ಕ್ ಟೆಕ್ನೊಲಜಿ ಹಾಗೂ ಕೊಡಗು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ವಾರಗಳ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ  ಅವರು, ಅಧ್ಯಾಪಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ದಿನಾಚರಣೆ ಕೇವಲ ಒಂದು ದಿನದ ಸಂಭ್ರಮವಾಗಬಾರದು. ಬದಲಾಗಿ ವಿದ್ಯಾರ್ಥಿಗಳು ನಮ್ಮನ್ನು ಸದಾ ನೆನಪಿಸಿಕೊಳ್ಳುವಂತಹ ನೆಲೆಯಲ್ಲಿ ನಮ್ಮ ಕಾರ್ಯಚಟುವಟಿಕೆಗಳು ಇರಬೇಕು. 21 ನೇ ಶತಮಾನದ ಆಧುನಿಕತೆಗೆ ಅಧ್ಯಾಪಕರು ತೆರದುಕೊಳ್ಳಬೇಕು. ಆ ಮೂಲಕ ಹೊಸ ಹೊಸ ಕಲೆ, ತಂತ್ರಜ್ಞಾನಗಳನ್ನು ಅವರ ಅಧ್ಯಯನ, ಅಧ್ಯಾಪನ ಮತ್ತು ಕಲಿಕೆಯಲ್ಲಿ ಬಳಸುವ ಅವಕಾಶ ಸಾಕಷ್ಟು ಇದೆ ಎಂದು ಅಭಿಪ್ರಾಯ ಪಟ್ಟರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೊಡಗು ವಿಶ್ವವಿದ್ಯಾಲಯದ ಪರಿಕ್ಷಾಂಗ ಕುಲಸಚಿವ  ಡಾ. ಸೀನಪ್ಪ, ಭಾರತದ ಮಾಜಿ ರಾಷ್ಟಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸಾಧನೆಯ ಹಾದಿಯನ್ನು ಮೆಲುಕುಹಾಕಿದರು. ಅವರಂತಯೇ ಹಂತ ಹಂತವಾಗಿ ಉನ್ನತಿಯನ್ನು ನಾವು ಸಹ ಗಳಿಸಿಕೊಳ್ಳಬೇಕಾಗಿದೆ. ಪರಂಪರೆ ಮತ್ತು ಆಧುನಿಕ ಅನುಸಂಧಾನದ ಮೂಲಕ ಅತ್ಯುತ್ತಮ ಗುರುಪರಂಪರೆಯನ್ನು ಕಟ್ಟುವ ಕೆಲಸವನ್ನು ನಾವೆಲ್ಲರೂ ಸೇರಿ ಒಟ್ಟಾಗಿ ಮಾಡಬೇಕಾಗಿದೆ ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲ  ಮೇಜರ್ ಪ್ರೊ. ರಾಘವ ಬಿ ಅವರು ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕ ಹುದ್ದೆ ಪವಿತ್ರವಾದದ್ದು. ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಶಿಕ್ಷಕರಿದ್ದಾರೆ. ಬೌದ್ಧಿಕ ಪರಿವರ್ತನೆಯೊಂದಿಗೆ ಶಿಕ್ಷಕರಿಂದ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಎರಡು ವಾರಗಳ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಕೌಶಲ್ಯ ಅಧಾರಿತ ಚಟುವಟಿಕೆಗಳನ್ನು ರೂಪಿಸಲಾಯಿತು. ಕೃತಕ ಬುದ್ಧಿಮತ್ತೆಯ ತಿಳಿವನ್ನು ವಿಸ್ತರಿಲಾಯಿತು. ಸುಮಾರು 50 ಮಂದಿ ಕೊಡಗು ವಿಶ್ವವಿದ್ಯಾಲಯದ ಅಧೀನದ ಘಟಕ, ಸರಕಾರಿ, ಖಾಸಗಿ ಕಾಲೇಜುಗಳ ಅಧ್ಯಾಪಕರು ಎರಡು ವಾರಗಳ ಕಾಲ ಆಧುನಿಕ ತಂತ್ರಜ್ಞಾನವನ್ನು ಅಧ್ಯಾಪನದಲ್ಲಿ ಅಳವಡಿಸಿಕೊಳ್ಳುವ ಕ್ರಿಯಾಶೀಲ ಚಟುವಟಿಕೆಗಳನ್ನು ರೂಪಿಸುವ ಕುರಿತು ತರಬೇತಿಯನ್ನು ಪಡೆದುಕೊಂಡರು.

ಆಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಅಧ್ಯಾಪಕರು ಅತ್ಯುತ್ತಮವಾಗಿ ತಮ್ಮ ತರಬೇತಿಯನ್ನು ಪೂರೈಸಿಕೊಂಡಿದ್ದಾರೆ ಎಂದು ತಂತ್ರಜ್ಞಾನ ಪರಿಣಿತ ತರಬೇತುದಾರ ಅಭಿಷೇಕ್ ರಾಜೇಂದ್ರ  ನುಡಿದರು.

ಹಿಂದಿ ವಿಭಾಗದ ಡಾ. ಶ್ರೀಧರ ಹೆಗಡೆ ಅವರು ನಿರೂಪಿಸಿ, ಕನ್ನಡ ವಿಭಾಗದ ಡಾ. ಎನ್.ವಿ.ಕರುಣಾಕರ   ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.