Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಭಗವದ್ಗೀತೆ ಸರ್ವಕಾಲಿಕ ಸತ್ಯ : ಸಾಹಿತಿ ಕಿಗ್ಗಾಲು ಗಿರೀಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಭಗವದ್ಗೀತೆ ಸರ್ವಕಾಲಿಕ ಸತ್ಯ : ಸಾಹಿತಿ ಕಿಗ್ಗಾಲು ಗಿರೀಶ್*

ಅಕ್ಟೋಬರ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ  ಅ.7 : ಶ್ರೀ ಕೃಷ್ಣನ ಉಪದೇಶಾಮೃತವಾದ ಭಗವದ್ಗೀತೆ ಸರ್ವಕಾಲಿಕ ಸತ್ಯ. ಸನಾತನ ಧರ್ಮದಲ್ಲಿ ಭಗವದ್ಗೀತೆಯನ್ನು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ ಎಂದು ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್ ಅಭಿಪ್ರಾಯಪಟ್ಟರು.
ಕಾವೇರಿ ಗಣೇಶೊತ್ಸವ ಸಮಿತಿ ಮೂರ್ನಾಡು ರಸ್ತೆ ಹಾಗೂ ವಿರಾಜಪೇಟೆ ಮಹಿಳಾ ಲೇಖಕಿಯರ ಬಳಗದ ವತಿಯಿಂದ ಗಣೇಶೋತ್ಸವ ಸಮಿತಿ ವೇದಿಕೆಯಲ್ಲಿ ನಡೆದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀಕೃಷ್ಣನು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಗೀತೆಯನ್ನು ಉಪದೇಶಿಸಿದನೆಂಬ ನಂಬಿಕೆಯಿದೆ. ಮತ್ತು ಈ ಮೂಲಕ ಅವರು ಜೀವನದ ಸಾರವನ್ನು ಜನರಿಗೆ ವಿವರಿಸಲು ಪ್ರಯತ್ನಿಸಿದರು. ಯಾವಾಗ ಅರ್ಜುನನು ಕೌರವರ ವಿರುದ್ಧ ಹೋರಾಡಲು ಬಯಸಲಿಲ್ಲವೋ ಆಗ ಶ್ರೀಕೃಷ್ಣನು ನೀನು ನಿರ್ಭಯವಾಗಿ ಹೋರಾಡು ಎಂದು ಹೇಳಿದನೆಂದು ಈ ಗೀತೆಯಲ್ಲಿ ಹೇಳಲಾಗಿದೆ. ಕೊಂದರೆ ಸ್ವರ್ಗ ಸಿಗುತ್ತದೆ, ಗೆದ್ದರೆ ಭೂಮಿಯನ್ನು ಆಳುವಿರಿ. ಹಾಗಾಗಿ ಯಾವುದೇ ಕೆಲಸದಲ್ಲಿ ಯಶಸ್ಸು ಸಿಗಬೇಕಾದರೆ ಮನಸ್ಸಿನಿಂದ ಭಯವನ್ನು ತೊಲಗಿಸಬೇಕು ಎಂದು ಹೇಳುತ್ತಾನೆ. ಗೀತೆಯ ಕೆಲವು ಶ್ಲೋಕಗಳನ್ನು ಅನುಸರಿಸಿದರೆ, ಜೀವನದಲ್ಲಿ ಅಪಾರ ಯಶಸ್ಸನ್ನು ಸಾಧಿಸಬಹುದು. ಭಗವದ್ಗೀತೆ ಎಲ್ಲ ಧರ್ಮದವರಿಗೂ ಪ್ರೇರಣೆಯಾಗುವ ಗ್ರಂಥ ಎಂದರು.
