Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿಎನ್‌ಸಿ ಪಾದಯಾತ್ರೆ : ಪೊನ್ನಂಪೇಟೆಯಲ್ಲಿ ಬೃಹತ್ ಮಾನವ ಸರಪಳಿ : ಅ.20 ರಿಂದ 4ನೇ ಹಂತದ ಪಾದಯಾತ್ರೆ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿಎನ್‌ಸಿ ಪಾದಯಾತ್ರೆ : ಪೊನ್ನಂಪೇಟೆಯಲ್ಲಿ ಬೃಹತ್ ಮಾನವ ಸರಪಳಿ : ಅ.20 ರಿಂದ 4ನೇ ಹಂತದ ಪಾದಯಾತ್ರೆ ಆರಂಭ*

ಅಕ್ಟೋಬರ್ 12, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.12 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 3ನೇ ಹಂತದ ಪಾದಯಾತ್ರೆ ಪೊನ್ನಂಪೇಟೆಯಲ್ಲಿ ಮುಕ್ತಾಯಗೊಂಡಿತು. ನಾಲ್ಕನೇ ಹಂತದ ಪಾದಯಾತ್ರೆ ಅ.20 ರಿಂದ ಪೊನ್ನಂಪೇಟೆ ತಾಲ್ಲೂಕಿನ ಕುಂದದಿಂದ ಆರಂಭಗೊಳ್ಳಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪೊನ್ನಂಪೇಟೆ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ನಂತರ ಬಸ್ ನಿಲ್ದಾಣದ ಬಳಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಕೊಡವ ಲ್ಯಾಂಡ್ ಗಾಗಿ ಹಕ್ಕೊತ್ತಾಯ ಮಂಡಿಸಲಾಯಿತು. ಎನ್.ಯು.ನಾಚಪ್ಪ ಅವರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾರ್ಯಕ್ರಮ ಆರಂಭಿಸಿ ಹಕ್ಕೊತ್ತಾಯಗಳ ಕುರಿತು ವಿವರಿಸಿದರು.
ಸಿಎನ್‌ಸಿಯ 9 ಬೇಡಿಕೆಗಳ ಕುರಿತು ಪಾದಯಾತ್ರೆ ಸಂದರ್ಭ ಜನಜಾಗೃತಿ ಮೂಡಿಸಿ ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಎಂದರು.
ಭೌಗೋಳಿಕ-ರಾಜಕೀಯ ಸ್ವಾಯತ್ತತೆಯು ಯುಎನ್/ವಿಶ್ವ ರಾಷ್ಟ್ರ ಸಂಸ್ಥೆ ಚಾರ್ಟರ್‌ನಲ್ಲಿ ಪ್ರತಿಪಾದಿಸಲ್ಪಟ್ಟ ನಿರ್ದಿಷ್ಟ ಪ್ರದೇಶದ ಪ್ರಾಚೀನ ಸೂಕ್ಷ್ಮ-ಮಿನಿಸ್ಕ್ಯೂಲ್ ರೇಸ್ ಅನ್ನು ರಕ್ಷಿಸಲು, ಉತ್ತೇಜಿಸಲು ಮತ್ತು ಪುನರುಜ್ಜೀವನಗೊಳಿಸಲು ಮೂಲಭೂತ ನೀತಿಯಾಗಿ ಸಾಂವಿಧಾನಿಕ ವ್ಯವಸ್ಥೆಯಾಗಿದೆ.
2002 ರಲ್ಲಿ ಕೊಡವರಿಗೆ ಸ್ವಾಯತ್ತ ಪರಿಷತ್ತನ್ನು ರಚಿಸಲು ಭಾರತದ ಸಿಎನ್‌ಸಿಯ ಮನವಿ ಮೇರೆಗೆ ಸಂವಿಧಾನ ಪರಿಶೀಲನಾ ಆಯೋಗ ಶಿಫಾರಸು ಮಾಡಿದೆ. ಆನಂದ್ ಶರ್ಮಾ ಸಮಿತಿಯ ವರದಿಯು ಸ್ವಾಯತ್ತ ಪ್ರದೇಶಗಳು ಮತ್ತು ಅದರ ಕೌನ್ಸಿಲ್‌ಗಳಿಗೆ ಹೆಚ್ಚಿನ ಅಧಿಕಾರ ನೀಡಲು ತಿಳಿಸಿದೆ.
