Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ನದಿ ಗಡಿ ಗುರುತು ಮಾಡಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ : ನದಿಯ ಸಂರಕ್ಷಣೆಗೆ ಯೋಜನೆ ರೂಪಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ನದಿ ಗಡಿ ಗುರುತು ಮಾಡಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ : ನದಿಯ ಸಂರಕ್ಷಣೆಗೆ ಯೋಜನೆ ರೂಪಿಸಿ*

ಅಕ್ಟೋಬರ್ 12, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.12 : ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ, ನದಿ ತಟಗಳ ಅಭಿವೃದ್ಧಿ ಹಾಗೂ ನದಿ ವ್ಯಾಪ್ತಿಯ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರದಿಂದ ಯೋಜನೆ ರೂಪಿಸಬೇಕೆಂದು ಕಾವೇರಿ ರಿವರ್ ಸೇವಾ ಟ್ರಸ್ಟ್ ಮನವಿ ಮಾಡಿದೆ.
ಜಿಲ್ಲಾಧಿಕಾರಿ ವೆಂಕಟರಾಜಾ ಹಾಗೂ ಜಿ.ಪಂ ಸಿಇಓ ವರ್ಣಿತ್ ನೇಗಿ ಅವರಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಜೀವನದಿ ಕಾವೇರಿ ಕೊಡಗು ಜಿಲ್ಲೆಯಲ್ಲಿ ಮೂಲದಿಂದಲೇ ನಿರಂತರವಾಗಿ ಕಲುಷಿತಗೊಳ್ಳುತ್ತಿದ್ದು ಸಂರಕ್ಷಿಸುವ ಅಗತ್ಯವಿದೆ ಎಂದರು.
ನಗರ, ಪಟ್ಟಣ ಮತ್ತು ಗ್ರಾಮಗಳ ತ್ಯಾಜ್ಯ, ಕಲುಷಿತ ನೀರು ನದಿಗೆ ನೇರವಾಗಿ ಸೇರುತ್ತಿದೆ. ನದಿದಂಡೆ ಒತ್ತುವರಿಯಾಗುತ್ತಿದ್ದು, ಅಕ್ರಮವಾಗಿ ಹೊಟೇಲ್, ಅಂಗಡಿ ಮುಂಗಟ್ಟುಗಳು ನಿರ್ಮಾಣವಾಗುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ಅವೈಜ್ಞಾನಿಕವಾಗಿ ವಿಲೇವಾರಿಯಾಗಿ ನದಿ ಕಲುಷಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಡಿಕೇರಿ ತಾಲ್ಲೂಕಿನ ತಲಕಾವೇರಿ-ಭಾಗಮಂಡಲದಲ್ಲಿ ಸಮರ್ಪಕ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮುದಾಯ ಶೌಚಾಲಯ ಮತ್ತು ಸಮರ್ಪಕ ನಿರ್ವಹಣೆ, ಗ್ರಾ.ಪಂ ಗೆ ಕಸ ವಿಲೇವಾರಿಗೆ ವಾಹನ ಸೌಲಭ್ಯ, ಶಾಶ್ವತ ಪರಿಹಾರಕ್ಕೆ ಒಳಚರಂಡಿ ಯೋಜನೆ ಅನುಷ್ಠಾನ, ನಾಪೋಕ್ಲು ವ್ಯಾಪ್ತಿಯಲ್ಲಿ ನದಿ ತಟದಲ್ಲಿ ತಡೆಗೋಡೆ ನಿರ್ಮಾಣ, ನದಿ ತೀರದಲ್ಲಿರುವ ಒಂದು ಸಾವಿರಕ್ಕೂ ಅಧಿಕ ಮನೆಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಲ್ಪಿಸುವುದು, ಕಸ ವಿಲೇವಾರಿಗೆ ವಾಹನ ಸೌಲಭ್ಯ, ಕೊಂಡಂಗೇರಿ ಸೇತುವೆ ಬಳಿ ತ್ಯಾಜ್ಯ ಹಾಕುವುದನ್ನು ನಿರ್ಭಂದಿಸಿ ನದಿಯ ರಕ್ಷಣೆ ಮಾಡುವುದು, ನದಿ ಹರಿಯುವ ಮೂರ್ನಾಡು ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.
ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು ಮತ್ತು ಬೇತ್ರಿ ವ್ಯಾಪ್ತಿಯಲ್ಲಿ ನದಿ ನೀರು ಕಲುಷಿತವಾಗುತ್ತಿದೆ. ಹಾಲುಗಂದ, ಕಣ್ಣಂಗಾಲ ಮತ್ತು ಸಿದ್ದಾಪುರ ನದಿ ತಟದಲ್ಲಿ ಇದೇ ಪರಿಸ್ಥಿತಿ ಇದ್ದು, ಮನೆಗಳಿಂದ ನೇರವಾಗಿ ತ್ಯಾಜ್ಯ ನದಿಗೆ ಸೇರುತ್ತಿದೆ. ನದಿ ತಟದಲ್ಲಿರುವ ಮನೆಗಳನ್ನು ಸ್ಥಳಾಂತರಿಸಿ, ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಬೇಕು.
ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು, ಸೂಚನಾ ಫಲಕದ ಮೂಲಕ ಜನರಿಗೆ ಅರಿವು ಮೂಡಿಸಬೇಕು, ಮಾರುಕಟ್ಟೆ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಾಣ, ನಿರ್ವಹಣೆ, ಮಾಂಸದ ಅಂಗಡಿಗಳಿAದ ಹೊರಸೂಸುವ ತ್ಯಾಜ್ಯಗಳ ಸಮರ್ಪಕ ವಿಲೇವಾರಿ, ಒಳಚರಂಡಿ ಯೋಜನೆಯ ಕ್ರಮಕ್ಕೆ ಆದ್ಯತೆ ನೀಡಬೇಕು. ಮನೆಗಳನ್ನು ತೆರವುಗೊಳಿಸಿ ಪುನರ್ವಸತಿ ಕಲ್ಪಿಸಬೇಕು ಮತ್ತು ನದಿ ತಟವನ್ನು ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದರು.
ಕುಶಾಲನಗರ ವ್ಯಾಪ್ತಿಯಲ್ಲಿ ನಂಜರಾಯಪಟ್ಟಣದ ದುಬಾರೆ ಕಾವೇರಿ ನಿಸರ್ಗಧಾಮದಲ್ಲಿ ಮೋಟರ್ ಬೋಟ್‌ಗಳನ್ನು ರದ್ದುಗೊಳಿಸಿ ಪೆಡಲ್ ಬೋಟ್‌ಗಳನ್ನು ಜಿಲ್ಲಾಡಳಿತ ಒದಗಿಸಬೇಕು. ನದಿಗೆ ಇಳಿಯಲು ಮತ್ತು ನಿರ್ಗಮಿಸಲು ಪ್ರತ್ಯೇಕ ಗೇಟ್‌ಗಳನ್ನು ಅಳವಡಿಸಬೇಕು. ರ‍್ಯಾಫ್ಟಿಂಗ್ ಕ್ರೀಡೆ ಬಗ್ಗೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವಂತೆ ಸೂಚಿಸಬೇಕು. ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಬೇಕು.
ಚಿಕ್ಲಿಹೊಳೆ ಮತ್ತು ಹಾರಂಗಿ ಅಣೆಕಟ್ಟೆ ಬಳಿ ಆನೆಗಳ ಶಿಬಿರ ಪ್ರಾರಂಭಿಲು ಅರಣ್ಯ ಇಲಾಖೆಗೆ ಆದೇಶ ನೀಡಬೇಕು, ಪ್ರವಾಸಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಬೇಕು, ಪ್ರವಾಸಿ ಕೇಂದ್ರಗಳಲ್ಲಿ ಕಸದ ಬುಟ್ಟಿ ಅಳವಡಿಸಬೇಕು, ಗ್ರಾಮ ಮತ್ತು ಪ್ರವಾಸಿ ಕೇಂದ್ರಗಳನ್ನು ಖಾಸಗಿ ಸಂಸ್ಥೆಗಳ ಮೂಲಕ ನಿರ್ವಹಣೆ ಮಾಡಬೇಕು.
ಮಳೆಗಾಲದ ಅವಧಿಯಲ್ಲಿ ಕುಶಾಲನಗರ ಪಟ್ಟಣದ ಬಹುತೇಕ ಬಡಾವಣೆಗಳು ಜಲಾವೃತಗೊಳ್ಳುತ್ತಿದ್ದು, ತಜ್ಞರ ಸಮಿತಿ ಮೂಲಕ ಕಾರಣ ಹುಡುಕಬೇಕು. ಬೈಚೇನಹಳ್ಳಿ- ತಾವರೆಕೆರೆ ಬಳಿಯಿಂದ ಕುಶಾಲನಗರದ ಹಳೆ ಮಾರುಕಟ್ಟೆ ವರೆಗೆ ನದಿಗೆ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ನದಿ ತಟಗಳ ಒತ್ತುವರಿಯನ್ನು ತೆರವುಗೊಳಿಸಿ ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸೋದ್ಯಮಕ್ಕೆ ಕ್ರಿಯಾಯೋಜನೆ ರೂಪಿಸಬೇಕು.
ಮೀನು, ಮಾಂಸದAಗಡಿಗಳನ್ನು ನದಿ ತಟದಿಂದ ದೂರ ಇಟ್ಟು ವ್ಯಾಪಾರ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಕೂಡಿಗೆ ಹಾಲಿನ ಡೈರಿಯಿಂದ ನದಿಗೆ ಕುಲುಷಿತ ನೀರು ಹರಿಯದಂತೆ ಎಚ್ಚರವಹಿಸಬೇಕು, ಕುಶಾಲನಗರ ಸಮೀಪದ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಶುಂಠಿ ತೊಳೆಯುವ ಘಟಕಗಳನ್ನು ತೆರವುಗೊಳಿಸಬೇಕು, ಕುಶಾಲನಗರ ಒಳಚರಂಡಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಚಂದ್ರಮೋಹನ್ ಒತ್ತಾಯಿಸಿದರು.
ಒರಿಸ್ಸಾದ ಶ್ರೀ ಓಂಕಾರನಂದ ಸರಸ್ವತಿ ಸ್ವಾಮೀಜಿ, ಶ್ರೀರಂಗ ಪಟ್ಟಣ ಕಾವೇರಿ ತೀರ್ಥಯಾತ್ರಾ ಸಮಿತಿ ಸ್ಥಾಪಕ ಅಧ್ಯಕ್ಷ ಶ್ರೀ ಗಣೇಶ ಸ್ವರೂಪಾನಂದ ಸ್ವಾಮೀಜಿ, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಜಿಲ್ಲಾ ಸಂಚಾಲಕರಾದ ರೀನಾ ಪ್ರಕಾಶ್, ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.