Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಿ : ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಿ : ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಸಲಹೆ*

ಅಕ್ಟೋಬರ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 : ಲೋಕಾಯುಕ್ತಕ್ಕೆ ದೂರು ಬಾರದಂತೆ ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಅವರು ಸಲಹೆ ಮಾಡಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸಿದ ಬಳಿಕ ಅವರು ಮಾತನಾಡಿದರು.
ಲೋಕಾಯುಕ್ತಕ್ಕೆ ದೂರು ಬಂದು ವಿಚಾರಣೆ ಆರಂಭಿಸಿದರೆ ಅಲೆಯಬೇಕಾಗುತ್ತದೆ. ಆದ್ದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಬೇಕು. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕರು ಕಚೇರಿಗೆ ಆಗಮಿಸಿದಾಗ ಅವರ ಕುಂದುಕೊರತೆಯನ್ನು ಸಮಾದಾನದಿಂದ ಆಲಿಸಬೇಕು. ಕಚೇರಿಗೆ ಬಂದವರನ್ನು ಕೂರಿಸಿ ಮಾತನಾಡಬೇಕು ಎಂದು ಸುರೇಶ್ ಬಾಬು ಅವರು ಸಲಹೆ ಮಾಡಿದರು.
ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು ಬಂದಿರುವುದು ಎಂಬುದನ್ನು ಅರಿತುಕೊಳ್ಳಬೇಕು. ಸಾರ್ವಜನಿಕರ ಮನವಿಗೆ ಸ್ಪಂದಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು ಎಂದು ಹೇಳಿದರು.
ಜನರ ನಿರೀಕ್ಷೆಯನ್ನು ಅಲ್ಪಸ್ವಲ್ಪವನ್ನಾದರೂ ಈಡೇರಿಸಿದರೆ ಆತ್ಮತೃಪ್ತಿ ಉಂಟಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಿಸುವಂತೆ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಅವರು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಸೈನಿಕರ ಸಂಖ್ಯೆ ಹೆಚ್ಚಿದ್ದಾರೆ. ಸೈನಿಕರ ಕೆಲಸವನ್ನು ಆದ್ಯತೆ ಮೇಲೆ ನಿರ್ವಹಿಸಬೇಕು ಎಂದು ಲೋಕಾಯುಕ್ತ ಎಸ್‌ಪಿ ಅವರು ಸಲಹೆ ನೀಡಿದರು.
ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ಮಾತನಾಡಿ ಲೋಕಾಯುಕ್ತ ಸಭೆಗೆ ಎಲ್ಲಾ ಹಂತದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಳ ಮಟ್ಟದ ಸಿಬ್ಬಂದಿಗಳನ್ನು ಕಳುಹಿಸಿಕೊಟ್ಟು ಸುಮ್ಮನಿರಬಾರದು ಎಂದು ತಾಕೀತು ಮಾಡಿದರು.
ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್ ಅವರು ಮಾತನಾಡಿ ಕಚೇರಿಗೆ ಯಾರೇ ಬಂದರು ಸಹ ಸಂದರ್ಶಕರ ಹೆಸರು, ಮಾಹಿತಿಯನ್ನು ಬರೆಸಿಕೊಳ್ಳಬೇಕು. ಕಚೇರಿ ಕಾರ್ಯನಿರ್ವಹಣೆಯನ್ನು ಸರಿಯಾಗಿ ಜತನ ಮಾಡಬೇಕು ಎಂದು ಅವರು ತಿಳಿಸಿದರು.
ಶುಕ್ರವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಖಾತೆ ಬದಲಾವಣೆ, ಸರ್ವೇ ಮಾಡುವುದು, ಮತ್ತಿತರ ಅರ್ಜಿಗಳು ಸಲ್ಲಿಕೆಯಾದವು. ಈ ಸಂದರ್ಭದಲ್ಲಿ ಎಂ.ಬಿ.ದೇವಯ್ಯ ಅವರು ಗೋಮಾಳ ಸರ್ವೇ ಮಾಡಿಸಬೇಕು ಎಂದು ಲೋಕಾಯುಕ್ತ ಎಸ್‌ಪಿ ಅವರಿಗೆ ಮನವಿ ಮಾಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಸಾರ್ವಜನಿಕರಿಂದ 12 ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ 2 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ನಮೂನೆ 1 ಮತ್ತು 2 ನ್ನು ನೀಡಲಾಯಿತು. ಉಳಿದಂತೆ 10 ಅರ್ಜಿಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಹಾಜರಿದ್ದ ತಹಶೀಲ್ದಾರ್, ಸರ್ವೆ ಇಲಾಖೆ, ತಾಲೂಕು ಪಂಚಾಯಿತಿ, ಅರಣ್ಯ ಇಲಾಖೆ, ಪಿಡಬ್ಲ್ಯೂಡಿ ಇಲಾಖೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ, ಅಗ್ನಿಶಾಮಕ ಇಲಾಖೆ ಗ್ರಾಮಾಂತರ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಅರ್ಜಿಯನ್ನು ವಿಚಾರಣೆ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.