ಸಿಎನ್‌ಸಿ ಮೂಲಕ ಜನರ ಆಕಾಂಕ್ಷೆಗಳನ್ನು ಪ್ರತಿಧ್ವನಿಸಲು, ಮೂಲೆ ಮೂಲೆಗಳಲ್ಲಿ ಯುಎನ್/ವಿಶ್ವ ರಾಷ್ಟ್ರ ಸಂಸ್ಥೆ ಚಾರ್ಟರ್‌ನಲ್ಲಿ ಪ್ರತಿಪಾದಿಸಿರುವ ಸಾರ್ವತ್ರಿಕ ಕಾನೂನಿನ ಪ್ರಕಾರ ಮತ್ತು ಭಾರತದ ಸಂವಿಧಾನದ ಅಡಿಯಲ್ಲಿ ಸ್ವಯಂ ಆಡಳಿತ ಹಾಗೂ ಸ್ವಯಂ ನಿರ್ಣಯದ ಹಕ್ಕುಗಳನ್ನು ಸ್ಥಾಪಿಸಲು ಆರ್ಟಿಕಲ್ 32 ಅನ್ನು ಈ ಮೂಲಕ ಪ್ರಚಾರ ಮಾಡುತ್ತಿದ್ದೇವೆ. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಯತ್ತತೆಯೂ ಕರ್ನಾಟಕದ ಸ್ವಾಧೀನದ ಅಡಿಯಲ್ಲಿ ಭಾರತದ ಸಾರ್ವಭೌಮತ್ವಕ್ಕೆ ಪೂರಕವಾಗಿರುತ್ತದೆ ಎಂದು ನಾಚಪ್ಪ ಹೇಳಿದರು.
ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆ ಬದ್ದವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕು ಸಂವಿಧಾನದ ವಿಧಿ 244 R/w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕರ್ನಾಟಕದ ಸ್ವಾಧೀನದೊಳಗೆ ಆಂತರಿಕ-ರಾಜಕೀಯ ಸ್ವ- ನಿರ್ಣಯದ ಹಕ್ಕನ್ನು ಕೊಡವರಿಗೆ ಸಂಯೋಜಿಸುವ ಮೂಲಕ ಭಾರತದ ಸಂವಿಧಾನ ಪರಿಶೀಲನಾ ಆಯೋಗವು ಶಿಫಾರಸು ಮಾಡಿರುವ ವರದಿಯನ್ವಯ ಕೊಡವ ಲ್ಯಾಂಡ್ ಸ್ವಯಂ ಶಾಸನದ ಜನ್ಮ ಭೂಮಿಯನ್ನು ರಚಿಸಬೇಕು.
ಕೊಡಗಿನ ಆದಿಮಸಂಜಾತ ಕೊಡವ ಜನಾಂಗವನ್ನು ನಮ್ಮ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಸಂವಿಧಾನದಲ್ಲಿ ರೇಸ್/ಮೂಲ ವಂಶಸ್ಥ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ವರ್ತಮಾನದ ಅನಿವಾರ್ಯ ಅವಶ್ಯಕತೆಯಾಗಿದೆ. ಆದ್ದರಿಂದ ಕರ್ನಾಟಕದ ಗೌರವಾನ್ವಿತ ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ್ಮ, ಸಮಗ್ರ ಕುಲಶಾಸ್ತ್ರ ಅಧ್ಯಯನ ಆರಂಭಿಸಬೇಕು.
. ಕೊಡವ ಕಸ್ಟಮರಿ ಜನಾಂಗೀಯ ‘ಸಂಸ್ಕಾರ ಗನ್’ ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ನಮ್ಮ ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಕೊಡವರ “ಧಾರ್ಮಿಕ ಸಂಸ್ಕಾರ”ವೆಂದು ರಕ್ಷಿಸಬೇಕು.
