Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿಶ್ವ ಮಾನಸಿಕ ಆರೋಗ್ಯ ದಿನ : ಮಾನಸಿಕ ಅಸ್ವಸ್ಥರನ್ನೂ ಇತರರಂತೆ ಗೌರವಿಸಿ : ಡಾ.ಎನ್.ಆನಂದ್*
ಇತ್ತೀಚಿನ ಸುದ್ದಿಗಳು

*ವಿಶ್ವ ಮಾನಸಿಕ ಆರೋಗ್ಯ ದಿನ : ಮಾನಸಿಕ ಅಸ್ವಸ್ಥರನ್ನೂ ಇತರರಂತೆ ಗೌರವಿಸಿ : ಡಾ.ಎನ್.ಆನಂದ್*

October 10, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.10 : ಜಾಗತಿಕವಾಗಿ ಕೊರೊನಾ ಬಳಿಕ 8 ಜನರಲ್ಲಿ ಒಬ್ಬರಿಗೆ ಮಾನಸಿಕ ಅಸ್ವಸ್ಥತೆ ಕಂಡುಬರುತ್ತಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ, ಮಡಿಕೇರಿ, ಎಸ್‍ವಿವೈಎಂ, ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯು ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬ ಘೋಷವಾಕ್ಯದಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋದಕ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಾನಸಿಕ ಆರೋಗ್ಯ ಮನುಷ್ಯನಿಗೆ ತುಂಬಾ ಮುಖ್ಯ. ಮಾನಸಿಕ ಆರೋಗ್ಯದಲ್ಲಿ ವ್ಯತ್ಯಾಸವಾದಲ್ಲಿ ಸಮಾಜದ ಸ್ಥಿತಿಗತಿಗಳಲ್ಲಿ ಏರುಪೇರು ಉಂಟಾಗುತ್ತದೆ. ಸಮಾಜದ ಒಳಿತಿಗೆ ಮಾನಸಿಕ ಖಾಯಿಲೆಗೆ ತಕ್ಕಂತೆ ಔಷಧಿ ಹಾಗೂ ಸಲಹೆ-ಸೂಚನೆ ದೊರಕಬೇಕು. ಮಾನಸಿಕ ರೋಗ ಲಕ್ಷಣ ಇರುವಂತಹ ವ್ಯಕ್ತಿಗಳನ್ನು ಪತ್ತೆಹಚ್ಚಿ ಧೈರ್ಯ ತುಂಬುವ ಹಾಗೂ ಔಷಧೋಪಚಾರಗಳಿಗೆ ಒಪ್ಪಿಸುವ ಕಾರ್ಯಗಳು ತುರ್ತಾಗಿ ನಡೆಯಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ವಿಶ್ವ ಮಾನಸಿಕ ಆರೋಗ್ಯ ಕಾರ್ಯಕ್ರಮವು 1992 ರಲ್ಲಿ ಆಫ್ರಿಕಾದಲ್ಲಿ ಆರಂಭವಾಯಿತು. ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಇದ್ದು, ಮಾನಸಿಕ ಅಸ್ವಸ್ಥ ವ್ಯಕ್ತಿಗೂ ಅವರದೇ ಆದ ಘನತೆ, ಗೌರವದಿಂದ ಬದುಕುವ ಹಕ್ಕಿದೆ. ಮಾನಸಿಕ ಅಸ್ವಸ್ಥರನ್ನು ತಾರತಮ್ಯ ಮಾಡುವಂತಿಲ್ಲ. ಕಾನೂನಿನ ಅಡಿಯಲ್ಲಿ ಸರ್ವರೂ ಸಮಾನವರು. ಆ ನಿಟ್ಟಿನಲ್ಲಿ ಮುಖ್ಯವಾಹಿನಿಗೆ ತರುವುದು ಅತೀ ಮುಖ್ಯವಾಗಿದೆ ಎಂದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾದ ವಿಶಾಲ್ ಕುಮಾರ್ ಅವರು ಮಾತನಾಡಿ ಮಾನಸಿಕ ಆರೋಗ್ಯ ಸಮಸ್ಯೆ ಮುಜುಗರ ಪಡುವಂತಹ ಸಮಸ್ಯೆ ಅಲ್ಲ, ಮಾನಸಿಕ ಆರೋಗ್ಯದಲ್ಲಿ ವ್ಯತ್ಯಯವಾದರೆ ಗೌಪ್ಯವಾಗಿಟ್ಟುಕೊಂಡಷ್ಟು ಸಮಸ್ಯೆ ಉಲ್ಬಣಿಸುತ್ತದೆ. ಸಮಸ್ಯೆಯನ್ನು ಹೋಗಲಾಡಿಸಲು ಹಲವಾರು ಮಾರ್ಗೋಪಾಯಗಳನ್ನು ಮನೋವೈದ್ಯರು ನೀಡುತ್ತಾರೆ. ಮಾನಸಿಕ ಖಿನ್ನತೆಗೆ ಒಳಗಾದವರು ವೈದ್ಯರ ಬಳಿ ಆಪ್ತ ಸಮಾಲೋಚನೆ ನಡೆಸಲು ಅವಕಾಶವಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಡಿವೈಎಸ್‍ಪಿ ಜಗದೀಶ್ ಅವರು ಮಾತನಾಡಿ ಮಾನಸಿಕ ಅಸ್ವಸ್ಥರ ಸಮಸ್ಯೆಗಳನ್ನು ನಿವಾರಿಸಲು ಪೆÇಲೀಸ್ ಹಾಗೂ ಕಾನೂನು ವಿಭಾಗಕ್ಕೆ ಹೆಚ್ಚಿನ ಮಾಹಿತಿಯ ಅವಶ್ಯಕತೆ ಇದೆ. ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳ ಅಪರಾಧ ಪರಿಗಣಿಸಿ ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸಬೇಕಾಗುವುದು. ಮಾನಸಿಕ ಆರೋಗ್ಯ ಮನುಷ್ಯನ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರಾದ ಡೇವಿನ್ ಲಿನೇಕರ್ ಕರ್ಕಡ ಅವರು ಮಾತನಾಡಿ 2016 ರಿಂದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಮಾನಸಿಕ ಆರೋಗ್ಯದ ಘಟಕ ಆರಂಭಿಸಲಾಗಿದೆ ಎಂದರು.
ವಿಶ್ವಸಂಸ್ಥೆಯು 2023-24 “ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು” ಎಂಬ ಘೋಷ ವಾಕ್ಯ ದಡಿಯಲ್ಲಿ ನಡೆಸುತ್ತಿರುವ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯೂ ನಮ್ಮ ಮನಸ್ಸು ನಮ್ಮ ಹಕ್ಕು ನಮ್ಮ ಮನಸ್ಸನ್ನು ಹಿಡಿತದಲ್ಲಿ ಇಟ್ಟುಕೊಳ್ಳಬಹುದು. ಹಿಡಿತಕ್ಕೆ ಸಿಗದೆ ಅಸಾಧ್ಯವಾದಾಗಲೇ ಮಾನಸಿಕ ಆರೋಗ್ಯ ಸಮಸ್ಯೆಯೂ ಕಾಣಿಸುವುದು ಎಂದರು.
ಖಿನ್ನತೆ, ಆತಂಕ, ಮನೋಬಲ ಸದೃಢವಾಗಿಲ್ಲದೆ ಇರುವ ವ್ಯಕ್ತಿಗಳು ಆತ್ಮಹತ್ಯೆಗೆ ಒಳಗಾಗುವುದನ್ನು ಗಮನಿಸಬಹುದು. ಇಂತಹ ಮಾನಸಿಕ ಖಿನ್ನತೆಯಿಂದ ಹೊರಬರಲು ಜೀವನ ಶೈಲಿ, ಊಟೋಪಚಾರ, ವ್ಯಾಯಾಮದ ಅಗತ್ಯತೆ ಬಹಳ ಮುಖ್ಯವಾಗಿದೆ ಎಂದರು.
