Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*
  • *ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*
  • *ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*
  • *ಕೂಡುಮಂಗಳೂರು : ಡಾ ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ : ಟಿ.ಜಿ.ಪ್ರೇಮಕುಮಾರ್*
  • *ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*
  • *ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ*
  • *ಕೆ.ಜಯಲಕ್ಷ್ಮಿ ಅವರ ‘ನಡೆದಷ್ಟೂ ದಾರಿ’ ಕೃತಿ ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀಕಾವೇರಿ ತುಲಾ ಸಂಕ್ರಮಣ : ತಲಕಾವೇರಿಯಲ್ಲಿ ಭರದ ಸಿದ್ಧತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀಕಾವೇರಿ ತುಲಾ ಸಂಕ್ರಮಣ : ತಲಕಾವೇರಿಯಲ್ಲಿ ಭರದ ಸಿದ್ಧತೆ*

ಅಕ್ಟೋಬರ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.15 : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಹಿನ್ನೆಲೆ ಶ್ರೀ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಪವಿತ್ರ ಕ್ಷೇತ್ರದಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಭಾಗಮಂಡಲ ಭಗಂಡೇಶ್ವರ ದೇವಾಲಯ, ತ್ರಿವೇಣಿ ಸಂಗಮ ಹಾಗೆಯೇ ತಲಕಾವೇರಿ ಕೇತ್ರಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಭಾಗಮಂಡಲ ದೇವಾಲಯದಲ್ಲಿ ನಂದಾದೀಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಷಯ ಪಾತ್ರೆ ಇರಿಸಿದರು.
ನಂತರ ಭಾಗಮಂಡಲದ ಭಗಂಡೇಶ್ವರ, ಮಹಾಗಣಪತಿ, ಸುಬ್ರಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿ, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಾಂಸ್ಕೃತಿಕ ಗೀತಾ ಗಾಯನ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ, ಭಕ್ತಾಧಿಗಳ ಅನುಕೂಲಕ್ಕಾಗಿ ಬ್ಯಾರಿಕೇಡ್ ನಿರ್ಮಾಣ, ಅಗತ್ಯ ವ್ಯವಸ್ಥೆಗಳು ಮತ್ತಿತರ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.
ಹಾಗೆಯೇ ನಾಡಿನ ಜೀವನದಿ, ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧಿಸಿದಂತೆ ಸಿದ್ಧತೆ ಬಗ್ಗೆ ಹಲವು ಮಾಹಿತಿ ನೀಡಿದರು.
ಬಳಿಕ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಒಂದು ತಿಂಗಳಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಾಹನ ನಿಲುಗಡೆ, ಭಾಗಮಂಡಲದಿಂದ ತಲಕಾವೇರಿಯವರೆಗೆ, ತಲಕಾವೇರಿಯಿಂದ ಭಾಗಮಂಡಲದವರೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಅಗತ್ಯ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಹಿಂದಿನಂತೆ ಅನ್ನದಾನ ನಡೆಯಲಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಭಾಗಮಂಡಲದಿಂದ ತಲಕಾವೇರಿ ವರೆಗೆ ವಿದ್ಯುತ್ ದೀಪ, ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೈದ್ಯರು ಮತ್ತು ಶ್ರುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುವುದು ಎಂದು ಸಚಿವರು ಹೇಳಿದರು.
ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಪವಿತ್ರ ಸ್ಥಳದಲ್ಲಿ ಪ್ಲಾಸ್ಟಿಕ್‌ನ್ನು ಬಳಸಬಾರದು. ಸ್ವಪ್ರೇರಣೆಯಿಂದ ಭಕ್ತಾಧಿಗಳೇ ಪ್ಲಾಸ್ಟಿಕ್‌ನ್ನು ನಿಯಂತ್ರಿಸಬೇಕು. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಕೋರಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾಹಿತಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 2 ಡಿವೈಎಸ್‌ಪಿ, 9 ಪೊಲೀಸ್ ಇನ್ಸ್ಪೆಕ್ಟರ್, 15 ಸಬ್ ಇನ್ಸ್ಪೆಕ್ಟರ್‌ಗಳು, 30 ಮಂದಿ ಸಹಾಯಕ ಸಬ್ ಇನ್ಸ್ಪೆಕ್ಟರ್‌ಗಳು, 350 ಹೆಡ್‌ಕಾನ್ಸಟೇಬಲ್, ಅಗತ್ಯ ಪೊಲೀಸರು, ಜೊತೆಗೆ ಗೃಹ ರಕ್ಷಕದಳದವರು ಕರ್ತವ್ಯ ನಿರ್ವಹಿಸಲಿದ್ದು, ಅಗತ್ಯ ಬಂದೋ ಬಸ್ತ್ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಭಾಗಮಂಡಲದಿಂದ-ತಲಕಾವೇರಿ, ತಲಕಾವೇರಿಯಿಂದ ಭಾಗಮಂಡಲಕ್ಕೆ 20 ಬಸ್‌ಗಳು ಸಂಚರಿಸಲಿವೆ. ಹಾಗೆಯೇ ಜನದಟ್ಟಣೆ ನೋಡಿಕೊಂಡು ಮಡಿಕೇರಿ-ಭಾಗಮಂಡಲ, ಭಾಗಮಂಡಲದಿಂದ-ಮಡಿಕೇರಿ ಮಾರ್ಗ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರಾದ ಮೆಹಬೂಬ ಆಲಿ ಅವರು ಮಾಹಿತಿ ನೀಡಿದರು.
ಮಡಿಕೇರಿ-ಭಾಗಮಂಡಲ, ತಲಕಾವೇರಿಗೆ ತೆರಳುವ ರಸ್ತೆಗಳ ಗುಂಡಿಮುಚ್ಚುವ ಕಾರ್ಯ ಪೂರ್ಣಗೊಳ್ಳುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ ಅವರು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಭಾಗಮಂಡಲ-ಭಗಂಡೇಶ್ವರ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಪೊನ್ನಣ್ಣ, ಭಾಗಮಂಡಲ ತಲಕಾವೇರಿ ದೇವಾಲಯಗಳ ಪ್ರಮುಖರಾದ ಬಿ.ಎಸ್.ತಮ್ಮಯ್ಯ, ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಅಪ್ಪಾಜಿ, ಕೋಡಿ ಮೋಟಯ್ಯ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.14 NEWS DESK : ದೇವಾಲಯ ಹಾಗೂ ಮಠ ಮಂದಿರಗಳು ಮನುಷ್ಯನ ಅಂತರಂಗ ಶುದ್ದಿಯ ಆಲಯಗಳು ಎಂದು ಅರಮೇರಿ…

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026

*ಕೂಡುಮಂಗಳೂರು : ಡಾ ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 14, 2026

*ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 14, 2026

*ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ*

ಏಪ್ರಿಲ್ 14, 2026

*ಕೆ.ಜಯಲಕ್ಷ್ಮಿ ಅವರ ‘ನಡೆದಷ್ಟೂ ದಾರಿ’ ಕೃತಿ ಲೋಕಾರ್ಪಣೆ*

ಏಪ್ರಿಲ್ 13, 2026

*ಕುಟ್ಟದಲ್ಲಿ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಾಣ : ಸಾರ್ವಜನಿಕರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಮಹೇಶ್ ಕುಮಾರ್*

ಏಪ್ರಿಲ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.