Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೆ.11 ರಿಂದ ಮಿಷನ್ ಇಂದ್ರಧನುಷ್ 5.0 ಅಭಿಯಾನ : 5 ವರ್ಷದೊಳಿಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕಾ ಡೋಸ್ ತಲುಪಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*
ಇತ್ತೀಚಿನ ಸುದ್ದಿಗಳು

*ಸೆ.11 ರಿಂದ ಮಿಷನ್ ಇಂದ್ರಧನುಷ್ 5.0 ಅಭಿಯಾನ : 5 ವರ್ಷದೊಳಿಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕಾ ಡೋಸ್ ತಲುಪಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*

September 6, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.06 : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್‍ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ 2 ಸುತ್ತಿನ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ ಹೊಸ ಲಸಿಕೆಗಳ ಲಸಿಕಾ ಪ್ರಗತಿಯನ್ನು ಹೆಚ್ಚಿಸುವುದು ಪ್ರಮುಖ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಮುಂದಾಗುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ವಲಸಿಗ 5 ವರ್ಷದೊಳಗಿನ ಮಕ್ಕಳು, ಗರ್ಭಿಣೀಯರನ್ನು ಪತ್ತೆ ಹಚ್ಚಿ ಅರ್ಹರಿಗೆ ಲಸಿಕೆ ನೀಡುವಂತಾಗಬೇಕು. ತಾಲ್ಲೂಕುವಾರು ಮಾಹಿತಿಯನ್ನು ನಿಖರವಾಗಿ ಒದಗಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾಹಿತಿ ನೀಡಿ ಮಿಷನ್ ಇಂದ್ರಧನುಷ್ ಅನುಷ್ಠಾನ ಸಂಬಂಧಿಸಿದಂತೆ ಮೊದಲ ಸುತ್ತಿನಲ್ಲಿ ಶೇಕಡವಾರು ಪ್ರಗತಿ ಸಾಧಿಸಲಾಗಿದೆ. ಸೆಪ್ಟೆಂಬರ್, 11 ರಿಂದ 16 ರವರೆಗೆ ಎರಡನೇ ಸುತ್ತಿನಲ್ಲಿ ಮಿಷನ್ ಇಂದ್ರಧನುಷ್ ಲಸಿಕಾಕರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣೀಯರು ಮತ್ತು 5 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಅಧಿಕಾರಿ ಮತ್ತು ಆಶಾ ಕಾರ್ಯಕರ್ತರಿಗೆ ನೀಡುವಂತಾಗಬೇಕು. ಮನೆ ಮನೆಗೆ ಭೇಟಿ ಮಾಡಿ ಲಸಿಕೆ ಪಡೆಯಬೇಕಿರುವ, ಇದುವರೆಗೆ ಪಡೆಯದಿರುವ ಬಗ್ಗೆ ಖಾತರಿಪಡಿಸಿಕೊಳ್ಳುವಂತೆ ಕೋರಿದರು.
ವಿಶೇಷವಾಗಿ 2 ರಿಂದ 5 ವರ್ಷದೊಳಗಿನ ಮಕ್ಕಳು ದಡಾರ, ರುಬೆಲ್ಲಾ-2, ಡಿಬಿಟಿ ಬೂಸ್ಟರ್, ಒಪಿವಿ ಬೂಸ್ಟರ್ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದರು.
ಗರ್ಭಿಣಿ ಮಹಿಳೆಯರ ಟಿಡಿ ಲಸಿಕಾಕರಣ ಮತ್ತು ಮಕ್ಕಳ ಲಸಿಕಾಕರಣದ ಕುರಿತು ಮಾಹಿತಿ ನೀಡುವುದು. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ತೋಟದ ಮನೆಗಳು, ವಲಸಿಗರು, ಹೀಗೆ ಹಲವು ಅರ್ಹರು ಲಸಿಕಾಕರಣದಿಂದ ಬಿಟ್ಟು ಹೋಗಿದ್ದರೆ ಮಾಹಿತಿ ನೀಡುವುದು. ಅಭಿಯಾನದ ಸಮಯದಲ್ಲಿ ಅಂಗನವಾಡಿ ಕೇಂದ್ರ ತೆರೆಯಬೇಕು ಎಂದು ಡಾ.ಆನಂದ್ ಅವರು ಹೇಳಿದರು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ತೀವ್ರತರವಾದ ಇಂದ್ರಧನುಷ್ 5.0 ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸುವುದು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳನ್ನು ಗುರುತಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಾಗಬೇಕು. ಜೊತೆಗೆ ಸ್ಥಳೀಯವಾಗಿ ಟಾಮ್ ಟಾಮ್ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದರು.
ಲಸಿಕೆ ನಿರಾಕರಿಸುವ ಕುಟುಂಬಗಳನ್ನು ಮನವೊಲಿಸಿ ಲಸಿಕಾಕರಣಕ್ಕೆ ಕೋರುವುದು. ಅಗತ್ಯ ಜಾಗೃತಿ ಮೂಡಿಸುವುದು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಪಡೆ ಸಮಿತಿ ರಚಿಸಿ ಲಸಿಕಾಕರಣಕ್ಕೆ ಹೆಚ್ಚಿನ ಜಾಗೃತಿ ಮೂಡಿಸುವುದು, ಶಿಕ್ಷಣ ಇಲಾಖೆ ವತಿಯಿಂದ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳನ್ನು ಲಸಿಕೆ ಪಡೆಯಲು ಪೋಷಕರಿಗೆ ಮಾಹಿತಿ ನೀಡುವುದು. ವೈದ್ಯಕೀಯ ಇಲಾಖೆಯಿಂದ ಇಂದ್ರಧನುಷ್ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವುದು, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಮೂಲಕ ಲಸಿಕಾಕರಣದ ಕುರಿತು ಜಾಗೃತಿ ಮೂಡಿಸುವುದು ಹೀಗೆ ಎಲ್ಲಾ ಇಲಾಖೆಗಳ ಸಹಕಾರ ಪಡೆದು ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಗತಿಗೆ ಶ್ರಮಿಸಲಾಗುವುದು ಎಂದು ಡಾ.ಆನಂದ್ ಅವರು ಮಾಹಿತಿ ನೀಡಿದರು.
‘ಮಿಷನ್ ಇಂದ್ರಧನುಷ್ ಐಎಂಐ ಕಾರ್ಯಕ್ರಮದಿಂದ ಸರ್ಕಾರ ಹೊಸ ಆ್ಯಪ್ ಯು-ವಿನ್  (U-WIN )  ಬಿಡುಗಡೆ ಮಾಡಿದ್ದು, ಇದರಲ್ಲಿ ನೋಂದಾಯಿಸಿಕೊಂಡು ಲಸಿಕೆ ಪಡೆದ ನಂತರ ಪ್ರಮಾಣ ಪತ್ರ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.’

ಕೊಡಗು ಜಿಲ್ಲೆಯಲ್ಲಿ 8 ದಡಾರ ಮತ್ತು 1 ರುಬೆಲ್ಲಾ ಪ್ರಕರಣ ವರದಿಯಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ ಎಂದು ಡಾ.ಆನಂದ್ ಅವರು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಆರೋಗ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ಸುದೀರ್ ನಾಯಕ್, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಡಾ.ಚೇತನ್, ಡಾ.ಶ್ರೀನಿವಾಸ್, ಡಾ.ಪುರುಷೋತ್ತಮ, ನಗರಸಭೆ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಸೆ.13 ಮತ್ತು 15 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*
Next Article *ಮಡಿಕೇರಿ : ಸೆ.7 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.