ದುಶ್ಚಟಗಳು ಕೂಡ ಮಾನಸಿಕ ರೋಗವನ್ನು ಉಲ್ಬಣ ಮಾಡುವುದು ದುಶ್ಚಟದಿಂದ ಹೊರಬರಲು ವ್ಯಸನಿಗಳು ಹಲವಾರು ಸರ್ಕಾರೇತರ ಸಂಸ್ಥೆಗಳ ಮೊರೆ ಹೋಗಬಹುದು. ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕ್ಕೊಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆಗಳು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕ ಶಕ್ತಿ ತೊಂದರೆಯುಳ್ಳವರು, ಆರ್ಥಿಕ ಒತ್ತಡದಲ್ಲಿರುವವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ನಿರ್ಮಿಸಲಾಗಿರುವ (ಉಚಿತ ಸಹಾಯವಾಣಿ-14416) ವಿಭಾಗಕ್ಕೆ ಕರೆ ಮಾಡಿ ಆಪ್ತ ಸಮಾಲೋಚನೆ ನಡೆಸಬಹುದು ಎಂದು ಡೇವಿನ್ ಲಿನೇಕರ್ ಕರ್ಕಡ ಅವರು ಮಾಹಿತಿ ನೀಡಿದರು.
ಮಾನಸಿಕ ಖಿನ್ನತೆಯಿಂದ ಗುಣಮುಖರಾದ ನಂತರ ಸರ್ಕಾರ ಅಸ್ವಸ್ಥರಿಗೆ ಕೂಡ ಪಿಂಚಣಿ ಮೂಲಕ ಸಹಾಯಮಾಡುತ್ತದೆ. ಮಾನಸಿಕ ಖಿನ್ನತೆಗೆ ಒಳಗಾಗಿರುವ ವ್ಯಕ್ತಿಗಳಿಗೆ ಸರ್ಕಾರ ಕಾನೂನಾತ್ಮಕವಾಗಿಯೂ ಆಸ್ತಿ ವ್ಯವಹಾರದಲ್ಲಿಯೂ ಸಹಾಯ ಮಾಡುತ್ತದೆ. ಮಾದಕ ವಸ್ತುವಿನ ಅವಲಂಬನೆ, ನಿದ್ರಾಹೀನತೆ, ಹೆಚ್ಚು ಆಹಾರ ಸೇವನೆ ಮುಂತಾದ ಪ್ರತಿಯೊಂದು ಸಮಸ್ಯೆಗೆ ವೈದ್ಯರು ಪರಿಹಾರ ನೀಡುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ಗ್ರಾಮ ಆರೋಗ್ಯ ಕಾರ್ಯಕ್ರಮದ ಸಂಯೋಜಕಿ ಬ್ರೋಹಿಶಿ.ಆರ್ ಮಾತನಾಡಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಮಾನಸಿಕ ಆರೋಗ್ಯ, ಕ್ಷಯ, ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತ ಹೀನತೆ, ಅಪೌಷ್ಟಿಕತೆ ಆರೋಗ್ಯ ಸಂಬಂಧಿಸಿದಂತೆ ಆರೋಗ್ಯ ಅಧಿಕಾರಿಗಳನ್ನು ನೇಮಿಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಆರೋಗ್ಯ ಕಾರ್ಯಕ್ರಮದ ಉಚಿತ ಸಹಾಯವಾಣಿ ಸಂಖ್ಯೆ 18005324600 ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿಗಳು, ವೈದ್ಯಾಧಿಕಾರಿಗಳು, ನಸಿರ್ಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಉಪನ್ಯಾಸಕರು ಮತ್ತು ಮೂಲಭೂತ ಸೌಲಭ್ಯದ ಕೊರತೆ : ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ*
Next Article *ಕೊಡವ ಲ್ಯಾಂಡ್ ಗಾಗಿ ಮುಂದುವರಿದ ಸಿಎನ್‌ಸಿ ಪಾದಯಾತ್ರೆ : ಅ.11 ರಂದು ಪೊನ್ನಂಪೇಟೆಯಲ್ಲಿ ಸಭೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.