Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*
  • *ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*
  • *ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*
  • *ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*
  • *ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ದೇಸಿ ಜಗಲಿ ಕಥಾ ಕಮ್ಮಟ : ಓದುಗರ ಸಂಖ್ಯೆ ಹೆಚ್ಚಾಗಬೇಕು : ವೀರಕ ಪುತ್ರ ಶ್ರೀನಿವಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ದೇಸಿ ಜಗಲಿ ಕಥಾ ಕಮ್ಮಟ : ಓದುಗರ ಸಂಖ್ಯೆ ಹೆಚ್ಚಾಗಬೇಕು : ವೀರಕ ಪುತ್ರ ಶ್ರೀನಿವಾಸ್*

ಅಕ್ಟೋಬರ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.7 : ಕನ್ನಡದ ಮೂಲ ನೆಲೆಯಾಗಿರುವ ಕರ್ನಾಟಕದಲ್ಲಿ ಕನ್ನಡ ಪುಸ್ತಕಗಳು ಬೇಡಿಕೆ ಹೆಚ್ಚುವುದರ ಜೊತೆಗೆ ಓದುಗರ ಸಂಖ್ಯೆಯೂ ಅಧಿಕವಾಗಬೇಕು ಎಂದು ಬೆಂಗಳೂರು ವೀರಲೋಕ ಪ್ರಕಾಶನದ ಅಧ್ಯಕ್ಷರಾದ ವೀರಕ ಪುತ್ರ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ ಪರಿಷತ್ ಕೊಡಗು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ದೇಸಿ ಜಗಲಿ ಕಥಾ ಕಮ್ಮಟವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಏಳು ಕೋಟಿ ಕನ್ನಡಿಗರಿದ್ದಾರೆ, ಆದರೆ ಐವತ್ತು ಕನ್ನಡ ಪುಸ್ತಕಗಳನ್ನು ಕೊಂಡು ಓದುವಂತಾಗಬೇಕು ಕನ್ನಡ ಸಾಹಿತ್ಯ ಹಾಗೂ ಸಾಹಿತಿಗಳಿಗೆ ಸೂಕ್ತ ಪ್ರೋತ್ಸಾಹ ದೊರೆಯಬೇಕು ಎಂದರು.
ವೀರಲೋಕ ಪ್ರಕಾಶನ ಕನ್ನಡ ಬರಹಗಾರರ ಪುಸ್ತಕಗಳನ್ನು ಹೊರತರಲು ಮುಂದಾಗುವುದರೊಂದಿಗೆ ಪುಸ್ತಕಗಳಿಗೆ ಸೂಕ್ತ ಮಾರುಕಟ್ಟೆ ದೊರೆಯುವಂತೆ ಮಾಡಲು ತೊಡಗಿಸಿಕೊಳ್ಳಲಾಗಿದ್ದು, ಕನ್ನಡ ಬರಹಗಾರರನ್ನೂ ಮೇಲೆತ್ತುವ ಪ್ರಯತ್ನಕ್ಕೆ ಮುಂದಾಗಲಾಗಿದೆ ಎಂದು ಶ್ರೀನಿವಾಸ್ ಅವರು ತಿಳಿಸಿದರು.
ಈ ದಿಸೆಯಲ್ಲಿ ಬೆಂಗಳೂರಿನಲ್ಲಿ 300 ಕಡೆಗಳಲ್ಲಿ ಪುಸ್ತಕ ಮಾರಾಟ ಕೇಂದ್ರಗಳನ್ನು ತೆರೆಯಲಾಗಿದೆ, ಮೊಬೈಲ್ ಮೂಲಕ ಜನರಿಗೆ ವಿವಿಧ ಉತ್ಪನ್ನಗಳ ಮಾಹಿತಿ ನೀಡುವಂತೆ ಕನ್ನಡ ಪುಸ್ತಕಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯದ ಬೆಳವಣಿಗೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಥಾ ಕಮ್ಮಟಗಳನ್ನು ಆಯೋಜಿಸಲಾಗುತ್ತಿದ್ದು, ಕೊಡಗಿನಲ್ಲಿ ಆಯೋಜನೆಗೊಂಡಿರುವ ಈ ಕಥಾ ಕಮ್ಮಟ 15 ನೇ ಕಾರ್ಯಕ್ರಮವಾಗಿದೆ ಎಂದು ಅವರು ಮಾಹಿತಿ ನೀಡಿದರು. ಮಕ್ಕಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ ಶ್ರೀನಿವಾಸ್ ಪುಸ್ತಕಗಳನ್ನು ಓದುವುದರಿಂದ ಬದುಕಿನಲ್ಲಿ ಬದಲಾವಣೆ ಸಾಧ್ಯ ಎಂದು ನುಡಿದರು.
ಲೇಖಕ, ಚಿಂತಕರಾದ ಡಾ.ಮೋಹನ್ ಪಾಳೇಗಾರ್ ಮಾತನಾಡಿ ಪ್ರಸ್ತುತ ಕಾಲ ಘಟ್ಟದಲ್ಲಿ ಮಕ್ಕಳಲ್ಲಿ ಏಕಾಗ್ರತೆ ಎಂಬುದು ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಏಕಾಗ್ರತೆಯನ್ನು ಕಲಿಸುವ ನಿಟ್ಟಿನಲ್ಲಿ ಇಂತಹ ಕಮ್ಮಟಗಳು ಸಹಕಾರಿಯಾಗಲಿವೆ ಎಂದರು.
