Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*
  • *ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*
  • *ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.20 ರಿಂದ ಸಿಎನ್‍ಸಿ 4ನೇ ಹಂತದ ಪಾದಯಾತ್ರೆ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.20 ರಿಂದ ಸಿಎನ್‍ಸಿ 4ನೇ ಹಂತದ ಪಾದಯಾತ್ರೆ ಆರಂಭ*

ಅಕ್ಟೋಬರ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.18 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಐದು ಹಂತಗಳಲ್ಲಿ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ಹಂತ ಅ.20 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕುಂದದಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಬೊಟ್ಟಿಯತ್‍ನಾಡ್ (ಕುಂದ), ಕುತ್‍ನಾಡ್ (ಬಿ.ಶೆಟ್ಟಿಗೇರಿ) ಮತ್ತು ಬೆರಳಿನಾಡ್ (ಕಂಡಂಗಾಲ) ನ ಮೂರು ನಾಡುಗಳ ಮಂದ್ “ಕೈಮುಡಿಕೆ ಮಂದ್” ನಲ್ಲಿ ಬೆಳಗ್ಗೆ 10.30 ಗಂಟೆಗೆ ಕೊಡವ ಜನಜಾಗೃತಿ ಸಭೆ ನಡೆಯಲಿದೆ.
ಅ.21 ರಂದು ಬೆಳಗ್ಗೆ 10 ಗಂಟೆಗೆ ಬಿಟ್ಟಂಗಾಲ ಜಂಕ್ಷನ್ ಬಳಿಯಿಂದ ಪಾದಯಾತ್ರೆ ಆರಂಭಗೊಳಲಿದೆ. ನಂತರ ಪಟ್ಟಿಬಾಣೆ ಮಂದ್ ಪೆರವನಾಡ್ (ಬುಟ್ಟಂಗಾಲ) ನಲ್ಲಿ ಮತ್ತು ಮಧ್ಯಾಹ್ನ 2.30 ಗಂಟೆಗೆ ಬೋಟೋಳಿನಾಡ್ (ವಿರಾಜಪೇಟೆ ತಾಲ್ಲೂಕಿನ ಆರ್ಜಿ ಬೊಟೋಳಿ,)ನಲ್ಲಿ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ.
ಕೊಡವ, ಕೊಡವತಿಯರು ಕೋವಿಯೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಪಾಲ್ಗೊಳ್ಳಲಿದ್ದು, 9 ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸಂವಿಧಾನದ ವಿಧಿಗಳಡಿಯಲ್ಲಿ ಕೊಡವ ಸಮುದಾಯಕ್ಕೆ ರಕ್ಷಣೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಅತ್ಯಂತ ಶ್ರೇಷ್ಠ ಮತ್ತು ಶಾಶ್ವತವೂ ಆಗಿರುವುದರಿಂದ ಸಂವಿಧಾನದಡಿಯಲ್ಲಿ ಕೊಡವರಂತಹ ಸೂಕ್ಷ್ಮ ಬುಡಕಟ್ಟು ಜನಾಂಗವನ್ನು ವಿಶೇಷವಾಗಿ ರಕ್ಷಿಸುವುದು ರಾಜ್ಯಾಂಗದತ್ತ ಋಣಭಾರವಾಗಿದೆ.
ಕೊಡವರು ಕೊಡವ ನೆಲದ ಪ್ರಾಚೀನ ಬುಡಕಟ್ಟು ಜನರಾಗಿದ್ದು, ಕೊಡವ ಮಂದ್ ಗಳು, ಜಲದೇವತೆ ಕಾವೇರಿ, ಸೂರ್ಯ, ಚಂದ್ರ, ಭೂಮಿತಾಯಿಯಷ್ಟೇ ಪವಿತ್ರವೂ ಆಗಿದ್ದಾರೆ. ಪ್ರಾಚೀನ ಬುಡಕಟ್ಟು ಕೊಡವ ಜನಾಂಗವನ್ನು ಈ ದೇಶದ ಜನ ಹಾಗೂ ಸರ್ಕಾರ ಸಂವಿಧಾನದ 51 ಎ.ಎಫ್ ವಿಧಿ ಮತ್ತು ವಿಶ್ವ ರಾಷ್ಟ್ರ ಸಂಸ್ಥೆಯ ಸನದ್ ನ ಪ್ರಕಾರ ರಕ್ಷಿಸಿ ಪೋಷಿಸಿ ಕಾಪಾಡಬೇಕಾಗಿದೆ.
ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮಾತ್ರ ಸೀಮಿತರಾಗಿ ಕಾಶ್ಮೀರದಲ್ಲಿ ತಾಯಿ ಬೇರನ್ನು ಹೊಂದಿದ್ದಾರೆ. ಕೊಡವರು ಕೂಡ ಕೊಡಗಿನ ಆದಿಮಸಂಜಾತರಾಗಿದ್ದು, ಕೊಡಗು ಹೊರತು ಪಡಿಸಿ ಕೊಡಗಿನ ಹೊರಗೆ ಕೊಡವರಿಗೆ ಎಲ್ಲೂ ತಾಯಿ ಬೇರಿಲ್ಲ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಡವ ಬಾಹುಳ್ಯ ಜನ್ಮ ಭೂಮಿಯನ್ನು ಸಂವಿಧಾನದ 244 ವಿಧಿ ಹಾಗೂ 6 ಮತ್ತು 8 ನೇ ಶೆಡ್ಯೂಲ್ ಪ್ರಕಾರ ಕೊಡವರ ಸ್ವಯಂ ಶಾಸನದ ಜನ್ಮಭೂಮಿ ಎಂದು ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್, ಬೋಡೋ ಲ್ಯಾಂಡ್, ಕರ್ಬಿ ಹಾಂಗ್ ಲಾಂಗ್ ಲ್ಯಾಂಡ್, ಗಾರೊಲ್ಯಾಂಡ್, ಜಯಂತಿಯ ಲ್ಯಾಂಡ್, ಕಾಸಿ ಹಿಲ್ಸ್ ಲ್ಯಾಂಡ್ ಇತ್ಯಾದಿ ಭಾರತದ ಈಶಾನ್ಯ ರಾಜ್ಯಗಳ ಹತ್ತು ಸ್ವಾಯತ್ತ ಪ್ರದೇಶಗಳು ಮತ್ತು ಪರಿಷತ್ ಗಳು ಹಾಗೂ ಲಡಾಕ್ ನ ಲೇಹ್ ಮತ್ತು ಲಡಾಕ್ ಬುದ್ದಿಷ್ಠ್ ಅಟೋನಮಸ್ ಕೌನ್ಸಿಲ್ ಮಾದರಿಯಲ್ಲಿ ಘೋಷಿಸಿ ಶಾಸನಬದ್ಧಗೊಳಿಸಬೇಕು ಎಂಬುವುದು ನಮ್ಮ ಬೇಡಿಕೆಯಾಗಿದೆ.
ಇದನ್ನು ಈಡೇರಿಸುವಂತೆ ಒತ್ತಾಯಿಸಿ ಸಿಎನ್‍ಸಿ ಸಂಘಟನೆಯಿಂದ ನಿರಂತರವಾಗಿ ಶಾಂತಿಯುತ ಹೋರಾಟಗಳನ್ನು ನಡೆಸುತ್ತಾ ಬರಲಾಗುತ್ತಿದ್ದು, ಮುಂದುವರೆದ ಭಾಗವಾಗಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*

ಜುಲೈ 30, 2026

*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*

ಜುಲೈ 30, 2026

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026

*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*

ಜುಲೈ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.30 : ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ…

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.