Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ವಿಶೇಷ ಶಿಕ್ಷಣ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ವಿಶೇಷ ಶಿಕ್ಷಣ ಕಾರ್ಯಕ್ರಮ*

ಅಕ್ಟೋಬರ್ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 : ಸಹಕಾರ ಸಂಘಗಳು ಪ್ರಜಾಸತ್ತಾತ್ಮಕ ಸಂಸ್ಥೆಗಳಾಗಿದ್ದು, ಸದಸ್ಯರೇ ಸಹಕಾರ ಸಂಸ್ಥೆಗಳನ್ನ ನಿರ್ವಹಿಸುವ ಮತ್ತು ನಿಯಂತ್ರಿಸುವ ವ್ಯವಸ್ಥೆ ಇದೆ. ಸಹಕಾರ ಸಂಘಗಳು ಕಾರ್ಯನೀತಿ ರೂಪಿಸುವಲ್ಲಿ ನಿರ್ಧಾಗಳನ್ನು ಕೈಗೊಳ್ಳುವ ಕಾರ್ಯದಲ್ಲಿ ಮತ್ತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಪ್ರತಿಯೊಬ್ಬ ಸದಸ್ಯನಿಗೆ ಹಕ್ಕುಂಟು. ಆದರೆ ಪ್ರಜಾಪ್ರಭುತ್ವ ಸ್ವೇಚ್ಛಾಚಾರವಾಗಿರಬಾರದು. ಕಾರ್ಯನಿರ್ವಹಣೆಯು ಉಪನಿಯಮಗಳ, ನಿಯಮಗಳ ಹಾಗೂ ಸಹಕಾರಿ ಅಧಿನಿಯಮ ಮತ್ತು ಇತರ ಅಧಿನಿಯಮಗಳ ಮಿತಿಗೊಳಪಟ್ಟು ನಿಯಂತ್ರಿಸಲ್ಪಟ್ಟಲ್ಲಿ ಸಂಘಗಳು ಉತ್ತಮ ರೀತಿಯಲ್ಲಿ ಸಾಗುತ್ತವೆ ಎಂದು ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟರು.
ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗೆ ಸಹಕಾರ ಕಾಯ್ದೆ, ಕಾನೂನು, ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ, ಭಾರತವು ವಿಶ್ವದಲ್ಲಿ ಅತಿ ಹೆಚ್ಚು ಹಾಲು ಉತ್ಪಾದಕ ಮತ್ತು ಗ್ರಾಹಕ ರಾಷ್ಟ್ರವಾಗಿದೆ. ಕರ್ನಾಟಕವು ಹಾಲು ಉತ್ಪಾದನೆಯಲ್ಲಿ ದೇಶದ 9ನೇ ಸ್ಥಾನದಲ್ಲಿದೆ. ಆದರೆ ಕೊಡಗು ಜಿಲ್ಲೆ ಮಾತ್ರ ಹಾಲು ಉತ್ಪಾದನೆಗಿಂತ ಗ್ರಾಹಕ ಜಿಲ್ಲೆಯಾಗುತ್ತಿದೆ. ಜಿಲ್ಲೆಯ ಕುಶಾಲನಗರ ಮತ್ತು ಸೋಮವಾರಪೇಟೆಯ ಕೆಲ ಪ್ರದೇಶಗಳನ್ನು ಹೊರತುಪಡಿಸಿದರೆ ಹೈನೋದ್ಯಮವು ಅಪರೂಪವಾಗಿದೆ. ಹಾಲಿಗೆ ಹೆಚ್ಚುತ್ತಿರುವ ಬೇಡಿಕೆ, ಸರ್ಕಾರದ ಬೆಂಬಲ, ಸುಧಾರಿತ ತಳಿ ಮತ್ತು ಆಹಾರ ಪದ್ಧತಿಗಳಿಂದಾಗಿ ಡೈರಿ ವಲಯವು ಅಂದರೆ ಹಾಲು ಉತ್ಪಾದಕರ ಸಹಕಾರ ಸಂಘ ದೇಶದ ಜಿ.ಡಿ.ಪಿ. ಗೆ ಗಣನೀಯ ಕೊಡುಗೆ ನೀಡುತ್ತದೆ ಹಾಗೂ ಪ್ರಜೆಗಳ ಪೌಷ್ಠಿಕಾಂಶದ ಅಗತ್ಯತೆಗಳನ್ನು ಪೂರೈಸುತ್ತದೆ ಎಂದರು.
