Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ*

October 20, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.20 :  ಮಡಿಕೇರಿ ಅ.20 : ಪುಟಾಣಿ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣದೊಂದಿಗೆ, ಸಾಮಾಜಿಕ ವ್ಯವಹಾರಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಮಕ್ಕಳ ಸಂತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ‘ಮಕ್ಕಳ ದಸರಾ ಉತ್ಸವ’ದ ಸಂಭ್ರಮ ಗಾಂಧಿ ಮೈದಾನದ ಉದ್ದಗಲಕ್ಕೂ ವ್ಯಾಪಿಸಿ ಸಂತಸ ಮೂಡಿಸಿತು.
ಮಡಿಕೇರಿ ದಸರಾ ಸಮಿತಿ ವತಿಯಿಂದ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತ ‘ಮಕ್ಕಳ ದಸರಾ ಉತ್ಸವ’ಕ್ಕೆ ಇಂದು ಬೆಳಗ್ಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ವೇಗಿ ಅವರು ಛದ್ಮವೇಷಧಾರಿ ಪುಟಾಣಿ ಮಕ್ಕಳೊಂದಿಗೆ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ನಿಟ್ಟಿನ ಅತ್ಯಂತ ರಚನಾತ್ಮಕ ಮತ್ತು ಕ್ರಿಯಾಶೀಲವಾದ ಮಕ್ಕಳ ದಸರಾ ಆಯೋಜನೆ ಶ್ಲಾಘನೀಯ. ದಸರಾ ಉತ್ಸವದ ಸಂದರ್ಭ ಮತ್ತೆಲ್ಲೂ ಕಂಡು ಬಾರದ ಮಕ್ಕಳ ದಸರಾವನ್ನು ಮಡಿಕೇರಿಯಲ್ಲಿ ಆಯೋಜಿಸುವ ಮೂಲಕ ಮಕ್ಕಳಿಗೆ ವೇದಿಕೆ ಕಲ್ಪಿಸಿಕೊಡುವುತ್ತಿರುವುದು ಉತ್ತಮವಾದ ಪ್ರಯತ್ನ. ತಾನು ತನ್ನ ಸರ್ಕಾರಿ ಸೇವೆಯಲ್ಲಿ ಇತರೆಡೆಗಳಿಗೆ ತೆರಳಿದಲ್ಲಿ ಅಲ್ಲಿಯೂ ಇಂತಹ ಕಾರ್ಯಕ್ರಮಗಳ ಆಯೋಜನೆಗೆ ಪ್ರಯತ್ನಿಸುವುದಾಗಿ ಮುಕ್ತ ನುಡಿಗಳನ್ನಾಡಿದರು.
ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರು ಹಾಗೂ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ಕಳೆದ ಒಂದು ದಶಕದಿಂದ ಮಕ್ಕಳ ದಸರಾ ಉತ್ಸವವನ್ನು ಆಚರಿಸಲಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಈ ಉತ್ಸವದಲ್ಲಿ ಪಾಲ್ಗೊಳ್ಳುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೆ ಇದೆ. ವೈವಿಧ್ಯಮಯ ಕಾರ್ಯಕ್ರಮಳನ್ನು ಒಳಗೊಂಡ ಮಕ್ಕಳ ದಸರಾ ಮಕ್ಕಳ ಪ್ರತಿಭಾ ಅನಾವರಣಕ್ಕೆ ಸುವರ್ಣ ಅವಕಾಶವಾಗಿದೆಯೆಂದು ಮೆಚ್ಚುಗೆಯ ನುಡಿಗಳನ್ನಾಡಿದರು.
ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮಡಿಕೇರಿ ದಸರಾ ಉತ್ಸವದ ಹಿನ್ನೆಲೆ ಮಕ್ಕಳ ದಸರಾ, ಜಾನಪದ ದಸರಾ, ಮಹಿಳಾ ದಸರಾ, ಯುವ ದಸರಾ, ಕ್ರೀಡಾ ದಸರಗಳನ್ನು ಆಯೋಜಿಸುವ ಮೂಲಕ ನಿಜ ಅರ್ಥದಲ್ಲಿ ದಸರಾವನ್ನು ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ. ಮಕ್ಕಳ ದಸರಾ ಆಯೋಜಿಸುತ್ತಿರುವ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆ ಮುಂಬರುವ ವರ್ಷಗಳಲ್ಲಿ ಈ ಕಾರ್ಯಕ್ರಮವನ್ನು ಮುಂದುವರಿಸಿಕೊಂಡು ಹೋಗುವಂತಾಗಲೆಂದು ಹಾರೈಸಿದರು.
ಮಡಿಕೇರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ದಶಕದ ಹಿಂದೆ ಮಡಿಕೇರಿ ದಸರಾ ಉತ್ಸವದ ಸಂದರ್ಭ ಮಕ್ಕಳಿಗೆ ವೇದಿಕೆ ಒದಗಿಸುವ ‘ಮಕ್ಕಳ ದಸರಾ’ವನ್ನು ಈಗಿನ ಸಾಂಸ್ಕøತಿಕ ಸಮಿತಿ ಅಧ್ಯಕ್ಷರಾದ ಅನಿಲ್ ಎಚ್.ಟಿ. ಅವರು ಪ್ರಪ್ರಥಮ ಬಾರಿಗೆ ರೂಪಿಸಿದ್ದನ್ನು ಸ್ಮರಿಸಿಕೊಂಡರು. ರೋಟರಿ ಸಹಾಯಕ ರಾಜ್ಯಪಾಲ ದೇವಣಿರ ತಿಲಕ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ರೋಟರಿ ವಲಯ ಸೇನಾನಿ ಎಸ್.ಎಸ್. ಸಂಪತ್ ಕುಮಾರ್, ಮಡಿಕೇರಿ ದಸರಾ ವೇದಿಕೆ ಸಮಿತಿ ಅಧ್ಯಕ್ಷರಾದ ಕನ್ನಂಡ ಸವಿತ, ದಸರಾ ಸಮಿತಿ ಖಜಾಂಜಿ ಅರುಣ್ ಶೆಟ್ಟಿ ಮೊದಲಾದವರಿದ್ದರು. ಪುಟಾಣಿಗಳಾದ ಸುಮಿಧಿ, ಅಧಿತಿ, ಶಾರ್ವರಿ ಪ್ರಾರ್ಥಿಸಿದರು.  ಸಾಂಸ್ಕೃತಿಕ  ಸಮಿತಿ ಅಧ್ಯಕ್ಷರಾದ ಅನಿಲ್ ಎಚ್.ಟಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ರತ್ನಾಕರ ರೈ ವಂದಿಸಿದರು.
600 ಕ್ಕೂ ಹೆಚ್ಚಿನ ಮಕ್ಕಳ ಕಲರವ- ಮಕ್ಕಳ ದಸರಾ ಅಂಗವಾಗಿ ಆಯೋಜಿತ ವಿವಿಧ ಕಾರ್ಯಕ್ರಮಗಳಲ್ಲಿ ಆರು ನೂರಕ್ಕೂ ಹೆಚ್ಚಿನ ಪುಟಾಣಿಗಳು ಪಾಲ್ಗೊಂಡು ತಮ್ಮ ಪ್ರತಿಭಾ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದರು.
ವಾರದ ಸಂತೆ ಮಾರುಕಟ್ಟೆಯನ್ನು ಮೀರಿಸುವಂತೆ ನಡೆದ ಮಕ್ಕಳ ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಹಣ್ಣು ಹಂಪಲನ್ನು ಮಕ್ಕಳು ವ್ಯಾಪಾರ ಮಾಡುವ ಮೂಲಕ ಗಮನ ಸೆಳೆದರು. ಗ್ರಾಹಕರನ್ನು ಸೆಳೆಯುವ ಅವರ ಪ್ರಯತ್ನ, ಹಣ ಪಡೆದು ಲೆಕ್ಕವಿಡುವ ಧಾವಂತ ಎಲ್ಲವೂ ಮುದ ನೀಡಿತು. ಮಸಾಲೆ ಪೂರಿ, ಜ್ಯೂಸ್, ಕುರುಕಲು ತಿಂಡಿಗಳು ಏನುಂಟು ಏನಿಲ್ಲ ಎನ್ನುವ ಮಾತೆ ಇಲ್ಲದಂತೆ ಎಲ್ಲವೂ ಮಕ್ಕಳ ಸಂತೆಯ ಭಾಗವಾಗಿದ್ದುದು ವಿಶೇಷ.
ಪೌರಾಣಿಕ ಪಾತ್ರಗಳು ಸೇರಿದಂತೆ ಯೋಧರು, ಮಹಾ ಪುರುಷರ ವೇಷ ತೊಟ್ಟ ಪುಟಾಣಿಗಳ ಛದ್ಮ ವೇಷ ಸ್ಪರ್ಧೆ ಅತ್ಯಂತ ಸೊಗಸಾಗಿ ಮೂಡಿ ಬಂತು. ಕ್ಲೇ ಮಾಡೆಲಿಂಗ್, ಮಕ್ಕಳ ಮಂಟಪ ಆಕರ್ಷಿಸಿತು.

Share. Facebook Twitter Pinterest LinkedIn Tumblr Email WhatsApp
Previous Article*ಹೆಬ್ಬಾಲೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ :  ವಿಶ್ವಕರ್ಮ ಪರಂಪರೆ ಉಳಿಸಲು ಚಿಂತನೆ ಅಗತ್ಯ : ಶಿಲ್ಪಿ ಮಂಜುನಾಥ್ ಆಚಾರ್ಯ*
Next Article *ಸೋಮವಾರಪೇಟೆ ಸೋಮೇಶ್ವರ ದೇವಾಲಯದಲ್ಲಿ ಸರಸ್ವತಿ ಪೂಜೆ : ಮಕ್ಕಳಿಗೆ ಅಕ್ಷರಾಭ್ಯಾಸ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.