ಗೋಣಿಕೊಪ್ಪ ವಿದ್ಯಾನಿಕೇತನ ಕಾಲೇಜಿನ ಆಡಳಿತ ಮಂಡಳಿಯವರು, ಉಪನ್ಯಾಸಕರು ಹಾಗೂ ತೀರ್ಪುಗಾರರಾದ ಎಸ್.ರಘುನಾಥ್ ಮಾತನಾಡಿ, ಶ್ರೀಕೃಷ್ಣ ಹಾಗೂ ಸುಧಾಮನ ಬಾಂಧವ್ಯ, ಗೆಳೆತನಕ್ಕೆ ಮಾದರಿಯಾಗಿದೆ. ದೇಶದಲ್ಲಿ ಆದ್ಯ ದೇವತೆಯಾಗಿ ಪೂಜಿಸಲ್ಪಡುವ ಶ್ರೀಕೃಷ್ಣನ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಕಾರ್ಲಾ ಮಾತನಾಡಿ, ಗೀತೆಯನ್ನು ಜೀವನದ ಮಾರ್ಗದರ್ಶನ ಮತ್ತು ಮೋಕ್ಷ ಸಾಧನೆಗಾಗಿ ಅರ್ಥ ತಿಳಿದು ಪಠಿಸಬೇಕೆಂಬುದು ಪ್ರಾಜ್ಞರ ಅಭಿಮತವಾಗಿದೆ. ಶ್ರದ್ಧಾ ಭಕ್ತಿಯಿಂದ ಪಠಿಸುವದು ಮೊದಲಿನಿಂದ ನಡೆದು ಬಂದ ಪದ್ಧತಿ. ಇದರಿಂದ ಬದುಕಿನ ದಾರಿ ಯಾವ ರೀತಿಯಲ್ಲಿ ಸನ್ಮಾರ್ಗದಲ್ಲಿ ನಡೆಸಬೇಕೆಂದು ತಿಳಿಯುತ್ತದೆ. ಶ್ರೀ ಕೃಷ್ಣನ ಅವತಾರವೇ ವಿಸ್ಮಯಕಾರಿ, ಆತನ ಜನ್ಮ ಚರಿತ್ರೆ ರೋಮಾಂಚನ. ಕಂಸನ ಸಂಹಾರಕ್ಕಾಗಿಯೇ ಅವತಾರ ಎತ್ತಿ ಬಂದ ಶ್ರೀಕೃಷ್ಣ ಶಿಷ್ಟರ ರಕ್ಷಣೆ ದುಷ್ಟರ ಸಂಹಾರ ಮಾಡಿದ್ದಾನೆ. ಭಗವದ್ಗೀತೆಯ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾವೇರಿ ಗಣೇಶೋತ್ಸವ ಸಮತಿ ಅಧ್ಯಕ್ಷ ಆನಂದ್ ರಾಜಪ್ಪ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ, ಪ್ರತಿದಿನ ನಾವು ಭಗವಧ್ಗೀತೆಯ ಶ್ಲೋಕವನ್ನು ಪಠಿಸಿದರೆ ಮನಸ್ಸಿನಲ್ಲಿ ಸುಖ ಶಾಂತಿ, ಆತ್ಮಸ್ಥೇರ್ಯ ಮೂಡಲು ಸಾಧ್ಯ. ಮಕ್ಕಳಿಗೂ ಇದನ್ನು ಕಲಿಸುವಂತಾಗಬೇಕು. ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆಯ ಸಂದೇಶಗಳನ್ನು ವಿಶ್ವದ ಬಹುತೇಕರು ಅನುಸರಿಸುತ್ತಿದ್ದು, ಅವು ಸಾರ್ವಕಾಲಿಕ ಸತ್ಯದಿಂದ ಕೂಡಿವೆ ಕೃಷ್ಣನ ನಾಮ ಜಪಿಸಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.
ಸಭಾ ಕಾರ್ಯಕ್ರಮದ ಬಳಿಕ ಶಾಲಾ ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಬಳಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಫರ್ಧಾಳುಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ನಾಲ್ಕು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದುಕೊಂಡವರಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಯಿತು.
ತೀರ್ಪುಗಾರರಾಗಿ ಗಿರೀಶ್ ಕಿಗ್ಗಾಲು, ಎಸ್ ರಘುನಾಥ್ ಕಾರ್ಯ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಕಾವೇರಿ ಗಣೇಶೋತ್ಸವ ಸಮತಿಯ ಕಾರ್ಯದರ್ಶಿ, ವಕೀಲ ವಿ.ಜಿ.ರಾಕೇಶ್, ಹರ್ಷ ಕೀರ್ತಿ, ಪ್ರಿಯಾಂಕ ಸೇರಿದಂತೆ ಸಮಿತಿಯ ಆಡಳಿತ ಮಂಡಳಿ ಪದಾಧಿಕಾರಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಸಂತ ಅನ್ನಮ್ಮ ಕಾಲೇಜು ವಿದ್ಯಾರ್ಥಿನಿ ಅನುಷಾ ಪ್ರಾರ್ಥಿಸಿದರು. ಸಾಹಿತಿಗಳಾದ ರಜಿತ ಕಾರ್ಯಪ್ಪ ಸ್ವಾಗತಿಸಿದರು. ಸಾಹಿತಿಗಳಾಗಿರುವ ಪುಷ್ಪಲತಾ ಶಿವಪ್ಪ ಹಾಗೂ ವಿಮಲ ದಶರಥ ನಿರೂಪಿಸಿದರು, ವಿದುಷಿ ಪ್ರೇಮಾಂಜಲಿ ಆಚಾರ್ಯ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.