Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಗೌರಮ್ಮ ಪ್ರಶಸ್ತಿಗೆ ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಗೌರಮ್ಮ ಪ್ರಶಸ್ತಿಗೆ ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಆಯ್ಕೆ*

ಅಕ್ಟೋಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.10 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷಂಪ್ರತಿ ಜಿಲ್ಲೆಯ ಮಹಿಳಾ ಲೇಖಕರಿಗೆ ನೀಡುತ್ತಿರುವ ಪ್ರತಿಷ್ಠಿತ ಕೊಡಗಿನ ಗೌರಮ್ಮ ಪ್ರಶಸ್ತಿಗೆ 2023-24 ಸಾಲಿಗೆ ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪ್ರಕಟಿಸಿದ ಅವರು, ಗೌರಮ್ಮ ಪುಸ್ತಕ ಪ್ರಶಸ್ತಿಗೆ ಈ ಬಾರಿ 12 ಲೇಖಕರು 15 ಪುಸ್ತಕಗಳನ್ನು ಕಳುಹಿಸಿದ್ದರು. ಇದರಲ್ಲಿ ಈರಮಂಡ ಹರಿಣಿ ವಿಜಯ್ ಅವರ ‘ಅಗ್ನಿ ಯಾತ್ರೆ’ ಮತ್ತು ಕಟ್ರತನ ಲಲಿತಾ ಅಯ್ಯಣ್ಣ ಅವರ ‘ಕಡಲಾಳದ ಮುತ್ತುಗಳು’ ಪುಸ್ತಕಗಳು ಸಮಾನ ಅರವತ್ತು ಅಂಕಗಳನ್ನು ಪಡೆದುಕೊಂಡ ಹಿನ್ನೆಲೆ. ಈ ಬಾರಿ ಪ್ರÀಶಸ್ತಿಯನ್ನು ಇಬ್ಬರು ಲೇಖಕಿಯರಿಗೆ ನೀಡಲಾಗುತ್ತಿದೆಯೆಂದು ಸ್ಪಷ್ಟಪಡಿಸಿದರು.
ಜಿಲ್ಲಾ ಕಸಾಪದಿಂದ ಇದೇ ಅ.27 ರಂದು ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯುವ ಗೌರಮ್ಮ ದತ್ತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಅಂದಿನ ಕಾರ್ಯಕ್ರಮವನ್ನು ಕಾಲೇಜಿನ ವೆಂಕಟೇಶ್ ಪ್ರಸಾದ್ ಅವರು ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಸೇರಿದಂತೆ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು.
ಇದೇ ಸಮಾರಂಭದಲ್ಲಿ ಗೌರಮ್ಮ ದತ್ತಿ ಕಥಾ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುತ್ತದೆ. ಈ ಬಾರಿಯ ಸ್ಪಧೆಯಲ್ಲಿ ಪ್ರಥಮ ಸ್ಥಾನವನ್ನು ಕುಶಾಲನಗರ ಫಾತಿಮಾ ಪ್ರೌಢ ಶಾಲೆಯ ತನ್ಮಯಿ ಎ.ಸಿ., ಚೆಂಬು ಶಾಲೆಯ ಬಿಂದು ದ್ವಿತೀಯ ಮತ್ತು ಮಡಿಕೇರಿ ಸರ್ಕಾರಿ ಪ್ರೌಢ ಶಾಲೆಯ ಅನುಷಾ ತೃತೀಯ ಬಹುಮಾನ ಪಡೆದುಕೊಂಡಿರುವುದಾಗಿ ಮಾಹಿತಿ ನೀಡಿದರು.
ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಕಾರ್ಯಕ್ರಮ- ‘ಶಕ್ತಿ’ ಪತ್ರಿಕೆಯ ಸಂಸ್ಥಾಪಕರಾದ ದಿ. ಬಿ.ಎಸ್. ಗೋಪಾಲಕೃಷ್ಣ ಅವರ ಸ್ಮರಣಾರ್ಥ ಅವರ ಪುತ್ರ ಬಿ.ಜಿ.ಅನಂತಶಯನ ಅವರು ಜಿಲ್ಲಾ ಕಸಾಪದಲ್ಲಿ ದತ್ತಿ ನಿಧಿ ಸ್ಥಾಪಿಸಿದ್ದು, ಇದರ ಭಾಗವಾಗಿ ನಡೆದ ಕಥಾ ಸ್ಪರ್ಧೆಯಲ್ಲಿ ಈ ಬಾರಿ ಈರಮಂಡ ಹರಿಣಿ ವಿಜಯ್ ಅವರ ‘ಬದುಕು ಅರಿಯುವ ಮುನ್ನ’ ಕಥೆ ಪ್ರಥಮ ಸ್ಥಾನವನ್ನು, ಸಹನಾ ಕಾಂತಬೈಲು ಅವರ ‘ವಿನುತಾಕ್ಷಿ’ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ರೇಷ್ಮ ಮನೋಜ್ ಅವರ ‘ ಹೆಜ್ಜೆಗೊಂದು ನೆನಪು’ ಹಾಗೂ ಡಾ. ವಾಣಿ ಪುಷ್ಪರಾಜ್ ಅವರ ‘ಕಮರಿದ ಕುಸುಮ’ ಪಡೆದುಕೊಂಡಿರುವುದಾಗಿ ತಿಳಿಸಿದರು.
ದಿ.ಬಿ.ಎಸ್.ಗೋಪಾಲಕೃಷ್ಣ ಅವರ ಸ್ಮರಣಾರ್ಥ ದತ್ತಿ ನಿಧಿ ಕಾರ್ಯಕ್ರಮ ಅ.14 ರಂದು ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಮಧ್ಯಾಹ್ನ 2.30 ಕ್ಕೆ ನಡೆಯಲಿದ್ದು, ಇದರಲ್ಲಿ ಬಹುಮಾನಗಳನ್ನು ಬಿ.ಜಿ. ಅನಂತಶಯನ ಅವರು ವಿತರಿಸಲಿದ್ದಾರೆಂದು ತಿಳಿಸಿದರು.
ದತ್ತಿ ಕಾರ್ಯಕ್ರಮವನ್ನು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಓ.ಎಂ.ಪಂಕಜಾಕ್ಷನ್ ಉದ್ಘಾಟಿಸಲಿದ್ದು, ದಿ. ಗೋಪಾಲಕೃಷ್ಣ ದತ್ತಿ ಉಪನ್ಯಾಸವನ್ನು ಖ್ಯಾತ ಸಾಹಿತಿಗಳಾದ ಕಾಲೂರು ನಾಗೇಶ್ ನಡೆಸಿಕೊಡಲಿದ್ದಾರೆಂದು ಮಾಹಿತಿಯನ್ನಿತ್ತರು.
ಸುವರ್ಣ ಸಂಭ್ರ್ರಮ ವೈವಿಧ್ಯಮಯ ಕಾರ್ಯಕ್ರಮ- ಸುವರ್ಣ ಸಂಭ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಕಸಾಪದಿಂದ ರಾಷ್ಟ್ರಕವಿ ಕುವೆಂಪು ಅವರ ಆಶಯಗಳನ್ನು ಆಧರಿಸಿದ ವಿವಿಧ ಕಾರ್ಯಕ್ರಮ, ರಾಜ್ಯಕ್ಕೆ ‘ಕರ್ನಾಟಕ’ವೆಂದು ನಾಮಕರಣ ಮಾಡಿದ ದೇವರಾಜ ಅರಸು ಅವರ ಚಿಂತನೆಯನ್ನು ಆಧರಿಸಿದ ಕಾರ್ಯಕ್ರಮ ಸೇರಿದಂತೆ ವರ್ಷವಿಡಿ ಕಾರ್ಯಕ್ರಮಗಳನ್ನು ರೂಪಿಸಲು ಚಿಂತಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪುರಿಯನೆರವನ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಸಂಪತ್ ಕುಮಾರ್, ಸದಸ್ಯರಾದ ಫ್ಯಾನ್ಸಿ ಮುತ್ತಣ್ಣ, ಪ್ರೇಂ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.