ಮಾತೃ ಭಾಷೆ ಕೊಡವ ತಕ್ಕ್ ಅನ್ನು 8ನೇ ಶೆಡ್ಯೂಲ್‌ಗೆ ಸೇರಿಸುವುದು. ನಮ್ಮ ಸಂವಿಧಾನದ 347, 350, 350ಎ ಮತ್ತು 350ಬಿ ವಿಧಿಗಳ ಅಡಿಯಲ್ಲಿ ಪಠ್ಯಕ್ರಮ ಮತ್ತು ಆಡಳಿತದಲ್ಲಿ ಕೊಡವ ತಕ್ಕ್ ಅನ್ನು ಪರಿಚಯಿಸಬೇಕು. ಕೊಡವ ತಕ್ಕ್ ಅನ್ನು ರಾಜ್ಯದ 3ನೇ ಆಡಳಿತ ಭಾಷೆಯನ್ನಾಗಿ ಪರಿಗಣಿಸಬೇಕು.
ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಜೀವಂತಗೊಳಿಸಲು, ವಿಶ್ವ ಕೊಡವಾಲಜಿ (ಕೊಡವ ಶಾಸ್ತçದ ಜಾಗತಿಕ ಸಂಶೋಧನಾ ಅಧ್ಯಯನ ಕೇಂದ್ರ) ಸಂಶೋಧನಾ ಕೇಂದ್ರ ಮತ್ತು ಕೊಡವ ಸುಧಾರಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ನಮಗೆ ಭೂಮಿಯನ್ನು ನೀಡಬೇಕು.
ಜೀವನದಿ ಕಾವೇರಿಗೆ “ಕಾನೂನು ವ್ಯಕ್ತಿ ಸ್ಥಿತಿಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯು ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿದೆ. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪೂಜ್ಯ ಭಾವನೆಯಿಂದ ಗೌರವಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರ ಕೇಂದ್ರವಾಗಿ ತಲಕಾವೇರಿಯನ್ನು ಪರಿಗಣಿಸಬೇಕು.
1966 ರ ಹೆಲ್ಸಿಂಕಿ ನಿಯಮದ ಪ್ರಕಾರ ಕಾವೇರಿಯ ಪುಮುಖ ನೀರಿನ ಪಾಲನ್ನು ಕೊಡಗಿನಲ್ಲಿ ಬಳಸಿಕೊಳ್ಳಬೇಕು, ಕಾವೇರಿ ನೀರಿನ 740 ಟಿಎಂಸಿ ವಾರ್ಷಿಕ ಇಳುವರಿಯಲ್ಲಿ, ಕೊಡವ ನೆಲದ ಪಾಲು 200 ಟಿಎಂಸಿ ಗಿಂತ ಹೆಚ್ಚು ಆಗಿದೆ.
ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ಘಟಿಸಿದ ಅಮಾಯಕ ಕೊಡವರ ರಾಜಕೀಯ ಹತ್ಯೆಗಳ ನೆನಪಿನ ಸ್ಮಾರಕಗಳನ್ನು ಸ್ಥಾಪಿಸಬೇಕು. ಕೊಡವ ಶೌರ್ಯವನ್ನು ಪ್ರತಿಬಿಂಬಿಸುವ ಉಲುಗುಲಿ-ಸುಂಟಿಕೊಪ್ಪ ಮತ್ತು ಮುಳ್ಳುಸೋಗೆಯಲ್ಲಿ ಕೊಡವರ ಯುದ್ಧ ಸ್ಮಾರಕಗಳನ್ನು ಸ್ಥಾಪಿಸಬೇಕು. ದೇವಾಟ್ ಪರಂಟ್ ನಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕಗಳನ್ನು ನಮ್ಮ ಸಂವಿಧಾನದ 49 ವಿಧಿ ಅಡಿಯಲ್ಲಿ ಮತ್ತು 1964 ರ ವೆನಿಸ್ ಘೋಷಣೆ ಯಂತೆ ನಿರ್ಮಿಸಬೇಕು. ಈ ಎರಡೂ ದುರಂತಗಳನ್ನು ವಿಶ್ವ ರಾಷ್ಟ್ರ ಸಂಸ್ಥೆಯ (ಯು.ಎನ್.ಓ) ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು. ದೇವಟ್ ಪರಂಬ್ ಪ್ರಾಚೀನ ಯುದ್ಧಭೂಮಿಯಾಗಿದೆ ಮತ್ತು ಇದು ಕೊಡವ ಜನಾಂಗದ ದೇಶ ಮಂದ್ ಆಗಿದೆ. ಪ್ರಾಚೀನ ಯುದ್ಧಭೂಮಿಗಳಾದ ಕುರುಕ್ಷೇತ್ರ, ಕಳಿಂಗ ಮತ್ತು ವಾಟರ್ಲ್ಲೂ ಗಳನ್ನು ಪಾರಂಪರಿಕ ತಾಣಗಳಾಗಿ ರಕ್ಷಿಸಿದ ಪರಿಯಲ್ಲೇ ಅವುಗಳಿಗೆ ಸಮಾನ ಪ್ರಾಮುಖ್ಯತೆ ನೀಡಿ ಸಂರಕ್ಷಿಸಬೇಕು.
ಜನಸAಖ್ಯಾ ಬದಲಾವಣೆಯನ್ನು/ಪಲ್ಲಟವನ್ನು ತಡೆಗಟ್ಟಲು, ನಮ್ಮ ಆನುವಂಶಿಕ ಸಮುದಾಯ ಆಸ್ತಿಗಳನ್ನು ಮತ್ತು ನಮ್ಮ ಆಧ್ಯಾತ್ಮಿಕ ಪಾರಮಾರ್ಥಿಕ ನೆಲೆಗಳಾದ ಮಂದ್, ದೇವಕಾಡ್, ತೂಟ್‌ಂಗಲ, ಕ್ಯಾಕೊಳ ಗಳನ್ನು ರಕ್ಷಿಸಬೇಕು. ಕೊಡವರ ಜನ್ಮ ಭೂಮಿಯಲ್ಲಿ ನಮ್ಮ ಐತಿಹಾಸಿಕ ನಿರಂತರತೆಗೆ ಶಾಸನಬದ್ಧ ಅನುಮೋದನೆಗಾಗಿ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನ ಮಾದರಿಯಲ್ಲಿ ಇನ್ನರ್ ಲೈನ್ ರ‍್ಮಿಟ್ ಅನ್ನು ನೀಡಬೇಕು.
ಹೊಸ ಸಂಸತ್ತಿನಲ್ಲಿ ಕೊಡವ ಪ್ರಾತಿನಿಧ್ಯವನ್ನು ನೀಡಬೇಕು. ಕೇಂದ್ರ ವಿಸ್ತಾ” 9 ಡಿಸೆಂಬರ್ 1946 ರಿಂದ 24 ಜನವರಿ 1950 ರವರೆಗೆ, ಕೊಡವ ಜನಾಂಗದ ಸದಸ್ಯರು ಭಾರತದ ಸಂವಿಧಾನ ಸಭೆಯಲ್ಲಿ ಕೂರ್ಗ್/ ಕೊಡವ ಪ್ರಾಂತ್ಯವನ್ನು ಪ್ರತಿನಿಧಿಸಿದ್ದರು ಎಂದು ನಾಚಪ್ಪ ಪ್ರತಿಪಾದಿಸಿದರು.

