Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಸ್ತೆ ಅವ್ಯವಸ್ಥೆ ವಿರುದ್ಧ ಕೊರವೇ ಪ್ರತಿಭಟನೆ : ಗುಣಮಟ್ಟದ ಕಾಮಗಾರಿ ಕುರಿತು ಶಾಸಕರ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಸ್ತೆ ಅವ್ಯವಸ್ಥೆ ವಿರುದ್ಧ ಕೊರವೇ ಪ್ರತಿಭಟನೆ : ಗುಣಮಟ್ಟದ ಕಾಮಗಾರಿ ಕುರಿತು ಶಾಸಕರ ಭರವಸೆ*

ಅಕ್ಟೋಬರ್ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.3 : ಮಡಿಕೇರಿ ನಗರದ ರಸ್ತೆಗಳ ಅಭಿವೃದ್ಧಿಗೆ ನಗರಸಭೆ ಯಾವುದೇ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿ ಕೊಡಗು ರಕ್ಷಣಾ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು. ಸ್ಥಳಕ್ಕೆ ಆಗಮಿಸಿದ ಶಾಸಕ ಡಾ.ಮಂತರ್ ಗೌಡ ಅವರು ರಸ್ತೆ ದುರಸ್ತಿ ಸಂದರ್ಭ ಗುಣಮಟ್ಟ ಕಾಯ್ದುಕೊಳ್ಳುವ ಭರವಸೆ ನೀಡಿದರು.
ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಅವರ ನೇತೃತ್ವದಲ್ಲಿ ನಗರದ ಗಾಂಧಿ ಮೈದಾನದಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಗರಸಭೆ ವಿರುದ್ಧ ಘೋಷಣೆಗಳನ್ನು ಕೂಗಿದರು. ನಗರದ ಜನತೆಗೆ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪವನ್ ಪೆಮ್ಮಯ್ಯ ಮಾತನಾಡಿ ನಗರದ ಎಲ್ಲಾ ರಸ್ತೆಗಳು ಹದಗೆಟ್ಟು ಹೊಂಡ ಗುಂಡಿಗಳಾಗಿವೆ, ಪಾದಾಚಾರಿಗಳು ಹಾಗೂ ದ್ವಿಚಕ್ರ ವಾಹನ ಚಾಲಕರು ಬಿದ್ದು ಗಾಯಗೊಂಡ ಘಟನೆಗಳೂ ನಡೆದಿದೆ. ಕೆಲವು ಬಡಾವಣೆಗಳಲ್ಲಿ ವಾಹನ ಸಂಚಾರವೇ ದುಸ್ತರವಾಗಿದೆ. ಹೊಂಡ ಗುಂಡಿಗಳಾದ ಅಶುಚಿತ್ವದ ರಸ್ತೆಗಳಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ರಸ್ತೆಗಳ ಅಭಿವೃದ್ಧಿ ಮತ್ತು ದುರಸ್ತಿ ಬಗ್ಗೆ ಕಾಳಜಿ ತೋರದ ನಗರಸಭೆ ಕಳಪೆ ಕಾಮಗಾರಿ ಮೂಲಕ ಕಾಲ ಕಳೆಯುತ್ತಿದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ಸ್ಥಳಕ್ಕೆ ನಗರಸಭಾ ಅಧ್ಯಕ್ಷರು ಆಗಮಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನಾಕಾರರ ಅಹವಾಲು ಆಲಿಸಲು ಬಂದ ಪೌರಾಯುಕ್ತ ವಿಜಯ ಅವರು, ಈಗಾಗಲೇ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಆರಂಭಗೊಂಡಿದೆ. ಮಳೆಯಿಂದ ವಿಳಂಬವಾಗಿದೆ ಎಂದು ಸಮಜಾಯಿಷಿಕೆ ನೀಡಿದರು.
ಇದರಿಂದ ಪ್ರತಿಭಟನಾಕಾರರು ತೃಪ್ತರಾಗದಿದ್ದಾಗ ಸ್ಥಳಕ್ಕೆ ಬಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುಣಮಟ್ಟದ ಕಾಮಗಾರಿ ನಡೆಸುವ ಭರವಸೆ ನೀಡಿದರು.
ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ, ಅಗತ್ಯವಿರುವ ಕಡೆ ಹೊಸ ರಸ್ತೆಗಳನ್ನು ನಿರ್ಮಿಸಲಾಗುವುದು, ಸಂಪೂರ್ಣ ಡಾಂಬರೀಕರಣ ಮಾಡಲಾಗುವುದು. ಉಳಿದೆಡೆ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಶಾಸಕರ ಭರವಸೆ ಹಿನ್ನೆಲೆ ಕೊರವೇ ಪ್ರಮುಖರು ಪ್ರತಿಭಟನೆಯನ್ನು ಸ್ಥಗಿತಗೊಳಿಸಿದರು. ಹೊಂಡ ಗುಂಡಿಗಳಾದ ರಸ್ತೆಗಳಲ್ಲಿ ಬಿದ್ದು ಗಾಯಗೊಂಡ ಮಾದರಿಯಲ್ಲಿ ಪ್ರತಿಭಟನಾಕಾರರು ಕೈ ಮತ್ತು ಕಾಲುಗಳಿಗೆ ಬ್ಯಾಂಡೇಜ್ ಸುತ್ತಿಕೊಂಡು ಅಣಕು ಪ್ರದರ್ಶನ ಮಾಡಿ ಗಮನ ಸೆಳೆದರು. ನಗರಸಭೆ ಎದುರು ಪ್ರತಿಭಟನೆ ನಡೆಸಿದ ಕೊರವೇ ಸದಸ್ಯರು ಕೆಲ ಹೊತ್ತು ರಸ್ತೆ ತಡೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದರು.
ಗೂಡ್ಸ್ ಟೆಂಪೋ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಜಿ.ವಿ.ಹರೀಶ್, ಕಾಫಿನಾಡು ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಬ್ರಿಜೇಶ್, ಕೊರವೇ ಮಡಿಕೇರಿ ನಗರಾಧ್ಯಕ್ಷ ಚೊಟ್ಟೆಯಂಡ ಶರತ್, ನಿರ್ದೇಶಕ ಪಾಪು ರವಿ, ಲಾರಿ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಮಸೂದ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮೋಹನ್ ಬಿ.ಜಿ, ಕೊರವೇ ಆಟೋ ಚಾಲಕರ ಸಂಘದ ಅಧ್ಯಕ್ಷ ಎಂ.ವೈ.ಸುಲೈಮಾನ್, ಕೊರವೇ ಪ್ರಮುಖರಾದ ಪ್ರಕಾಶ್ ಅತ್ಯಾಡಿ, ಕಿರಿಯಮಾಡ ಮಿಲನ್, ಸಮೀರ್, ಬೊಳ್ತಂಡ ಸಜನ್, ಮಂಜುನಾಥ್, ಚಂದ್ರಕಾಂತ್ ಪಟೇಲ್, ಗಜೇಂದ್ರ, ವರ್ಗೀಸ್, ವಿನೋದ್ ಚೆದುಕಾರ್, ಜಿಲ್ಲೆಯ ವಿವಿಧ ಭಾಗಗಳ ಕೊರವೇ ಪದಾಧಿಕಾರಿಗಳು, ಆಟೋ ಚಾಲಕರು, ಲಾರಿ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.