ನಿರಂತರವಾಗಿ ಬರೆಯುವುದರಿಂದ ಬರವಣಿಗೆ ಉತ್ತಮಗೊಳ್ಳುತ್ತದೆ ಎಂದು ನುಡಿದ ಅವರು ನಿರಂತರವಾಗಿ ಓದುವುದರಿಂದ ಜ್ಞಾನ ವೃದ್ಧಿ ಸಾಧ್ಯವಾಗುತ್ತದೆ. ಜಾನಪದ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಅದನ್ನು ಎಂದಿಗೂ ಬಿಡಬಾರದು. ಜಾನಪದವನ್ನು ಮರೆತರೆ ಬದುಕು ನಶ್ವರವಾದಂತೆ ಎಂದು ಎಚ್ಚರಿಸಿದ ಮೋಹನ್ ಪಾಳೇಗಾರ್ ಮರೆಯಾಗುತ್ತಿರುವ ಸಂಸ್ಕೃತಿ ಸಂಪ್ರದಾಯದ ಬಗ್ಗೆ ಜಾಗೃತಿ ಮೂಡಿಸಿ; ಉಳಿಸಿ ಬೆಳೆಸಲು ಇಂತಹ ಕಮ್ಮಟಗಳ ಆಗಾಗ ಜರುಗಬೇಕು ಎಂದರು.
ವೀರಲೋಕ ಪ್ರಕಾಶನದ ಕೊಡಗು ಜಿಲ್ಲಾ ಯೋಜನಾ ಸಂಘಟಕರಾದ ಬಿ.ಜಿ.ಅನಂತಶಯನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮನಸಾರೆ ಪ್ರತಿಯೊಬ್ಬರು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಪುಸ್ತಕಗಳನ್ನು ಓದುವ ಮೂಲಕ ಕನ್ನಡ ಭಾಷೆ ಬೆಳವಣಿಗೆಗೆ ಪಣ ತೊಡಬೇಕೆಂದು ನುಡಿದರು.
ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ಮಾತನಾಡಿ ಬರೆಯುವ ಕಥೆಗಳು ಸಮಾಜಕ್ಕೆ ಬೆಳಕು ತೋರುವಂತಿರಬೇಕೆ ಹೊರತು ಸಮಾಜದ ಅಶಾಂತಿಗೆ ಕಾರಣವಾಗಬಾರದು ಎಂದು ಹೇಳಿದರು.
ಬರಹಗಾರರು ತರಬೇತುದಾರರಾದ ಪ್ರಭಾಕರ ಶಿಶಿಲ ಅವರು ಮಾತನಾಡಿ ಈ ಎಲ್ಲಾ ಸಂಸ್ಥೆಗಳು ಸೇರಿ ಕೊಡಗಿನಲ್ಲಿ ಪುಸ್ತಕ ಭಂಡಾರ ಆರಂಭಿಸುವಂತೆ ಸಲಹೆ ನೀಡಿದರು.
ಸಾಹಿತಿಗಳಾದ ಸ್ಮಿತಾ ಅಮೃತರಾಜ್ ಮಾತನಾಡಿ ಬದುಕನ್ನು ಪ್ರೀತಿಸಲು ಬರಹದಿಂದ ಮಾತ್ರ ಸಾಧ್ಯ ಎಂದರು. ಸುನೀತ ಲೋಕೇಶ್ ಮಾತನಾಡಿ ಬರವಣಿಗೆ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು. ಸಹನಾ ಕಾಂತಬೈಲು ಮಾತನಾಡಿ ಓದುವ ಹವ್ಯಾಸ ರೂಢಿಸಿಕೊಂಡರೆ ಬರವಣಿಗೆ ತಾನಾಗಿಯೆ ಉತ್ತಮಗೊಳ್ಳುತ್ತದೆ ಎಂದರು. ನೌಶಾದ್ ಮಾತನಾಡಿ ಮಕ್ಕಳು ಹೆಚ್ಚೆಚ್ಚು ಬರೆಯುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.
ಜಾನಪದ ಪರಿಷತ್ ಕೊಡಗು ಘಟಕದ ಉಪಾಧ್ಯಕ್ಷರುಗಳಾದ ಶೋಭಾ ಸುಬ್ಬಯ್ಯ, ಅಂಬೆಕಲ್ ಕುಶಾಲಪ್ಪ, ರವೀಂದ್ರ ರೈ, ಕಾರ್ಯದರ್ಶಿ ಉಜ್ವಲ್ ರಂಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ಉಪಸ್ಥಿತರಿದ್ದರು. ಇದೇ ಸಂದರ್ಭ ಪ್ರಭಾಕರ ಶಿಶಿಲ ಹಾಗೂ ಮೋಹನ್ ಪಾಳೇಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಜಯ್‍ಸೂದ್ ಪ್ರಾರ್ಥಿಸಿ, ಕಥಾ ಕಮ್ಮಟ ಸಹ ಸಂಚಾಲಕಿ ರೇವತಿ ರಮೇಶ್ ನಿರೂಪಿಸಿ, ಕಥಾ ಕಮ್ಮಟ ಸಂಚಾಲಕ ಎಸ್.ಎಸ್. ಸಂಪತ್‍ಕುಮಾರ್ ಸ್ವಾಗತಿಸಿದರು. ರವೀಂದ್ರ ರೈ ವಂದಿಸಿದರು.
ದೇಸಿ ಜಗಲಿ ಕಥಾ ಕಮ್ಮಟ ಎರಡು ದಿನಗಳ ಕಾಲ ನಡೆಯಲಿದ್ದು ಬರಹಗಾರರು ಹಾಗೂ ತರಬೇತುದಾರರಾದ ಬಿ. ಪ್ರಭಾಕರ ಶಿಶಿಲ ಅವರು ತರಬೇತಿ ನೀಡಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.14  NEWS DESK  :  66/33/11 ಕೆ.ವಿ MUSS ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ 33ಏಗಿ…

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026

*ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*

ಏಪ್ರಿಲ್ 14, 2026

*ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.