ಚೀರಂಡ ಕಂದ, ಮುದ್ದಿಯಡ ಮಂಜು, ಆಲೆಮಾಡ ರೋಶನ್, ಆಲೆಮಾಡ ನವೀನ್, ಮಲ್ಚಿರ ಪೊನ್ನಣ್ಣ, ಕೋಳೆರ ಕಿಶನ್, ಚೀರಂಡ ದೀಪು, ಚೀರಂಡ ಅಯ್ಯಣ್ಣ, ಚೀರಂಡ ವಿಪಿನ್, ಚೀರಂಡ ಚಂಗಪ್ಪ, ಚೀರಂಡ ಪೆಮ್ಮಯ್ಯ, ಕೋಳೆರ ಮಿಲನ್, ಮಲ್ಚಿರ ತಶ್ವಿನ್ ಪೆಮ್ಮಯ್ಯ, ಮಾನಿಪಂಡ ಪೂವಣ್ಣ, ಕಿರದಂಡ ಉದಯ, ಮಲ್ಚಿರ ಹರ್ಷ, ಮಲ್ಚಿರ ಬೋಪಣ್ಣ, ಚೀರಂಡ ಮೇದಪ್ಪ, ಐನಂಡ ತಮ್ಮಯ್ಯ, ಕಳ್ಳಿಚಂಡ ಕೃಷ್ಣ, ಮುದ್ದಿಯಡ ಅರ್ಜುನ, ಕೋಳೆರ ಲೋಕೇಶ್, ಚೆಟ್ಟಂಗಡ ಉತ್ತಪ್ಪ, ಮಾನಿಪಂಡ ಶರತ್, ಮಾರೋಮಾಡ ಮಾಚಮ್ಮ, ಗಂಡಂಗಡ ಕೌಶಿಕ್ ದೇವಯ್ಯ, ಚೀರಂಡ ಮಂದಣ್ಣ, ಮನ್ನೇರ ಸತೀಶ್, ಬುದ್ದಿಯಡ ಬಿದ್ದಪ್ಪ, ಚೀರಂಡ ಸುನಿಲ್ ದೇವಯ್ಯ, ಮದ್ರಿರ ಸೋಮಯ್ಯ, ಅಲೆಮಾಡ ಕಾರ್ಯಪ್ಪ, ಚೆರಿಯಪಂಡ ಮಾಚಯ್ಯ, ಮುದ್ದಿಯಡ ಜೋಯಪ್ಪ, ತೀತಿರ ಉಮೇಶ್, ಕಳ್ಳಿಚಂಡ ಅಶೋಕ್, ಮುದ್ದಿಯಡ ಪ್ರಕಾಶ್, ಮುದ್ದಿಯಡ ಸುರೇಶ್ ಮತ್ತಿತರರು ಪಾಲ್ಗೊಂಡು ಕೊಡವ ಲ್ಯಾಂಡ್ ಹೋರಾಟಕ್ಕೆ ಸಿಎನ್‌ಸಿಯೊಂದಿಗೆ ಕೈಜೋಡಿಸುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
::: 4ನೇ ಹಂತದ ಪಾದಯಾತ್ರೆ :::
ಮುಂದಿನ ಪಾದಯಾತ್ರೆಯು ಪೊನ್ನಂಪೇಟೆ ತಾಲ್ಲೂಕಿನ ಕುಂದದಿಂದ ಅ.20 ರಿಂದ ಆರಂಭಗೊಂಡು ಬೆಳಗ್ಗೆ 10 ಗಂಟೆಗೆ ಬೊಟ್ಟಿಯತ್ ನಾಡ್, ಕುತ್ತ್ನಾಡ್ ಮತ್ತು ಬೆರಳಿನಾಡ್‌ಗಳ ಮೂಂದ್‌ನಾಡ್ ಕೈಮುಡಿಕೆ ಮಂದ್ ನಲ್ಲಿ ಸಮಾವೇಶಗೊಳ್ಳಲಿದೆ.
ಅ.21 ರಂದು ಬೆಳಗ್ಗೆ 10 ಗಂಟೆಗೆ ಪೆರವನಾಡ್ (ಬುಟ್ಟಂಗಾಲ-ನಾಂಗಲ) ಪಟ್ಟಿಬಾಣೆ ನಾಡ್ ಮಂದ್, ಮಧ್ಯಾಹ್ನ 2.30ಕ್ಕೆ ಬೊಟೋಳಿನಾಡ್ ನಾಡ್ ಮಂದ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.