ಕರ್ನಾಟಕವು ಭಾರತದ ಅತಿಹೆಚ್ಚು ಕಾಫಿ ಉತ್ಪಾದಿಸುವ ರಾಜ್ಯವಾಗಿದೆ. ದೇಶದ ಶೇ.70 ರಷ್ಟು ಕಾಫಿಯು ನಮ್ಮ ರಾಜ್ಯದಲ್ಲಿ ಬೆಳೆಯಲಾಗುತ್ತದೆ. ಅದರಲ್ಲಿ ಜಿಲ್ಲೆಯ ಕೊಡಗು ಶೇ.50 ರಷ್ಟು ಎಂದರೆ ದೇಶದ ಶೇ.35 ರಷ್ಟು ಉತ್ಪಾದಿಸಲಾಗುತ್ತಿದೆ. ಆದರೆ ಇದನ್ನು ಬೆಳೆಯಲು ಉಪಯೋಗಿಸುವ ಸಗಣಿ ಗೊಬ್ಬರಕ್ಕೆ ಜಿಲ್ಲೆಯವರು ದುಪ್ಪಟ್ಟು ಬೆಲೆ ನೀಡುತ್ತಿದ್ದಾರೆ. ಸಗಣಿ ಗೊಬ್ಬರವನ್ನು ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದಲೂ ಖರೀದಿಸುತ್ತಿದ್ದು, ಕಾಫಿ ಕೃಷಿ ದುಬಾರಿಯಾಗಿ ಪರಿಣಮಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಆದ್ದರಿಂದ ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗಳು ಹೆಚ್ಚಿನ ಮುತುವರ್ಜಿ ವಹಿಸಿ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡಿದರೆ ಜಿಲ್ಲೆಯ ಪ್ರಮುಖ ಕೃಷಿ ಕಾಫಿಯ ಉತ್ಪಾದನಾ ವೆಚ್ಚ ಕಡಿಮೆಯಾಗಿ ಬೆಳೆಗಾರರಿಗೆ ಅನುಕೂಲವಾಗುತ್ತದೆ. ಉದ್ಯೋಗ ಸೃಷ್ಠಿಯೂ ಹೆಚ್ಚಾಗುತ್ತದೆ. ಸಮಾಜದಲ್ಲಿ ಉತ್ಪಾದನೆಯಿಂದ ಆರಂಭಿಸಿ ಮಾರಾಟದವರೆಗೆ ಸಹಕಾರ ವ್ಯವಸ್ಥೆ ಅತ್ಯಾವಶ್ಯಕವಾಗಿದೆ. ಸಹಕಾರ ಸಂಘ ಸಮರ್ಪಕವಾಗಿ ನಡೆಯಲು ನಿರ್ಧಿಷ್ಠ ಗುರಿ, ಉದ್ದೇಶದೊಂದಿಗೆ ಪಾರದರ್ಶಕ ವ್ಯವಸ್ಥೆ ಇರಬೇಕು. ಪರಿಣಾಮಕಾರಿಯಾಗಿ ಸಂಸ್ಥೆ ನಡೆಯಲು ಲೆಕ್ಕಪತ್ರ ಸರಿಯಾಗಿರಬೇಕು. ಆಗ ಮಾತ್ರವೇ ಸಕಾಲದಲ್ಲಿ ಕೆಲಸ ಕಾರ್ಯಗಳು ನಡೆದು ಸದಸ್ಯರಿಗೆ ನ್ಯಾಯ ಸಿಗುತ್ತದೆ. ಅಂತೆಯೇ ಸಂಘ ಬಲಿಷ್ಠವಾಗುತ್ತದೆ. ಶಿಕ್ಷಣ-ತರಬೇತಿ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿ ಕೊಡಗು ಕೇವಲ ಹಾಲಿನ ಗ್ರಾಹಕ ಮಾತ್ರವಾಗದೆ ಉತ್ಪಾದಕ ಮತ್ತು ಸರಬರಾಜು ಜಿಲ್ಲೆಯಾಗಿ ಮಾರ್ಪಾಡಾಗಬೇಕೆಂದು ಆಶಿಸಿದರು.
ವೇದಿಕೆಯಲ್ಲಿ ಯೂನಿಯನ್ ನಿರ್ದೇಶಕ ಎನ್.ಎ.ರವಿ ಬಸಪ್ಪ, ಪಿ.ಬಿ. ಯತೀಶ್ ಹಾಜರಿದ್ದರು.
ಲೆಕ್ಕಪತ್ರ ನಿರ್ವಹಣೆ ಬಗ್ಗೆ ಸಹಕಾರ ಸಂಘಗಳ ನಿವೃತ್ತ ಹಿರಿಯ ಲೆಕ್ಕಪರಿಶೋಧಕರಾದ ಡಿ.ಎನ್. ಚಂದ್ರಶೇಖರ್, ಸಹಕಾರ ಕಾಯ್ದೆ-ಕಾನೂನು ಕುರಿತು ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ. ವಿಜಯೇಂದ್ರ, ಹಾಲಿನ ಶೇಖರಣೆ-ಸಂಗ್ರಹಣೆ ಕುರಿತು ವಿಸ್ತರಣಾಧಿಕಾರಿ ಬಿ.ವಿ. ವೀಣಾ ಉಪನ್ಯಾಸ ನೀಡಿದರು.
ಕೆ.ಟಿ. ಶ್ಯಾಮಲಾ ಪ್ರಾರ್ಥಿಸಿದರು. ಯೂನಿಯನ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು. ವ್ಯವಸ್ಥಾಪಕಿ ಆರ್. ಮಂಜುಳ, ಕೆ.ಎಸ್. ಸುರೇಶ್ ಕಾರ್ಯಕ್ರಮ ನಿರ್ವಹಣೆಗೆ ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.